Homeಕರ್ನಾಟಕಸಚಿವ ಸಂಪುಟ ಸಭೆ; ಪತ್ರಿಕಾಗೋಷ್ಠಿಯಲ್ಲಿ ದೇವನಹಳ್ಳಿ ಭೂಸ್ವಾಧೀನ ವಿಚಾರ ಪ್ರಸ್ತಾಪಿಸದ ಸಿಎಂ

ಸಚಿವ ಸಂಪುಟ ಸಭೆ; ಪತ್ರಿಕಾಗೋಷ್ಠಿಯಲ್ಲಿ ದೇವನಹಳ್ಳಿ ಭೂಸ್ವಾಧೀನ ವಿಚಾರ ಪ್ರಸ್ತಾಪಿಸದ ಸಿಎಂ

- Advertisement -
- Advertisement -

ವಿಶ್ವವಿಖ್ಯಾತ ಪ್ರೇಕ್ಷಣೀಯ ಸ್ಥಳವಾದ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲೆಯ ನಂದಿಬೆಟ್ಟದಲ್ಲಿ ನಡೆದ ಬೆಂಗಳೂರು ಕಂದಾಯ ವಿಭಾಗದ ವಿಶೇಷ ಸಚಿವ ಸಂಪುಟದ ಸಭೆಯಲ್ಲಿ ‘ಚನ್ನರಾಯಪಟ್ಟಣ ಭೂಸ್ವಾಧೀನ ವಿಚಾರ’ ಪ್ರಸ್ತಾಪಿಸುತ್ತಾರೆ ಎಂಬ ರೈತರ ಭರವಸೆ ಹುಸಿಯಾಗಿದೆ.

ಇಂದು ರಾಜ್ಯ ಸರ್ಕಾರ ನಡೆಸಿದ ವಿಶೇಷ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ, ಚನ್ನರಾಯಪಟ್ಟಣದ ನಾಡ ಕಚೇರಿ ಮುಂಭಾಗ ನಡೆಯುತ್ತಿರುವ ಧರಣಿ ಸ್ಥಳದಲ್ಲಿ ರೈತರು ಮತ್ತು ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರು ಭೂಮಿ ಸತ್ಯಾಗ್ರಹದ ವೇದಿಕೆಯಲ್ಲಿ ‘ಸಂಯುಕ್ತ ಹೋರಾಟ-ಕರ್ನಾಟಕ’ದ ಮುಖಂಡರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಇಂದಿನ ಸಭೆಯಲ್ಲಿ ಕೆಐಎಡಿಬಿ ಭೂಸ್ವಾಧೀನ ಕೈಬಿಡುವ ನಿರ್ಧಾರ ಪ್ರಕಟಿಸಬಹದು ಎಂದು ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ದೇವನಹಳ್ಳಿಯ ಕೂಗಳತೆ ದೂರದಲ್ಲಿ ಸಭೆ ನಡೆಸಿದ್ದರಿಂದ, ಭೂಸ್ವಾಧೀನದ ಬಗ್ಗೆ ಪ್ರಸ್ತಾಪಿಸಲು ಎಂಬ ಕಾರಣಕ್ಕೆ ರೈತರು ಸರ್ಕಾರದ ಗಮನ ಸೆಳೆಯಲು ಉಪವಾಸ ಆರಂಭಿಸಿದ್ದರು. ಆದರೆ, ಮುಖ್ಯಮಂತ್ರಿಗಳು ಸುದ್ದಿಗೋಷ್ಠಿಯಲ್ಲಿ ಭೂಸ್ವಾಧೀನ ವಿಚಾರ ಪ್ರಸ್ತಾಪಿಸದೇ ಇರುವುದು ರೈತರಿಗೆ ನಿರಾಸೆ ಮೂಡಿಸಿದೆ.

ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಅಸಮಾಧಾನ

ಚನ್ನರಾಯಪಟ್ಟಣದ 13 ಹಳ್ಳಿಗಳ ರೈತರು ಉಪವಾಸ ಸತ್ಯಾಗ್ರಹ ನಡೆಸಿದೆವು. ನಂದಿಬೆಟ್ಟದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ, ಚನ್ನರಾಯಪಟ್ಟಣದಲ್ಲಿ ಉದ್ದೇಶಿಸಿರುವ 1777 ಎಕರೆ ಬಲವಂತದ ಭೂಸ್ವಾಧೀನವನ್ನು ಕೈಬಿಡುವ ವಿಚಾರವನ್ನು ವಿಶೇಷ ಚರ್ಚೆಯ ವಿಷಯವಾಗಿ ತೆಗೆದುಕೊಳ್ಳುವಂತೆ ಮತ್ತು ರೈತರ ಪರವಾದ ನಿರ್ಣಯಕ್ಕೆ ಬರಲು ಸಾತ್ವಿಕವಾಗಿ ಒತ್ತಡ ಹೇರಲಾಯಿತು ಎಂದರು.

ಚನ್ನರಾಯಪಟ್ಟಣದ ಉಪವಾಸ ಸತ್ಯಾಗ್ರಹದಲ್ಲಿ ಮಕ್ಕಳು, ಯುವಜನರು, ಮಹಿಳೆಯರು, ವಯೋವೃದ್ಧರು ಸೇರಿದಂತೆ 13 ಹಳ್ಳಿಯ ರೈತರು, ಹಾಗೂ ರೈತಪರ ಹೋರಾಟಗಾರರಾದ ಆಂಜನೇಯ ರೆಡ್ಡಿ, ಚಂದ್ರ ತೇಜಸ್ವಿ ಮತ್ತು ಕಾರಳ್ಳಿ ಶ್ರೀನಿವಾಸ್ ಭಾಗಿಯಾಗಿದ್ದರು. ಇಲ್ಲಿ ಅನ್ನ ಬೆಳೆಯುವ ರೈತರೇ ಉಪವಾಸ ಕುಳಿತಿದ್ದಾರೆ; ಇದು ಒಳ್ಳೆಯ ಬೆಳವಣಿಗೆಯಲ್ಲ. ಈ ಹೋರಾಟ ಗೆಲ್ಲಲೇಬೇಕು. ಈ ಹೋರಾಟ ಇಂದು ಕೇವಲ ಚನ್ನರಾಯಪಟ್ಟಣದ ರೈತರ ಹೋರಾಟವಾಗಿ ಉಳಿದಿಲ್ಲ, ಇಡೀ ಕರ್ನಾಟಕವೇ ಇಲ್ಲಿನ ರೈತರ ಉಳಿವಿನ ನಿರ್ಧಾರಕ್ಕಾಗಿ ಕಾಯುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿರೋಧ ಪಕ್ಷದಲ್ಲಿದ್ದಾಗ ನೀಡಿದ ಭರವಸೆಯಂತೆ ನಡೆದುಕೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಜುಲೈ 4 ರಂದು ರೈತಪರ ನಿರ್ಣಯ ಹೊರಬರುತ್ತದೆ ಎಂಬ ನಿರೀಕ್ಷೆ ಇದೆ ಎಂದು ರೈತರು ಅಭಿಪ್ರಾಯಪಟ್ಟರು.

ಸಚಿವ ಸಂಪುಟ ಸಭೆಯಲ್ಲಿ ಚನ್ನರಾಯಪಟ್ಟಣ ಭೂಸ್ವಾಧೀನ ವಿಚಾರವನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಿದ ರೈತರು

ಇಲ್ಲಿ ಅನ್ನ ಬೆಳೆಯುವ ರೈತರು ಉಪವಾಸ ಕುಳಿತಿರುವಾಗ, ಅತ್ತ ನಮ್ಮನ್ನು ಬೆಂಬಲಿಸಿ ಫ್ರೀಡಂ ಪಾರ್ಕಿನಲ್ಲಿ ಹೋರಾಟಗಾರರು, ಪ್ರಗತಿಪರ ಚಿಂತಕರು, ಚಿತ್ರನಟರು, ನಿರ್ದೇಶಕರು, ಸಾಹಿತಿಗಳು, ಬರಹಗಾರರು ಉಪವಾಸ ಕುಳಿತಿದ್ದಾರೆ. ಅವರ ರೈತರ ಮೇಲಿನ ಕಾಳಜಿ ಮತ್ತು ತಾಯ್ತನದ ಪ್ರೀತಿಗೆ ನಾವು ಆಭಾರಿಯಾಗಿರುತ್ತೇವೆ. ದೇವನಹಳ್ಳಿಗೆ ಮಾತ್ರ ಸೀಮಿತವಾಗಿದ್ದ ಹೋರಾಟ ಇಂದು ನಾಡಿನ ಉದ್ದಗಲಕ್ಕೂ ಮಾತನಾಡುವಂತಾಗಿದೆ. ರಾಜ್ಯದ ಜನ ನಮ್ಮ ಕಷ್ಟವನ್ನು ತಮ್ಮಗೆ ಬಂದೊದಗಿರುವ ಆತಂಕವೆಂಬಂತೆ ಭಾವಿಸಿ ನಮ್ಮ ಹೋರಾಟಕ್ಕೆ ಜೊತೆಯಾಗಿದ್ದಾರೆ. ಅವರೆಲ್ಲರಿಗೂ ಇಲ್ಲಿನ ರೈತರಾದ ನಾವು ಹೃತ್ಪೂರ್ವಕ ಧನ್ಯವಾದ ತಿಳಿಸುತ್ತೇವೆ ಎಂದು ರೈತರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಹೋರಾಟ ನಮ್ಮ ಉಳಿವಿಗಾಗಿ ಮಾತ್ರವಲ್ಲ, ನಮ್ಮ ಕೃಷಿ ಪರಿಸರದ ಉಳಿವಿಗಾಗಿ, ಗ್ರಾಮೀಣ ಬದುಕಿನ ಉಳಿವಿಗಾಗಿ ಮಾಡುತ್ತಿರುವ ಹೋರಾಟ. ಆದ್ದರಿಂದ ನಾವು ಭರವಸೆ ನೀಡುತ್ತೇವೆ, ಈ ಭೂಮಿ ನಿಮ್ಮೆಲ್ಲರ ಬೆಂಬಲದಿಂದ ಉಳಿದೇ ಉಳಿಯುತ್ತದೆ. ನಾವು ಈ ನೆಲದ ಹಸಿರನ್ನು, ಗ್ರಾಮೀಣ ಸೊಗಡನ್ನು ಜೋಪಾನ ಮಾಡುತ್ತೇವೆ ಎಂದು ನಿಮಗೆ ಭರವಸೆ ನೀಡುತ್ತೇವೆ ಎಂದು ವಾಗ್ದಾನ ಮಾಡಿದ್ದಾರೆ.

ಜುಲೈ-4 ರ ಸಭೆ ಮೇಲೆ ಎಲ್ಲರ ಚಿತ್ತ

ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ ರೈತರು ಹಾಗೂ ಸಂಯುಕ್ತ ಹೋರಾಟ-ಕರ್ನಾಟಕ ಮುಖಂಡರ ಜೊತೆಗೆ ಇದೇ 4ರಂದು ಸಮಗ್ರ ಸಭೆ ನಡೆಸಿ ನಿರ್ಧಾರಕ್ಕೆ ಬರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.

ಚನ್ನರಾಯಪಟ್ಟಣ ಭೂಸ್ವಾಧೀನ ಕೈಬಿಡುವಂತೆ ಸಿಎಂಗೆ ಪತ್ರ ಬರೆದ ಬಿಹಾರ ಸಂಸದ ರಾಜಾರಾಮ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...