Homeಮುಖಪುಟಚುನಾವಣಾ ಆಯೋಗವನ್ನು ಭೇಟಿ ಮಾಡಿದ ಪ್ರತಿಪಕ್ಷ ನಿಯೋಗ: ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ತೀವ್ರ ವಿರೋಧ

ಚುನಾವಣಾ ಆಯೋಗವನ್ನು ಭೇಟಿ ಮಾಡಿದ ಪ್ರತಿಪಕ್ಷ ನಿಯೋಗ: ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ತೀವ್ರ ವಿರೋಧ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗವನ್ನು ಬುಧವಾರ ಭೇಟಿಯಾಗಿರುವ ಪ್ರತಿಪಕ್ಷ ನಿಯೋಗ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಎಆರ್‌) ಕುರಿತು ಕಳವಳ ವ್ಯಕ್ತಪಡಿಸಿದೆ.

ಕಾಂಗ್ರೆಸ್, ಆರ್‌ಜೆಡಿ, ಸಿಪಿಐ, ಸಿಪಿಐ(ಎಂಎಲ್‌) ಲಿಬರೇಶನ್, ಎನ್‌ಸಿಪಿ-ಎಸ್‌ಪಿ ಮತ್ತು ಸಮಾಜವಾದಿ ಪಕ್ಷಗಳ 11 ಮಂದಿ ನಾಯಕರು ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ಇತರ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿ, ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಕೈಗೊಂಡಿರುವ ಮತದಾರರ ಪಟ್ಟಿ ಪರಿಶೀಲನೆಯನ್ನು ವಿರೋಧಿಸಿದ್ದಾರೆ.

ಬಿಹಾರದಲ್ಲಿ ಈಗಾಗಲೇ ಪ್ರಾರಂಭವಾಗಿರುವ ಮತ್ತು ಮುಂದಿನ ವರ್ಷ ಚುನಾವಣೆ ನಡೆಯಲಿರುವ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಜಾರಿಗೆ ಬರಲಿರುವ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಇಂಡಿಯಾದ ಒಕ್ಕೂಟದ ಪಕ್ಷಗಳು ತೀವ್ರವಾಗಿ ವಿರೋಧಿಸುತ್ತಿವೆ.

ಚುನಾವಣಾ ಆಯೋಗದ ಜೊತೆಗಿನ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ, ಪಕ್ಷದ ಅಧ್ಯಕ್ಷರು ಮಾತ್ರ ತನ್ನ ಮುಂದೆ ಹಾಜರಾಗಬೇಕೆಂದು ಹೇಳುವ, ಚುನಾವಣಾ ಆಯೋಗದ ಅವರಣ ಪ್ರವೇಶಕ್ಕೆ ಸಂಬಂಧಿಸಿದ ಆಯೋಗದ ಹೊಸ ನಿರ್ದೇಶನದ ವಿರುದ್ದವೂ ನಾವು ಪ್ರತಿಭಟಿಸಿದ್ದೇವೆ ಎಂದು ಹೇಳಿದ್ದಾರೆ.

ಮೊಟ್ಟ ಮೊದಲ ಬಾರಿಗೆ ನಮಗೆ ಇಂತಹ ನಿಯಮಗಳನ್ನು ವಿಧಿಸಲಾಗಿದೆ. ಪಕ್ಷದ ಮುಖ್ಯಸ್ಥರು ಮಾತ್ರ ಭೇಟಿ ಮಾಡಬಹುದು ಎಂದು ಮೊದಲ ಬಾರಿಗೆ ಹೇಳಲಾಗಿದೆ. ಈ ರೀತಿಯ ನಿರ್ಬಂಧಗಳಿಂದ ಚುನಾವಣಾ ಆಯೋಗ ಮತ್ತು ರಾಜಕೀಯ ಪಕ್ಷಗಳ ನಡುವೆ ಅತ್ಯಗತ್ಯ ಮಾತುಕತೆಗಳನ್ನು ನಡೆಸಲು ಸಾಧ್ಯವಿಲ್ಲ ಎಂದು ಸಿಂಘ್ವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾವು ಪಟ್ಟಿಯನ್ನು ಕೊಟ್ಟಿದ್ದೇವೆ. ಅನಧಿಕೃತ ವ್ಯಕ್ತಿಗಳನ್ನು ಅನುಮತಿಸಲು ಸಾಧ್ಯವಿಲ್ಲ. ಇಬ್ಬರಿಗೆ ಮಾತ್ರ ಅವಕಾಶ ನೀಡುವುದು ವಿಪರ್ಯಾಸ. ಕೆಲವು ಹಿರಿಯ ನಾಯಕರು ಮೂರು ಗಂಟೆಗಳ ಕಾಲ ಕಾಯಬೇಕಾಯಿತು ಎಂದು ಸಿಂಘ್ವಿ ತಿಳಿಸಿದ್ದಾರೆ.

ನಾವು ಕಳೆದ ಪರಿಷ್ಕರಣೆಯಿಂದ ಮಾಹಿತಿ ಕೇಳಿದ್ದೇವೆ. ಅವಾಗಿನಿಂದ ಬಿಹಾರದಲ್ಲಿ ನಾಲ್ಕು ಅಥವಾ ಐದು ಚುನಾವಣೆಗಳು ನಡೆದಿವೆ. 2003ರ ಎಸ್‌ಐಆರ್ ಲೋಕಸಭಾ ಚುನಾವಣೆಗೆ ಒಂದು ವರ್ಷ ಮೊದಲು ನಡೆದಿತ್ತು. ಅಂದರೆ, ಬಿಹಾರ ವಿಧಾನಸಭಾ ಚುನಾವಣೆಯ 24 ತಿಂಗಳು ಮೊದಲು ಎಂದು ಸಿಂಘ್ವಿ ಹೇಳಿದ್ದಾರೆ.

“ಎರಡನೆಯದಾಗಿ ನೀವು ಎಸ್‌ಐಆರ್ ಮಾಡುವುದಾದರೆ ಜೂನ್ ಅಂತ್ಯದಲ್ಲಿ ಏಕೆ ಘೋಷಣೆ ಮಾಡಿದಿರಿ ಎಂದು ನಾವು ಕೇಳಿದ್ದೇವೆ. ಮೂರನೆಯದಾಗಿ, ಕಳೆದ ಒಂದು ದಶಕದಲ್ಲಿ ಎಲ್ಲದಕ್ಕೂ ಆಧಾರ್ ಮತ್ತು ಪಡಿತರ ಚೀಟಿಯನ್ನು ಕೇಳಿದ್ದೀರಿ. ಮೊಟ್ಟ ಮೊದಲ ಜನನ ಪ್ರಮಾಣ ಪತ್ರ ಇಲ್ಲದವರನ್ನು ಪರಿಗಣಿಸುವುದಿಲ್ಲ ಎನ್ನುತ್ತಿದ್ದೀರಿ ಎಂಬುವುದನ್ನು ಪ್ರಶ್ನಿಸಿದ್ದೇವೆ ಎಂದು ಸಿಂಘ್ವಿ ತಿಳಿಸಿದ್ದಾರೆ.

ವಿಶೇಷ ಸಚಿವ ಸಂಪುಟ ಸಭೆಯಲ್ಲಿ 48 ವಿಷಯಗಳು ಕುರಿತು ಚರ್ಚೆ; 3400 ಕೋಟಿ ಮೊತ್ತ ಮಂಜೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...