Homeಮುಖಪುಟಚುನಾವಣಾ ಆಯೋಗವನ್ನು ಭೇಟಿ ಮಾಡಿದ ಪ್ರತಿಪಕ್ಷ ನಿಯೋಗ: ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ತೀವ್ರ ವಿರೋಧ

ಚುನಾವಣಾ ಆಯೋಗವನ್ನು ಭೇಟಿ ಮಾಡಿದ ಪ್ರತಿಪಕ್ಷ ನಿಯೋಗ: ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ತೀವ್ರ ವಿರೋಧ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗವನ್ನು ಬುಧವಾರ ಭೇಟಿಯಾಗಿರುವ ಪ್ರತಿಪಕ್ಷ ನಿಯೋಗ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಎಆರ್‌) ಕುರಿತು ಕಳವಳ ವ್ಯಕ್ತಪಡಿಸಿದೆ.

ಕಾಂಗ್ರೆಸ್, ಆರ್‌ಜೆಡಿ, ಸಿಪಿಐ, ಸಿಪಿಐ(ಎಂಎಲ್‌) ಲಿಬರೇಶನ್, ಎನ್‌ಸಿಪಿ-ಎಸ್‌ಪಿ ಮತ್ತು ಸಮಾಜವಾದಿ ಪಕ್ಷಗಳ 11 ಮಂದಿ ನಾಯಕರು ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ಇತರ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿ, ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಕೈಗೊಂಡಿರುವ ಮತದಾರರ ಪಟ್ಟಿ ಪರಿಶೀಲನೆಯನ್ನು ವಿರೋಧಿಸಿದ್ದಾರೆ.

ಬಿಹಾರದಲ್ಲಿ ಈಗಾಗಲೇ ಪ್ರಾರಂಭವಾಗಿರುವ ಮತ್ತು ಮುಂದಿನ ವರ್ಷ ಚುನಾವಣೆ ನಡೆಯಲಿರುವ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಜಾರಿಗೆ ಬರಲಿರುವ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಇಂಡಿಯಾದ ಒಕ್ಕೂಟದ ಪಕ್ಷಗಳು ತೀವ್ರವಾಗಿ ವಿರೋಧಿಸುತ್ತಿವೆ.

ಚುನಾವಣಾ ಆಯೋಗದ ಜೊತೆಗಿನ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ, ಪಕ್ಷದ ಅಧ್ಯಕ್ಷರು ಮಾತ್ರ ತನ್ನ ಮುಂದೆ ಹಾಜರಾಗಬೇಕೆಂದು ಹೇಳುವ, ಚುನಾವಣಾ ಆಯೋಗದ ಅವರಣ ಪ್ರವೇಶಕ್ಕೆ ಸಂಬಂಧಿಸಿದ ಆಯೋಗದ ಹೊಸ ನಿರ್ದೇಶನದ ವಿರುದ್ದವೂ ನಾವು ಪ್ರತಿಭಟಿಸಿದ್ದೇವೆ ಎಂದು ಹೇಳಿದ್ದಾರೆ.

ಮೊಟ್ಟ ಮೊದಲ ಬಾರಿಗೆ ನಮಗೆ ಇಂತಹ ನಿಯಮಗಳನ್ನು ವಿಧಿಸಲಾಗಿದೆ. ಪಕ್ಷದ ಮುಖ್ಯಸ್ಥರು ಮಾತ್ರ ಭೇಟಿ ಮಾಡಬಹುದು ಎಂದು ಮೊದಲ ಬಾರಿಗೆ ಹೇಳಲಾಗಿದೆ. ಈ ರೀತಿಯ ನಿರ್ಬಂಧಗಳಿಂದ ಚುನಾವಣಾ ಆಯೋಗ ಮತ್ತು ರಾಜಕೀಯ ಪಕ್ಷಗಳ ನಡುವೆ ಅತ್ಯಗತ್ಯ ಮಾತುಕತೆಗಳನ್ನು ನಡೆಸಲು ಸಾಧ್ಯವಿಲ್ಲ ಎಂದು ಸಿಂಘ್ವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾವು ಪಟ್ಟಿಯನ್ನು ಕೊಟ್ಟಿದ್ದೇವೆ. ಅನಧಿಕೃತ ವ್ಯಕ್ತಿಗಳನ್ನು ಅನುಮತಿಸಲು ಸಾಧ್ಯವಿಲ್ಲ. ಇಬ್ಬರಿಗೆ ಮಾತ್ರ ಅವಕಾಶ ನೀಡುವುದು ವಿಪರ್ಯಾಸ. ಕೆಲವು ಹಿರಿಯ ನಾಯಕರು ಮೂರು ಗಂಟೆಗಳ ಕಾಲ ಕಾಯಬೇಕಾಯಿತು ಎಂದು ಸಿಂಘ್ವಿ ತಿಳಿಸಿದ್ದಾರೆ.

ನಾವು ಕಳೆದ ಪರಿಷ್ಕರಣೆಯಿಂದ ಮಾಹಿತಿ ಕೇಳಿದ್ದೇವೆ. ಅವಾಗಿನಿಂದ ಬಿಹಾರದಲ್ಲಿ ನಾಲ್ಕು ಅಥವಾ ಐದು ಚುನಾವಣೆಗಳು ನಡೆದಿವೆ. 2003ರ ಎಸ್‌ಐಆರ್ ಲೋಕಸಭಾ ಚುನಾವಣೆಗೆ ಒಂದು ವರ್ಷ ಮೊದಲು ನಡೆದಿತ್ತು. ಅಂದರೆ, ಬಿಹಾರ ವಿಧಾನಸಭಾ ಚುನಾವಣೆಯ 24 ತಿಂಗಳು ಮೊದಲು ಎಂದು ಸಿಂಘ್ವಿ ಹೇಳಿದ್ದಾರೆ.

“ಎರಡನೆಯದಾಗಿ ನೀವು ಎಸ್‌ಐಆರ್ ಮಾಡುವುದಾದರೆ ಜೂನ್ ಅಂತ್ಯದಲ್ಲಿ ಏಕೆ ಘೋಷಣೆ ಮಾಡಿದಿರಿ ಎಂದು ನಾವು ಕೇಳಿದ್ದೇವೆ. ಮೂರನೆಯದಾಗಿ, ಕಳೆದ ಒಂದು ದಶಕದಲ್ಲಿ ಎಲ್ಲದಕ್ಕೂ ಆಧಾರ್ ಮತ್ತು ಪಡಿತರ ಚೀಟಿಯನ್ನು ಕೇಳಿದ್ದೀರಿ. ಮೊಟ್ಟ ಮೊದಲ ಜನನ ಪ್ರಮಾಣ ಪತ್ರ ಇಲ್ಲದವರನ್ನು ಪರಿಗಣಿಸುವುದಿಲ್ಲ ಎನ್ನುತ್ತಿದ್ದೀರಿ ಎಂಬುವುದನ್ನು ಪ್ರಶ್ನಿಸಿದ್ದೇವೆ ಎಂದು ಸಿಂಘ್ವಿ ತಿಳಿಸಿದ್ದಾರೆ.

ವಿಶೇಷ ಸಚಿವ ಸಂಪುಟ ಸಭೆಯಲ್ಲಿ 48 ವಿಷಯಗಳು ಕುರಿತು ಚರ್ಚೆ; 3400 ಕೋಟಿ ಮೊತ್ತ ಮಂಜೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...