Homeಮುಖಪುಟಬೈಕ್ ಟ್ಯಾಕ್ಸಿಯನ್ನು ಬೆಂಬಲಿಸಿದ ಕೇಂದ್ರದ ಮಾರ್ಗಸೂಚಿ: ರಾಜ್ಯದಲ್ಲಿ ಹೊಸ ನಿರೀಕ್ಷೆ

ಬೈಕ್ ಟ್ಯಾಕ್ಸಿಯನ್ನು ಬೆಂಬಲಿಸಿದ ಕೇಂದ್ರದ ಮಾರ್ಗಸೂಚಿ: ರಾಜ್ಯದಲ್ಲಿ ಹೊಸ ನಿರೀಕ್ಷೆ

- Advertisement -
- Advertisement -

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮಂಗಳವಾರ (ಜು.2) ಪರಿಷ್ಕೃತ ಮೋಟಾರು ವಾಹನ ಅಗ್ರಿಗೇಟರ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳು ಪುನರಾರಂಭಗೊಳ್ಳುವ ನಿರೀಕ್ಷೆ ಹೆಚ್ಚಾಗಿದೆ.

ಹೊಸ ಮಾರ್ಗಸೂಚಿಗಳು ರಾಜ್ಯ ಸರ್ಕಾರಗಳಿಗೆ ಪರವಾನಗಿಗಳನ್ನು ನೀಡಲು ಮತ್ತು ಅಗ್ರಿಗೇಟರ್‌ಗಳನ್ನು ನಿಯಂತ್ರಿಸಲು ಒಂದು ಚೌಕಟ್ಟನ್ನು ಒದಗಿಸುತ್ತದೆ. ಬಳಕೆದಾರರ ಸುರಕ್ಷತೆ ಮತ್ತು ಭದ್ರತೆ ಹಾಗೂ ಚಾಲಕನ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಹಗುರವಾದ ನಿಯಂತ್ರಣ ವ್ಯವಸ್ಥೆಯನ್ನು ಒದಗಿಸಲು ಪ್ರಯತ್ನಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ.

‘ಸಾರಿಗೆ ಅಲ್ಲದ ಮೋಟರ್‌ ಸೈಕಲ್‌ಗಳನ್ನು ಅಗ್ರಿಗೇಟರ್‌ಗಳ ಮೂಲಕ ಒಗ್ಗೂಡಿಸುವಿಕೆ’ ಎಂಬ ಶೀರ್ಷಿಕೆಯ ಮಾರ್ಗಸೂಚಿಯ ಷರತ್ತು 23ರಲ್ಲಿ ಆನ್‌ಲೈನ್ ಅಗ್ರಿಗೇಟರ್‌ಗಳು ದ್ವಿಚಕ್ರ ವಾಹನಗಳನ್ನು ಬೈಕ್ ಟ್ಯಾಕ್ಸಿಗಳಾಗಿ ಬಳಸಲು ಅನುವು ಮಾಡಿಕೊಡುವ ಬಗ್ಗೆ ಹೇಳಲಾಗಿದೆ.

ರಾಜ್ಯ ಸರ್ಕಾರ ಸಾರಿಗೇತರ ಮೋಟರ್​ಸೈಕಲ್​ಗಳನ್ನು ಜನರ ಪ್ರಯಾಣದ ಬಳಕೆಗೆ ಅವಕಾಶ ನೀಡಬಹುದು. ಇದು ಸಂಚಾರ ದಟ್ಟಣೆ ಮತ್ತು ಮಾಲಿನ್ಯ ಕಡಿಮೆ ಮಾಡಲು ನೆರವಾಗುತ್ತದೆ. ಜನರಿಗೆ ಕೈಗೆಟಕುವ ಪ್ರಯಾಣಕ್ಕೆ ಅವಕಾಶ ನೀಡುತ್ತದೆ. ಹೈಪರ್​ಲೋಕಲ್​ ಡೆಲಿವರಿ ಹಾಗೂ ಜೀವನೋಪಾಯಕ್ಕೂ ದಾರಿಯಾಗುತ್ತದೆ ಎಂದು ಮಾರ್ಗಸೂಚಿ ಹೇಳಿದೆ.

ಸಾರಿಗೆಯು ಸಮವರ್ತಿ ಪಟ್ಟಿಯಲ್ಲಿ ಬರುವ ವಿಷಯವಾಗಿದ್ದರೂ, ರಾಜ್ಯ ಸರ್ಕಾರವು ಮೋಟಾರು ವಾಹನ (ತಿದ್ದುಪಡಿ) ಕಾಯ್ದೆ, 2019ರ ಸೆಕ್ಷನ್ 36ರ ಪ್ರಕಾರ, ಅಗ್ರಿಗೇಟರ್‌ಗೆ ಪರವಾನಗಿ ನೀಡುವಾಗ ಕೇಂದ್ರ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ಅನುಸರಿಸಬಹುದು.

ಕರ್ನಾಟಕ ಸರ್ಕಾರದ ರಾಜ್ಯದಲ್ಲಿ ಬೈಕ್ಸ್ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸಿದೆ. ಅದನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಈ ಹಿನ್ನೆಲೆ ಜೂನ್ 16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಂಡಿದೆ. ಈ ನಡುವೆ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಯನ್ನು ಬೆಂಬಲಿಸಿ ಮಾರ್ಗಸೂಚಿ ಹೊರಡಿಸಿದೆ.

ಅತಿದೊಡ್ಡ ಬೈಕ್ ಟ್ಯಾಕ್ಸಿ ಆಪರೇಟರ್ ರ‍್ಯಾಪಿಡೋ ಕೇಂದ್ರದ ಪರಿಷ್ಕೃತ ಮಾರ್ಗಸೂಚಿಗಳನ್ನು ಸ್ವಾಗತಿಸಿದ್ದು, ಇದೊಂದು ‘ಮೈಲಿಗಲ್ಲು’ ಎಂದು ಕರೆದಿದೆ. ಬೈಕ್ ಟ್ಯಾಕ್ಸಿ ನಿಷೇಧ ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ಏಕ ಸದಸ್ಯ ಪೀಠದ ತೀರ್ಪನ್ನು ಓಲಾ, ಊಬರ್, ರ‍್ಯಾಪಿಡೋ ಈಗಾಗಲೇ ವಿಭಾಗೀಯ ಪೀಠದಲ್ಲಿ ಪ್ರಶ್ನಿಸಿದೆ.

“ರಾಜ್ಯ ಸರ್ಕಾರ ಸಾರಿಗೇತರ ಮೋಟರ್​ಸೈಕಲ್​ಗಳನ್ನು ಜನರ ಪ್ರಯಾಣದ ಬಳಕೆಗೆ ಅವಕಾಶ ನೀಡಬಹುದು ಎಂಬ ಕೇಂದ್ರದ ಮಾರ್ಗಸೂಚಿಯು, ಲಕ್ಷಾಂತರ ಜನರಿಗೆ ವಿಶೇಷವಾಗಿ ಹೈಪರ್ ಲೋಕಲ್ ಜನರಿಗೆ ಹೆಚ್ಚು ಕೈಗೆಟುಕುವ ಸಾರಿಗೆ ಆಯ್ಕೆಗಳ ಬಾಗಿಲು ತೆರೆಯುತ್ತದೆ. ಸುಸ್ಥಿರ ನಗರ ಅಭಿವೃದ್ಧಿಯ ಭಾರತದ ಗುರಿಯನ್ನು ಇದು ಬೆಂಬಲಿಸುತ್ತದೆ. ಈ ಕ್ರಮವು ಸಂಚಾರ ದಟ್ಟಣೆ ಮತ್ತು ವಾಹನ ಮಾಲಿನ್ಯದಂತಹ ಸವಾಲುಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ” ಎಂದು ರ‍್ಯಾಪಿಡೋ ಹೇಳಿಕೊಂಡಿದೆ.

ಊಬರ್ ಕೂಡ ಕೇಂದ್ರದ ಮಾರ್ಗಸೂಚಿಗಳನ್ನು ‘ಭಾರತದ ಡಿಜಿಟಲ್ ಮೊಬಿಲಿಟಿ ವಲಯದಲ್ಲಿ ನಾವೀನ್ಯತೆ ಮತ್ತು ನಿಯಂತ್ರಕ ಸ್ಪಷ್ಟತೆಯನ್ನು ಬೆಳೆಸುವತ್ತ ಒಂದು ಭವಿಷ್ಯದ ಹೆಜ್ಜೆ’ ಎಂದು ಬಣ್ಣಿಸಿದೆ.

ಮಾರ್ಗ ಸೂಚಿಗಳನ್ನು ರಾಜ್ಯಗಳು ಸಕಾಲಿಕವಾಗಿ ಅಳವಡಿಸಿಕೊಂಡರೆ ಏಕರೂಪದ ನೀತಿ ಅನುಷ್ಠಾನ ಮತ್ತು ಎಲ್ಲಾ ಪಾಲುದಾರರಿಗೆ ಹೆಚ್ಚು ಅಗತ್ಯವಿರುವ ಮುನ್ಸೂಚನೆಯನ್ನು ನೀಡಲು ಸಹಕಾರಿಯಾಗುತ್ತದೆ ಎಂದಿದೆ.

ಕರ್ನಾಟಕದ ಸಾರಿಗೆ ಇಲಾಖೆ ಈ ವಿಷಯದ ಬಗ್ಗೆ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಬೈಕ್‌ ಟ್ಯಾಕ್ಸಿ ಸೇವೆಯು ಹೆಚ್ಚು ಸುರಕ್ಷಿತ, ಅನುಕೂಲಕರ: ಹೈಕೋರ್ಟ್‌ನಲ್ಲಿ ಮಹಿಳಾ ಪ್ರಯಾಣಿಕರ ವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ...

ಉತ್ತರ ಪ್ರದೇಶ| ಜಾತಿ ನಿಂದನೆ-ಹಲ್ಲೆ; ದೃಷ್ಟಿ ಕಳೆದುಕೊಂಡ ದಲಿತ ಯುವಕ

ಕಾಲುವೆ ಬಳಿ ಮಲವಿಸರ್ಜನೆ ಮಾಡುತ್ತಿದ್ದ ದಲಿತ ಯುವಕನ ಜೊತೆಗೆ ನಡೆದ ಜಗಳ ತೀವ್ರಗೊಂಡು, ದಾಳಿಕೋರನೊಬ್ಬ ಮೋಟಾರ್ ಸೈಕಲ್ ಕೀಲಿಯಿಂದ ಚುಚ್ಚಿದ ಪರಿಣಾಮ ಆತ ಒಂದು ಕಣ್ಣಿನ ದೃಷ್ಠಿ ಕಳೆದುಕೊಂಡಿದ್ದಾರೆ. 20 ರ ಹರೆಯದ...

ಮಣಿಪುರದ ಉಖ್ರುಲ್‌ನಲ್ಲಿ ಬುಡಕಟ್ಟು ಸಮುದಾಯಗಳ ನಡುವೆ ಉದ್ವಿಗ್ನತೆ: ಸಶಸ್ತ್ರ ಗುಂಪುಗಳಿಂದ ನಾಗಾ, ಕುಕಿ ಮನೆಗಳಿಗೆ ಬೆಂಕಿ

ಮಣಿಪುರದ ತಂಗ್ಖುಲ್ ನಾಗಾ ಮತ್ತು ಕುಕಿ ಸಮುದಾಯಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ಸೋಮವಾರ ಉಖ್ರುಲ್ ಜಿಲ್ಲೆಯಲ್ಲಿ ಹಲವಾರು ಸಶಸ್ತ್ರ ಉಗ್ರಗಾಮಿಗಳು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಮಧ್ಯರಾತ್ರಿಯ ಸುಮಾರಿಗೆ ಲಿಟಾನ್ ಸರೈಖಾಂಗ್ ಗ್ರಾಮದಲ್ಲಿ ಎರಡೂ...

ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ಹೈಕೋರ್ಟ್ ನೋಟಿಸ್ : ಏನಿದು ಹೊಸ ಬೆಳವಣಿಗೆ?

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಾಲಯ ಹೊರಡಿಸಿದ ನಿರ್ದೇಶನಗಳನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ಕೇಂದ್ರ ತನಿಖಾ ದಳ (ಸಿಬಿಐ)...

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....

ಬಿಹಾರದ ದರ್ಭಾಂಗದಲ್ಲಿ ಆರು ವರ್ಷದ ಬಾಲಕಿಯ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ 

ಪಾಟ್ನಾ: ಬಿಹಾರದ ದರ್ಭಾಂಗಾ ಪಟ್ಟಣದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಭಾನುವಾರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಶನಿವಾರ ಸಂಜೆ...

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು 'ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ...

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...