Homeಮುಖಪುಟ10-15 ವರ್ಷ ಹಳೆಯ ವಾಹನಗಳಿಗೆ ಇಂಧನವಿಲ್ಲ!..ಏನಿದು ಹೊಸ ನಿಯಮ?

10-15 ವರ್ಷ ಹಳೆಯ ವಾಹನಗಳಿಗೆ ಇಂಧನವಿಲ್ಲ!..ಏನಿದು ಹೊಸ ನಿಯಮ?

- Advertisement -
- Advertisement -

ಜುಲೈ 1, 2025ರಿಂದ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ‘ಅವಧಿ ಮುಗಿದ ವಾಹನಗಳಿಗೆ ಇಂಧನವಿಲ್ಲ’ (no fuel for end-of-life vehicles) ನಿಯಮ ಜಾರಿಯಾಗಿದೆ.

ಹೊಸ ನಿಯಮದ ಪ್ರಕಾರ 15 ವರ್ಷ ಹಳೆಯ ಪೆಟ್ರೋಲ್ ವಾಹನಗಳು ಮತ್ತು 10 ವರ್ಷ ಹಳೆಯ ಡೀಸೆಲ್ ವಾಹನಗಳಿಗೆ ಇಂಧನ ಸಿಗುವುದಿಲ್ಲ. ಪರಿಸರ ಮಾಲಿನ್ಯ (ವಾಯು, ಶಬ್ದ ಇತ್ಯಾದಿ) ತಡೆಯಲು ಈ ನಿಯಮವನ್ನು ಜಾರಿಗೆ ತರಲಾಗಿದೆ ಎಂದು ಸರ್ಕಾರ ಹೇಳಿದೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) 2014 ಆದೇಶ ಮತ್ತು ಸುಪ್ರೀಂ ಕೋರ್ಟ್‌ನ 2018ರ ತೀರ್ಪಿನ ಪ್ರಕಾರ, 15 ವರ್ಷಕ್ಕಿಂತ ಹಳೆಯದಾದ ಪೆಟ್ರೋಲ್ ವಾಹನಗಳು ಮತ್ತು 10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳನ್ನು ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಓಡಿಸುವುದನ್ನು ಮತ್ತು ಪಾರ್ಕಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ.

‘ಅವಧಿ ಮುಗಿದ ವಾಹನಗಳಿಗೆ ಇಂಧನವಿಲ್ಲ’ ನೀತಿಯನ್ನು ಮಾರ್ಚ್ 2025ರಲ್ಲಿ ಘೋಷಣೆ ಮಾಡಲಾಗಿತ್ತು. ಆದರೆ, ಜುಲೈ 1ರಿಂದ ಜಾರಿಗೆ ಬಂದಿದೆ.

ಮಾರ್ಚ್ 2025ರ ಆರಂಭದಲ್ಲಿ, ದೆಹಲಿಯ ಪರಿಸರ ಖಾತೆ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅವರು, 15 ವರ್ಷ ಹಳೆಯ ಪೆಟ್ರೋಲ್ ವಾಹನಗಳು ಮತ್ತು 10 ವರ್ಷ ಹಳೆಯ ಡೀಸೆಲ್ ವಾಹನಗಳಿಗೆ ಏಪ್ರಿಲ್ 1ರಿಂದ ಇಂಧನ ಕೇಂದ್ರಗಳು ಇಂಧನ ಒದಗಿಸುವುದಿಲ್ಲ ಎಂದು ಹೇಳಿದ್ದರು.

ವಾಹನಗಳ ಹೊರಸೂಸುವಿಕೆಯನ್ನು (ಇಂಗಾಲ ಡೈ ಆಕ್ಸೈಡ್) ಕಡಿಮೆ ಮಾಡುವ ವಿಶಾಲ ಕಾರ್ಯತಂತ್ರದ ಭಾಗ ಇದಾಗಿದ್ದು, ನಿಯಮವನ್ನು ಜಾರಿಗೊಳಿಸಲು ಇಂಧನ ಕೇಂದ್ರಗಳಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ (ಎಎನ್‌ಪಿಆರ್) ಕ್ಯಾಮರಾಗಳನ್ನು ಅಳವಡಿಸಲಾಗುವುದು ಎಂದಿದ್ದರು.

ಆದರೆ ಮಾರ್ಚ್ 2025ರ ಅಂತ್ಯದ ವೇಳೆಗೆ, ಇಂಧನ ಕೇಂದ್ರಗಳಲ್ಲಿ ಅಗತ್ಯವಿರುವ ಎನ್‌ಪಿಆರ್ ಕ್ಯಾಮರಾಗಳು ಮತ್ತು ಸಂಬಂಧಿತ ಸಾಧನಗಳ ಅಳವಡಿಕೆ ಅಪೂರ್ಣವಾಗಿದ್ದರಿಂದ ನಿಯಮ ಜಾರಿ ವಿಳಂಬವಾಗಿತ್ತು. ಮಾರ್ಚ್ 31, 2025 ರೊಳಗೆ ಎಲ್ಲಾ ಇಂಧನ ಕೇಂದ್ರಗಳು ಸಂಪೂರ್ಣವಾಗಿ ಸಜ್ಜುಗೊಂಡಿಲ್ಲದ ಕಾರಣ ನಿಯಮ ಜಾರಿಗೆ ಹೆಚ್ಚಿನ ಸಮಯದ ಅಗತ್ಯವಿದೆ ಎಂದು ಸಚಿವ ಸಿರ್ಸಾ ತಿಳಿಸಿದ್ದರು.

ಕೊನೆಗೆ ಜುಲೈ 1ರಂದು ‘ಅವಧಿ ಮುಗಿದ ವಾಹನಗಳಿಗೆ ಇಂಧನವಿಲ್ಲ’ ನಿಯಮವನ್ನು ಜಾರಿಗೆ ತರಲಾಗಿದೆ. ಈ ವೇಳೆ ದೆಹಲಿಯ 520 ಇಂಧನ ಕೇಂದ್ರಗಳ ಪೈಕಿ ಸುಮಾರು 500 ಕೇಂದ್ರಗಳಲ್ಲಿ ಎಎನ್‌ಪಿಆರ್ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಸಾರಿಗೆ ಇಲಾಖೆ, ದೆಹಲಿ ಪೊಲೀಸ್, ಸಂಚಾರ ಪೊಲೀಸ್ ಮತ್ತು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಒಳಗೊಂಡ ವಿವರವಾದ ನಿಯಮ ಜಾರಿ ಕಾರ್ಯತಂತ್ರವು ಸಿದ್ದವಾಗಿದೆ ಎಂದು ಸರ್ಕಾರ ಹೇಳಿತ್ತು.

ವಾಯು ಗುಣಮಟ್ಟ ನಿರ್ವಹಣಾ ಆಯೋಗವು (ಸಿಎಕ್ಯೂಎಂ) ನಿಯಮ ಜಾರಿಯನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನಗಳನ್ನು ನೀಡಿತ್ತು. ಅದರಂತೆ, ಜುಲೈ 1, 2025 ರಂದು ಬೆಳಿಗ್ಗೆ 6 ಗಂಟೆಗೆ ಅಧಿಕೃತವಾಗಿ ಅವಧಿ ಮುಗಿದ ವಾಹನಗಳಿಗೆ ಇಂಧನ ಪೂರೈಸುವುದನ್ನು ಸ್ಥಗಿತಗೊಳಿಸಲಾಗಿದೆ.

ಅವಧಿ ಮುಗಿದ ವಾಹನಗಳನ್ನು ಪತ್ತೆ ಹಚ್ಚುವುದು ಹೇಗೆ?

ಇಂಧನ ಕೇಂದ್ರಗಳಲ್ಲಿ ಅಥವಾ ಪೆಟ್ರೋಲ್ ಬಂಕ್‌ಗಳಲ್ಲಿ ಎಐ ಆಧಾರಿತ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ (ಎಎನ್‌ಪಿಆರ್) ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇದು ವಾಹನ ಬಂಕ್‌ಗೆ ಬಂದ ತಕ್ಷಣ ಅದರ ನಂಬರ್ ಪ್ಲೇಟ್ ಸ್ಕ್ಯಾನ್ ಮಾಡಿ ‘ವಾಹನ್’ ವ್ಯವಸ್ಥೆಯ ಡೇಟಾಬೇಸ್ ಮೂಲಕ ವಾಹನದ ಅವಧಿಯನ್ನು ಪತ್ತೆ ಹಚ್ಚುತ್ತದೆ.

ವಾಹನ ಮಾಲಕರ ಗತಿಯೇನು?

ಅವಧಿ ಮೀರಿದ ವಾಹನಗಳಿಗೆ ಇಂಧನ ಪೂರೈಕೆ ಮಾಡದಿದ್ದರೆ ವಾಹನ ಮಾಲಕರು ಅವುಗಳನ್ನು ಏನು ಮಾಡುವುದು ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಸದ್ಯಕ್ಕೆ ದೆಹಲಿಯಲ್ಲಿ ಮಾತ್ರ ಇಂಧನ ಪೂರೈಕೆ ಮಾಡುತ್ತಿಲ್ಲ. ಹಾಗಾಗಿ, ವಾಹನ ಮಾಲಕರು ದೆಹಲಿ-ಎನ್‌ಸಿಆರ್ ಹೊರಗೆ ವಾಹನವನ್ನು ಮರು ನೋಂದಾಯಿಸಲು ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಪಡೆಯಬಹುದು.

ಖಾಸಗಿ ಸ್ಥಳಗಳಲ್ಲಿ ವಾಹನಗಳನ್ನು ನಿಲ್ಲಿಸಬಹುದು (ಸಾರ್ವಜನಿಕ ಪಾರ್ಕಿಂಗ್ ನಿಷೇಧಿಸಲಾಗಿದೆ).

ನೋಂದಾಯಿತ ಸ್ಕ್ರ್ಯಾಪಿಂಗ್ ಸೌಲಭ್ಯದಲ್ಲಿ ವಾಹನವನ್ನು ಸ್ಕ್ರ್ಯಾಪ್ ಮಾಡಬಹುದು ಅಥವಾ ವಾಹವನ್ನು ಗುಜರಿಗೆ ಹಾಕಬಹುದು.

ನಿಯಮ ಉಲ್ಲಂಘಿಸಿದರೆ ಏನಾಗುತ್ತದೆ?

ನಿಯಮ ಉಲ್ಲಂಘಿಸಿದರೆ ಕಾರುಗಳಿಗೆ 10,000 ರೂಪಾಯಿ ಮತ್ತು ದ್ವಿಚಕ್ರ ವಾಹನಗಳಿಗೆ 5,000 ರೂಪಾಯಿ ಜೊತೆಗೆ ಟೋವಿಂಗ್ ಶುಲ್ಕಗಳನ್ನು ವಿಧಿಸಲಾಗುತ್ತದೆ. ಪದೇ ಪದೇ ನಿಯಮ ಉಲ್ಲಂಘಿಸಿದರೆ ಸಂಬಂಧಿತ ಅಧಿಕಾರಿಗಳೇ ವಾಹನವನ್ನು ಮುಟ್ಟುಗೋಲು ಹಾಕಿಕೊಂಡು ಸ್ಕ್ರ್ಯಾಪ್ ಮಾಡುತ್ತಾರೆ.

ಹೊಸ ನಿಯಮದಲ್ಲಿ ಅಂಗವಿಕಲರು ಅಥವಾ ಇತರ ಗುಂಪುಗಳಿಗೆ ಯಾವುದೇ ನಿರ್ದಿಷ್ಟ ವಿನಾಯಿತಿಗಳನ್ನು ನೀಡಲಾಗಿಲ್ಲ. ಅಂದರೆ, ಎಲ್ಲಾ ವಾಹನಗಳು, ಮಾಲೀಕತ್ವವನ್ನು ಲೆಕ್ಕಿಸದೆ, ನಿಯಮಗಳನ್ನು ಪಾಲಿಸಬೇಕಿದೆ.

ಇಂಧನ ತಡೆ ಹಿಡಿಯುವ ನೀತಿಯು, ಆಗಸ್ಟ್ 15, 2026 ರಿಂದ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ದ್ವಿಚಕ್ರ ವಾಹನಗಳ ಹೊಸ ನೋಂದಣಿಗಳನ್ನು ಮತ್ತು ಆಗಸ್ಟ್ 15,2025 ರಿಂದ ಸಿಎನ್‌ಜಿ ಆಟೋರಿಕ್ಷಾಗಳನ್ನು ನಿಷೇಧಿಸುವ ಮುಂಬರುವ ದೆಹಲಿಯ ಇವಿ ನೀತಿ 2.0 ಮತ್ತು
ದೆಹಲಿಯ ಶುದ್ಧ ಗಾಳಿಯನ್ನು ಗಮನದಲ್ಲಿಟ್ಟುಕೊಂಡು ಜಾರಿಗೆ ತರಲಾಗಿದೆ.

ದಂಡವನ್ನು ತಪ್ಪಿಸಲು ಜೀವಿತಾವಧಿ ಮುಗಿದ ವಾಹನಗಳ ಮಾಲೀಕರು ಹೊಸ, ತಂತ್ರಜ್ಞಾನಗಳು ಹೊಂದಿರುವ ವಾಹನಗಳು ಅಥವಾ ವಿದ್ಯುತ್ ವಾಹನಗಳಿಗೆ (ಇವಿ) ಬದಲಾಯಿಸಲು ಪ್ರೋತ್ಸಾಹಿಸಲಾಗುತ್ತದೆ.

ದೆಹಲಿ ಇವಿ ನೀತಿ 2.0 (ಭವಿಷ್ಯದ ಪರಿಣಾಮ)

ಆಗಸ್ಟ್ 15,2026 ರಿಂದ ದೆಹಲಿಯಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ದ್ವಿಚಕ್ರ ವಾಹನಗಳ ಹೊಸ ನೋಂದಣಿಗಳನ್ನು ನಿಷೇಧಿಸಲು ಯೋಜಿಸಲಾಗಿದೆ. ಇದರಿಂದಾಗಿ ವಿದ್ಯುತ್ ಚಾಲಿತ ವಾಹನಗಳಿಗೆ (ಇವಿ) ಬೇಡಿಕೆ ಹೆಚ್ಚಾಗಲಿದೆ. ಆಗಸ್ಟ್ 15,2025 ರಿಂದ ಸಿಎನ್‌ಜಿ ಆಟೋರಿಕ್ಷಾಗಳು ಸಹ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ.

ಬೈಕ್ ಟ್ಯಾಕ್ಸಿಯನ್ನು ಬೆಂಬಲಿಸಿದ ಕೇಂದ್ರದ ಮಾರ್ಗಸೂಚಿ: ರಾಜ್ಯದಲ್ಲಿ ಹೊಸ ನಿರೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...