Homeಮುಖಪುಟಒಡಿಶಾ| ಬಿಜೆಪಿ ನಾಯಕನ ಬಂಧನಕ್ಕೆ ಒತ್ತಾಯಿಸಿ ಅಧಿಕಾರಿಗಳಿಂದ ಸಾಮೂಹಿಕ ರಜೆ: ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯ

ಒಡಿಶಾ| ಬಿಜೆಪಿ ನಾಯಕನ ಬಂಧನಕ್ಕೆ ಒತ್ತಾಯಿಸಿ ಅಧಿಕಾರಿಗಳಿಂದ ಸಾಮೂಹಿಕ ರಜೆ: ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯ

- Advertisement -
- Advertisement -

ಭುವನೇಶ್ವರ ಮಹಾನಗರ ಪಾಲಿಕೆಯ (ಬಿಎಂಸಿ) ಹಿರಿಯ ಅಧಿಕಾರಿಯ ಮೇಲೆ ಸೋಮವಾರ ನಡೆದ ಹಲ್ಲೆಯನ್ನು ಖಂಡಿಸಿ ಒಡಿಶಾದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹಿರಿಯ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಸಾಮೂಹಿಕ ರಜೆ ಹಾಕಿದ್ದಾರೆ. ಇದರಿಂದ ಸರ್ಕಾರಿ ಕಚೇರಿಗಳಲ್ಲಿ ಆಡಳಿತಾತ್ಮಕ ಕೆಲಸಗಳು ವ್ಯತ್ಯಯಗೊಂಡಿವೆ ಎಂದು ವರದಿಯಾಗಿದೆ.

ಬ್ಲಾಕ್, ತಾಲೂಕು ಮತ್ತು ಜಿಲ್ಲಾ ಮಟ್ಟದ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಸೇವೆಗಳನ್ನು ಒದಗಿಸುವಲ್ಲಿ ಒಡಿಶಾ ಆಡಳಿತ ಸೇವೆ (ಒಎಎಸ್) ಮತ್ತು ಒಡಿಶಾ ಕಂದಾಯ ಸೇವೆ (ಒಆರ್‌ಎಸ್) ಅಧಿಕಾರಿಗಳು ಬೆನ್ನೆಲುಬಾಗಿರುವುದರಿಂದ, ಅವರ ಸಾಮೂಹಿಕ ಪ್ರತಿಭಟನಾ ರಜೆ ಆಡಳಿತದ ಮೇಲೆ ಪರಿಣಾಮ ಬೀರಿದೆ.

ಸೋಮವಾರ, ಬಿಎಂಸಿಯ ಹೆಚ್ಚುವರಿ ಆಯುಕ್ತ, ಹಿರಿಯ ಒಎಎಸ್ ಅಧಿಕಾರಿ ರತ್ನಾಕರ್ ಸಾಹೂ ಅವರನ್ನು ಕಚೇರಿಯ ಕೊಠಡಿಯಿಂದ ಹೊರಗೆ ಎಳೆದೊಯ್ದು ದುಷ್ಕರ್ಮಿಗಳ ಗುಂಪೊಂದು ಹಲ್ಲೆ ನಡೆಸಿತ್ತು. ಅಲ್ಲದೆ, ಬಿಜೆಪಿ ನಾಯಕ ಜಗನ್ನಾಥ್ ಪ್ರಧಾನ್ ಅವರಲ್ಲಿ ಕ್ಷಮೆಯಾಚಿಸುವಂತೆ ಒತ್ತಾಯಿಸಿತ್ತು.

ಪ್ರಕರಣ ಸಂಬಂಧ ಬಿಎಂಸಿಯ ಬಿಜೆಪಿ ಕಾರ್ಪೊರೇಟರ್ ಜೀವನ್ ರೌಟ್ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿಯ ಒಡಿಶಾ ಘಟಕ ಐವರನ್ನೂ ಪಕ್ಷದಿಂದ ಉಚ್ಛಾಟಿಸಿದೆ.

ಸಾಮೂಹಿಕ ರಜೆ ಘೋಷಿಸಿದ ಒಡಿಶಾ ಆಡಳಿತ ಸೇವಾ ಸಂಘವು, ಬಿಜೆಪಿ ನಾಯಕ ಜಗನ್ನಾಥ್ ಪ್ರಧಾನ್ ಅವರನ್ನು ತಕ್ಷಣ ಬಂಧಿಸುವುದು ಸೇರಿದಂತೆ ಮೂರು ಬೇಡಿಕೆಗಳನ್ನು ಮುಖ್ಯಮಂತ್ರಿ ಮುಂದೆ ಇಟ್ಟಿದೆ. ಸಂಘದ ಸದಸ್ಯರು ಸರ್ಕಾರದ ಮುಖ್ಯ ಕಾರ್ಯದರ್ಶಿ ಮನೋಜ್ ಅಹುಜಾ ಅವರನ್ನು ಭೇಟಿ ಮಾಡಿ, ಜಗನ್ನಾಥ್ ಪ್ರಧಾನ್ ಅಧಿಕಾರಿ ಮೇಲಿನ ದಾಳಿಯ ಕಿಂಗ್‌ಪಿನ್ ಎಂದು ಆರೋಪಿಸಿ ಮನವಿ ಸಲ್ಲಿಸಿದೆ.

ಈ ನಡುವೆ, ಅಧಿಕಾರಿ ಸಾಹೂ ಅವರು ತಮ್ಮೊಂದಿಗೆ ಮತ್ತು ಬಿಎಂಸಿಯ ಮಹಿಳಾ ನೈರ್ಮಲ್ಯ ಕಾರ್ಯಕರ್ತೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿರುವ ಜಗನ್ನಾಥ್ ಪ್ರಧಾನ್, ಇದು ಹಲ್ಲೆಗೆ ಕಾರಣವಾಗಿದೆ ಎಂದಿದ್ದಾರೆ. ಅವರೂ ಹಲ್ಲೆಯನ್ನು ಖಂಡಿಸಿದ್ದಾರೆ.

ತಹಶೀಲ್ದಾರ್‌ಗಳು, ಸಬ್‌-ಕಲೆಕ್ಟರ್‌ಗಳು, ಬ್ಲಾಕ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಎಲ್ಲಾ ಕ್ಷೇತ್ರ ಮಟ್ಟದ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಭದ್ರತೆ ಒದಗಿಸುವಂತೆ ಎಎಎಸ್‌ ಸಂಘವು ಒತ್ತಾಯಿಸಿದೆ. ರಾಜ್ಯ ಸರ್ಕಾರವು ಈ ಘಟನೆಯನ್ನು ಸಾರ್ವಜನಿಕವಾಗಿ ಖಂಡಿಸಬೇಕೆಂದು ಎಂದು ಆಗ್ರಹಿಸಿದೆ.

ತಮ್ಮ ಬೇಡಿಕೆಗಳು ಈಡೇರುವವರೆಗೆ ಸಾಮೂಹಿಕ ರಜೆ ಹಾಕಲು ಎಲ್ಲಾ ಅಧಿಕಾರಿಗಳು ನಿರ್ಧರಿಸಿದ್ದಾರೆ ಎಂದು ಒಎಎಸ್‌ ಸಂರ್ಘ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿದ ಪತ್ರದಲ್ಲಿ ತಿಳಿಸಿದೆ.

ಅಧಿಕಾರಿ ಮೇಲಿನ ಹಲ್ಲೆಯಂತಹ ಹೇಯ ಕೃತ್ಯಗಳು ರಾಜ್ಯಾದ್ಯಂತ ಕೆಲಸ ಮಾಡುವ ಅಧಿಕಾರಿಗಳ ನೈತಿಕ ಸ್ಥೈರ್ಯವನ್ನು ಕುಗ್ಗಿಸುತ್ತದೆ ಎಂದು ಒಎಎಸ್‌ ಹೇಳಿದೆ.

ಪುರಿಯಲ್ಲಿ ಜಗನ್ನಾಥ ದೇವರ ರಥಯಾತ್ರೆ ನಡೆಯುತ್ತಿರುವುದರಿಂದ, ಉತ್ತರದ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಅಧಿಕಾರಿಗಳು ಸಾಮೂಹಿಕ ರಜೆ ಹಾಕದಂತೆ ಒಡಿಶಾದ ಕಂದಾಯ ಸಚಿವ ಸುರೇಶ್ ಪೂಜಾರಿ ಮನವಿ ಮಾಡಿದ್ದಾರೆ.

ಹಿರಿಯ ಅಧಿಕಾರಿಯನ್ನು ಕಚೇರಿಯಿಂದ ಎಳೆದೊಯ್ದು ಥಳಿಸಿದ ದುಷ್ಕರ್ಮಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...