HomeUncategorized'ನಾಡ ಉಳಿಸಿ ಸಮಾವೇಶ': ದೇವನಹಳ್ಳಿ ರೈತರ ಭೂಮಿಗೆ ಕೈ ಹಾಕಿದರೆ ಸರಕಾರಕ್ಕೆ ಗಂಡಾಂತರ - ಬಡಗಲಪುರ...

‘ನಾಡ ಉಳಿಸಿ ಸಮಾವೇಶ’: ದೇವನಹಳ್ಳಿ ರೈತರ ಭೂಮಿಗೆ ಕೈ ಹಾಕಿದರೆ ಸರಕಾರಕ್ಕೆ ಗಂಡಾಂತರ – ಬಡಗಲಪುರ ನಾಗೇಂದ್ರ ಎಚ್ಚರಿಕೆ!

- Advertisement -
- Advertisement -

ದೇವನಹಳ್ಳಿ, ಬೆಂಗಳೂರು: ವಿಶ್ವ ವ್ಯಾಪಾರ ಒಪ್ಪಂದಗಳ ಪರಿಣಾಮವಾಗಿ ಕಾರ್ಪೊರೇಟ್ ಯೋಜನೆಗಳು ರೈತರು ಮತ್ತು ಜನಚಳವಳಿಗಳ ಹಕ್ಕುಗಳನ್ನು ಹತ್ತಿಕ್ಕಲು ಯತ್ನಿಸುತ್ತಿವೆ ಎಂದು ಬಡಗಲಪುರ ನಾಗೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ನಾಡ ಉಳಿಸಿ ಸಮಾವೇಶ’ದಲ್ಲಿ ಇಂದು (ಜುಲೈ 4) ಮಾತನಾಡಿದ ಅವರು, ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟವನ್ನು ರಾಜ್ಯದ ಇತಿಹಾಸದಲ್ಲಿ ‘ಐತಿಹಾಸಿಕ ದಾಖಲೆ’ ಎಂದು ಬಣ್ಣಿಸಿ, ಸರ್ಕಾರವು ಬ್ರಿಟಿಷರ ಪದ್ಧತಿಗಳನ್ನೇ ಮುಂದುವರೆಸುತ್ತಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

“ನಾವು ‘ನೇಗಿಲ ಯೋಗಿ’ಯ ಹಾಡನ್ನು ಕೇಳಿದ್ದೇವೆ. ಆ ಸಂದರ್ಭದಲ್ಲಿ ನಾಡಿನ ಜನಚಳವಳಿಗಳಲ್ಲಿ ಹಸಿರು, ನೀಲಿ, ಕೆಂಪು ಬಾವುಟುಗಳು ಒಂದಾಗಿದ್ದವು. ಈಗಲೂ ಅದೇ ಐಕ್ಯತೆ ಇದೆ” ಎಂದು ನಾಗೇಂದ್ರ ಸ್ಮರಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೊರೇಟ್ ನೀತಿಗಳನ್ನು ಅನುಸರಿಸಿ ರೈತರ ಭೂಮಿಗೆ ಕೈ ಹಾಕುತ್ತಿವೆ ಎಂದು ಅವರು ಆರೋಪಿಸಿದರು.

ಐತಿಹಾಸಿಕ ದೇವನಹಳ್ಳಿ ಹೋರಾಟ – 1184 ದಿನಗಳ ಕೆಚ್ಚೆದೆಯ ಸತ್ಯಾಗ್ರಹ: ದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಚಳವಳಿ 384 ದಿನಗಳ ಕಾಲ ನಡೆದಿತ್ತು. ಆದರೆ, ದೇವನಹಳ್ಳಿ ಹೋರಾಟ ಈಗಾಗಲೇ 1184 ದಿನಗಳನ್ನು ದಾಟಿದೆ. ಇದು ಸರಕಾರದ ವಿರುದ್ಧ ನಡೆದ ದಿಟ್ಟ ಹೋರಾಟವಾಗಿದೆ ಎಂದು ನಾಗೇಂದ್ರ ಒತ್ತಿ ಹೇಳಿದರು. “ಸಂಯುಕ್ತ ಹೋರಾಟವು ಈ ಚಳವಳಿಗೆ ಬೆನ್ನೆಲುಬಾಗಿ ನಿಂತು, ರಾಜ್ಯ ಹಾಗೂ ರಾಷ್ಟ್ರಮಟ್ಟದ ಹೋರಾಟವನ್ನಾಗಿಸಿದೆ. ರೈತರ ಮತ್ತು ಭೂಮಿಯ ವಿಷಯದಲ್ಲಿ ರಾಜ್ಯದ ಎಲ್ಲ ವರ್ಗಗಳೂ ಒಂದಾಗಿರುವುದು ವಿಶಿಷ್ಟವಾಗಿದೆ” ಎಂದರು.

ಈ ಹೋರಾಟವು ನಾಡಿನ ಜಲ ಮತ್ತು ಸಂಪತ್ತನ್ನು ಉಳಿಸುವಲ್ಲಿ ರೂಪುಗೊಂಡ ಅಪರೂಪದ ಚಳವಳಿಯಾಗಿದೆ. ಇದು ಭವಿಷ್ಯದಲ್ಲಿ ಅನಿಷ್ಟ ದುಷ್ಟಕೂಟಗಳನ್ನು ನಾಶಮಾಡಲು ನಾಂದಿಯಾಗುತ್ತದೆ ಎಂದು ಬಡಗಲಪುರ ನಾಗೇಂದ್ರ ಭವಿಷ್ಯ ನುಡಿದರು.

ಬಿಜೆಪಿ-ಕಾಂಗ್ರೆಸ್ ಕಾರ್ಪೊರೇಟ್‌ಗಳ ‘ಒಂದೇ ನಾಣ್ಯದ ಎರಡು ಮುಖಗಳು’: “ಒಂದು ಕಡೆ ಮೋದಿ ಸರಕಾರ, ಮತ್ತೊಂದು ಕಡೆ ಸಿದ್ದರಾಮಯ್ಯ ಸರಕಾರ. ಎರಡು ಬೇರೆ ಬೇರೆ ಪಕ್ಷಗಳು, ಆದರೆ ಅವುಗಳ ನೀತಿಗಳು ಒಂದೇ. ಇವೆರಡೂ ಕಾರ್ಪೊರೇಟ್‌ ನೀತಿಗಳನ್ನು ಮುಂದುವರೆಸುತ್ತಿವೆ. ಆ ನಿಟ್ಟಿನಲ್ಲಿ ಭೂಮಿಗೆ ಕೈ ಹಾಕಕ್ಕೆ ಬಂದಿವೆ” ಎಂದು ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ದೇವನಹಳ್ಳಿ ಹೋರಾಟವು ಸರ್ಕಾರಗಳಿಗೆ ‘ಬಿಸಿ ಮುಟ್ಟಿಸಿದೆ’. “ಈಗ 10 ದಿನಗಳು ಸಮಯ ತೆಗೆದುಕೊಂಡು ಬ್ರಿಟಿಷರ ಪದ್ಧತಿಯನ್ನು ಮುಂದುವರೆಸಲು ಹೊರಟಿದೆ” ಎಂದು ಅವರು ತೀವ್ರವಾಗಿ ಖಂಡಿಸಿದರು.

ರೈತರು, ದಲಿತರು, ಕಾರ್ಮಿಕರ ಸ್ಪಷ್ಟ ಎಚ್ಚರಿಕೆ: “ಇದು ಬಸವಣ್ಣ, ಸಂಗೊಳ್ಳಿ ರಾಯಣ್ಣ, ಟಿಪ್ಪು ಸುಲ್ತಾನ, ಕಿತ್ತೂರು ರಾಣಿ ಚೆನ್ನಮ್ಮನ ನಾಡು. ಇಲ್ಲಿ ಸಾಧು-ಸಂತರು, ಸೂಫಿಗಳು ತಿರುಗಾಡಿದ ನೆಲ. ರೈತರು ಈಗ ಕೃಷಿ ಸಂಸ್ಕೃತಿಯನ್ನು ಉಳಿಸಲು ಹೊರಟಿದ್ದಾರೆ. ದಲಿತರು, ರೈತರು, ಕಾರ್ಮಿಕರು, ಕಲಾವಿದರು, ಸಾಹಿತಿಗಳು ನಾವೆಲ್ಲರೂ ಸರಕಾರಕ್ಕೆ ಸ್ಪಷ್ಟ ಸಂದೇಶ ಕೊಡುತ್ತಿದ್ದೇವೆ” ಎಂದು ನಾಗೇಂದ್ರ ಗುಡುಗಿದರು.

“ಸರಕಾರಕ್ಕೆ ಹೇಳುವುದು ಒಂದೇ, ನಾವು ಕೈಗಾರಿಕೆಗಳಿಗೆ ಭೂಮಿಯನ್ನು ಕೊಡುವುದಿಲ್ಲ. ಬಲವಂತದಿಂದ ಕಿತ್ತುಕೊಳ್ಳಲು ಪ್ರಯತ್ನ ಮಾಡಲು ಮುಂದಾದರೆ, ಒಂದಿಂಚು ಕೂಡ ಕೊಡುವುದಿಲ್ಲ. ಸಿದ್ದರಾಮಯ್ಯ ನಮ್ಮ ಭೂಮಿ ನಮಗೆ ನೀಡುವ ಭರವಸೆ ಇದೆ” ಎಂದು ಅವರು ಹೇಳಿದರು.

ಸಿಎಂ ಸಿದ್ದರಾಮಯ್ಯಗೆ ನೇರ ಸವಾಲು: ‘ಭೂಮಿ ತಂಟೆಗೆ ಬಂದರೆ ರಸ್ತೆಯಲ್ಲಿ ತಿರುಗಾಡಲು ಸಾಧ್ಯವಿಲ್ಲ!’ “ನಂಜುಂಡಸ್ವಾಮಿ ಅವರ ಶಿಷ್ಯರಾಗಿರುವುದರಿಂದ ಸಿದ್ದರಾಮಯ್ಯ ಅವರ ಮೇಲೆ ನಂಬಿಕೆ ಇದೆ. ಆ ನಂಬಿಕೆಯನ್ನು ಉಳಿಸಿಕೊಳ್ಳಿ. ಎಂ.ಬಿ. ಪಾಟೀಲ್ ಮುಖ್ಯಮಂತ್ರಿ ಆಗಬೇಕೆನ್ನುವ ವಿಶ್ವಾಸದಲ್ಲಿ ನೀವು ಇದ್ದೀರಿ. ಆದರೆ, ಇದೀಗ ಭೂಮಿಯನ್ನು ಕೈ ಬಿಡದಿದ್ದರೆ, ಮುಂದೆ ನೀವು ವಿಧಾನ ಸೌಧಕ್ಕೆ ಆಯ್ಕೆ ಆಗುವುದಕ್ಕೂ ಸಾಧ್ಯವಿಲ್ಲ. ಭೂಮಿ ತಂಟೆಗೆ ಬಂದರೆ, ನೀವು ರಸ್ತೆಯಲ್ಲಿ ಸುಲಭವಾಗಿ ತಿರುಗಾಡುವುದಕ್ಕೆ ಸಾಧ್ಯವಿಲ್ಲ” ಎಂದು ನಾಗೇಂದ್ರ ನೇರವಾಗಿ ಸವಾಲು ಹಾಕಿದರು.

“ನಮ್ಮ ಭೂಮಿ ನಮಗೆ ಸಿಗುವ ತನಕ ಹೋರಾಟ ನಿಲ್ಲಿಸುವುದಿಲ್ಲ, ನಾವು ಇಲ್ಲಿಂದ ಹೊರಡುವುದಿಲ್ಲ” ಎಂದು ದೃಢವಾಗಿ ಹೇಳಿದರು.

ವೇದಿಕೆಯಲ್ಲಿ ಮಾರೇಗೌಡ, ಗೋಪಿನಾಥ್, ರಮೇಶ್ ಚೀಮಾಚನಹಳ್ಳಿ, ಅಶ್ವಥ್ಥಪ್ಪ, ಪ್ರಭಾ ಬೆಳವಂಗಲ, ರಘು, ಸಂಯುಕ್ತ ಹೋರಾಟ ಕರ್ನಾಟಕದ ಪ್ರತಿನಿಧಿಗಳಾದ ಬಡಗಲಪುರ ನಾಗೇಂದ್ರ, ಎಸ್ ವರಲಕ್ಷ್ಮೀ, ನೂರ್ ಶ್ರೀಧರ್, ಎಚ್.ಆರ್.ಬಸವರಾಜಪ್ಪ, ಎಸ್ ಮೀನಾಕ್ಷಿ ಸುಂದರಂ, ಡಾ.ಸಿದ್ದನಗೌಡ ಪಾಟೀಲ್, ಗುರುಪ್ರಸಾದ್ ಕೆರಗೋಡು, ಯು ಬಸವರಾಜ, ಚುಕ್ಕಿ ನಂಜುಂಡಸ್ವಾಮಿ, ವಿ ನಾಗರಾಜ್, ಪಿ ಪಿ ಅಪ್ಪಣ್ಣ, ಡಿ.ಎಚ್.ಪೂಜಾರ್, ಕೆ.ವಿ.ಭಟ್, ಮಾವಳ್ಳಿ ಶಂಕರ್‌, ರಾಷ್ಟ್ರೀಯ ನಾಯಕಾರ ದರ್ಶನ್‌ ಪಾಲ್‌, ಯುದ್‌ವೀರ್‌ ಸಿಂಗ್‌, ರಾಕೇಶ್‌ ಟಿಕಾಯತ್‌, ಡಾ.ಸುನೀಲಮ್‌, ವಿಜು ಕೃಷ್ಣನ್‌, ಪಿ,ಟಿ.ಜಾನ್‌, ನಟ ಪ್ರಕಾಶ್ ರಾಜ್, ಪತ್ರಕರ್ತ ಇಂದೂಧರ ಹೊನ್ನಾಪುರ, ಚಿಂತಕ ಎಸ್.ಆರ್.ಹಿರೇಮಠ್‌ ಉಪಸ್ಥಿತರಿದ್ದರು.

ದೇವನಹಳ್ಳಿ: ಭೂಸ್ವಾಧೀನ ಅಧಿಸೂಚನೆ  ರದ್ದುಗೊಳಿಸಿ; ಸರಕಾರಕ್ಕೆ ಗುಜರಾತ್‌ನ ಪ್ರಮುಖ ಟ್ರೇಡ್ ಯೂನಿಯನ್ ಮಜೂರ್ ಅಧಿಕಾರ್ ಮಂಚ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...