Homeಕರ್ನಾಟಕನಾಡ ಉಳಿಸಿ ಸಮಾವೇಶ: ದೇವನಹಳ್ಳಿ ರೈತರ ಭೂಮಿಗೆ ಕೈಹಾಕಿದರೆ ದೇಶಾದ್ಯಂತ ಹೋರಾಟ - ದರ್ಶನ್ ಪಾಲ್...

ನಾಡ ಉಳಿಸಿ ಸಮಾವೇಶ: ದೇವನಹಳ್ಳಿ ರೈತರ ಭೂಮಿಗೆ ಕೈಹಾಕಿದರೆ ದೇಶಾದ್ಯಂತ ಹೋರಾಟ – ದರ್ಶನ್ ಪಾಲ್ ಪ್ರಬಲ ಎಚ್ಚರಿಕೆ!

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ಪ್ರದೇಶದ ರೈತರ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಕರ್ನಾಟಕ ಸರ್ಕಾರ ಮಣಿಯದಿದ್ದರೆ, ದೇಶಾದ್ಯಂತ ಈ ಹೋರಾಟವನ್ನು ವಿಸ್ತರಿಸಬೇಕಾಗುತ್ತದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (SKM) ನಾಯಕ ದರ್ಶನ್ ಪಾಲ್ ಎಚ್ಚರಿಕೆ ನೀಡಿದ್ದಾರೆ. ಇಂದು (ಶುಕ್ರವಾರ, ಜುಲೈ 4) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ‘ನಾಡ ಉಳಿಸಿ ಸಮಾವೇಶ’ದಲ್ಲಿ ಭಾಗವಹಿಸಿದ್ದ ಅವರು, ರೈತರ ಭೂಮಿ ಕಿತ್ತುಕೊಳ್ಳುವ ಸರ್ಕಾರದ ಪ್ರಯತ್ನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು.

ದೇವನಹಳ್ಳಿ ಹೋರಾಟಕ್ಕೆ ರಾಷ್ಟ್ರಮಟ್ಟದ ಬೆಂಬಲ: “ನಾನು ಸಂಯುಕ್ತ ಕಿಸಾನ್ ಮೋರ್ಚಾದ ಪರವಾಗಿ ಇಲ್ಲಿನ ರೈತರ ಹೋರಾಟಕ್ಕೆ ಬೆಂಬಲ ನೀಡಲು ಬಂದಿದ್ದೇನೆ. ಬೆಂಗಳೂರು ಜಿಲ್ಲೆಯ ದೇವನಹಳ್ಳಿಯ ಸಾವಿರಾರು ಜನರು ಭೂಸ್ವಾಧೀನ ವಿರೋಧಿಸಿ ಕಳೆದ 1185 ದಿನಗಳಿಂದ ನಡೆಸುತ್ತಿರುವ ಈ ಹೋರಾಟಕ್ಕೆ ಬೆಂಬಲ ನೀಡುತ್ತಿರುವುದು ಸಂತೋಷದ ಸಂಗತಿ,” ಎಂದು ದರ್ಶನ್ ಪಾಲ್ ಹೇಳಿದರು. ರೈತರ ನಿಯೋಗದೊಂದಿಗೆ ಮುಖ್ಯಮಂತ್ರಿಗಳ ಭೇಟಿಯ ನಂತರ ಹೋರಾಟದ ಮುಂದಿನ ರೂಪುರೇಷೆಗಳು ಸ್ಪಷ್ಟವಾಗಲಿವೆ ಎಂದು ಅವರು ತಿಳಿಸಿದರು.

ಕರಾಳ ಕಾಯ್ದೆಗಳ ವಿರುದ್ಧದ ಹೋರಾಟದ ಪುನರಾವರ್ತನೆ? ಕೇಂದ್ರದ ಮೂರು ಕರಾಳ ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ 13 ತಿಂಗಳ ಸುದೀರ್ಘ ಹೋರಾಟ ನಡೆಸಿ, ಮೋದಿ ಸರ್ಕಾರ ಕೃಷಿ ವಿರೋಧಿ ಕಾನೂನುಗಳನ್ನು ವಾಪಸ್ ಪಡೆದುಕೊಳ್ಳುವಂತೆ ಮಾಡಿದ್ದನ್ನು ದರ್ಶನ್ ಪಾಲ್ ನೆನಪಿಸಿಕೊಂಡರು. “ಅದೇ ಉತ್ಸಾಹದಲ್ಲಿ ದೇವನಹಳ್ಳಿಯ ಈ ಹೋರಾಟವೂ ನಡೆಯುತ್ತಿದೆ. ಅದಕ್ಕೆ ನಮ್ಮೆಲ್ಲರ ಬೆಂಬಲ ಇದೆ,” ಎಂದು ಅವರು ದೃಢಪಡಿಸಿದರು. “ಮೂರು ವರ್ಷದ ಸುದೀರ್ಘ ಹೋರಾಟ ಎಂದರೆ ಸಾಮಾನ್ಯ ವಿಷಯವಲ್ಲ. ದೇವನಹಳ್ಳಿಯ ರೈತರು ಅದನ್ನು ಮಾಡಿ ತೋರಿಸಿದ್ದಾರೆ,” ಎಂದು ಶ್ಲಾಘಿಸಿದರು.

ರೈತರ ಒಪ್ಪಿಗೆ ಇಲ್ಲದೆ ಒಂದಿಂಚು ಭೂಮಿಯೂ ಇಲ್ಲ! ಅನೇಕ ರಾಜ್ಯ ಸರ್ಕಾರಗಳು 2013ರಲ್ಲಿ ಭೂ ಸ್ವಾಧೀನ ಕಾಯಿದೆಯನ್ನು ಅಂಗೀಕರಿಸಿವೆ. ಈ ಕಾಯಿದೆಯ ಪ್ರಕಾರ, ಸರ್ಕಾರ ಕೈಗಾರಿಕಾ ಉದ್ದೇಶಕ್ಕೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಾದರೆ ಶೇಕಡಾ 70ರಷ್ಟು ರೈತರ ಒಪ್ಪಿಗೆ ಕಡ್ಡಾಯ. ಜೊತೆಗೆ, ಜೀವನ ಭದ್ರತೆ ಸೇರಿದಂತೆ ಎಲ್ಲ ಅಂಶಗಳು ಈ ಪ್ರಕ್ರಿಯೆಯಲ್ಲಿ ಒಳಗೊಳ್ಳಬೇಕು. ಆದರೆ, “ದೇವನಹಳ್ಳಿಯಲ್ಲಿ ಶೇಕಡ 80ರಷ್ಟು ಜನ ರೈತರು ಭೂಮಿ ಕೊಡಲ್ಲ ಎಂದು ಬರೆದುಕೊಟ್ಟಿದ್ದಾರೆ. ರೈತರ ಒಪ್ಪಿಗೆ ಇಲ್ಲದೇ ಒಂದಿಂಚು ಭೂಮಿಯನ್ನೂ ಸ್ವಾಧೀನಪಡಿಸಿಕೊಳ್ಳಬಾರದು,” ಎಂದು ದರ್ಶನ್ ಪಾಲ್ ಆಗ್ರಹಿಸಿದರು.

“ಸರ್ಕಾರ ಎಲ್ಲ ಕಡೆಗಳಲ್ಲಿ ಭೂಮಿಯನ್ನು ಕಿತ್ತುಕೊಳ್ಳುವ ಪ್ರಯತ್ನ ಮುಂದುವರಿಸಿದೆ. ಕೈಗಾರಿಕೆಗಳಿಗೆ ಕೊಟ್ಟಿರುವ ಭೂಮಿಯನ್ನು ಕಿತ್ತು ನಾವು ಅಲ್ಲಿ ಬೆಳೆ ಬೆಳೆಯುತ್ತೇವೆ ಎಂದರೆ ಅವರು ಕೊಡುತ್ತಾರೆಯೇ? ಸರ್ಕಾರ ಭೂಮಿಯನ್ನು ಖಾಸಗಿ ಮಾಲಕರಿಗೆ ಕೊಡುತ್ತಿರುವುದನ್ನು ನಾವು ವಿರೋಧಿಸುತ್ತೇವೆ,” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಸರ್ಕಾರಕ್ಕೆ ತೀಕ್ಷ್ಣ ಪ್ರಶ್ನೆಗಳು: ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ನಡೆದಾಗ ಪಂಜಾಬ್‌ನಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಆಗ ಬಿಜೆಪಿ ಸರ್ಕಾರ ರೈತರ ವಿರುದ್ಧ ದಾಳಿ ಮಾಡುತ್ತಿದ್ದರೂ, ಪಂಜಾಬ್ ಸರ್ಕಾರ ರೈತರಿಗೆ ನೈತಿಕವಾಗಿ, ಹಣಕಾಸಿನ ಮೂಲಕ ಸಂಪೂರ್ಣ ಬೆಂಬಲ ನೀಡಿತ್ತು. ಆ ಹೋರಾಟದಲ್ಲಿ ಪ್ರಾಣ ಕಳೆದುಕೊಂಡ 700ಕ್ಕೂ ಹೆಚ್ಚು ರೈತರಿಗೆ ತಲಾ 5 ಲಕ್ಷ ರೂ. ಪರಿಹಾರ ಮತ್ತು ಮನೆಗೊಂದು ಸರ್ಕಾರಿ ಕೆಲಸ ಘೋಷಿಸಿತ್ತು. “ಆದರೆ ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ಯಾಕೆ ಈ ರೀತಿ ನಡೆದುಕೊಳ್ಳುತ್ತಿದೆ?” ಎಂದು ದರ್ಶನ್ ಪಾಲ್ ನೇರವಾಗಿ ಪ್ರಶ್ನಿಸಿದರು.

“ರಾಹುಲ್ ಗಾಂಧಿ ದೆಹಲಿಯ ಗಡಿಗಳಲ್ಲಿ ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದರು. ಆದರೆ, ಇಲ್ಲಿ ಸಿದ್ದರಾಮಯ್ಯ ಸರ್ಕಾರ ಬಿಜೆಪಿ ಯಾವ ಪಾತ್ರವನ್ನು ನಿರ್ವಹಿಸಿತೋ, ಅದೇ ರೀತಿಯಲ್ಲಿ ಕರ್ನಾಟಕದಲ್ಲಿ ನಡೆದುಕೊಳ್ಳುತ್ತಿದೆ. ರಾಜ್ಯ ಸರ್ಕಾರ ಜನರನ್ನು ಬೆದರಿಸುತ್ತಿದೆ, ಹೋರಾಟಗಾರರ ವಿರುದ್ಧ ಪೊಲೀಸರನ್ನು ಚೂ ಬಿಡಲಾಗುತ್ತಿದೆ,” ಎಂದು ಅವರು ಆಪಾದಿಸಿದರು.

ಜುಲೈ 20ರ ಗಡುವು ಮತ್ತು ರಾಷ್ಟ್ರವ್ಯಾಪಿ ಹೋರಾಟದ ಕರೆ: ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಕನ್ಯಾಕುಮಾರಿ ಇಂದ ಕಾಶ್ಮೀರದವರೆಗೂ ವ್ಯಾಪಿಸಿದೆ. “ರಾಜ್ಯ ಸರ್ಕಾರ ಈ ಹೋರಾಟಕ್ಕೆ ಮಣಿದು, ರೈತರ ಭೂಮಿ ಪಡೆದುಕೊಳ್ಳುವುದಿಲ್ಲ ಎಂದು ಘೋಷಿಸದಿದ್ದರೆ, ದೇಶಾದ್ಯಂತ ಹೋರಾಟ ಮಾಡಬೇಕಾಗುತ್ತದೆ. ದೇಶದ ಉದ್ದಗಲಕ್ಕೂ ಬೆಂಬಲ ಕೊಡಬೇಕಾಗುತ್ತದೆ. ಆದ್ದರಿಂದ ಈಗಲೇ ರೈತರ ಪರವಾಗಿ ಘೋಷಣೆ ಮಾಡಿ,” ಎಂದು ದರ್ಶನ್ ಪಾಲ್ ಒತ್ತಾಯಿಸಿದರು.

“ನಾವು ದೆಹಲಿಯ ಗಡಿಗಳನ್ನು ಮಾತ್ರವಲ್ಲ, ದೆಹಲಿಯ ರೈಲ್ವೇ ಸ್ಟೇಷನ್‌ಗಳು ಸೇರಿದಂತೆ ದಿಲ್ಲಿಗೆ ಬರುವ ಎಲ್ಲ ಮಾರ್ಗಗಳನ್ನು ದಿಗ್ಬಂಧನ ಮಾಡಿದ್ದೆವು. ರೈತರು ಈ ಬೆದರಿಕೆಗಳಿಗೆ ಹೆದರುವುದಿಲ್ಲ. ಎಸ್.ಕೆ.ಎಂ. ಅವರ ಜೊತೆಗಿದೆ. ಹಾಗಾಗಿ, ಸರ್ಕಾರ ರೈತಪರ ತೀರ್ಮಾನ ಪ್ರಕಟಿಸಬೇಕು. ಇಲ್ಲದಿದ್ದರೆ ಹೋರಾಟವನ್ನು ದೇಶವ್ಯಾಪಿ ವಿಸ್ತರಿಸುತ್ತೇವೆ,” ಎಂದು ಅವರು ಪುನರುಚ್ಚರಿಸಿದರು.

ರೈತರ ದೃಢ ಸಂಕಲ್ಪಕ್ಕೆ ಅಭಿನಂದನೆ: “ಅರ್ಧ ಎಕರೆ, ಒಂದು ಎಕರೆ ಭೂಮಿಯಲ್ಲಿ ರೈತರು ತರಕಾರಿ, ಹಣ್ಣು-ಹಂಪಲ ಬೆಳೆಯುತ್ತಿದ್ದಾರೆ. ಅದನ್ನು ಈಗ ಕಿತ್ತುಕೊಳ್ಳಲು ಹೊರಟಿದೆ. ಈಗ ಒಂದಿಂಚು ಭೂಮಿಯನ್ನು ಕೂಡ ಕೊಡುವುದಿಲ್ಲ ಎಂದು ತೀರ್ಮಾನ ಮಾಡಿರುವುದು ಸಂತೋಷದ ಸಂಗತಿ, ಅದಕ್ಕೆ ನಮ್ಮ ಅಭಿನಂದನೆಗಳು,” ಎಂದು ದರ್ಶನ್ ಪಾಲ್ ರೈತರ ಸಂಕಲ್ಪವನ್ನು ಶ್ಲಾಘಿಸಿದರು. “ಜಾತಿವಾದಿಗಳಿಗೆ, ಮತೀಯವಾದಿಗಳಿಗೆ ಒಳಗಾಗದೆ, ಒಗ್ಗಟ್ಟಾಗಿ ನಾವು ಹೋರಾಟವನ್ನು ಮುಂದುವರಿಸಬೇಕು,” ಎಂದು ಅವರು ಕರೆ ನೀಡಿದರು.

ವಿಮಾನ ನಿಲ್ದಾಣಗಳ ಸಮೀಪದಲ್ಲಿ ಸರ್ಕಾರಗಳು ಭೂಮಿಯನ್ನು ವಶಪಡಿಸಿಕೊಳ್ಳುವ ಹುನ್ನಾರ ಮಾಡುತ್ತಿವೆ. ಇದರ ವಿರುದ್ಧ ನಮ್ಮ ಧ್ವನಿ ಎಂದಿಗೂ ಇರುತ್ತದೆ ಎಂದು ಎಸ್‌ಕೆಎಂ ನಾಯಕರು ಸ್ಪಷ್ಟಪಡಿಸಿದರು. ಜುಲೈ 20ರಂದು ನಡೆಯುವ ಸಂಯುಕ್ತ ಕಿಸಾನ್ ಮೋರ್ಚಾದ ಸಭೆಯಲ್ಲಿ ದೇವನಹಳ್ಳಿ ರೈತರ ಬೇಡಿಕೆಗಳನ್ನು ಪ್ರಮುಖವಾಗಿ ಚರ್ಚಿಸಿ, ಮುಂದಿನ ಹೋರಾಟದ ರೂಪುರೇಷೆಗಳನ್ನು ಅಂತಿಮಗೊಳಿಸಲಾಗುವುದು ಎಂದು ದರ್ಶನ್ ಪಾಲ್ ತಿಳಿಸಿದರು.

‘ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!’ – ‘ನಾಡ ಉಳಿಸಿ ಸಮಾವೇಶ’ದಲ್ಲಿ ಚನ್ನರಾಯಪಟ್ಟಣ ರೈತ ಮಹಿಳೆಯ ಕಳಕಳಿಯ ಮೊರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...