Homeಕರ್ನಾಟಕನಾಡ ಉಳಿಸಿ ಸಮಾವೇಶ: ದೇವನಹಳ್ಳಿ ರೈತರ ಭೂಮಿಗೆ ಕೈಹಾಕಿದರೆ ದೇಶಾದ್ಯಂತ ಹೋರಾಟ - ದರ್ಶನ್ ಪಾಲ್...

ನಾಡ ಉಳಿಸಿ ಸಮಾವೇಶ: ದೇವನಹಳ್ಳಿ ರೈತರ ಭೂಮಿಗೆ ಕೈಹಾಕಿದರೆ ದೇಶಾದ್ಯಂತ ಹೋರಾಟ – ದರ್ಶನ್ ಪಾಲ್ ಪ್ರಬಲ ಎಚ್ಚರಿಕೆ!

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ಪ್ರದೇಶದ ರೈತರ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಕರ್ನಾಟಕ ಸರ್ಕಾರ ಮಣಿಯದಿದ್ದರೆ, ದೇಶಾದ್ಯಂತ ಈ ಹೋರಾಟವನ್ನು ವಿಸ್ತರಿಸಬೇಕಾಗುತ್ತದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (SKM) ನಾಯಕ ದರ್ಶನ್ ಪಾಲ್ ಎಚ್ಚರಿಕೆ ನೀಡಿದ್ದಾರೆ. ಇಂದು (ಶುಕ್ರವಾರ, ಜುಲೈ 4) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ‘ನಾಡ ಉಳಿಸಿ ಸಮಾವೇಶ’ದಲ್ಲಿ ಭಾಗವಹಿಸಿದ್ದ ಅವರು, ರೈತರ ಭೂಮಿ ಕಿತ್ತುಕೊಳ್ಳುವ ಸರ್ಕಾರದ ಪ್ರಯತ್ನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು.

ದೇವನಹಳ್ಳಿ ಹೋರಾಟಕ್ಕೆ ರಾಷ್ಟ್ರಮಟ್ಟದ ಬೆಂಬಲ: “ನಾನು ಸಂಯುಕ್ತ ಕಿಸಾನ್ ಮೋರ್ಚಾದ ಪರವಾಗಿ ಇಲ್ಲಿನ ರೈತರ ಹೋರಾಟಕ್ಕೆ ಬೆಂಬಲ ನೀಡಲು ಬಂದಿದ್ದೇನೆ. ಬೆಂಗಳೂರು ಜಿಲ್ಲೆಯ ದೇವನಹಳ್ಳಿಯ ಸಾವಿರಾರು ಜನರು ಭೂಸ್ವಾಧೀನ ವಿರೋಧಿಸಿ ಕಳೆದ 1185 ದಿನಗಳಿಂದ ನಡೆಸುತ್ತಿರುವ ಈ ಹೋರಾಟಕ್ಕೆ ಬೆಂಬಲ ನೀಡುತ್ತಿರುವುದು ಸಂತೋಷದ ಸಂಗತಿ,” ಎಂದು ದರ್ಶನ್ ಪಾಲ್ ಹೇಳಿದರು. ರೈತರ ನಿಯೋಗದೊಂದಿಗೆ ಮುಖ್ಯಮಂತ್ರಿಗಳ ಭೇಟಿಯ ನಂತರ ಹೋರಾಟದ ಮುಂದಿನ ರೂಪುರೇಷೆಗಳು ಸ್ಪಷ್ಟವಾಗಲಿವೆ ಎಂದು ಅವರು ತಿಳಿಸಿದರು.

ಕರಾಳ ಕಾಯ್ದೆಗಳ ವಿರುದ್ಧದ ಹೋರಾಟದ ಪುನರಾವರ್ತನೆ? ಕೇಂದ್ರದ ಮೂರು ಕರಾಳ ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ 13 ತಿಂಗಳ ಸುದೀರ್ಘ ಹೋರಾಟ ನಡೆಸಿ, ಮೋದಿ ಸರ್ಕಾರ ಕೃಷಿ ವಿರೋಧಿ ಕಾನೂನುಗಳನ್ನು ವಾಪಸ್ ಪಡೆದುಕೊಳ್ಳುವಂತೆ ಮಾಡಿದ್ದನ್ನು ದರ್ಶನ್ ಪಾಲ್ ನೆನಪಿಸಿಕೊಂಡರು. “ಅದೇ ಉತ್ಸಾಹದಲ್ಲಿ ದೇವನಹಳ್ಳಿಯ ಈ ಹೋರಾಟವೂ ನಡೆಯುತ್ತಿದೆ. ಅದಕ್ಕೆ ನಮ್ಮೆಲ್ಲರ ಬೆಂಬಲ ಇದೆ,” ಎಂದು ಅವರು ದೃಢಪಡಿಸಿದರು. “ಮೂರು ವರ್ಷದ ಸುದೀರ್ಘ ಹೋರಾಟ ಎಂದರೆ ಸಾಮಾನ್ಯ ವಿಷಯವಲ್ಲ. ದೇವನಹಳ್ಳಿಯ ರೈತರು ಅದನ್ನು ಮಾಡಿ ತೋರಿಸಿದ್ದಾರೆ,” ಎಂದು ಶ್ಲಾಘಿಸಿದರು.

ರೈತರ ಒಪ್ಪಿಗೆ ಇಲ್ಲದೆ ಒಂದಿಂಚು ಭೂಮಿಯೂ ಇಲ್ಲ! ಅನೇಕ ರಾಜ್ಯ ಸರ್ಕಾರಗಳು 2013ರಲ್ಲಿ ಭೂ ಸ್ವಾಧೀನ ಕಾಯಿದೆಯನ್ನು ಅಂಗೀಕರಿಸಿವೆ. ಈ ಕಾಯಿದೆಯ ಪ್ರಕಾರ, ಸರ್ಕಾರ ಕೈಗಾರಿಕಾ ಉದ್ದೇಶಕ್ಕೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಾದರೆ ಶೇಕಡಾ 70ರಷ್ಟು ರೈತರ ಒಪ್ಪಿಗೆ ಕಡ್ಡಾಯ. ಜೊತೆಗೆ, ಜೀವನ ಭದ್ರತೆ ಸೇರಿದಂತೆ ಎಲ್ಲ ಅಂಶಗಳು ಈ ಪ್ರಕ್ರಿಯೆಯಲ್ಲಿ ಒಳಗೊಳ್ಳಬೇಕು. ಆದರೆ, “ದೇವನಹಳ್ಳಿಯಲ್ಲಿ ಶೇಕಡ 80ರಷ್ಟು ಜನ ರೈತರು ಭೂಮಿ ಕೊಡಲ್ಲ ಎಂದು ಬರೆದುಕೊಟ್ಟಿದ್ದಾರೆ. ರೈತರ ಒಪ್ಪಿಗೆ ಇಲ್ಲದೇ ಒಂದಿಂಚು ಭೂಮಿಯನ್ನೂ ಸ್ವಾಧೀನಪಡಿಸಿಕೊಳ್ಳಬಾರದು,” ಎಂದು ದರ್ಶನ್ ಪಾಲ್ ಆಗ್ರಹಿಸಿದರು.

“ಸರ್ಕಾರ ಎಲ್ಲ ಕಡೆಗಳಲ್ಲಿ ಭೂಮಿಯನ್ನು ಕಿತ್ತುಕೊಳ್ಳುವ ಪ್ರಯತ್ನ ಮುಂದುವರಿಸಿದೆ. ಕೈಗಾರಿಕೆಗಳಿಗೆ ಕೊಟ್ಟಿರುವ ಭೂಮಿಯನ್ನು ಕಿತ್ತು ನಾವು ಅಲ್ಲಿ ಬೆಳೆ ಬೆಳೆಯುತ್ತೇವೆ ಎಂದರೆ ಅವರು ಕೊಡುತ್ತಾರೆಯೇ? ಸರ್ಕಾರ ಭೂಮಿಯನ್ನು ಖಾಸಗಿ ಮಾಲಕರಿಗೆ ಕೊಡುತ್ತಿರುವುದನ್ನು ನಾವು ವಿರೋಧಿಸುತ್ತೇವೆ,” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಸರ್ಕಾರಕ್ಕೆ ತೀಕ್ಷ್ಣ ಪ್ರಶ್ನೆಗಳು: ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ನಡೆದಾಗ ಪಂಜಾಬ್‌ನಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಆಗ ಬಿಜೆಪಿ ಸರ್ಕಾರ ರೈತರ ವಿರುದ್ಧ ದಾಳಿ ಮಾಡುತ್ತಿದ್ದರೂ, ಪಂಜಾಬ್ ಸರ್ಕಾರ ರೈತರಿಗೆ ನೈತಿಕವಾಗಿ, ಹಣಕಾಸಿನ ಮೂಲಕ ಸಂಪೂರ್ಣ ಬೆಂಬಲ ನೀಡಿತ್ತು. ಆ ಹೋರಾಟದಲ್ಲಿ ಪ್ರಾಣ ಕಳೆದುಕೊಂಡ 700ಕ್ಕೂ ಹೆಚ್ಚು ರೈತರಿಗೆ ತಲಾ 5 ಲಕ್ಷ ರೂ. ಪರಿಹಾರ ಮತ್ತು ಮನೆಗೊಂದು ಸರ್ಕಾರಿ ಕೆಲಸ ಘೋಷಿಸಿತ್ತು. “ಆದರೆ ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ಯಾಕೆ ಈ ರೀತಿ ನಡೆದುಕೊಳ್ಳುತ್ತಿದೆ?” ಎಂದು ದರ್ಶನ್ ಪಾಲ್ ನೇರವಾಗಿ ಪ್ರಶ್ನಿಸಿದರು.

“ರಾಹುಲ್ ಗಾಂಧಿ ದೆಹಲಿಯ ಗಡಿಗಳಲ್ಲಿ ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದರು. ಆದರೆ, ಇಲ್ಲಿ ಸಿದ್ದರಾಮಯ್ಯ ಸರ್ಕಾರ ಬಿಜೆಪಿ ಯಾವ ಪಾತ್ರವನ್ನು ನಿರ್ವಹಿಸಿತೋ, ಅದೇ ರೀತಿಯಲ್ಲಿ ಕರ್ನಾಟಕದಲ್ಲಿ ನಡೆದುಕೊಳ್ಳುತ್ತಿದೆ. ರಾಜ್ಯ ಸರ್ಕಾರ ಜನರನ್ನು ಬೆದರಿಸುತ್ತಿದೆ, ಹೋರಾಟಗಾರರ ವಿರುದ್ಧ ಪೊಲೀಸರನ್ನು ಚೂ ಬಿಡಲಾಗುತ್ತಿದೆ,” ಎಂದು ಅವರು ಆಪಾದಿಸಿದರು.

ಜುಲೈ 20ರ ಗಡುವು ಮತ್ತು ರಾಷ್ಟ್ರವ್ಯಾಪಿ ಹೋರಾಟದ ಕರೆ: ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಕನ್ಯಾಕುಮಾರಿ ಇಂದ ಕಾಶ್ಮೀರದವರೆಗೂ ವ್ಯಾಪಿಸಿದೆ. “ರಾಜ್ಯ ಸರ್ಕಾರ ಈ ಹೋರಾಟಕ್ಕೆ ಮಣಿದು, ರೈತರ ಭೂಮಿ ಪಡೆದುಕೊಳ್ಳುವುದಿಲ್ಲ ಎಂದು ಘೋಷಿಸದಿದ್ದರೆ, ದೇಶಾದ್ಯಂತ ಹೋರಾಟ ಮಾಡಬೇಕಾಗುತ್ತದೆ. ದೇಶದ ಉದ್ದಗಲಕ್ಕೂ ಬೆಂಬಲ ಕೊಡಬೇಕಾಗುತ್ತದೆ. ಆದ್ದರಿಂದ ಈಗಲೇ ರೈತರ ಪರವಾಗಿ ಘೋಷಣೆ ಮಾಡಿ,” ಎಂದು ದರ್ಶನ್ ಪಾಲ್ ಒತ್ತಾಯಿಸಿದರು.

“ನಾವು ದೆಹಲಿಯ ಗಡಿಗಳನ್ನು ಮಾತ್ರವಲ್ಲ, ದೆಹಲಿಯ ರೈಲ್ವೇ ಸ್ಟೇಷನ್‌ಗಳು ಸೇರಿದಂತೆ ದಿಲ್ಲಿಗೆ ಬರುವ ಎಲ್ಲ ಮಾರ್ಗಗಳನ್ನು ದಿಗ್ಬಂಧನ ಮಾಡಿದ್ದೆವು. ರೈತರು ಈ ಬೆದರಿಕೆಗಳಿಗೆ ಹೆದರುವುದಿಲ್ಲ. ಎಸ್.ಕೆ.ಎಂ. ಅವರ ಜೊತೆಗಿದೆ. ಹಾಗಾಗಿ, ಸರ್ಕಾರ ರೈತಪರ ತೀರ್ಮಾನ ಪ್ರಕಟಿಸಬೇಕು. ಇಲ್ಲದಿದ್ದರೆ ಹೋರಾಟವನ್ನು ದೇಶವ್ಯಾಪಿ ವಿಸ್ತರಿಸುತ್ತೇವೆ,” ಎಂದು ಅವರು ಪುನರುಚ್ಚರಿಸಿದರು.

ರೈತರ ದೃಢ ಸಂಕಲ್ಪಕ್ಕೆ ಅಭಿನಂದನೆ: “ಅರ್ಧ ಎಕರೆ, ಒಂದು ಎಕರೆ ಭೂಮಿಯಲ್ಲಿ ರೈತರು ತರಕಾರಿ, ಹಣ್ಣು-ಹಂಪಲ ಬೆಳೆಯುತ್ತಿದ್ದಾರೆ. ಅದನ್ನು ಈಗ ಕಿತ್ತುಕೊಳ್ಳಲು ಹೊರಟಿದೆ. ಈಗ ಒಂದಿಂಚು ಭೂಮಿಯನ್ನು ಕೂಡ ಕೊಡುವುದಿಲ್ಲ ಎಂದು ತೀರ್ಮಾನ ಮಾಡಿರುವುದು ಸಂತೋಷದ ಸಂಗತಿ, ಅದಕ್ಕೆ ನಮ್ಮ ಅಭಿನಂದನೆಗಳು,” ಎಂದು ದರ್ಶನ್ ಪಾಲ್ ರೈತರ ಸಂಕಲ್ಪವನ್ನು ಶ್ಲಾಘಿಸಿದರು. “ಜಾತಿವಾದಿಗಳಿಗೆ, ಮತೀಯವಾದಿಗಳಿಗೆ ಒಳಗಾಗದೆ, ಒಗ್ಗಟ್ಟಾಗಿ ನಾವು ಹೋರಾಟವನ್ನು ಮುಂದುವರಿಸಬೇಕು,” ಎಂದು ಅವರು ಕರೆ ನೀಡಿದರು.

ವಿಮಾನ ನಿಲ್ದಾಣಗಳ ಸಮೀಪದಲ್ಲಿ ಸರ್ಕಾರಗಳು ಭೂಮಿಯನ್ನು ವಶಪಡಿಸಿಕೊಳ್ಳುವ ಹುನ್ನಾರ ಮಾಡುತ್ತಿವೆ. ಇದರ ವಿರುದ್ಧ ನಮ್ಮ ಧ್ವನಿ ಎಂದಿಗೂ ಇರುತ್ತದೆ ಎಂದು ಎಸ್‌ಕೆಎಂ ನಾಯಕರು ಸ್ಪಷ್ಟಪಡಿಸಿದರು. ಜುಲೈ 20ರಂದು ನಡೆಯುವ ಸಂಯುಕ್ತ ಕಿಸಾನ್ ಮೋರ್ಚಾದ ಸಭೆಯಲ್ಲಿ ದೇವನಹಳ್ಳಿ ರೈತರ ಬೇಡಿಕೆಗಳನ್ನು ಪ್ರಮುಖವಾಗಿ ಚರ್ಚಿಸಿ, ಮುಂದಿನ ಹೋರಾಟದ ರೂಪುರೇಷೆಗಳನ್ನು ಅಂತಿಮಗೊಳಿಸಲಾಗುವುದು ಎಂದು ದರ್ಶನ್ ಪಾಲ್ ತಿಳಿಸಿದರು.

‘ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!’ – ‘ನಾಡ ಉಳಿಸಿ ಸಮಾವೇಶ’ದಲ್ಲಿ ಚನ್ನರಾಯಪಟ್ಟಣ ರೈತ ಮಹಿಳೆಯ ಕಳಕಳಿಯ ಮೊರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...