Homeಕರ್ನಾಟಕನಾಡ ಉಳಿಸಿ ಸಮಾವೇಶ: ದೇವನಹಳ್ಳಿ ರೈತರ ಭೂಮಿಗೆ ಕೈಹಾಕಿದರೆ ದೇಶಾದ್ಯಂತ ಹೋರಾಟ - ದರ್ಶನ್ ಪಾಲ್...

ನಾಡ ಉಳಿಸಿ ಸಮಾವೇಶ: ದೇವನಹಳ್ಳಿ ರೈತರ ಭೂಮಿಗೆ ಕೈಹಾಕಿದರೆ ದೇಶಾದ್ಯಂತ ಹೋರಾಟ – ದರ್ಶನ್ ಪಾಲ್ ಪ್ರಬಲ ಎಚ್ಚರಿಕೆ!

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ಪ್ರದೇಶದ ರೈತರ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಕರ್ನಾಟಕ ಸರ್ಕಾರ ಮಣಿಯದಿದ್ದರೆ, ದೇಶಾದ್ಯಂತ ಈ ಹೋರಾಟವನ್ನು ವಿಸ್ತರಿಸಬೇಕಾಗುತ್ತದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (SKM) ನಾಯಕ ದರ್ಶನ್ ಪಾಲ್ ಎಚ್ಚರಿಕೆ ನೀಡಿದ್ದಾರೆ. ಇಂದು (ಶುಕ್ರವಾರ, ಜುಲೈ 4) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ‘ನಾಡ ಉಳಿಸಿ ಸಮಾವೇಶ’ದಲ್ಲಿ ಭಾಗವಹಿಸಿದ್ದ ಅವರು, ರೈತರ ಭೂಮಿ ಕಿತ್ತುಕೊಳ್ಳುವ ಸರ್ಕಾರದ ಪ್ರಯತ್ನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು.

ದೇವನಹಳ್ಳಿ ಹೋರಾಟಕ್ಕೆ ರಾಷ್ಟ್ರಮಟ್ಟದ ಬೆಂಬಲ: “ನಾನು ಸಂಯುಕ್ತ ಕಿಸಾನ್ ಮೋರ್ಚಾದ ಪರವಾಗಿ ಇಲ್ಲಿನ ರೈತರ ಹೋರಾಟಕ್ಕೆ ಬೆಂಬಲ ನೀಡಲು ಬಂದಿದ್ದೇನೆ. ಬೆಂಗಳೂರು ಜಿಲ್ಲೆಯ ದೇವನಹಳ್ಳಿಯ ಸಾವಿರಾರು ಜನರು ಭೂಸ್ವಾಧೀನ ವಿರೋಧಿಸಿ ಕಳೆದ 1185 ದಿನಗಳಿಂದ ನಡೆಸುತ್ತಿರುವ ಈ ಹೋರಾಟಕ್ಕೆ ಬೆಂಬಲ ನೀಡುತ್ತಿರುವುದು ಸಂತೋಷದ ಸಂಗತಿ,” ಎಂದು ದರ್ಶನ್ ಪಾಲ್ ಹೇಳಿದರು. ರೈತರ ನಿಯೋಗದೊಂದಿಗೆ ಮುಖ್ಯಮಂತ್ರಿಗಳ ಭೇಟಿಯ ನಂತರ ಹೋರಾಟದ ಮುಂದಿನ ರೂಪುರೇಷೆಗಳು ಸ್ಪಷ್ಟವಾಗಲಿವೆ ಎಂದು ಅವರು ತಿಳಿಸಿದರು.

ಕರಾಳ ಕಾಯ್ದೆಗಳ ವಿರುದ್ಧದ ಹೋರಾಟದ ಪುನರಾವರ್ತನೆ? ಕೇಂದ್ರದ ಮೂರು ಕರಾಳ ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ 13 ತಿಂಗಳ ಸುದೀರ್ಘ ಹೋರಾಟ ನಡೆಸಿ, ಮೋದಿ ಸರ್ಕಾರ ಕೃಷಿ ವಿರೋಧಿ ಕಾನೂನುಗಳನ್ನು ವಾಪಸ್ ಪಡೆದುಕೊಳ್ಳುವಂತೆ ಮಾಡಿದ್ದನ್ನು ದರ್ಶನ್ ಪಾಲ್ ನೆನಪಿಸಿಕೊಂಡರು. “ಅದೇ ಉತ್ಸಾಹದಲ್ಲಿ ದೇವನಹಳ್ಳಿಯ ಈ ಹೋರಾಟವೂ ನಡೆಯುತ್ತಿದೆ. ಅದಕ್ಕೆ ನಮ್ಮೆಲ್ಲರ ಬೆಂಬಲ ಇದೆ,” ಎಂದು ಅವರು ದೃಢಪಡಿಸಿದರು. “ಮೂರು ವರ್ಷದ ಸುದೀರ್ಘ ಹೋರಾಟ ಎಂದರೆ ಸಾಮಾನ್ಯ ವಿಷಯವಲ್ಲ. ದೇವನಹಳ್ಳಿಯ ರೈತರು ಅದನ್ನು ಮಾಡಿ ತೋರಿಸಿದ್ದಾರೆ,” ಎಂದು ಶ್ಲಾಘಿಸಿದರು.

ರೈತರ ಒಪ್ಪಿಗೆ ಇಲ್ಲದೆ ಒಂದಿಂಚು ಭೂಮಿಯೂ ಇಲ್ಲ! ಅನೇಕ ರಾಜ್ಯ ಸರ್ಕಾರಗಳು 2013ರಲ್ಲಿ ಭೂ ಸ್ವಾಧೀನ ಕಾಯಿದೆಯನ್ನು ಅಂಗೀಕರಿಸಿವೆ. ಈ ಕಾಯಿದೆಯ ಪ್ರಕಾರ, ಸರ್ಕಾರ ಕೈಗಾರಿಕಾ ಉದ್ದೇಶಕ್ಕೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಾದರೆ ಶೇಕಡಾ 70ರಷ್ಟು ರೈತರ ಒಪ್ಪಿಗೆ ಕಡ್ಡಾಯ. ಜೊತೆಗೆ, ಜೀವನ ಭದ್ರತೆ ಸೇರಿದಂತೆ ಎಲ್ಲ ಅಂಶಗಳು ಈ ಪ್ರಕ್ರಿಯೆಯಲ್ಲಿ ಒಳಗೊಳ್ಳಬೇಕು. ಆದರೆ, “ದೇವನಹಳ್ಳಿಯಲ್ಲಿ ಶೇಕಡ 80ರಷ್ಟು ಜನ ರೈತರು ಭೂಮಿ ಕೊಡಲ್ಲ ಎಂದು ಬರೆದುಕೊಟ್ಟಿದ್ದಾರೆ. ರೈತರ ಒಪ್ಪಿಗೆ ಇಲ್ಲದೇ ಒಂದಿಂಚು ಭೂಮಿಯನ್ನೂ ಸ್ವಾಧೀನಪಡಿಸಿಕೊಳ್ಳಬಾರದು,” ಎಂದು ದರ್ಶನ್ ಪಾಲ್ ಆಗ್ರಹಿಸಿದರು.

“ಸರ್ಕಾರ ಎಲ್ಲ ಕಡೆಗಳಲ್ಲಿ ಭೂಮಿಯನ್ನು ಕಿತ್ತುಕೊಳ್ಳುವ ಪ್ರಯತ್ನ ಮುಂದುವರಿಸಿದೆ. ಕೈಗಾರಿಕೆಗಳಿಗೆ ಕೊಟ್ಟಿರುವ ಭೂಮಿಯನ್ನು ಕಿತ್ತು ನಾವು ಅಲ್ಲಿ ಬೆಳೆ ಬೆಳೆಯುತ್ತೇವೆ ಎಂದರೆ ಅವರು ಕೊಡುತ್ತಾರೆಯೇ? ಸರ್ಕಾರ ಭೂಮಿಯನ್ನು ಖಾಸಗಿ ಮಾಲಕರಿಗೆ ಕೊಡುತ್ತಿರುವುದನ್ನು ನಾವು ವಿರೋಧಿಸುತ್ತೇವೆ,” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಸರ್ಕಾರಕ್ಕೆ ತೀಕ್ಷ್ಣ ಪ್ರಶ್ನೆಗಳು: ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ನಡೆದಾಗ ಪಂಜಾಬ್‌ನಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಆಗ ಬಿಜೆಪಿ ಸರ್ಕಾರ ರೈತರ ವಿರುದ್ಧ ದಾಳಿ ಮಾಡುತ್ತಿದ್ದರೂ, ಪಂಜಾಬ್ ಸರ್ಕಾರ ರೈತರಿಗೆ ನೈತಿಕವಾಗಿ, ಹಣಕಾಸಿನ ಮೂಲಕ ಸಂಪೂರ್ಣ ಬೆಂಬಲ ನೀಡಿತ್ತು. ಆ ಹೋರಾಟದಲ್ಲಿ ಪ್ರಾಣ ಕಳೆದುಕೊಂಡ 700ಕ್ಕೂ ಹೆಚ್ಚು ರೈತರಿಗೆ ತಲಾ 5 ಲಕ್ಷ ರೂ. ಪರಿಹಾರ ಮತ್ತು ಮನೆಗೊಂದು ಸರ್ಕಾರಿ ಕೆಲಸ ಘೋಷಿಸಿತ್ತು. “ಆದರೆ ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ಯಾಕೆ ಈ ರೀತಿ ನಡೆದುಕೊಳ್ಳುತ್ತಿದೆ?” ಎಂದು ದರ್ಶನ್ ಪಾಲ್ ನೇರವಾಗಿ ಪ್ರಶ್ನಿಸಿದರು.

“ರಾಹುಲ್ ಗಾಂಧಿ ದೆಹಲಿಯ ಗಡಿಗಳಲ್ಲಿ ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದರು. ಆದರೆ, ಇಲ್ಲಿ ಸಿದ್ದರಾಮಯ್ಯ ಸರ್ಕಾರ ಬಿಜೆಪಿ ಯಾವ ಪಾತ್ರವನ್ನು ನಿರ್ವಹಿಸಿತೋ, ಅದೇ ರೀತಿಯಲ್ಲಿ ಕರ್ನಾಟಕದಲ್ಲಿ ನಡೆದುಕೊಳ್ಳುತ್ತಿದೆ. ರಾಜ್ಯ ಸರ್ಕಾರ ಜನರನ್ನು ಬೆದರಿಸುತ್ತಿದೆ, ಹೋರಾಟಗಾರರ ವಿರುದ್ಧ ಪೊಲೀಸರನ್ನು ಚೂ ಬಿಡಲಾಗುತ್ತಿದೆ,” ಎಂದು ಅವರು ಆಪಾದಿಸಿದರು.

ಜುಲೈ 20ರ ಗಡುವು ಮತ್ತು ರಾಷ್ಟ್ರವ್ಯಾಪಿ ಹೋರಾಟದ ಕರೆ: ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಕನ್ಯಾಕುಮಾರಿ ಇಂದ ಕಾಶ್ಮೀರದವರೆಗೂ ವ್ಯಾಪಿಸಿದೆ. “ರಾಜ್ಯ ಸರ್ಕಾರ ಈ ಹೋರಾಟಕ್ಕೆ ಮಣಿದು, ರೈತರ ಭೂಮಿ ಪಡೆದುಕೊಳ್ಳುವುದಿಲ್ಲ ಎಂದು ಘೋಷಿಸದಿದ್ದರೆ, ದೇಶಾದ್ಯಂತ ಹೋರಾಟ ಮಾಡಬೇಕಾಗುತ್ತದೆ. ದೇಶದ ಉದ್ದಗಲಕ್ಕೂ ಬೆಂಬಲ ಕೊಡಬೇಕಾಗುತ್ತದೆ. ಆದ್ದರಿಂದ ಈಗಲೇ ರೈತರ ಪರವಾಗಿ ಘೋಷಣೆ ಮಾಡಿ,” ಎಂದು ದರ್ಶನ್ ಪಾಲ್ ಒತ್ತಾಯಿಸಿದರು.

“ನಾವು ದೆಹಲಿಯ ಗಡಿಗಳನ್ನು ಮಾತ್ರವಲ್ಲ, ದೆಹಲಿಯ ರೈಲ್ವೇ ಸ್ಟೇಷನ್‌ಗಳು ಸೇರಿದಂತೆ ದಿಲ್ಲಿಗೆ ಬರುವ ಎಲ್ಲ ಮಾರ್ಗಗಳನ್ನು ದಿಗ್ಬಂಧನ ಮಾಡಿದ್ದೆವು. ರೈತರು ಈ ಬೆದರಿಕೆಗಳಿಗೆ ಹೆದರುವುದಿಲ್ಲ. ಎಸ್.ಕೆ.ಎಂ. ಅವರ ಜೊತೆಗಿದೆ. ಹಾಗಾಗಿ, ಸರ್ಕಾರ ರೈತಪರ ತೀರ್ಮಾನ ಪ್ರಕಟಿಸಬೇಕು. ಇಲ್ಲದಿದ್ದರೆ ಹೋರಾಟವನ್ನು ದೇಶವ್ಯಾಪಿ ವಿಸ್ತರಿಸುತ್ತೇವೆ,” ಎಂದು ಅವರು ಪುನರುಚ್ಚರಿಸಿದರು.

ರೈತರ ದೃಢ ಸಂಕಲ್ಪಕ್ಕೆ ಅಭಿನಂದನೆ: “ಅರ್ಧ ಎಕರೆ, ಒಂದು ಎಕರೆ ಭೂಮಿಯಲ್ಲಿ ರೈತರು ತರಕಾರಿ, ಹಣ್ಣು-ಹಂಪಲ ಬೆಳೆಯುತ್ತಿದ್ದಾರೆ. ಅದನ್ನು ಈಗ ಕಿತ್ತುಕೊಳ್ಳಲು ಹೊರಟಿದೆ. ಈಗ ಒಂದಿಂಚು ಭೂಮಿಯನ್ನು ಕೂಡ ಕೊಡುವುದಿಲ್ಲ ಎಂದು ತೀರ್ಮಾನ ಮಾಡಿರುವುದು ಸಂತೋಷದ ಸಂಗತಿ, ಅದಕ್ಕೆ ನಮ್ಮ ಅಭಿನಂದನೆಗಳು,” ಎಂದು ದರ್ಶನ್ ಪಾಲ್ ರೈತರ ಸಂಕಲ್ಪವನ್ನು ಶ್ಲಾಘಿಸಿದರು. “ಜಾತಿವಾದಿಗಳಿಗೆ, ಮತೀಯವಾದಿಗಳಿಗೆ ಒಳಗಾಗದೆ, ಒಗ್ಗಟ್ಟಾಗಿ ನಾವು ಹೋರಾಟವನ್ನು ಮುಂದುವರಿಸಬೇಕು,” ಎಂದು ಅವರು ಕರೆ ನೀಡಿದರು.

ವಿಮಾನ ನಿಲ್ದಾಣಗಳ ಸಮೀಪದಲ್ಲಿ ಸರ್ಕಾರಗಳು ಭೂಮಿಯನ್ನು ವಶಪಡಿಸಿಕೊಳ್ಳುವ ಹುನ್ನಾರ ಮಾಡುತ್ತಿವೆ. ಇದರ ವಿರುದ್ಧ ನಮ್ಮ ಧ್ವನಿ ಎಂದಿಗೂ ಇರುತ್ತದೆ ಎಂದು ಎಸ್‌ಕೆಎಂ ನಾಯಕರು ಸ್ಪಷ್ಟಪಡಿಸಿದರು. ಜುಲೈ 20ರಂದು ನಡೆಯುವ ಸಂಯುಕ್ತ ಕಿಸಾನ್ ಮೋರ್ಚಾದ ಸಭೆಯಲ್ಲಿ ದೇವನಹಳ್ಳಿ ರೈತರ ಬೇಡಿಕೆಗಳನ್ನು ಪ್ರಮುಖವಾಗಿ ಚರ್ಚಿಸಿ, ಮುಂದಿನ ಹೋರಾಟದ ರೂಪುರೇಷೆಗಳನ್ನು ಅಂತಿಮಗೊಳಿಸಲಾಗುವುದು ಎಂದು ದರ್ಶನ್ ಪಾಲ್ ತಿಳಿಸಿದರು.

‘ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!’ – ‘ನಾಡ ಉಳಿಸಿ ಸಮಾವೇಶ’ದಲ್ಲಿ ಚನ್ನರಾಯಪಟ್ಟಣ ರೈತ ಮಹಿಳೆಯ ಕಳಕಳಿಯ ಮೊರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...