Homeಕರ್ನಾಟಕನಾಡ ಉಳಿಸಿ ಸಮಾವೇಶ: ದೇವನಹಳ್ಳಿ ರೈತರ ಭೂಮಿಗೆ ಕೈಹಾಕಿದರೆ ದೇಶಾದ್ಯಂತ ಹೋರಾಟ - ದರ್ಶನ್ ಪಾಲ್...

ನಾಡ ಉಳಿಸಿ ಸಮಾವೇಶ: ದೇವನಹಳ್ಳಿ ರೈತರ ಭೂಮಿಗೆ ಕೈಹಾಕಿದರೆ ದೇಶಾದ್ಯಂತ ಹೋರಾಟ – ದರ್ಶನ್ ಪಾಲ್ ಪ್ರಬಲ ಎಚ್ಚರಿಕೆ!

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ಪ್ರದೇಶದ ರೈತರ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಕರ್ನಾಟಕ ಸರ್ಕಾರ ಮಣಿಯದಿದ್ದರೆ, ದೇಶಾದ್ಯಂತ ಈ ಹೋರಾಟವನ್ನು ವಿಸ್ತರಿಸಬೇಕಾಗುತ್ತದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (SKM) ನಾಯಕ ದರ್ಶನ್ ಪಾಲ್ ಎಚ್ಚರಿಕೆ ನೀಡಿದ್ದಾರೆ. ಇಂದು (ಶುಕ್ರವಾರ, ಜುಲೈ 4) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ‘ನಾಡ ಉಳಿಸಿ ಸಮಾವೇಶ’ದಲ್ಲಿ ಭಾಗವಹಿಸಿದ್ದ ಅವರು, ರೈತರ ಭೂಮಿ ಕಿತ್ತುಕೊಳ್ಳುವ ಸರ್ಕಾರದ ಪ್ರಯತ್ನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು.

ದೇವನಹಳ್ಳಿ ಹೋರಾಟಕ್ಕೆ ರಾಷ್ಟ್ರಮಟ್ಟದ ಬೆಂಬಲ: “ನಾನು ಸಂಯುಕ್ತ ಕಿಸಾನ್ ಮೋರ್ಚಾದ ಪರವಾಗಿ ಇಲ್ಲಿನ ರೈತರ ಹೋರಾಟಕ್ಕೆ ಬೆಂಬಲ ನೀಡಲು ಬಂದಿದ್ದೇನೆ. ಬೆಂಗಳೂರು ಜಿಲ್ಲೆಯ ದೇವನಹಳ್ಳಿಯ ಸಾವಿರಾರು ಜನರು ಭೂಸ್ವಾಧೀನ ವಿರೋಧಿಸಿ ಕಳೆದ 1185 ದಿನಗಳಿಂದ ನಡೆಸುತ್ತಿರುವ ಈ ಹೋರಾಟಕ್ಕೆ ಬೆಂಬಲ ನೀಡುತ್ತಿರುವುದು ಸಂತೋಷದ ಸಂಗತಿ,” ಎಂದು ದರ್ಶನ್ ಪಾಲ್ ಹೇಳಿದರು. ರೈತರ ನಿಯೋಗದೊಂದಿಗೆ ಮುಖ್ಯಮಂತ್ರಿಗಳ ಭೇಟಿಯ ನಂತರ ಹೋರಾಟದ ಮುಂದಿನ ರೂಪುರೇಷೆಗಳು ಸ್ಪಷ್ಟವಾಗಲಿವೆ ಎಂದು ಅವರು ತಿಳಿಸಿದರು.

ಕರಾಳ ಕಾಯ್ದೆಗಳ ವಿರುದ್ಧದ ಹೋರಾಟದ ಪುನರಾವರ್ತನೆ? ಕೇಂದ್ರದ ಮೂರು ಕರಾಳ ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ 13 ತಿಂಗಳ ಸುದೀರ್ಘ ಹೋರಾಟ ನಡೆಸಿ, ಮೋದಿ ಸರ್ಕಾರ ಕೃಷಿ ವಿರೋಧಿ ಕಾನೂನುಗಳನ್ನು ವಾಪಸ್ ಪಡೆದುಕೊಳ್ಳುವಂತೆ ಮಾಡಿದ್ದನ್ನು ದರ್ಶನ್ ಪಾಲ್ ನೆನಪಿಸಿಕೊಂಡರು. “ಅದೇ ಉತ್ಸಾಹದಲ್ಲಿ ದೇವನಹಳ್ಳಿಯ ಈ ಹೋರಾಟವೂ ನಡೆಯುತ್ತಿದೆ. ಅದಕ್ಕೆ ನಮ್ಮೆಲ್ಲರ ಬೆಂಬಲ ಇದೆ,” ಎಂದು ಅವರು ದೃಢಪಡಿಸಿದರು. “ಮೂರು ವರ್ಷದ ಸುದೀರ್ಘ ಹೋರಾಟ ಎಂದರೆ ಸಾಮಾನ್ಯ ವಿಷಯವಲ್ಲ. ದೇವನಹಳ್ಳಿಯ ರೈತರು ಅದನ್ನು ಮಾಡಿ ತೋರಿಸಿದ್ದಾರೆ,” ಎಂದು ಶ್ಲಾಘಿಸಿದರು.

ರೈತರ ಒಪ್ಪಿಗೆ ಇಲ್ಲದೆ ಒಂದಿಂಚು ಭೂಮಿಯೂ ಇಲ್ಲ! ಅನೇಕ ರಾಜ್ಯ ಸರ್ಕಾರಗಳು 2013ರಲ್ಲಿ ಭೂ ಸ್ವಾಧೀನ ಕಾಯಿದೆಯನ್ನು ಅಂಗೀಕರಿಸಿವೆ. ಈ ಕಾಯಿದೆಯ ಪ್ರಕಾರ, ಸರ್ಕಾರ ಕೈಗಾರಿಕಾ ಉದ್ದೇಶಕ್ಕೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಾದರೆ ಶೇಕಡಾ 70ರಷ್ಟು ರೈತರ ಒಪ್ಪಿಗೆ ಕಡ್ಡಾಯ. ಜೊತೆಗೆ, ಜೀವನ ಭದ್ರತೆ ಸೇರಿದಂತೆ ಎಲ್ಲ ಅಂಶಗಳು ಈ ಪ್ರಕ್ರಿಯೆಯಲ್ಲಿ ಒಳಗೊಳ್ಳಬೇಕು. ಆದರೆ, “ದೇವನಹಳ್ಳಿಯಲ್ಲಿ ಶೇಕಡ 80ರಷ್ಟು ಜನ ರೈತರು ಭೂಮಿ ಕೊಡಲ್ಲ ಎಂದು ಬರೆದುಕೊಟ್ಟಿದ್ದಾರೆ. ರೈತರ ಒಪ್ಪಿಗೆ ಇಲ್ಲದೇ ಒಂದಿಂಚು ಭೂಮಿಯನ್ನೂ ಸ್ವಾಧೀನಪಡಿಸಿಕೊಳ್ಳಬಾರದು,” ಎಂದು ದರ್ಶನ್ ಪಾಲ್ ಆಗ್ರಹಿಸಿದರು.

“ಸರ್ಕಾರ ಎಲ್ಲ ಕಡೆಗಳಲ್ಲಿ ಭೂಮಿಯನ್ನು ಕಿತ್ತುಕೊಳ್ಳುವ ಪ್ರಯತ್ನ ಮುಂದುವರಿಸಿದೆ. ಕೈಗಾರಿಕೆಗಳಿಗೆ ಕೊಟ್ಟಿರುವ ಭೂಮಿಯನ್ನು ಕಿತ್ತು ನಾವು ಅಲ್ಲಿ ಬೆಳೆ ಬೆಳೆಯುತ್ತೇವೆ ಎಂದರೆ ಅವರು ಕೊಡುತ್ತಾರೆಯೇ? ಸರ್ಕಾರ ಭೂಮಿಯನ್ನು ಖಾಸಗಿ ಮಾಲಕರಿಗೆ ಕೊಡುತ್ತಿರುವುದನ್ನು ನಾವು ವಿರೋಧಿಸುತ್ತೇವೆ,” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಸರ್ಕಾರಕ್ಕೆ ತೀಕ್ಷ್ಣ ಪ್ರಶ್ನೆಗಳು: ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ನಡೆದಾಗ ಪಂಜಾಬ್‌ನಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಆಗ ಬಿಜೆಪಿ ಸರ್ಕಾರ ರೈತರ ವಿರುದ್ಧ ದಾಳಿ ಮಾಡುತ್ತಿದ್ದರೂ, ಪಂಜಾಬ್ ಸರ್ಕಾರ ರೈತರಿಗೆ ನೈತಿಕವಾಗಿ, ಹಣಕಾಸಿನ ಮೂಲಕ ಸಂಪೂರ್ಣ ಬೆಂಬಲ ನೀಡಿತ್ತು. ಆ ಹೋರಾಟದಲ್ಲಿ ಪ್ರಾಣ ಕಳೆದುಕೊಂಡ 700ಕ್ಕೂ ಹೆಚ್ಚು ರೈತರಿಗೆ ತಲಾ 5 ಲಕ್ಷ ರೂ. ಪರಿಹಾರ ಮತ್ತು ಮನೆಗೊಂದು ಸರ್ಕಾರಿ ಕೆಲಸ ಘೋಷಿಸಿತ್ತು. “ಆದರೆ ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ಯಾಕೆ ಈ ರೀತಿ ನಡೆದುಕೊಳ್ಳುತ್ತಿದೆ?” ಎಂದು ದರ್ಶನ್ ಪಾಲ್ ನೇರವಾಗಿ ಪ್ರಶ್ನಿಸಿದರು.

“ರಾಹುಲ್ ಗಾಂಧಿ ದೆಹಲಿಯ ಗಡಿಗಳಲ್ಲಿ ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದರು. ಆದರೆ, ಇಲ್ಲಿ ಸಿದ್ದರಾಮಯ್ಯ ಸರ್ಕಾರ ಬಿಜೆಪಿ ಯಾವ ಪಾತ್ರವನ್ನು ನಿರ್ವಹಿಸಿತೋ, ಅದೇ ರೀತಿಯಲ್ಲಿ ಕರ್ನಾಟಕದಲ್ಲಿ ನಡೆದುಕೊಳ್ಳುತ್ತಿದೆ. ರಾಜ್ಯ ಸರ್ಕಾರ ಜನರನ್ನು ಬೆದರಿಸುತ್ತಿದೆ, ಹೋರಾಟಗಾರರ ವಿರುದ್ಧ ಪೊಲೀಸರನ್ನು ಚೂ ಬಿಡಲಾಗುತ್ತಿದೆ,” ಎಂದು ಅವರು ಆಪಾದಿಸಿದರು.

ಜುಲೈ 20ರ ಗಡುವು ಮತ್ತು ರಾಷ್ಟ್ರವ್ಯಾಪಿ ಹೋರಾಟದ ಕರೆ: ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಕನ್ಯಾಕುಮಾರಿ ಇಂದ ಕಾಶ್ಮೀರದವರೆಗೂ ವ್ಯಾಪಿಸಿದೆ. “ರಾಜ್ಯ ಸರ್ಕಾರ ಈ ಹೋರಾಟಕ್ಕೆ ಮಣಿದು, ರೈತರ ಭೂಮಿ ಪಡೆದುಕೊಳ್ಳುವುದಿಲ್ಲ ಎಂದು ಘೋಷಿಸದಿದ್ದರೆ, ದೇಶಾದ್ಯಂತ ಹೋರಾಟ ಮಾಡಬೇಕಾಗುತ್ತದೆ. ದೇಶದ ಉದ್ದಗಲಕ್ಕೂ ಬೆಂಬಲ ಕೊಡಬೇಕಾಗುತ್ತದೆ. ಆದ್ದರಿಂದ ಈಗಲೇ ರೈತರ ಪರವಾಗಿ ಘೋಷಣೆ ಮಾಡಿ,” ಎಂದು ದರ್ಶನ್ ಪಾಲ್ ಒತ್ತಾಯಿಸಿದರು.

“ನಾವು ದೆಹಲಿಯ ಗಡಿಗಳನ್ನು ಮಾತ್ರವಲ್ಲ, ದೆಹಲಿಯ ರೈಲ್ವೇ ಸ್ಟೇಷನ್‌ಗಳು ಸೇರಿದಂತೆ ದಿಲ್ಲಿಗೆ ಬರುವ ಎಲ್ಲ ಮಾರ್ಗಗಳನ್ನು ದಿಗ್ಬಂಧನ ಮಾಡಿದ್ದೆವು. ರೈತರು ಈ ಬೆದರಿಕೆಗಳಿಗೆ ಹೆದರುವುದಿಲ್ಲ. ಎಸ್.ಕೆ.ಎಂ. ಅವರ ಜೊತೆಗಿದೆ. ಹಾಗಾಗಿ, ಸರ್ಕಾರ ರೈತಪರ ತೀರ್ಮಾನ ಪ್ರಕಟಿಸಬೇಕು. ಇಲ್ಲದಿದ್ದರೆ ಹೋರಾಟವನ್ನು ದೇಶವ್ಯಾಪಿ ವಿಸ್ತರಿಸುತ್ತೇವೆ,” ಎಂದು ಅವರು ಪುನರುಚ್ಚರಿಸಿದರು.

ರೈತರ ದೃಢ ಸಂಕಲ್ಪಕ್ಕೆ ಅಭಿನಂದನೆ: “ಅರ್ಧ ಎಕರೆ, ಒಂದು ಎಕರೆ ಭೂಮಿಯಲ್ಲಿ ರೈತರು ತರಕಾರಿ, ಹಣ್ಣು-ಹಂಪಲ ಬೆಳೆಯುತ್ತಿದ್ದಾರೆ. ಅದನ್ನು ಈಗ ಕಿತ್ತುಕೊಳ್ಳಲು ಹೊರಟಿದೆ. ಈಗ ಒಂದಿಂಚು ಭೂಮಿಯನ್ನು ಕೂಡ ಕೊಡುವುದಿಲ್ಲ ಎಂದು ತೀರ್ಮಾನ ಮಾಡಿರುವುದು ಸಂತೋಷದ ಸಂಗತಿ, ಅದಕ್ಕೆ ನಮ್ಮ ಅಭಿನಂದನೆಗಳು,” ಎಂದು ದರ್ಶನ್ ಪಾಲ್ ರೈತರ ಸಂಕಲ್ಪವನ್ನು ಶ್ಲಾಘಿಸಿದರು. “ಜಾತಿವಾದಿಗಳಿಗೆ, ಮತೀಯವಾದಿಗಳಿಗೆ ಒಳಗಾಗದೆ, ಒಗ್ಗಟ್ಟಾಗಿ ನಾವು ಹೋರಾಟವನ್ನು ಮುಂದುವರಿಸಬೇಕು,” ಎಂದು ಅವರು ಕರೆ ನೀಡಿದರು.

ವಿಮಾನ ನಿಲ್ದಾಣಗಳ ಸಮೀಪದಲ್ಲಿ ಸರ್ಕಾರಗಳು ಭೂಮಿಯನ್ನು ವಶಪಡಿಸಿಕೊಳ್ಳುವ ಹುನ್ನಾರ ಮಾಡುತ್ತಿವೆ. ಇದರ ವಿರುದ್ಧ ನಮ್ಮ ಧ್ವನಿ ಎಂದಿಗೂ ಇರುತ್ತದೆ ಎಂದು ಎಸ್‌ಕೆಎಂ ನಾಯಕರು ಸ್ಪಷ್ಟಪಡಿಸಿದರು. ಜುಲೈ 20ರಂದು ನಡೆಯುವ ಸಂಯುಕ್ತ ಕಿಸಾನ್ ಮೋರ್ಚಾದ ಸಭೆಯಲ್ಲಿ ದೇವನಹಳ್ಳಿ ರೈತರ ಬೇಡಿಕೆಗಳನ್ನು ಪ್ರಮುಖವಾಗಿ ಚರ್ಚಿಸಿ, ಮುಂದಿನ ಹೋರಾಟದ ರೂಪುರೇಷೆಗಳನ್ನು ಅಂತಿಮಗೊಳಿಸಲಾಗುವುದು ಎಂದು ದರ್ಶನ್ ಪಾಲ್ ತಿಳಿಸಿದರು.

‘ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!’ – ‘ನಾಡ ಉಳಿಸಿ ಸಮಾವೇಶ’ದಲ್ಲಿ ಚನ್ನರಾಯಪಟ್ಟಣ ರೈತ ಮಹಿಳೆಯ ಕಳಕಳಿಯ ಮೊರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...