Homeಕರ್ನಾಟಕನಾಡ ಉಳಿಸಿ ಸಮಾವೇಶ: 'ಕಾಂಗ್ರೆಸ್ ಕಾರ್ಪೊರೇಟ್ ತಾಳಕ್ಕೆ ಕುಣಿದರೆ ರೈತರ ಕಪ್ಪು ಚುಕ್ಕೆ' - ಸುನಿಲಂ...

ನಾಡ ಉಳಿಸಿ ಸಮಾವೇಶ: ‘ಕಾಂಗ್ರೆಸ್ ಕಾರ್ಪೊರೇಟ್ ತಾಳಕ್ಕೆ ಕುಣಿದರೆ ರೈತರ ಕಪ್ಪು ಚುಕ್ಕೆ’ – ಸುನಿಲಂ ನೇರ ಎಚ್ಚರಿಕೆ!

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟವು ರಾಜ್ಯ ಸರ್ಕಾರಕ್ಕೆ ‘ಗಂಟಲ ಮುಳ್ಳಾಗಿದೆ’ ಎಂದು ಸಂಯುಕ್ತ ಕಿಸಾನ್ ಮೋರ್ಚಾ (SKM) ನಾಯಕ ಸುನಿಲಂ ಹೇಳಿದರು. ಇಂದು (ಜುಲೈ 4) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ‘ನಾಡ ಉಳಿಸಿ ಸಮಾವೇಶ’ದಲ್ಲಿ ಕರ್ನಾಟಕದ ನಾನಾ ಭಾಗಗಳಿಂದ ಬಂದ ರೈತರಿಗೆ ಅಭಿನಂದನೆ ಸಲ್ಲಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹೈಕಮಾಂಡ್‌ಗೆ ತೀಕ್ಷ್ಣ ಎಚ್ಚರಿಕೆ ನೀಡಿದರು.

‘ಸಿದ್ದರಾಮಯ್ಯ ಅವರೇ, ರೈತ-ಕಾರ್ಮಿಕರ ಸಂಗಾತಿಯಾಗಿರಿ!’: “ಸಿದ್ದರಾಮಯ್ಯನವರೇ, ನಿಮಗೆ ನಾನು ಹೇಳಲು ಬಯಸುತ್ತೇನೆ. ನೀವು ಮುಖ್ಯಮಂತ್ರಿ, ಕಾಂಗ್ರೆಸ್ ಪಕ್ಷದ ನಾಯಕ ಆಗಿದ್ದು ಆಮೇಲೆ. ಅದಕ್ಕೂ ಮುನ್ನ ನೀವು ರೈತರು, ಕಾರ್ಮಿಕರ ಸಂಗಾತಿ. ಅದನ್ನು ಮರೆತು ನೀವು ಕಾರ್ಪೊರೇಟ್ ತಾಳಕ್ಕೆ ಕುಣಿದು ನಿಮ್ಮ ವ್ಯಕ್ತಿತ್ವಕ್ಕೆ ಕಪ್ಪು ಚುಕ್ಕೆ ತಂದುಕೊಳ್ಳಬೇಡಿ,” ಎಂದು ಸುನಿಲಂ ನೇರವಾಗಿ ಕರೆ ನೀಡಿದರು.

ಕಾಂಗ್ರೆಸ್ ಹೈಕಮಾಂಡ್‌ಗೂ ಇದೇ ಸಂದೇಶ ನೀಡಿದ ಅವರು, “ಕರ್ನಾಟಕದ ಭ್ರಷ್ಟ ಬಿಜೆಪಿ ಸರ್ಕಾರವನ್ನು ತೊಲಗಿಸಿದ್ದು ಕೇವಲ ಕಾಂಗ್ರೆಸ್ ಕಾರ್ಯಕರ್ತರು ಮಾತ್ರವಲ್ಲ. ಇಲ್ಲಿನ ರೈತರು, ಕಾರ್ಮಿಕರು, ನಾಗರಿಕ ಸಂಘಟನೆಗಳು ಶ್ರಮಿಸಿವೆ. ಅದನ್ನು ನೀವು ಮರೆಯಬಾರದು,” ಎಂದು ನೆನಪಿಸಿದರು.

‘ನಾಗರಿಕ ಸಂಘಟನೆಗಳು ಶಾಶ್ವತ ವಿರೋಧ ಪಕ್ಷ’: “ನಾಗರಿಕ ಸಮಾಜ ಕೆಲವೊಂದು ಸಲ ಯಾವುದಾದರೂ ಪಕ್ಷದ ಪರ ನಿಂತರೆ ಅವರಿಗೆ ‘ಇವರು ನಮ್ಮವರು’ ಎಂದು ಅನಿಸಿಬಿಡುತ್ತದೆ. ಸಿದ್ದರಾಮಯ್ಯನವರೇ, ನೀವು ಕೇಳಿಸಿಕೊಳ್ಳಿ. ನಾಗರಿಕ ಸಂಘಟನೆಗಳು ಯಾವತ್ತೂ ಪಕ್ಷಗಳ ಪರ ಅಲ್ಲ. ರೈತರ ಪರ, ಕಾರ್ಮಿಕರ ಪರ. ನಾಗರಿಕ ಸಂಘಟನೆಗಳು ಶಾಶ್ವತ ವಿರೋಧ ಪಕ್ಷ,” ಎಂದು ಸುನಿಲಂ ನಾಗರಿಕ ಸಮಾಜದ ನಿಲುವನ್ನು ಸ್ಪಷ್ಟಪಡಿಸಿದರು.

‘ರೈತರು, ಕಾರ್ಮಿಕರು ಈ ದೇಶದ ನಿಜವಾದ ದೊರೆಗಳು’: “ಕಾಂಗ್ರೆಸ್‌ನ ಜನಗಳೇ ಮತ್ತೊಂದು ವಿಚಾರ. ಇಲ್ಲಿ ಕುಳಿತಿರುವವರನ್ನು ಕಂಡರೆ ಬಿಜೆಪಿಗೆ ಭಯ. ಸಂಸತ್ತಿನಲ್ಲಿ ಆಯೋಜಿಸಿದ್ದ ಕೃಷಿ ಸ್ಥಾಯಿ ಸಮಿತಿ ಸಭೆಗೆ ರೈತರು, ಕಾರ್ಮಿಕರ ಪರವಾಗಿ ಪ್ರಕಾಶ್ ರಾಜ್ ಒಬ್ಬರು ಹೋದಾಗ ಬಿಜೆಪಿಗರು ಪಲಾಯನ ಮಾಡಿದರು. ರೈತರು, ಕಾರ್ಮಿಕರು ಈ ದೇಶದ ನಿಜವಾದ ದೊರೆಗಳು. ಈ ದೇಶ ಅವರಿಗೆ ಸೇರಿದ್ದು,” ಎಂದು ಸುನಿಲಂ ರೈತ ಮತ್ತು ಕಾರ್ಮಿಕ ಶಕ್ತಿಯನ್ನು ಒತ್ತಿ ಹೇಳಿದರು.

“ಬಿಜೆಪಿಯ ಧೋರಣೆ ಸ್ಪಷ್ಟ – ಯಾರು ರೈತರು, ಕಾರ್ಮಿಕರ ಪರ ನಿಂತವರನ್ನು ಅವರು ದೇಶದ್ರೋಹಿಗಳು, ‘ತುಕ್ಡೆ ತುಕ್ಡೆ ಗ್ಯಾಂಗ್’ನವರು ಎನ್ನುತ್ತಾರೆ. ‘ಇಂಡಿಯಾ’ ಒಕ್ಕೂಟಕ್ಕೆ ಆ ಧೋರಣೆ ಇಲ್ಲ ಎಂಬ ವಿಶ್ವಾಸದಲ್ಲಿ ನಾವಿದ್ದೇವೆ,” ಎಂದರು.

‘ದೇವನಹಳ್ಳಿ ಹೋರಾಟ ದೇಶಕ್ಕೆ ಅನುಕರಣೀಯ’: ಸರ್ಕಾರ ನಂಬಿರುವ ಅಭಿವೃದ್ಧಿ ಮಾದರಿ ರೈತರನ್ನು, ಹಳ್ಳಿಗಳನ್ನು ನಾಶ ಮಾಡುವಂತದ್ದಾಗಿದೆ ಎಂದು ಸುನಿಲಂ ಟೀಕಿಸಿದರು. “ಅದಕ್ಕಾಗಿಯೇ ಅವರು ಎಂಎಸ್‌ಪಿ (ಕನಿಷ್ಠ ಬೆಂಬಲ ಬೆಲೆ) ಜಾರಿಗೆ, ಸಾಲ ಮನ್ನಾಗೆ ಸಿದ್ಧರಿಲ್ಲ. ರೈತರ ಭೂಮಿಯನ್ನು ಕಸಿದುಕೊಂಡು ಅವರನ್ನು ಓಡಿಸುವ ಯೋಚನೆಯಲ್ಲಿ ಅವರಿದ್ದಾರೆ,” ಎಂದು ಆರೋಪಿಸಿದರು.

ಕೊನೆಯದಾಗಿ, “ದೇವನಹಳ್ಳಿಯ ರೈತರ ಹೋರಾಟ ದೇಶಕ್ಕೆ ಅನುಕರಣೀಯ. ಎಂತಹದ್ದೇ ಪರಿಹಾರ ಕೊಟ್ಟರೂ ಒಂದಿಂಚು ಭೂಮಿಯನ್ನೂ ಬಿಟ್ಟುಕೊಡುವುದಿಲ್ಲ ಎಂಬ ಅವರ ನಿಲುವು ಮೆಚ್ಚುವಂತದ್ದು. ನಾವು ದೆಹಲಿಯನ್ನು ಸುತ್ತುವರಿದು ಹೋರಾಟ ಮಾಡಿದ್ದೆವು. ಅಂತಹ ಹೋರಾಟ ಬೆಂಗಳೂರಿನಲ್ಲಿ ಮಾಡುವ ಶಕ್ತಿ ನಮಗಿದೆ. ಸರ್ಕಾರ ಅಂತಹ ಪರಿಸ್ಥಿತಿ ತಂದುಕೊಳ್ಳುವುದು ಬೇಡ. ಸರ್ಕಾರ ರೈತರ ಹೋರಾಟಕ್ಕೆ ಮಣಿಯಬೇಕು, ಭೂ ಸ್ವಾಧೀನ ಕೈಬಿಡಬೇಕು,” ಎಂದು ಸುನಿಲಂ ಕರ್ನಾಟಕ ಸರ್ಕಾರಕ್ಕೆ ಅಂತಿಮ ಎಚ್ಚರಿಕೆ ನೀಡಿದರು.

‘ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!’ – ‘ನಾಡ ಉಳಿಸಿ ಸಮಾವೇಶ’ದಲ್ಲಿ ಚನ್ನರಾಯಪಟ್ಟಣ ರೈತ ಮಹಿಳೆಯ ಕಳಕಳಿಯ ಮೊರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...