Homeಕರ್ನಾಟಕ'ಮೋದಿಯನ್ನು ನಿಮಗಿಂತ ಹೆಚ್ಚು ಪ್ರಶ್ನೆ ಮಾಡೋನು ನಾನೇ': ಸಚಿವ ಎಂ.ಬಿ ಪಾಟೀಲ್‌ಗೆ ಪ್ರಕಾಶ್ ರಾಜ್ ತಿರುಗೇಟು

‘ಮೋದಿಯನ್ನು ನಿಮಗಿಂತ ಹೆಚ್ಚು ಪ್ರಶ್ನೆ ಮಾಡೋನು ನಾನೇ’: ಸಚಿವ ಎಂ.ಬಿ ಪಾಟೀಲ್‌ಗೆ ಪ್ರಕಾಶ್ ರಾಜ್ ತಿರುಗೇಟು

- Advertisement -
- Advertisement -

ಪ್ರಕಾಶ್ ರಾಜ್ ಬಹುಭಾಷಾ ನಟರಲ್ವಾ? ಕರ್ನಾಟಕದಲ್ಲಿ ಮಾತ್ರವಲ್ಲ, ಗುಜರಾತ್‌ನಲ್ಲೂ ಹೋರಾಟ ಮಾಡಲಿ ಎಂದಿದ್ದ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ಗೆ ಪ್ರಕಾಶ್ ರಾಜ್ ತಿರುಗೇಟು ನೀಡಿದ್ದಾರೆ.

ವಿಡಿಯೋ ಮೂಲಕ ಮಾತನಾಡಿರುವ ಪ್ರಕಾಶ್ ರಾಜ್, “ಇದು ಕರ್ನಾಟಕದ ದೇವನಹಳ್ಳಿಯ ರೈತರ ಸಮಸ್ಯೆ. ಹಾಗಾಗಿ, ದೇವನಹಳ್ಳಿಯಲ್ಲೇ ಹೋರಾಟ ಮಾಡ್ಬೇಕು. ನೀವು ಗುಜರಾತ್‌ನಲ್ಲೂ ಹೋರಾಟ ಮಾಡಲಿ ಎಂದಿದ್ದೀರಿ. ನಾವು ಅಲ್ಲೆಲ್ಲ ಹೋರಾಟ ಮಾಡಿದ್ದೇವೆ” ಎಂದಿದ್ದಾರೆ.

“ತಮಿಳುನಾಡಿನಲ್ಲಿ ರೈತರು 100 ದಿನಗಳ ಹೋರಾಟ ಹಮ್ಮಿಕೊಂಡಾಗ ದೆಹಲಿಯಲ್ಲಿ ಕೂತವನು ನಾನೇ. ಪಂಜಾಬ್, ಹರಿಯಾಣದ ರೈತರು ಹೋರಾಟ ಮಾಡಿದಾಗಲೂ ಇದ್ದವನು ನಾನೇ. ನಾವು ಎಲ್ಲಾ ಕಡೆನೂ ಮಾತನಾಡ್ತೀವಿ. ನಾವು ಮಣಿಪುರದಲ್ಲಿ ಅನ್ಯಾಯವಾದಗಲೂ ಮಾತನಾಡ್ತೀವಿ, ಪ್ಯಾಲೆಸ್ತೀನಲ್ಲಿ ಅನ್ಯಾಯವಾದಗಲೂ ಮಾತನಾಡ್ತೀವಿ ಎಂದು ಹೇಳಿದ್ದಾರೆ.

ಗುಜರಾತಿನ ಗುಜರಾತಿ ಮಹಾಪ್ರಭು ಪ್ರಧಾನಿಯವರನ್ನು ನಿಮಗಿಂತ ಹೆಚ್ಚು ಪ್ರಶ್ನೆ ಮಾಡಿದವನು ನಾನೇ. ಆಯಾ ಹೋರಾಟಗಳಲ್ಲಿ ಮಾಡ್ತಾ ಇರ್ತೀವಿ. ಏಕೆಂದರೆ, ನಾವು ಯಾವ ಪಕ್ಷದವರೂ ಅಲ್ಲ, ಜನರ ಪಕ್ಷದವರು. ನೀವು ಒಂದು ಪಕ್ಷದವರು, ನಾವು ಜನರ ಪಕ್ಷದವರು. ಹಾಗಾಗಿ, ಜನರಿಗೆ ಎಲ್ಲೇ ಸಮಸ್ಯೆ ಆದರೂ ಮಾತನಾಡೋದು ನಮ್ಮ ಕರ್ತವ್ಯ. ಅದು ಹೋರಾಟ, ಅದು ನಿಮಗೆ ಅರ್ಥವಾಗಲ್ಲ ಬಿಡಿ ಎಂದಿದ್ದಾರೆ.

ದೇವನಹಳ್ಳಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಸಭೆ ಕರೆದು ನಾವು ಜನಪರ ನಿರ್ಧಾರ ತೆಗೆದುಕೊಳ್ಳಬೇಕು ಅಂತ ಇದ್ದೀವಿ. ಆದರೆ, ಅದರಲ್ಲಿ ಕಾನೂನಿನ ತೊಡಕಿದೆ. ಹಾಗಾಗಿ, 15ನೇ ತಾರೀಖು ನಿರ್ಧಾರ ತಿಳಿಸುತ್ತೇವೆ ಎಂದಿದ್ದಾರೆ. ಹಾಗಾಗಿ, ನೀವು ಅದರ ಬಗ್ಗೆ ಯೋಚನೆ ಮಾಡಿ. ಹೇಗೆ ಕಾನೂನು ತೊಡಕು ನಿವಾರಿಸಬಹುದು, ಜನರ ಕಷ್ಟಗಳನ್ನು ಹೇಗೆ ಪರಿಹರಿಸಬಹುದು ಎಂದು ಯೋಚಿಸಿ ಎಂದು ಹೇಳಿದ್ದಾರೆ.

ಈ ನಡುವೆ ದೇವನಹಳ್ಳಿಯಲ್ಲಿ ಒಂದಿಷ್ಟು ಕಿಡಿಗೇಡಿಗಳು ಹೋಗಿ, ನಿಮಗೆ ಮೂರು ಕೋಟಿ ಕೊಡ್ತೀವಿ. ಸರ್ಕಾರದಿಂದ ಕಾನೂನು ಪ್ರಕಾರ ಕೊಡುವಾಗ ತುಂಬಾ ಲೇಟ್ ಆಗುತ್ತೆ ಎಂದು ಹೇಳಿ ರೈತರ ಒಗ್ಗಟ್ಟು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅಲ್ಲದೆ, ಇಡೀ ಪ್ರದೇಶವನ್ನು ಹಸಿರು ವಲಯ ಮಾಡ್ತೀವಿ. ಇನ್ನು 25 ವರ್ಷ ನೀವು ಮಾರೋದಕ್ಕೆ ಆಗಲ್ಲ ಎಂದು ರೈತರನ್ನು ಬೆದರಿಸುತ್ತಿದ್ದಾರಂತೆ. ಅವರೇನಾದರು ನಿಮಗೆ ಪರಿಚಯ ಇದ್ದರೆ ಈ ರೀತಿಯೆಲ್ಲ ಮಾಡ್ಬೇಡಿ ಎಂದು ಹೇಳಿ. ಏಕೆಂದರೆ, ಎಲ್ಲದಕ್ಕೂ ಕಾನೂನು ರೀತಿ ಒಂದು ಪರಿಹಾರ ಇದ್ದೇ ಇರುತ್ತದೆ ಎಂದಿದ್ದಾರೆ.

ನೀವು 15ನೇ ತಾರೀಖಿನ ಸಭೆಯಲ್ಲಿ ಕುಳಿತು ಮಾತನಾಡಿ. ಅಲ್ಲಿ ನಿಮ್ಮ ಸಮಸ್ಯೆ ಬಗೆಹರಿಯದಿದ್ದರೆ, ನಮ್ಮತ್ರ ಬನ್ನಿ. ನಮ್ಮ ಬಳಿಯೂ ನ್ಯಾಯ ತಜ್ಞರು ಇದ್ದಾರೆ. ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಅವರು ಇದ್ದಾರೆ. ಅವರು ಯಾರು ಗೊತ್ತಾ ಪಶ್ಚಿಮ ಬಂಗಾಳದಲ್ಲಿ 1 ಸಾವಿರಕ್ಕೂ ಅಧಿಕ ಎಕರೆ ಭೂಮಿಯನ್ನು ರೈತರಿಗೆ ಕೊಡಬೇಕೆಂದು ಐತಿಹಾಸಿಕ ತೀರ್ಪು ಕೊಟ್ಟವರು. ಸಂವಿಧಾನ ಗೊತ್ತಿರುವವರು. ನಿಮಗೇನಾದರು 15ನೇ ತಾರೀಖು ಒಳಗಡೆ ಸಮಸ್ಯೆ ಇತ್ಯರ್ಥ ಆಗದಿದ್ದರೆ, ಬಂದು ಕೇಳಿ ಅದನ್ನೂ ಹೇಳ್ತೀವಿ. ಜನರಿಂದ ಆಯ್ಧ ಪ್ರತಿನಿಧಿ ನೀವು, ಜನಪರವಾಗಿ ಜವಾಬ್ದಾರಿಯಿಂದ ಇರಿ. 15ನೇ ತಾರೀಖು ಸಿಗೋಣ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

ಭೂ ಸ್ವಾಧೀನ ವಿರೋಧಿ ಹೋರಾಟ: ಚನ್ನರಾಯಪಟ್ಟಣಕ್ಕೆ ಜಗಜಿತ್ ಸಿಂಗ್ ದಲ್ಲೆವಾಲ್ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...