Homeದಲಿತ್ ಫೈಲ್ಸ್ದಲಿತರ ಮದುವೆ ಮೆರವಣಿಗೆಯಲ್ಲಿ ಅಂಬೇಡ್ಕರ್‌ ಹಾಡು: ಸವರ್ಣಿಯರಿಂದ ಹಲ್ಲೆ

ದಲಿತರ ಮದುವೆ ಮೆರವಣಿಗೆಯಲ್ಲಿ ಅಂಬೇಡ್ಕರ್‌ ಹಾಡು: ಸವರ್ಣಿಯರಿಂದ ಹಲ್ಲೆ

- Advertisement -
- Advertisement -

ಉತ್ತರ ಪ್ರದೇಶದ ಮಥುರಾದಲ್ಲಿ ಶನಿವಾರ ಸಂಜೆ ಇಬ್ಬರು ದಲಿತ ಯುವಕರ ಮದುವೆ ಮೆರವಣಿಗೆ ವೇಳೆ ಬಿ.ಆರ್ ಅಂಬೇಡ್ಕರ್ ಮತ್ತು ಜಾತವ್ ಸಮುದಾಯವನ್ನು ವೈಭವೀಕರಿಸುವ ಹಾಡುಗಳನ್ನು ಒಳಗೊಂಡ ಡಿಜೆ ಸಂಗೀತ ವಿಚಾರದಲ್ಲಿ ಕಲ್ಲು ತೂರಾಟ ಮತ್ತು ದೈಹಿಕ ಹಲ್ಲೆ ಸೇರಿದಂತೆ ಹಿಂಸಾತ್ಮಕ ಘರ್ಷಣೆ ನಡೆದಿದೆ.

ಜಮುನಾಪರ್ ಪೊಲೀಸ್ ಠಾಣೆ ವ್ಯಾಪ್ತಿಯ ದಹ್ರುವಾ ಗ್ರಾಮದಲ್ಲಿ ಸಂಜೆ 6:30 ರಿಂದ 7:30ರ ನಡುವೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಮದುವೆ ಮೆರವಣಿಗೆಯ ಡಿಜೆಯಲ್ಲಿ ಜಾತವ್ ಸಮುದಾಯವನ್ನು ಹೊಗಳುವ ಹಾಡುಗಳನ್ನು ಹಾಕಲಾಗಿತ್ತು. ಇದಕ್ಕೆ ಠಾಕೂರ್ ಸಮುದಾಯದ ಕೆಲ ಮಂದಿ ಆಕ್ಷೇಪ ವ್ಯಕ್ತಪಡಿಸಿ ಕಲ್ಲು ತೂರಾಟ ನಡೆಸಿದರು ಮತ್ತು ನಿಂದಿಸಲು ಪ್ರಾರಂಭಿಸಿದರು” ಎಂದು ವರರಾದ ರಾಮ್ ಕುಮಾರ್ (22) ಮತ್ತು ಸೌರಭ್ ಕುಮಾರ್ (23) ಅವರ ಸೋದರಸಂಬಂಧಿ ದೇವೇಂದ್ರ ಕುಮಾರ್ ಸಲ್ಲಿಸಿದ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ವರದಿಯಾಗಿದೆ.

ವಾಗ್ವಾದ ತಾರಕ್ಕೇರಿ ದೈಹಿಕ ಹಲ್ಲೆ ನಡೆದಿತ್ತು. ಘಟನೆಯಲ್ಲಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು ಎಂದು ವರದಿಗಳು ವಿವರಿಸಿವೆ.

ಘಟನೆ ಸಂಬಂಧ ಬಿಎನ್ಎಸ್ ಸೆಕ್ಷನ್ 115(2) (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 352 (ದಾಳಿ ಅಥವಾ ಕ್ರಿಮಿನಲ್ ಬಲಪ್ರಯೋಗ), 351(3) (ಕ್ರಿಮಿನಲ್ ಬೆದರಿಕೆ), 125 (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವುದು) ಮತ್ತು ಎಸ್, ಎಸ್‌ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ” ಎಂದು ಜಮುನಾಪರ್ ಎಸ್‌ಎಚ್‌ಒ ಅಜಯ್ ಕಿಶೋರ್ ತಿಳಿಸಿದ್ದಾರೆ.

“ನಾನು ಈ ಪ್ರಕರಣದ ತನಿಖೆ ನಡೆಸುತ್ತಿದ್ದೇನೆ. ಪ್ರಾಥಮಿಕವಾಗಿ, ಮದುವೆ ಮೆರವಣಿಗೆಯಲ್ಲಿದ್ದ ಜನರ ವಿಷಯಕ್ಕೆ ಅಲ್ಲ, ಡಿಜೆ ಹಾಡುಗಳ ವಿಚಾರಕ್ಕೆ ಗಲಾಟೆ ಆಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ಇಬ್ಬರನ್ನು ವಿಚಾರಣೆಗಾಗಿ ಬಂಧಿಸಲಾಗಿದೆ ಮತ್ತು ತನಿಖೆ ಮುಂದುವರೆದಿದೆ” ಎಂದು ಮಥುರಾ ಸದರ್ ಪ್ರದೇಶದ ಡಿಎಸ್ಪಿ ಸಂದೀಪ್ ಸಿಂಗ್ ಹೇಳಿದ್ದಾರೆ.

ದಲಿತ ಕುಟುಂಬದ ಮೇಲೆ ದೌರ್ಜನ್ಯ: ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ಕರ್ತವ್ಯ ಲೋಪ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...