HomeಮುಖಪುಟSilence for Gaza| ಇಸ್ರೇಲ್ ನರಮೇಧದ ವಿರುದ್ಧ 'ಡಿಜಿಟಲ್ ಸತ್ಯಾಗ್ರಹ'ಕ್ಕೆ ಕರೆ ಕೊಟ್ಟ ಸಿಪಿಐ(ಎಂ)

Silence for Gaza| ಇಸ್ರೇಲ್ ನರಮೇಧದ ವಿರುದ್ಧ ‘ಡಿಜಿಟಲ್ ಸತ್ಯಾಗ್ರಹ’ಕ್ಕೆ ಕರೆ ಕೊಟ್ಟ ಸಿಪಿಐ(ಎಂ)

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧವನ್ನು ಖಂಡಿಸಿ ಜಾಗತಿಕವಾಗಿ ನಡೆಯುತ್ತಿರುವ ಸೈಲೆನ್ಸ್ ಫಾರ್ ಗಾಝಾ (Silence for Gaza)’ಡಿಜಿಟಲ್ ಸತ್ಯಾಗ್ರಹ’ವನ್ನು ಬೆಂಬಲಿಸುವಂತೆ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಕರೆಕೊಟ್ಟಿದೆ.

ಪ್ರತಿದಿನ 30 ನಿಮಿಷಗಳ ಕಾಲ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡುವುದು. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವುದು, ಲೈಕ್ ಒತ್ತುವುದು, ಕಾಮೆಂಟ್, ಶೇರ್ ಮಾಡುವುದರಿಂದ ದೂರ ಉಳಿಯುವುದೇ ಈ ಡಿಜಿಟಲ್ ಸತ್ಯಾಗ್ರಹ.

ಜಗತ್ತಿನ ವಿವಿದೆಡೆ ಈ ಪ್ರಯೋಗಗಳು ನಡೆದಿದೆ ಎಂದು ವರದಿಗಳು ಹೇಳಿವೆ. ಭಾರತದಲ್ಲಿ ಮೊದಲ ಬಾರಿಗೆ ಸಿಪಿಐ(ಎಂ) ಈ ಸತ್ಯಾಗ್ರಹಕ್ಕೆ ಕರೆಕೊಟ್ಟಿದೆ. ಈ ಮೂಲಕ ಜಾಗತಿಕ ಪ್ರತಿಭಟನೆಯನ್ನು ಬೆಂಬಲಿಸಿದೆ.

ಪ್ರತಿದಿನ ರಾತ್ರಿ 9.00 ಗಂಟೆಯಿಂದ 9.30ರವರೆಗೆ ಮೊಬೈಲ್ ಫೋನ್‌ಗಳನ್ನು ಸ್ವಿಚ್‌ ಅಫ್ ಮಾಡಿ ‘ಸೈಲೆನ್ಸ್ ಫಾರ್ ಗಾಝಾ’ ಡಿಜಿಟಲ್ ಸತ್ಯಾಗ್ರಹವನ್ನು ಬೆಂಬಲಿಸುವಂತೆ ಸಿಪಿಐ(ಎಂ) ಪಾಲಿಟ್ ಬ್ಯೂರೋ ಜುಲೈ 5ರಂದು ಕರೆ ಕೊಟ್ಟಿದೆ.

ಇತ್ತೀಚೆಗೆ ಬಿಡುಗಡೆಯಾದ ವಿಶ್ವಸಂಸ್ಥೆಯ ವರದಿ “ಆಕ್ಯುಪೇಶನ್ ಆರ್ಥಿಕತೆಯಿಂದ ಜನಾಂಗೀಯ ಹತ್ಯೆಯ ಆರ್ಥಿಕತೆಗೆ”, ಗಾಜಾದ ಮೇಲಿನ ಇಸ್ರೇಲ್ ದಾಳಿಯಲ್ಲಿ ವಿವಿಧ ಬಹುರಾಷ್ಟ್ರೀಯ ಸಂಸ್ಥೆಗಳು ಹೇಗೆ ಭಾಗಿಯಾಗಿವೆ ಎಂಬುದನ್ನು ವಿವರಿಸುತ್ತದೆ ಎಂದು ಸಿಪಿಐ(ಎಂ) ಹೇಳಿದೆ.

ಇತ್ತೀಚೆಗೆ ಬಿಡುಗಡೆಯಾದ ‘From Economy of Occupation to Economy of Genocide’ಗಾಝಾದ ಮೇಲಿನ ಇಸ್ರೇಲ್ ದಾಳಿಯಲ್ಲಿ ವಿವಿಧ ಬಹುರಾಷ್ಟ್ರೀಯ ಸಂಸ್ಥೆಗಳು ಹೇಗೆ ಭಾಗಿಯಾಗಿವೆ ಎಂಬುದನ್ನು ವಿವರಿಸುತ್ತದೆ. ಹಾಗಾಗಿ, ಈ ಸಂಸ್ಥೆಗಳ ದುಷ್ಟ ಪಾತ್ರವನ್ನು ಬಹಿರಂಗಪಡಿಸಬೇಕು. ಅವುಗಳನ್ನು ಹೊಣೆಗಾರರನ್ನಾಗಿ ಮಾಡಬೇಕು” ಎಂದು ಸಿಪಿಐ(ಎಂ) ಹೇಳಿಕೆಯಲ್ಲಿ ತಿಳಿಸಿದೆ.

ಈ ಸಂಸ್ಥೆಗಳು ನರಮೇಧಕ್ಕೆ ಕಾರಣವಾದರೂ ಕೂಡ, ನಮ್ಮ ಡಿಜಿಟಲ್ ಹೆಜ್ಜೆಗುರುತುಗಳನ್ನು ಪೋಷಿಸುತ್ತವೆ. ನಿಗದಿತ ಸಮಯದಲ್ಲಿ ಪ್ರತಿದಿನ ಅರ್ಧ ಗಂಟೆ ನಮ್ಮ ಮೊಬೈಲ್ ಫೋನ್‌ಗಳನ್ನು ಸ್ಥಗಿತಗೊಳಿಸುವುದು ಸಣ್ಣ ವಿಷಯ. ಆದರೆ, ಡಿಜಿಟಲ್ ಅಡ್ಡಿಪಡಿಸುವಿಕೆಯ ಶಕ್ತಿಯುತವಾದ ಕ್ರಿಯೆಯಾಗಿದೆ. ಇಸ್ರೇಲ್‌ನ ನರಮೇಧ ಮತ್ತು ವರ್ಣಭೇದ ನೀತಿಯನ್ನು ಬೆಂಬಲಿಸುವ ಬಂಡವಾಳಶಾಹಿ ವ್ಯವಸ್ಥೆಯ ವಿರುದ್ಧದ ಮುಷ್ಕರ ಎಂದಿದೆ.

ಸಿಪಿಐ(ಎಂ) ದೇಶಾದ್ಯಂತ ಜನರು ಈ ಡಿಜಿಟಲ್ ಪ್ರತಿರೋಧದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮನವಿ ಮಾಡಿದೆ. ಪ್ರತಿಭಟನೆಯ ಅವಧಿಯಲ್ಲಿ ನಿಮ್ಮ ಮೊಬೈಲ್ ಫೋನ್‌ಗಳನ್ನು ಆಫ್ ಮಾಡಿ ಮತ್ತು ಯಾವುದೇ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಪೋಸ್ಟ್ ಮಾಡುವುದು, ಲೈಕ್ ಮಾಡುವುದು ಅಥವಾ ಕಾಮೆಂಟ್ ಮಾಡುವುದನ್ನು ತಪ್ಪಿಸಿ ಎಂದು ಕೋರಿದೆ.

‘ಸೈಲೆನ್ಸ್ ಫಾರ್ ಗಾಝ’ ಎಂಬ ಜಾಗತಿಕ ಪ್ರತಿರೋಧದಲ್ಲಿ ಭಾಗವಹಿಸುವ ಮೂಲಕ, ಸಿಪಿಐ(ಎಂ) ಪ್ಯಾಲೆಸ್ತೀನ್ ಜನರೊಂದಿಗೆ ಮತ್ತು ಇಸ್ರೇಲ್ ನಡೆಸಿದ ಕ್ರೂರ, ನರಮೇಧದ ವಿರುದ್ಧ ನಿಲ್ಲುತ್ತದೆ. ಈ ಸಾಮೂಹಿಕ ಮೌನವು ನರಮೇಧದ ವಿರುದ್ದದ ಧಿಕ್ಕಾರದ ಕೂಗಾಗಲಿ. ಯುದ್ಧ ಅಪರಾಧಗಳ ವಿರುದ್ಧದ ಧ್ವನಿಯನ್ನು ಅಡಗಿಸಲಾಗುವುದಿಲ್ಲ ಎಂಬ ಪ್ರಬಲ ಪ್ರತಿಪಾದನೆಯಾಗಿರಲಿ ಎಂದು ಸಿಪಿಐ(ಎಂ) ಹೇಳಿದೆ.

ಟ್ರಂಪ್ ವಿರುದ್ಧ ತಿರುಗಿ ಬಿದ್ದ ಅತ್ಯಾಪ್ತ ಎಲಾನ್ ಮಸ್ಕ್: ಹೊಸ ರಾಜಕೀಯ ಪಕ್ಷ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...