HomeಮುಖಪುಟSilence for Gaza| ಇಸ್ರೇಲ್ ನರಮೇಧದ ವಿರುದ್ಧ 'ಡಿಜಿಟಲ್ ಸತ್ಯಾಗ್ರಹ'ಕ್ಕೆ ಕರೆ ಕೊಟ್ಟ ಸಿಪಿಐ(ಎಂ)

Silence for Gaza| ಇಸ್ರೇಲ್ ನರಮೇಧದ ವಿರುದ್ಧ ‘ಡಿಜಿಟಲ್ ಸತ್ಯಾಗ್ರಹ’ಕ್ಕೆ ಕರೆ ಕೊಟ್ಟ ಸಿಪಿಐ(ಎಂ)

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧವನ್ನು ಖಂಡಿಸಿ ಜಾಗತಿಕವಾಗಿ ನಡೆಯುತ್ತಿರುವ ಸೈಲೆನ್ಸ್ ಫಾರ್ ಗಾಝಾ (Silence for Gaza)’ಡಿಜಿಟಲ್ ಸತ್ಯಾಗ್ರಹ’ವನ್ನು ಬೆಂಬಲಿಸುವಂತೆ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಕರೆಕೊಟ್ಟಿದೆ.

ಪ್ರತಿದಿನ 30 ನಿಮಿಷಗಳ ಕಾಲ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡುವುದು. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವುದು, ಲೈಕ್ ಒತ್ತುವುದು, ಕಾಮೆಂಟ್, ಶೇರ್ ಮಾಡುವುದರಿಂದ ದೂರ ಉಳಿಯುವುದೇ ಈ ಡಿಜಿಟಲ್ ಸತ್ಯಾಗ್ರಹ.

ಜಗತ್ತಿನ ವಿವಿದೆಡೆ ಈ ಪ್ರಯೋಗಗಳು ನಡೆದಿದೆ ಎಂದು ವರದಿಗಳು ಹೇಳಿವೆ. ಭಾರತದಲ್ಲಿ ಮೊದಲ ಬಾರಿಗೆ ಸಿಪಿಐ(ಎಂ) ಈ ಸತ್ಯಾಗ್ರಹಕ್ಕೆ ಕರೆಕೊಟ್ಟಿದೆ. ಈ ಮೂಲಕ ಜಾಗತಿಕ ಪ್ರತಿಭಟನೆಯನ್ನು ಬೆಂಬಲಿಸಿದೆ.

ಪ್ರತಿದಿನ ರಾತ್ರಿ 9.00 ಗಂಟೆಯಿಂದ 9.30ರವರೆಗೆ ಮೊಬೈಲ್ ಫೋನ್‌ಗಳನ್ನು ಸ್ವಿಚ್‌ ಅಫ್ ಮಾಡಿ ‘ಸೈಲೆನ್ಸ್ ಫಾರ್ ಗಾಝಾ’ ಡಿಜಿಟಲ್ ಸತ್ಯಾಗ್ರಹವನ್ನು ಬೆಂಬಲಿಸುವಂತೆ ಸಿಪಿಐ(ಎಂ) ಪಾಲಿಟ್ ಬ್ಯೂರೋ ಜುಲೈ 5ರಂದು ಕರೆ ಕೊಟ್ಟಿದೆ.

ಇತ್ತೀಚೆಗೆ ಬಿಡುಗಡೆಯಾದ ವಿಶ್ವಸಂಸ್ಥೆಯ ವರದಿ “ಆಕ್ಯುಪೇಶನ್ ಆರ್ಥಿಕತೆಯಿಂದ ಜನಾಂಗೀಯ ಹತ್ಯೆಯ ಆರ್ಥಿಕತೆಗೆ”, ಗಾಜಾದ ಮೇಲಿನ ಇಸ್ರೇಲ್ ದಾಳಿಯಲ್ಲಿ ವಿವಿಧ ಬಹುರಾಷ್ಟ್ರೀಯ ಸಂಸ್ಥೆಗಳು ಹೇಗೆ ಭಾಗಿಯಾಗಿವೆ ಎಂಬುದನ್ನು ವಿವರಿಸುತ್ತದೆ ಎಂದು ಸಿಪಿಐ(ಎಂ) ಹೇಳಿದೆ.

ಇತ್ತೀಚೆಗೆ ಬಿಡುಗಡೆಯಾದ ‘From Economy of Occupation to Economy of Genocide’ಗಾಝಾದ ಮೇಲಿನ ಇಸ್ರೇಲ್ ದಾಳಿಯಲ್ಲಿ ವಿವಿಧ ಬಹುರಾಷ್ಟ್ರೀಯ ಸಂಸ್ಥೆಗಳು ಹೇಗೆ ಭಾಗಿಯಾಗಿವೆ ಎಂಬುದನ್ನು ವಿವರಿಸುತ್ತದೆ. ಹಾಗಾಗಿ, ಈ ಸಂಸ್ಥೆಗಳ ದುಷ್ಟ ಪಾತ್ರವನ್ನು ಬಹಿರಂಗಪಡಿಸಬೇಕು. ಅವುಗಳನ್ನು ಹೊಣೆಗಾರರನ್ನಾಗಿ ಮಾಡಬೇಕು” ಎಂದು ಸಿಪಿಐ(ಎಂ) ಹೇಳಿಕೆಯಲ್ಲಿ ತಿಳಿಸಿದೆ.

ಈ ಸಂಸ್ಥೆಗಳು ನರಮೇಧಕ್ಕೆ ಕಾರಣವಾದರೂ ಕೂಡ, ನಮ್ಮ ಡಿಜಿಟಲ್ ಹೆಜ್ಜೆಗುರುತುಗಳನ್ನು ಪೋಷಿಸುತ್ತವೆ. ನಿಗದಿತ ಸಮಯದಲ್ಲಿ ಪ್ರತಿದಿನ ಅರ್ಧ ಗಂಟೆ ನಮ್ಮ ಮೊಬೈಲ್ ಫೋನ್‌ಗಳನ್ನು ಸ್ಥಗಿತಗೊಳಿಸುವುದು ಸಣ್ಣ ವಿಷಯ. ಆದರೆ, ಡಿಜಿಟಲ್ ಅಡ್ಡಿಪಡಿಸುವಿಕೆಯ ಶಕ್ತಿಯುತವಾದ ಕ್ರಿಯೆಯಾಗಿದೆ. ಇಸ್ರೇಲ್‌ನ ನರಮೇಧ ಮತ್ತು ವರ್ಣಭೇದ ನೀತಿಯನ್ನು ಬೆಂಬಲಿಸುವ ಬಂಡವಾಳಶಾಹಿ ವ್ಯವಸ್ಥೆಯ ವಿರುದ್ಧದ ಮುಷ್ಕರ ಎಂದಿದೆ.

ಸಿಪಿಐ(ಎಂ) ದೇಶಾದ್ಯಂತ ಜನರು ಈ ಡಿಜಿಟಲ್ ಪ್ರತಿರೋಧದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮನವಿ ಮಾಡಿದೆ. ಪ್ರತಿಭಟನೆಯ ಅವಧಿಯಲ್ಲಿ ನಿಮ್ಮ ಮೊಬೈಲ್ ಫೋನ್‌ಗಳನ್ನು ಆಫ್ ಮಾಡಿ ಮತ್ತು ಯಾವುದೇ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಪೋಸ್ಟ್ ಮಾಡುವುದು, ಲೈಕ್ ಮಾಡುವುದು ಅಥವಾ ಕಾಮೆಂಟ್ ಮಾಡುವುದನ್ನು ತಪ್ಪಿಸಿ ಎಂದು ಕೋರಿದೆ.

‘ಸೈಲೆನ್ಸ್ ಫಾರ್ ಗಾಝ’ ಎಂಬ ಜಾಗತಿಕ ಪ್ರತಿರೋಧದಲ್ಲಿ ಭಾಗವಹಿಸುವ ಮೂಲಕ, ಸಿಪಿಐ(ಎಂ) ಪ್ಯಾಲೆಸ್ತೀನ್ ಜನರೊಂದಿಗೆ ಮತ್ತು ಇಸ್ರೇಲ್ ನಡೆಸಿದ ಕ್ರೂರ, ನರಮೇಧದ ವಿರುದ್ಧ ನಿಲ್ಲುತ್ತದೆ. ಈ ಸಾಮೂಹಿಕ ಮೌನವು ನರಮೇಧದ ವಿರುದ್ದದ ಧಿಕ್ಕಾರದ ಕೂಗಾಗಲಿ. ಯುದ್ಧ ಅಪರಾಧಗಳ ವಿರುದ್ಧದ ಧ್ವನಿಯನ್ನು ಅಡಗಿಸಲಾಗುವುದಿಲ್ಲ ಎಂಬ ಪ್ರಬಲ ಪ್ರತಿಪಾದನೆಯಾಗಿರಲಿ ಎಂದು ಸಿಪಿಐ(ಎಂ) ಹೇಳಿದೆ.

ಟ್ರಂಪ್ ವಿರುದ್ಧ ತಿರುಗಿ ಬಿದ್ದ ಅತ್ಯಾಪ್ತ ಎಲಾನ್ ಮಸ್ಕ್: ಹೊಸ ರಾಜಕೀಯ ಪಕ್ಷ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...