Homeಕರ್ನಾಟಕಮಾಜಿ ಪ್ರೇಯಸಿಗೆ ಅಶ್ಲೀಲ ಸಂದೇಶ; ಯುವಕನ ಬಟ್ಟೆ ಕಳಚಿ ರಾಡ್‌ನಿಂದ ಥಳಿಸಿದ ಗುಂಪು

ಮಾಜಿ ಪ್ರೇಯಸಿಗೆ ಅಶ್ಲೀಲ ಸಂದೇಶ; ಯುವಕನ ಬಟ್ಟೆ ಕಳಚಿ ರಾಡ್‌ನಿಂದ ಥಳಿಸಿದ ಗುಂಪು

- Advertisement -
- Advertisement -

ಬೆಂಗಳೂರಿನ ಹೊರವಲಯದ ಸೋಲದೇವನಹಳ್ಳಿ ಬಳಿಯಲ್ಲಿ ಕುಶಾಲ್ ಎಂಬ ಯುವಕನನ್ನು 8-10 ಜನರ ಗುಂಪು ಅಪಹರಿಸಿ ಅಮಾನವೀಯವಾಗಿ ಹಲ್ಲೆ ನಡೆಸಿರುವ ವಿಡಯೊ ವೈರಲ್ ಆಗಿದೆ. ಮಾಜಿ ಗೆಳತಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಕ್ಕೆ ಅವರ ಬೆತ್ತಲೆಗೊಳಿಸಿ ಥಳಿಸಿದ್ದಾರೆ ಎಂದು ವರದಿಯಾಗಿದೆ.

ಯುವಕರ ಗುಂಪು ಕುಶಾಲ್‌ನನ್ನು ವಿವಸ್ತ್ರಗೊಳಿಸಿ, ರಾಡ್‌ ಮತ್ತು ದೊಣ್ಣೆ ಬಳಸಿ ಆತನ ಖಾಸಗಿ ಭಾಗಗಳಿಗೆ ಹೊಡೆದು, ಸಂಪೂರ್ಣ ಹಲ್ಲೆಯನ್ನು ವೀಡಿಯೊದಲ್ಲಿ ದಾಖಲಿಸಿದ್ದಾರೆ.

ಮಾಜಿ ಪ್ರೇಯಸಿಗೆ ಸಂದೇಶ ಕಳುಹಿಸಿದ ವಿವಾದದಿಂದಾಗಿ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ. ಎರಡು ವರ್ಷಗಳಿಗೂ ಹೆಚ್ಚು ಕಾಲ ಸಂಬಂಧದಲ್ಲಿದ್ದ ಕುಶಾಲ್‌ನ ಗೆಳತಿ ಇತ್ತೀಚೆಗೆ ಆತನಿಂದ ಬೇರ್ಪಟ್ಟಿ, ಇನ್ನೊಬ್ಬ ಹುಡುಗನೊಂದಿಗೆ ಹತ್ತಿರವಾಗಿದ್ದಳು ಎಂದು ತಿಳಿದುಬಂದಿದೆ. ಇದರಿಂದ ಆಕ್ರೋಶಗೊಂಡಿದ್ದ ಕುಶಾಲ್ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ.

ಪೊಲೀಸರ ಪ್ರಕಾರ, ಈ ಹಲ್ಲೆಯನ್ನು ಮಹಿಳೆಯ ಹಾಲಿ ಗೆಳೆಯ ಮತ್ತು ಅವನ ಸಹಚರರು ಸಂಚು ರೂಪಿಸಿ ನಡೆಸಿದ್ದಾರೆ. ಕುಶಾಲ್‌ನ ಸಂದೇಶ ಕಳುಹಿಸಿದ ನಂತರ ದಾಳಿಗೆ ಸಂಚು ರೂಪಿಸಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳು ವಿವಾದವನ್ನು ಪರಿಹರಿಸುವ ನೆಪದಲ್ಲಿ ಆತನನ್ನು ಕರೆಸಿ, ಕಾರಿನಲ್ಲಿ ಅಪಹರಿಸಿ, ಕೆರೆಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ಆತನ ಖಾಸಗಿ ಭಾಗಗಳನ್ನು ಗುರಿಯಾಗಿಸಿಕೊಂಡು ಆತನನ್ನು ವಿವಸ್ತ್ರಗೊಳಿಸಿ ಥಳಿಸಿದ್ದಾರೆ; ಘಟನೆಯನ್ನು ಚಿತ್ರೀಕರಿಸಿದ್ದಾರೆ.

ಹಲ್ಲೆಯ ವೀಡಿಯೊದಲ್ಲಿ, ಆರೋಪಿಗಯೋರ್ವ ರೇಣುಕಸ್ವಾಮಿ ಕೊಲೆ ಪ್ರಕರಣವನ್ನು ಉಲ್ಲೇಖಿಸಿದ್ದಾನೆ. “ಇದು ಆ ಪ್ರಕರಣದಂತೆಯೇ ಆಗುತ್ತದೆ” ಎಂದು ಹೇಳುತ್ತಿರುವುದು ಕಂಡುಬರುತ್ತದೆ. ಆರೋಪಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ದೃಶ್ಯಾವಳಿಗಳನ್ನು ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.

ಸೋಲದೇವನಹಳ್ಳಿ ಪೊಲೀಸರು ಹೇಮಂತ್, ಯಶವಂತ್, ಶಿವಶಂಕರ್ ಮತ್ತು ಶಶಾಂಕ್ ಗೌಡ ಎಂದು ಗುರುತಿಸಲಾದ ನಾಲ್ವರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಇತರ ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಡಿಜಿಟಲ್ ಸಾಕ್ಷ್ಯಗಳನ್ನು ಪರಿಶೀಲಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ಘಟನೆಯು ಕನ್ನಡ ನಟ ದರ್ಶನ್ ಒಳಗೊಂಡ 2024 ರ ಹೈ ಪ್ರೊಫೈಲ್ ಕೊಲೆ ಪ್ರಕರಣಕ್ಕೆ ಹೋಲಿಕೆಯಾಗಿದೆ. ಚಿತ್ರದುರ್ಗದ 33 ವರ್ಷದ ರೇಣುಕಸ್ವಾಮಿ ಬೆಂಗಳೂರಿನ ಸುಮನಹಳ್ಳಿಯ ಚರಂಡಿ ಬಳಿ ಬಹು ಗಾಯಗಳೊಂದಿಗೆ ಮೃತಪಟ್ಟಿರುವುದು ಪತ್ತೆಯಾಗಿತ್ತು. ದರ್ಶನ್ ಜೊತೆ ಸಂಪರ್ಕ ಹೊಂದಿರುವ ನಟಿ ಪವಿತ್ರಾ ಗೌಡಗೆ ಆತ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ. ಇದು ಆತನ ಅಪಹರಣ, ಚಿತ್ರಹಿಂಸೆ ಮತ್ತು ಕೊಲೆಗೆ ಕಾರಣವಾಯಿತು ಎಂದು ಆರೋಪಿಸಲಾಗಿದೆ.

ಹಣಕಾಸಿನ ವಿವಾದವನ್ನು ಉಲ್ಲೇಖಿಸಿ ನಾಲ್ವರು ಆರಂಭದಲ್ಲಿ ಪೊಲೀಸರಿಗೆ ಶರಣಾದರು. ಆದರೆ, ಅವರ ಹೇಳಿಕೆಗಳಲ್ಲಿನ ಭೀನ್ನತಯು ನಟ ದರ್ಶನ್, ಪವಿತ್ರಾ ಗೌಡ ಮತ್ತು ಇತರ 15 ಜನರನ್ನು ಒಳಗೊಂಡ ದೊಡ್ಡ ಪಿತೂರಿಯನ್ನು ಬಹಿರಂಗಪಡಿಸಿತು. ಕೊಲೆಯಲ್ಲಿ ಪಾತ್ರ ವಹಿಸಿದ್ದಕ್ಕಾಗಿ ದರ್ಶನ್ ಅವರನ್ನು ಜೂನ್ 11, 2024 ರಂದು ಬಂಧಿಸಲಾಯಿತು. ಇದೀಗ ಜಾಮೀನಿನ ಮೇಲೆ ಆರೋಪಿಗಳೆಲ್ಲರೂ ಹೊರಗಿದ್ದಾರೆ.

ಒಬಿಸಿ ಸಲಹಾ ಮಂಡಳಿ ಸದಸ್ಯರಲ್ಲಿ ಸಿದ್ದರಾಮಯ್ಯ ಕೂಡಾ ಒಬ್ಬರು: ಸಿಎಂ ಕಚೇರಿ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...