HomeUncategorizedಕೊಪ್ಪ: ಇಬ್ಬರು ಬಾಲಕಿಯರ ಅನುಮಾನಾಸ್ಪದ ಸಾವು; ನ್ಯಾಯಕ್ಕಾಗಿ ಆಗ್ರಹಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆಯಿಂದ ಭಾರೀ ಪ್ರತಿಭಟನೆ

ಕೊಪ್ಪ: ಇಬ್ಬರು ಬಾಲಕಿಯರ ಅನುಮಾನಾಸ್ಪದ ಸಾವು; ನ್ಯಾಯಕ್ಕಾಗಿ ಆಗ್ರಹಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆಯಿಂದ ಭಾರೀ ಪ್ರತಿಭಟನೆ

- Advertisement -
- Advertisement -

ಕೊಪ್ಪ: ಕೊಪ್ಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಒಂದು ವರ್ಷದ ಅಂತರದಲ್ಲಿ ಇಬ್ಬರು ಬಾಲಕಿಯರು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಶಾಲಾ ಆಡಳಿತ ಮತ್ತು ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಸರಣಿ ಸಾವುಗಳಿಗೆ ಸಮಗ್ರ ತನಿಖೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಇಂದು (ಜುಲೈ 7) ಕೊಪ್ಪದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS) ಹಾಗೂ ಇತರ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು. ಈ ಪ್ರತಿಭಟನೆಗೆ ಕರ್ನಾಟಕ ಜನಶಕ್ತಿಯು ಬೆಂಬಲವನ್ನು ವ್ಯಕ್ತಪಡಿಸಿತ್ತು.

ಸರಣಿ ಸಾವಿನ ಸುತ್ತ ಅನುಮಾನದ ಹುತ್ತ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿಯಲ್ಲಿ ಓದುತ್ತಿದ್ದ ಬೊಮ್ಲಾಪುರ ಗ್ರಾಮದ ಶಮಿತಾ (14) ಜೂನ್ 29ರ ಭಾನುವಾರ ಶವವಾಗಿ ಪತ್ತೆಯಾಗಿದ್ದರು. ಆರಂಭದಲ್ಲಿ ಆಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಆದರೆ, ಸಣ್ಣ ವಯಸ್ಸಿನ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ವಾದ ಸಾರ್ವಜನಿಕರಲ್ಲಿ ಭಾರೀ ಅನುಮಾನ ಮೂಡಿಸಿತ್ತು. ಈ ಅನುಮಾನಕ್ಕೆ ಮತ್ತಷ್ಟು ಬಲ ಸಿಕ್ಕಿದ್ದು, ಇದೇ ಶಾಲೆಯಲ್ಲಿ 2023ರ ಜುಲೈ 27ರಂದು ಕೊಪ್ಪ ತಾಲೂಕಿನ ನಾರ್ವೆ ಗ್ರಾಮದ ಅಮೂಲ್ಯ ಎಂಬ 14 ವರ್ಷದ ಬಾಲಕಿಯ ಶವ ಪತ್ತೆಯಾಗಿತ್ತು. ಗಮನಾರ್ಹವೆಂದರೆ, ಇಬ್ಬರೂ ಬಾಲಕಿಯರ ಶವ ಒಂದೇ ಜಾಗದಲ್ಲಿ ಪತ್ತೆಯಾಗಿವೆ.

ಶಾಸಕ ಟಿ.ಡಿ. ರಾಜೇಗೌಡ ಅವರು ಈ ದುರಂತಗಳ ಬಗ್ಗೆ ಸಾರ್ವಜನಿಕರಲ್ಲಿರುವ ಅನುಮಾನವನ್ನು ಹಂಚಿಕೊಂಡು, “ಬಾಲಕಿಯ ಸಾವಿನ ಸಮಗ್ರ ತನಿಖೆಯಾಗಬೇಕು ಎನ್ನುವ ಉದ್ದೇಶದಿಂದಲೇ ಶಿವಮೊಗ್ಗ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿಸಲಾಗಿದೆ. ವರದಿ ಬಂದ ಕೂಡಲೇ ಪ್ರಾಮಾಣಿಕ ತನಿಖೆ ಮಾಡಿಸಲಾಗುವುದು. ವಸತಿ ಶಾಲೆಯಲ್ಲಿ ಎಲ್ಲಾ ಅಧಿಕಾರಿ, ಪೋಷಕರನ್ನು ಕರೆಯಿಸಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿಸಲಾಗುವುದು” ಎಂದು ಭರವಸೆ ನೀಡಿದ್ದರು.

ಪ್ರತಿಭಟನಾ ಮೆರವಣಿಗೆಯು ಬೆಳಿಗ್ಗೆ 10 ಗಂಟೆಗೆ ಪ್ರಾರಂಭಿಸಲಾಗಿತ್ತು. ಕೊಪ್ಪ ಟೌನ್‌ಹಾಲ್‌ನಿಂದ ಬಸ್ ನಿಲ್ದಾಣದವರೆಗೆ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಯಿತು. ಬಸ್ ನಿಲ್ದಾಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನಸ್ತೋಮದಲ್ಲಿ ಪೋಷಕರು ಮತ್ತು ಸಾರ್ವಜನಿಕರು ಶಾಲಾ ಆಡಳಿತ ಮಂಡಳಿ, ಶಿಕ್ಷಣ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮೃತ ಬಾಲಕಿಯರ ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡುವ ಹೋರಾಟಕ್ಕೆ ಸಾರ್ವಜನಿಕರು ಕೈಜೋಡಿಸುವಂತೆ ಪ್ರಗತಿಪರ ಸಂಘಟನೆಗಳ ಸಂಘಟಕರು ಮನವಿ ಮಾಡಿದ್ದರು.

ಪ್ರಮುಖ ಬೇಡಿಕೆಗಳು ಮತ್ತು ಎಚ್ಚರಿಕೆ: ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಹಾಗೂ ಹೋರಾಟಗಾರ ಕೆ.ಎಲ್. ಅಶೋಕ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿ, “ಈ ಸಾವುಗಳು ಇಲ್ಲಿಗೆ ನಿಲ್ಲಬೇಕು. ಮಕ್ಕಳ ಬಗ್ಗೆ ತೀವ್ರ ನಿರ್ಲಕ್ಷ್ಯ ತೋರಿರುವ ಶಾಲೆಯ ಪ್ರಿನ್ಸಿಪಾಲ್ ಹಾಗೂ ಸಿಬ್ಬಂದಿಗಳನ್ನು ಈ ಕೂಡಲೇ ಅಮಾನತುಗೊಳಿಸಿ, ಅವರ ವಿರುದ್ಧ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು. ಅಲ್ಲದೆ, “ಇಲ್ಲವಾದಲ್ಲಿ, ಕರ್ನಾಟಕ ಜನಶಕ್ತಿ, ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS), ಮಹಿಳಾ ಮುನ್ನಡೆ, ಕರ್ನಾಟಕ ಶ್ರಮಿಕ ಶಕ್ತಿ ಸೇರಿದಂತೆ ಹಲವು ಸಂಘಟನೆಗಳು ಸೇರಿ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುತ್ತೇವೆ” ಎಂದು ಕಠಿಣ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಮಾತನಾಡಿದ ವಕೀಲರಾದ ಸುಧೀರ್ ಕುಮಾರ್ ಮೂರೋಳ್ಳಿ, “ಎಲ್ಲಾ ಸಂಘಟನೆಗಳು ಸೇರಿ ಮಾಡುತ್ತಿರುವ ಈ ಹೋರಾಟ ತುಂಬಾ ಸ್ವಾಗತಾರ್ಹವಾದುದು. ಈ ಸಾವುಗಳಿಗೆ ಖಂಡಿತ ನ್ಯಾಯ ಸಿಗುತ್ತದೆ” ಎಂಬ ಭರವಸೆಯ ನುಡಿಗಳನ್ನಾಡಿದರು.

ಶಮಿತಾಳ ಚಿಕ್ಕಮ್ಮ ರಾಜೀವಿ ಅವರು ದುಃಖಿತರಾಗಿ, “ಯಾವುದೇ ಕಾರಣಕ್ಕೂ ಇದನ್ನು ಆತ್ಮಹತ್ಯೆ ಎಂದು ಕರೆಯಬೇಡಿ” ಎಂದು ಆಗ್ರಹಿಸಿ, “ಇಷ್ಟು ವರ್ಷ ಆದರೂ ಶಾಲೆಯ ಅವ್ಯವಸ್ಥೆಗಳನ್ನು ಯಾಕೆ ಸರಿಪಡಿಸಲಿಲ್ಲ? ಇಲಾಖೆ ಏನು ಮಾಡುತ್ತಿದೆ?” ಎಂದು ಪ್ರಶ್ನಿಸಿದರು.

KVS ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಮುಖಂಡ ರಾಜಿತ್ ಮಾತನಾಡಿ, “ಈ ಸಾವಿನ ಬಗ್ಗೆ ನಮ್ಮ ಸಂಘಟನೆ ಗಂಭೀರವಾಗಿ ಪರಿಗಣಿಸಿದ್ದು, ಈ ಅನುಮಾನಾಸ್ಪದ ಸಾವಿಗೆ ನ್ಯಾಯ ಸಿಗುವವರೆಗೂ ಅವರ ಪೋಷಕರ ಜೊತೆಗೆ ನಿಲ್ಲುತ್ತದೆ” ಎಂದು ಪ್ರತಿಜ್ಞೆ ಮಾಡಿದರು.

ಈ ಸಭೆಯಲ್ಲಿ ಮಹಿಳಾ ಮುನ್ನಡೆಯ ರಾಧಾ ಹಾಗಲಗಂಚಿ, ಕರ್ನಾಟಕ ಜನಶಕ್ತಿಯ ಜಿಲ್ಲಾ ಕಾರ್ಯದರ್ಶಿ ಸುರೇಶ್ ಗಡಿಕಲ್, ದಲಿತ ಮುಖಂಡರಾದ ರಾಜಾ ಶಂಕರ್, ಕುಂಚೂರ್ ವಾಸು, ರವೀಂದ್ರ ಮೊದಲಾದವರು ಮಾತನಾಡಿ, ಬಾಲಕಿಯರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು. ಆನಂದ್ ಬೆಳಗೊಳ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಈ ಬೃಹತ್ ಪ್ರತಿಭಟನೆ, ಶಾಲಾ ವಸತಿ ನಿಲಯಗಳಲ್ಲಿನ ಸುರಕ್ಷತೆಯ ಬಗ್ಗೆ ಮತ್ತು ಶಿಕ್ಷಣ ಇಲಾಖೆಯ ಮೇಲ್ವಿಚಾರಣೆಯ ವೈಫಲ್ಯಗಳ ಬಗ್ಗೆ ಸಾರ್ವಜನಿಕರ ಆಳವಾದ ಕಳವಳವನ್ನು ಪ್ರತಿಬಿಂಬಿಸುತ್ತದೆ. ನ್ಯಾಯ ಸಿಗುವವರೆಗೂ ಈ ಹೋರಾಟ ಮುಂದುವರಿಯಲಿದೆ ಎಂಬುದರ ಸ್ಪಷ್ಟ ಸಂದೇಶವನ್ನು ರವಾನಿಸಿದೆ.

ಕೊಪ್ಪ| ಬಾಲಕಿ ಅನುಮಾನಾಸ್ಪದ ಸಾವು: ತನಿಖೆಗೆ ಒತ್ತಾಯಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...