Homeಮುಖಪುಟಬಿಹಾರದ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.35 ಮೀಸಲಾತಿ; ನಿತೀಶ್ ಕುಮಾರ್ ಘೋಷಣೆ

ಬಿಹಾರದ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.35 ಮೀಸಲಾತಿ; ನಿತೀಶ್ ಕುಮಾರ್ ಘೋಷಣೆ

- Advertisement -
- Advertisement -

ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಮುಂಚಿತವಾಗಿ, ಬಿಹಾರದ ಸರ್ಕಾರಿ ಉದ್ಯೋಗಗಳ ಪ್ರತಿಯೊಂದು ವರ್ಗದ ಎಲ್ಲ ಹುದ್ದೆಗಳಲ್ಲಿ ಶೇಕಡಾ 35 ರಷ್ಟು ಬಿಹಾರದ ಖಾಯಂ ನಿವಾಸಿ ಮಹಿಳೆಯರಿಗೆ ಮಾತ್ರ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಘೋಷಿಸಿದ್ದಾರೆ.

“ಎಲ್ಲ ರಾಜ್ಯ ಸರ್ಕಾರಿ ಸೇವೆಗಳಲ್ಲಿ ಎಲ್ಲ ವರ್ಗಗಳು, ಹಂತಗಳು ಮತ್ತು ಪ್ರಕಾರದ ಹುದ್ದೆಗಳಿಗೆ ನೇರ ನೇಮಕಾತಿಯಲ್ಲಿ ಬಿಹಾರದ ಮೂಲ ನಿವಾಸಿಗಳಾದ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ 35% ಮೀಸಲಾತಿ” ಎಂದು ನಿತೀಶ್ ಕುಮಾರ್ ಹೇಳಿದರು.

ಎಲ್ಲ ಹಂತಗಳು ಮತ್ತು ಇಲಾಖೆಗಳಲ್ಲಿ ಸಾರ್ವಜನಿಕ ಸೇವೆಗಳಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಹೆಚ್ಚಿಸಲು ಸರ್ಕಾರ ಮುಂದಾಗಿದೆ. ಹೆಚ್ಚಿನ ಮಹಿಳೆಯರು ಸರ್ಕಾರದ ಕಾರ್ಯಪಡೆಗೆ ಪ್ರವೇಶಿಸುವುದು ಸೇರಿದಂತೆ ಬಿಹಾರದ ಆಡಳಿತದಲ್ಲಿ ದೊಡ್ಡ ಪಾತ್ರವನ್ನು ವಹಿಸುವುದನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಈ ನಿರ್ಧಾರ ಹೊಂದಿದೆ ಎಂದು ನಿತೀಶ್ ಕುಮಾರ್ ಹೇಳಿದರು.

ಪಾಟ್ನಾದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಯುವಜನರಿಗೆ ತಮ್ಮ ಸರ್ಕಾರದ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿತೀಶ್ ಕುಮಾರ್, ರಾಜ್ಯ ಸಚಿವ ಸಂಪುಟವು ಅನುಮೋದಿಸಿದ ಹೊಸ ಶಾಸನಬದ್ಧ ಸಂಸ್ಥೆಯಾದ ಬಿಹಾರ ಯುವ ಆಯೋಗದ ರಚನೆಯನ್ನು ಸಹ ಘೋಷಿಸಿದರು.

“ಬಿಹಾರದ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸಲು, ಅವರಿಗೆ ತರಬೇತಿ ನೀಡಲು ಮತ್ತು ಅವರನ್ನು ಸಬಲೀಕರಣಗೊಳಿಸಲು, ಸಮರ್ಥರನ್ನಾಗಿ ಮಾಡಲು, ಸರ್ಕಾರವು ಬಿಹಾರ ಯುವ ಆಯೋಗವನ್ನು ರಚಿಸಲು ನಿರ್ಧರಿಸಿದೆ ಎಂದು ನಿಮಗೆ ತಿಳಿಸಲು ನನಗೆ ಸಂತೋಷವಾಗಿದೆ. ಸಂಪುಟ ಇದಕ್ಕೆ ಅನುಮೋದನೆ ನೀಡಿದೆ” ಎಂದು ಮುಖ್ಯಮಂತ್ರಿ ಹೇಳಿದರು.

ಬಿಹಾರ ಯುವ ಆಯೋಗವು ರಾಜ್ಯದ ಯುವಕರ ಉನ್ನತಿ ಮತ್ತು ಕಲ್ಯಾಣಕ್ಕೆ ಸಂಬಂಧಿಸಿದ ಎಲ್ಲ ವಿಷಯಗಳ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡುತ್ತದೆ. ಯುವಜನರಿಗೆ ಉತ್ತಮ ಶಿಕ್ಷಣ ಮತ್ತು ಉದ್ಯೋಗಾವಕಾಶಗಳನ್ನು ಖಚಿತಪಡಿಸಿಕೊಳ್ಳಲು ಇದು ಸರ್ಕಾರಿ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುತ್ತದೆ.

ಆಯೋಗವು ಒರ್ವ ಅಧ್ಯಕ್ಷರು, ಇಬ್ಬರು ಉಪಾಧ್ಯಕ್ಷರು ಮತ್ತು ಏಳು ಸದಸ್ಯರನ್ನು ಒಳಗೊಂಡಿರುತ್ತದೆ. ಎಲ್ಲರೂ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ರಾಜ್ಯದೊಳಗೆ ಖಾಸಗಿ ವಲಯದ ಉದ್ಯೋಗಗಳಲ್ಲಿ ಸ್ಥಳೀಯ ಯುವಕರು ಆದ್ಯತೆ ಪಡೆಯುವುದನ್ನು ಇದು ಮೇಲ್ವಿಚಾರಣೆ ಮಾಡುತ್ತದೆ. ರಾಜ್ಯದ ಹೊರಗೆ ಅಧ್ಯಯನ ಮಾಡುತ್ತಿರುವ ಅಥವಾ ಉದ್ಯೋಗದಲ್ಲಿರುವ ಬಿಹಾರದ ವಿದ್ಯಾರ್ಥಿಗಳು ಮತ್ತು ಕಾರ್ಮಿಕರ ಹಿತಾಸಕ್ತಿಗಳನ್ನು ಕಾಪಾಡುತ್ತದೆ.

“ಮದ್ಯ ಮತ್ತು ಮಾದಕ ದ್ರವ್ಯ ಸೇವನೆಯಂತಹ ಸಾಮಾಜಿಕ ಅನಿಷ್ಟಗಳನ್ನು ನಿಗ್ರಹಿಸಲು ಕಾರ್ಯಕ್ರಮಗಳನ್ನು ಸಿದ್ಧಪಡಿಸುವ ಕಾರ್ಯವನ್ನು ಆಯೋಗಕ್ಕೆ ವಹಿಸಲಾಗುವುದು, ಅಂತಹ ವಿಷಯಗಳಲ್ಲಿ ಸರ್ಕಾರಕ್ಕೆ ಶಿಫಾರಸುಗಳನ್ನು ಮಾಡುತ್ತದೆ” ಎಂದು ನಿತೀಶ್ ಕುಮಾರ್ ಹೇಳಿದರು.

ಈ ಉಪಕ್ರಮವು ಬಿಹಾರದ ಯುವಕರನ್ನು ಸ್ವಾವಲಂಬಿ, ಕೌಶಲ್ಯಪೂರ್ಣ ಮತ್ತು ಉದ್ಯೋಗಕ್ಕೆ ಸಿದ್ಧರನ್ನಾಗಿ ಮಾಡುವ ಗುರಿಯನ್ನು ಹೊಂದಿದೆ, ಇದು ಮುಂಬರುವ ಪೀಳಿಗೆಗೆ ಸುರಕ್ಷಿತ ಭವಿಷ್ಯವನ್ನು ಖಾತ್ರಿಪಡಿಸುತ್ತದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ಪಕ್ಷ ಅಧಿಕಾರಕ್ಕೆ ಬಂದರೆ ಒಂದೇ ಗಂಟೆಯಲ್ಲಿ ವಕ್ಫ್ ಕಾಯ್ದೆ ರದ್ದು: ಕಾಂಗ್ರೆಸ್ ಸಂಸದ ಇಮ್ರಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...