Homeಮುಖಪುಟಅಸ್ಸಾಂ: 1,400 ಬಂಗಾಳಿ ಮುಸ್ಲಿಂ ಕುಟುಂಬಗಳ ಮನೆಗಳು ನೆಲಸಮ

ಅಸ್ಸಾಂ: 1,400 ಬಂಗಾಳಿ ಮುಸ್ಲಿಂ ಕುಟುಂಬಗಳ ಮನೆಗಳು ನೆಲಸಮ

- Advertisement -
- Advertisement -

ಸೌರ ವಿದ್ಯುತ್ ಯೋಜನೆಗೆ ದಾರಿ ಮಾಡಿಕೊಡಲು ಅಸ್ಸಾಂ ಸರ್ಕಾರವು ಧುಬ್ರಿ ಜಿಲ್ಲೆಯಲ್ಲಿ ಸುಮಾರು 1,157 ಎಕರೆ ಸರ್ಕಾರಿ ಜಾಗದಲ್ಲಿದ್ದ ಬಂಗಾಳಿ ಮೂಲದ 1,400 ಮುಸ್ಲಿಂ ಕುಟುಂಬಗಳ ಮನೆಗಳನ್ನು ಕೆಡವಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ದಿಬಾಕರ್ ನಾಥ್ ಮಂಗಳವಾರ ತಿಳಿಸಿದ್ದಾಗಿ scroll.in ವರದಿ ಮಾಡಿದೆ.

ಯೋಜನೆಯ ನೇತೃತ್ವ ವಹಿಸಿರುವ ಅಸ್ಸಾಂ ವಿದ್ಯುತ್ ವಿತರಣಾ ಕಂಪನಿಗೆ ಈಗಾಗಲೇ ಭೂಮಿ ಹಂಚಿಕೆ ಮಾಡಲಾಗಿದೆ ಎಂದು ನಾಥ್ ಹೇಳಿದ್ದಾರೆ.

ಧುಬ್ರಿಯ ಚಾಪರ್ ಹೋಬಳಿ ವ್ಯಾಪ್ತಿಯಲ್ಲಿ ಬರುವ ಚಿರಕುಟ 1 ಮತ್ತು 2, ಚಾರುಬಖ್ರ ಜಂಗಲ್ ಬ್ಲಾಕ್ ಮತ್ತು ಸಂತೇಶಪುರ ಗ್ರಾಮಗಳಲ್ಲಿ ಕನಿಷ್ಠ ಮೂರ್ನಾಲ್ಕು ದಶಕಗಳಿಂದ ವಾಸಿಸುತ್ತಿದ್ದ ಸುಮಾರು 10,000 ಬಂಗಾಳಿ ಮೂಲದ ಮುಸ್ಲಿಮರನ್ನು ಸ್ಥಳಾಂತರಿಸಲಾಗಿದೆ ಎಂದು ವರದಿ ವಿವರಿಸಿದೆ.

ಸ್ಥಳಾಂತರಗೊಂಡವರು ಬ್ರಹ್ಮಪುತ್ರ ನದಿಯಿಂದಾಗಿ ತಮ್ಮ ಪೂರ್ವಜರ ಮನೆಗಳನ್ನು ಕಳೆದುಕೊಂಡ ಜನರು ಎಂದು ಸ್ಥಳೀಯ ನಿವಾಸಿ ತೌಫೀಕ್ ಹುಸಿಯಾನ್ ತಿಳಿಸಿದ್ದಾರೆ.

ಏಪ್ರಿಲ್ 2ರಂದು ನಡೆದ ಜಿಲ್ಲಾ ಮಟ್ಟದ ಭೂ ಸಲಹಾ ಸಭೆಯ ಪ್ರಕಾರ, ಸರ್ಕಾರಿ ಗೋಮಾಳದ ಜಾಗವನ್ನು ಸೌರಶಕ್ತಿ ಯೋಜನೆಗಾಗಿ ಬಿಟ್ಟು ಕೊಡುವ ಪ್ರಸ್ತಾಪವನ್ನು ಮಾರ್ಚ್ 30ರಂದು ಜಿಲ್ಲಾಡಳಿತ ಸಲ್ಲಿಸಿದೆ.

ಅಸ್ಸಾಂ ವಿದ್ಯುತ್ ವಿತರಣಾ ಕಂಪನಿ ಸೌರ ವಿದ್ಯುತ್ ಸ್ಥಾವರಕ್ಕಾಗಿ ಸುಮಾರು 1,289 ಎಕರೆ ಸರ್ಕಾರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ. ಅದಾನಿ ಸಮೂಹ ಇಲ್ಲಿ ಸೌರ ವಿದ್ಯುತ್ ಯೋಜನೆ ಕಾರ್ಯಗತಗೊಳಿಸಲಿದೆ.

ಮನೆಗಳನ್ನು ಕೆಡವುವ ಮೊದಲು ನಿವಾಸಿಗಳಿಗೆ ನೋಟಿಸ್ ನೀಡಲಾಗಿದೆ. ಭಾನುವಾರಕ್ಕಿಂತ ಮೊದಲು ಮನೆಗಳನ್ನು ಖಾಲಿ ಮಾಡುವಂತೆ ಪ್ರತಿದಿನ ಸಾರ್ವಜನಿಕ ಪ್ರಕಟಣೆಗಳನ್ನು ನೀಡಲಾಗಿತ್ತು ಎಂದು ಜಿಲ್ಲಾಡಳಿತ ಹೇಳಿಕೊಂಡಿದೆ.

ಸೋಮವಾರ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಬುಲ್ಡೋಜರ್‌ಗಳ ಜೊತೆ ಆಗಮಿಸಿ ತೆರವು ಕಾರ್ಯಾಚರಣೆ ಆರಂಭಿಸಿದ್ದರು.

ಚಾಪರ್ ಕಂದಾಯ ವೃತ್ತದ ಅಧಿಕಾರಿ ನೀಡಿದ ತೆರವು ನೋಟಿಸ್ ಪ್ರಕಾರ, ಜಿಲ್ಲಾಡಳಿತ ಬೈಜರ್ ಅಲ್ಗಾ ಗ್ರಾಮದಲ್ಲಿ ನಿರಾಶ್ರಿತ ಜನರ ಪುನರ್ವಸತಿಗಾಗಿ 300 ಬಿಘಾ (ಸುಮಾರು 1 ಎಕರೆ) ಭೂಮಿಯನ್ನು ಮಂಜೂರು ಮಾಡಿದೆ. ಜನರು ತಮ್ಮ ವಸ್ತುಗಳನ್ನು ಸಾಗಿಸಲು ಒಂದು ಬಾರಿಯ ಪರಿಹಾರಕ್ಕಾಗಿ 50,000 ರೂ.ಗಳನ್ನು ಮೀಸಲಿಟ್ಟಿದೆ. ಕೆಲವು ನಿವಾಸಿಗಳು 50,000 ರೂ.ಗಳನ್ನು ಪಡೆದಿದ್ದಾರೆ. ಇನ್ನೂ ಕೆಲವರು ತಮಗೆ ಸಿಕ್ಕಿಲ್ಲ ಎಂದು ಹೇಳಿಕೊಂಡಿದ್ದಾರೆ.

ಆದಾಗ್ಯೂ, ಪುನರ್ವಸತಿ ಸ್ಥಳವಾದ ಬೈಜರ್ ಅಲ್ಗಾ ಗ್ರಾಮವು ತಗ್ಗು ಪ್ರದೇಶದ ನದಿಪಾತ್ರದಲ್ಲಿದೆ ಎಂದು ನಿರಾಶ್ರಿತ ಜನರು ಹೇಳಿಕೊಂಡಿದ್ದಾರೆ. ಮಳೆಗಾಲದಲ್ಲಿ ಹೆಚ್ಚಿನ ಅವಧಿ ಇಲ್ಲಿ ಪ್ರವಾಹ ಪರಿಸ್ಥಿತಿ ಇರುತ್ತದೆ ಎಂದು ಸ್ಥಳಾಂತರಗೊಂಡ ನಿವಾಸಿ ನಜ್ರುಲ್ ಇಸ್ಲಾಂ ಹೇಳಿದ್ದಾರೆ. ರಸ್ತೆ ಅಥವಾ ಯಾವುದೇ ಇತರ ಸಂವಹನವಿಲ್ಲದೆ ಜನರು ಅಲ್ಲಿಗೆ ಹೋಗಲು ಹಿಂಜರಿಯುತ್ತಿದ್ದಾರೆ ಎಂದು scroll.in ಹೇಳಿದೆ.

ಅನೇಕ ನಿವಾಸಿಗಳು ಭಯದಿಂದ ತಮ್ಮ ವಸ್ತುಗಳನ್ನು ಈಗಾಗಲೇ ಸ್ಥಳಾಂತರಿಸಿದ್ದಾರೆ. ಪ್ರತಿದಿನ ಜನರು ಸ್ಥಳಾಂತರಗೊಳ್ಳುತ್ತಿದ್ದಾರೆ. ಮೊದಲು ಸ್ಥಳಾಂತರಗೊಳ್ಳದವರ ಮನೆಗಳನ್ನು ಮಂಗಳವಾರ ಕೆಡವಲಾಗಿದೆ ಎಂದು ಮನೆ ಕಳೆದುಕೊಂಡಿರುವ ಹುಸಿಯಾನ್ ತಿಳಿಸಿದ್ದಾರೆ.

ಕೆಲವು ನಿವಾಸಿಗಳು ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ಪ್ರತಿಭಟಿಸಿದ್ದಾರೆ. ಬುಲ್ಡೋಜರ್‌ಗಳ ಮೇಲೆ ಕಲ್ಲೆಸೆದಿದ್ದಾರೆ. ಇದರಿಂದ ಮೂರು ಬುಲ್ಡೋಜರ್‌ಗಳು ಹಾನಿಗೊಳಗಾಗಿವೆ. ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ.

ಸ್ವತಂತ್ರ ಶಾಸಕ ಮತ್ತು ರೈಜೋರ್ ದಳದ ಮುಖ್ಯಸ್ಥ ಅಖಿಲ್ ಗೊಗೊಯ್ ಮಂಗಳವಾರ ತೆರವು ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳಾಂತರಗೊಂಡವರಿಗೆ ಪುನರ್ವಸತಿಗಾಗಿ 165 ಎಕರೆ ಮಂಜೂರು ಮಾಡುವಂತೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ವಿನಂತಿಸುವುದಾಗಿ ಹೇಳಿದ್ದಾರೆ.

ತೆರವು ಕಾರ್ಯಾಚರಣೆ ಸ್ಥಳಕ್ಕೆ ಭೇಟಿ ನೀಡಿದ್ದ ವೇಳೆ ಗೊಗೊಯ್ ಅವರನ್ನು ಪೊಲೀಸರು ಕೆಲಕಾಲ ವಶಕ್ಕೆ ಪಡೆದಿದ್ದರು.

“ಈ ತೆರವು ಕಾರ್ಯಾಚರಣೆ ಕಾನೂನುಬಾಹಿರ ಮತ್ತು ಸಂವಿಧಾನಬಾಹಿರ” ಎಂದು ಶಾಸಕ ಗೊಗೊಯ್ ಆರೋಪಿಸಿದ್ದು, “ಈ ಪ್ರಕರಣ ಗುವಾಹಟಿ ಹೈಕೋರ್ಟ್‌ನಲ್ಲಿ ಬಾಕಿ ಇದೆ. ಹಿಮಂತ ಬಿಸ್ವಾ ಶರ್ಮಾ ಸರ್ಕಾರವು ಕಾನೂನುಬಾಹಿರವಾಗಿ ಮನೆಗಳನ್ನು ಕೆಡವುತ್ತಿದೆ” ಎಂದಿದ್ದಾರೆ.

ಹಿಂದೂ ಮತಗಳನ್ನು ಸೆಳೆಯಲು ಮುಸ್ಲಿಮರ ವಿರುದ್ಧ ಇಂತಹ ಸ್ಥಳಾಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡಿದೆ. ಏಕೆಂದರೆ ಅವರು ‘ಮುಸ್ಲಿಮರು’ ಎಂದು ಗೊಗೊಯ್ ದೂರಿದ್ದಾರೆ.

ಈ ನಡುವೆ, ಗೋಲ್‌ಪಾರ ಜಿಲ್ಲೆಯ ಮೀಸಲು ಅರಣ್ಯ ಪ್ರದೇಶವಾದ ಪೈಕರ್ ಪ್ರದೇಶದಲ್ಲಿ ಜುಲೈ 10ರಂದು ರಾಜ್ಯ ಸರ್ಕಾರವು ಮತ್ತೊಂದು ತೆರವು ಕಾರ್ಯಾಚರಣೆಯನ್ನು ಕೈಗೊಳ್ಳಲಿದೆ ಎಂದು ಸಿಎಂ ಶರ್ಮಾ ಹೇಳಿದ್ದಾರೆ.

“ನಮ್ಮ ಗುರಿ ಅತಿಕ್ರಮಣಗೊಂಡ ಭೂಮಿಯನ್ನು ತೆರವುಗೊಳಿಸಿ ಸಾರ್ವಜನಿಕ ಉದ್ದೇಶಕ್ಕೆ ಬಳಸುವುದು. ನಾವು ಅಸ್ಸಾಂನ ಸ್ಥಳೀಯ ಜನರೊಂದಿಗೆ ಇದ್ದೇವೆ. ಆದರೆ, ಶಾಸಕ ಅಖಿಲ್ ಗೊಗೊಯ್ ನಿರ್ದಿಷ್ಟ ಸಮುದಾಯವನ್ನು ಪ್ರತಿನಿಧಿಸುತ್ತಿದ್ದಾರೆ. ನಮ್ಮ ರಾಜಕೀಯ ಸಿದ್ಧಾಂತದಂತೆ ನಾವು ನಮ್ಮ ಕೆಲಸವನ್ನು ಮುಂದುವರಿಸುತ್ತೇವೆ” ಎಂದು ಸಿಎಂ ತಿಳಿಸಿದ್ದಾರೆ.

ಬ್ರಹ್ಮಪುತ್ರ ನದಿಯಿಂದ ಉಂಟಾದ ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡು ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿದ್ದ ಚಾರುಬಖ್ರ ಜಂಗಲ್ ಬ್ಲಾಕ್ ಗ್ರಾಮದ ಸುಮಾರು 400 ನಿವಾಸಿಗಳು ಏಪ್ರಿಲ್‌ನಲ್ಲಿ ತೆರವು ನೋಟಿಸ್‌ಗಳ ವಿರುದ್ಧ ಗುವಾಹಟಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಜಿಲ್ಲಾಡಳಿತದ ಕ್ರಮವು ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲಂಘಿಸುತ್ತದೆ ಎಂದು ನಿವಾಸಿಗಳು ಆರೋಪಿಸಿದ್ದಾರೆ.

ಈ ಪ್ರಕರಣ ಇನ್ನೂ ಹೈಕೋರ್ಟ್‌ನಲ್ಲಿ ವಿಚಾರಣೆಯಲ್ಲಿದೆ. ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್, ಅಪರಾಧಗಳ ಆರೋಪ ಹೊತ್ತಿರುವ ವ್ಯಕ್ತಿಗಳ ಆಸ್ತಿಗಳನ್ನು ಶಿಕ್ಷಾರ್ಹ ಕ್ರಮವಾಗಿ ಕೆಡವುವ ಪದ್ಧತಿಯನ್ನು ಕಾನೂನುಬಾಹಿರ ಎಂದು ಹೇಳಿತ್ತು. ತೆರವು ಕಾರ್ಯಾಚರಣೆಗೂ ಮುನ್ನ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಹೇಳಿತ್ತು.

ಕಳೆದ 30 ದಿನಗಳಲ್ಲಿ ಅಸ್ಸಾಂನಲ್ಲಿ ನಡೆದ ನಾಲ್ಕನೇ ಪ್ರಮುಖ ತೆರವು ಕಾರ್ಯಾಚರಣೆ ಇದಾಗಿದೆ.

ಜೂನ್ 16 ರಂದು, ಗೋಲ್ಪಾರದಲ್ಲಿ ಅಧಿಕಾರಿಗಳು 690 ಕುಟುಂಬಗಳ ಮನೆಗಳನ್ನು ಕೆಡವಿದ್ದರು. ಅವರೆಲ್ಲವೂ ಬಂಗಾಳಿ ಮೂಲದ ಮುಸ್ಲಿಮರಿಗೆ ಸೇರಿದ್ದಾಗಿವೆ. ಹಸಿಲಾ ಬೀಲ್ ಎಂಬ ಜೌಗು ಪ್ರದೇಶದಲ್ಲಿ ಅತಿಕ್ರಮಣ ಮಾಡಲಾಗಿತ್ತು ಎಂದು ಹೇಳಲಾದ ಭೂಮಿಯಲ್ಲಿ ಅವರು ವಾಸಿಸುತ್ತಿದ್ದರು.

ಈ ಪ್ರದೇಶವನ್ನು ಜೌಗು ಪ್ರದೇಶವೆಂದು ಘೋಷಿಸುವ ಮೊದಲೇ ಅಲ್ಲಿ ವಾಸಿಸುತ್ತಿದ್ದೆವು ಎಂದು ಅನೇಕ ಕುಟುಂಬಗಳು ಹೇಳಿದ್ದಾಗಿ scroll.in ತಿಳಿಸಿದೆ.

ಜೂನ್ 30 ರಂದು ಅಸ್ಸಾಂನ ನಲ್ಬರಿ ಜಿಲ್ಲೆಯಲ್ಲಿ ಬರ್ಖೇತ್ರಿ ಕಂದಾಯ ವ್ಯಾಪ್ತಿಯ ಸುಮಾರು 150 ಎಕರೆ ಅತಿಕ್ರಮಣ ತೆರವು ಮಾಡಲಾಗಿತ್ತು. ಇಲ್ಲಿಯೂ ಬಂಗಾಳಿ ಮೂಲದ ಮುಸ್ಲಿಮರ ತೊಂಬತ್ತಮೂರು ಮನೆಗಳನ್ನು ಕೆಡವಲಾಗಿದೆ.

ಕಳೆದ ಗುರುವಾರ, ಅಪ್ಪರ್ ಅಸ್ಸಾಂನ ಲಖಿಂಪುರ ಜಿಲ್ಲೆಯಲ್ಲಿ ನಡೆದ ಅತಿಕ್ರಮಣ ತೆರವು ಕಾರ್ಯಾಚರಣೆಯಲ್ಲಿ 220 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ನಾಲ್ಕು ಸ್ಥಳಗಳ 77 ಎಕರೆ ಭೂಮಿಯಲ್ಲಿ ಈ ಕುಟುಂಬಗಳು ವಾಸಿಸುತ್ತಿದ್ದವು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

2016ರಲ್ಲಿ ಅಸ್ಸಾಂನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ, 2016 ಮತ್ತು ಆಗಸ್ಟ್ 2024ರ ನಡುವೆ 10,620ಕ್ಕೂ ಹೆಚ್ಚು ಕುಟುಂಬಗಳನ್ನು (ಅವುಗಳಲ್ಲಿ ಹೆಚ್ಚಿನವು ಮುಸ್ಲಿಮರು) ಸರ್ಕಾರಿ ಭೂಮಿಯಿಂದ ಸ್ಥಳಾಂತರಿಸಲಾಗಿದೆ ಎಂದು ರಾಜ್ಯ ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಒದಗಿಸಿದ ಅಂಕಿಅಂಶಗಳು ತಿಳಿಸಿವೆ.

‘ಲವ್ ಜಿಹಾದ್’ ಆರೋಪ: ಹರಿಯಾಣದಲ್ಲಿ ಮುಸ್ಲಿಂ ಕುಟುಂಬದ ಮನೆಗಳಿಗೆ ಬೆಂಕಿ – ಆಸ್ತಿಪಾಸ್ತಿ ನಷ್ಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...