Homeಮುಖಪುಟಗುಜರಾತ್‌ನಲ್ಲಿ ಮತ್ತೊಂದು ಸೇತುವೆ ಕುಸಿತ: ನದಿಗೆ ಬಿದ್ದ ವಾಹನಗಳು; 9 ಸಾವು

ಗುಜರಾತ್‌ನಲ್ಲಿ ಮತ್ತೊಂದು ಸೇತುವೆ ಕುಸಿತ: ನದಿಗೆ ಬಿದ್ದ ವಾಹನಗಳು; 9 ಸಾವು

- Advertisement -
- Advertisement -

ಗುಜರಾತ್‌ನ ವಡೋದರಾ ಜಿಲ್ಲೆಯ ಮುಜ್‌ಪುರ ಬಳಿ ನಾಲ್ಕು ದಶಕಗಳಷ್ಟು ಹಳೆಯದಾದ ‘ಗಂಭೀರ ಸೇತುವೆ’ಯ ಒಂದು ಭಾಗ ಬುಧವಾರ (ಜು.9) ಬೆಳಿಗ್ಗೆ ಕುಸಿದಿದ್ದು, ಹಲವು ವಾಹನಗಳು ನದಿಗೆ ಬಿದ್ದಿವೆ.

ಘಟನೆಯಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಐವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಠಾತ್ ಸೇತುವೆ ಕುಸಿದ ಪರಿಣಾಮ ಎರಡು ಟ್ರಕ್‌ಗಳು, ಒಂದು ಪಿಕಪ್ ವ್ಯಾನ್ ಮತ್ತು ಇನ್ನೊಂದು ವಾಹನ ನದಿಗೆ ಬಿದ್ದಿವೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಗ್ರಾಮಸ್ಥರು ಜನರ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು. ನಂತರ, ಪೊಲೀಸರು ಮತ್ತು ರಕ್ಷಣಾ ತಂಡಗಳು ಕಾರ್ಯಾಚರಣೆ ಪ್ರಾರಂಭಿಸಿದವು ಎಂದು ವರದಿಗಳು ಹೇಳಿವೆ.

ಮಧ್ಯ ಗುಜರಾತ್ ಮತ್ತು ಸೌರಾಷ್ಟ್ರ ಪ್ರದೇಶಗಳನ್ನು ಸಂಪರ್ಕಿಸುವ ಗಂಭೀರ ಸೇತುವೆಯ ಸ್ಲ್ಯಾಬ್ ಕುಸಿದು ದುರಂತ ಸಂಭವಿಸಿದೆ. ಘಟನೆಯಲ್ಲಿ ಐದರಿಂದ ಆರು ವಾಹನಗಳು ಮಹಿಸಾಗರ್ ನದಿಗೆ ಬಿದ್ದಿವೆ ಎಂದು ಗುಜರಾತ್ ಆರೋಗ್ಯ ಸಚಿವ ರುಷಿಕೇಶ್ ಪಟೇಲ್ ತಿಳಿಸಿದ್ದಾರೆ.

ಗಂಭೀರ ಸೇತುವೆ ಬಹಳ ಹಿಂದಿನಿಂದಲೂ ಅಪಾಯಕಾರಿ ಶಿಥಿಲಾವಸ್ಥೆಯಲ್ಲಿತ್ತು. ಸ್ಥಳೀಯರು ಆ ಬಗ್ಗೆ ಪದೇ ಪದೇ ಎಚ್ಚರಿಕೆ ನೀಡುತ್ತಿದ್ದರು. ತುರ್ತು ದುರಸ್ತಿ ಮಾಡಿ ಇಲ್ಲಾ ಹೊಸ ಸೇತುವೆ ನಿರ್ಮಿಸಿ ಎಂದು ಮನವಿ ಮಾಡುತ್ತಿದ್ದರು. ಆದರೆ, ಅವರ ಎಚ್ಚರಿಕೆಗಳನ್ನು ಆಡಳಿತ ನಿರ್ಲಕ್ಷಿಸಿತ್ತು.

ಈಗ ಸೇತುವೆ ಕುಸಿದು ಪರಿಸ್ಥಿತಿ ಗಂಭೀರವಾಗಿದೆ. ಪ್ರಮುಖ ಜಿಲ್ಲೆಗಳಾದ ಆನಂದ್, ವಡೋದರಾ, ಭರೂಚ್ ಮತ್ತು ಅಂಕಲೇಶ್ವರವನ್ನು ಸೌರಾಷ್ಟ್ರಕ್ಕೆ ಸಂಪರ್ಕಿಸುವ ಪ್ರಮುಖ ಕೊಂಡಿ ಮುರಿದಿದೆ. ಪ್ರಾದೇಶಿಕ ಸಾರಿಗೆ ಮತ್ತು ವಾಣಿಜ್ಯ ವ್ಯವಹಾರ ಸ್ಥಗಿತಗೊಂಡಿದೆ.

ಸೇತುವೆಯನ್ನು 1985ರಲ್ಲಿ ನಿರ್ಮಿಸಲಾಗಿದ್ದು, ಅಗತ್ಯವಿದ್ದಾಗ ಮತ್ತು ನಿಯತಕಾಲಿಕವಾಗಿ ಅದರ ನಿರ್ವಹಣೆಯನ್ನು ಕೈಗೊಳ್ಳಲಾಗುತ್ತಿತ್ತು ಎಂದು ಆರೋಗ್ಯ ಸಚಿವ ಋಷಿಕೇಶ್ ಪಟೇಲ್ ಹೇಳಿದ್ದಾರೆ. “ಘಟನೆಯ ಹಿಂದಿನ ನಿಖರವಾದ ಕಾರಣದ ಕುರಿತು ತನಿಖೆ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

ತಾಂತ್ರಿಕ ತಜ್ಞರು ಸ್ಥಳಕ್ಕೆ ತೆರಳಿ ಸೇತುವೆ ಕುಸಿತದ ಕಾರಣದ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ನಿರ್ದೇಶಿಸಿದ್ದಾರೆ ಎಂದು ಸಚಿವ ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ತಂಡವು ರಕ್ಷಣಾ ಸಲಕರಣೆಗಳೊಂದಿಗೆ ಘಟನಾ ಸ್ಥಳಕ್ಕೆ ತೆರಳಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಅಸ್ಸಾಂ: 1,400 ಬಂಗಾಳಿ ಮುಸ್ಲಿಂ ಕುಟುಂಬಗಳ ಮನೆಗಳು ನೆಲಸಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...