Homeಕರ್ನಾಟಕ"ಬೇಟಿ ಬಚಾವೋ" ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು: ಬಿ.ಕೆ ಹರಿಪ್ರಸಾದ್

“ಬೇಟಿ ಬಚಾವೋ” ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು: ಬಿ.ಕೆ ಹರಿಪ್ರಸಾದ್

- Advertisement -
- Advertisement -

“ಬೇಟಿ ಬಚಾವೋ” ಎಂದು ಕೇಂದ್ರದ ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು ಅಲ್ಲವೇ.? ಅಸಲಿಗೂ ನಾರಿ ಶಕ್ತಿಯಿಂದ ಬೆದರಿ ಬೆಂಡಾಗಿರುವುದು ನಿಮ್ಮದೇ ಪಕ್ಷದ ನಾಯಕರೇ ಹೊರತು ಸಾಮಾನ್ಯ ಜನರಲ್ಲ. ಅಷ್ಟಕ್ಕೂ ನಿಮ್ಮ ಪಕ್ಷದ ಘಟಾನುಘಟಿ 19 ನಾಯಕರು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತರಲು ಯಾವ ನಾರಿ ಶಕ್ತಿ ಅಡ್ಡ ಬಂದಿದೆ ಒಮ್ಮೆ ಜನರಿಗೆ ಹೇಳುವ ಧೈರ್ಯ ಮಾಡಿ ಎಂದು ಕಾಂಗ್ರೆಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರು ಕಾರ್ಕಳದ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ಅವರಿಗೆ ಸವಾಲು ಹಾಕಿದ್ದಾರೆ.

ತನ್ನ ವಿರುದ್ಧ ಸುನೀಲ್ ಕುಮಾರ್ ‘ಎಕ್ಸ್’ನಲ್ಲಿ ಮಾಡಿರುವ ಟೀಕೆಗೆ ‘ಫೇಸ್ ಬುಕ್ ಖಾತೆಯಲ್ಲಿ ತಿರುಗೇಟು ನೀಡಿರುವ ಬಿ.ಕೆ ಹರಿಪ್ರಸಾದ್, “ನಾನು ಚುನಾವಣಾ ಕಲಿ ಆಗದೇ ಇದ್ದರೂ ಪರವಾಗಿಲ್ಲ, ಆದರೆ ನಿಮ್ಮಂತೆ ‘ಪರಶುರಾಮನ’ ಕಲಿಯಂತೂ ಆಗಲಾರೆ. ಬಿಜೆಪಿಯ ಅಧ್ಯಕ್ಷ ಸ್ಥಾನಕ್ಕೆ ಅರ್ಧನಾರೀಶ್ವರನ್ನಾದರೂ ಮಾಡಲಿ ಎಂದು ಹೇಳುವ ಬದಲು ‘ಅರ್ಧನಾರೀಶ್ವರ ಪ್ರತಿಮೆ’ ಮಾಡಲಿ ಎಂದು ಹೇಳಿಕೆ ಕೊಟ್ಟಿದ್ದರೆ ಬಹುಶಃ ನಿಮಿಗೆ ಲಾಭವಾಗುತ್ತಿತ್ತು” ಎಂದು ಕುಟುಕಿದ್ದಾರೆ.

“ನಾರಿ ಶಕ್ತಿ, ನಾರಿ ತತ್ವದ ಉಪದೇಶ ನಿಮ್ಮ ಸಂಘದ ಸರ ಸಂಘ ಸಂಚಾಲಕರಿಗೆ ಮಾಡುವಿರಂತೆ, ಇಲ್ಲಿಯವರೆಗೂ ಬಿಜೆಪಿ ಪಕ್ಷ ಒಬ್ಬೇ ಒಬ್ಬ ಮಹಿಳೆಯನ್ನ ಯಾಕೆ ಅಧ್ಯಕ್ಷರನ್ನಾಗಿ ಮಾಡಿಲ್ಲ ಎಂಬ ಪ್ರಶ್ನೆಗೆ ಉತ್ತರ ಇದ್ಯಾ? ಅಥವಾ “ಮಹಿಳೆ ನಾಲ್ಕು ಗೋಡೆಯಲ್ಲೇ ಬದುಕಬೇಕು” ಎಂದು ಮೋಹನ್ ಭಾಗವತ್ ಹೇಳಿಕೆಯಲ್ಲೇ ಉತ್ತರವಿದ್ಯಾ?” ಎಂದು ಪ್ರಶ್ನಿಸಿದ್ದಾರೆ.

“ಮಹಿಳೆಯರಿಗೆ ಗೌರವ ನೀಡುವ, ಸ್ಥಾನಮಾನ ಕೊಡುವ, ಸ್ವಾಭಿಮಾನದ ಬದುಕಿಗೆ ಅರ್ಥ ನೀಡುವ ಯಾವ ಮಾನದಂಡವೂ ಬಿಜೆಪಿಯ ಡಿಎನ್‌ಎ ಅಲ್ಲೇ ಇಲ್ಲ. ಅಷ್ಟಕ್ಕೂ ರಾಮ-ಪರಶುರಾಮನ ಮೂರ್ತಿ ಪ್ರತಿಷ್ಠಾಪನೆ ಮಾಡಿ ಅಮಾಯಕ ಜನರ ತೆರಿಗೆ ಹಣವನ್ನು ಜೇಬಿಗೆ ಇಳಿಸಿಕೊಂಡಂತೆ ಸುಲಭವಲ್ಲ ನಾರಿ ಶಕ್ತಿ ಬಗ್ಗೆ ಮಾತಾಡುವುದು. ಕರಾವಳಿಯ ಬಿಜೆಪಿ ಯುವಕರ ಪಟಾಲಂ ಮಹಿಳೆಯರನ್ನ, ಯುವತಿಯರನ್ನ ಯಾಮಾರಿಸಿ ಅತ್ಯಾಚಾರ ನಡೆಸಿ ಮೋಸ ಮಾಡುತ್ತಿರುವುದರ ವಿರುದ್ಧ ತುಟಿ ಬಿಚ್ಚದ ನಿಮಿಗೆ ಅದ್ಯಾವ ನಾರಿ ಶಕ್ತಿ, ನಾರಿ ತತ್ವದ ಬಗ್ಗೆ ಮಾತಾಡುವ ನೈತಿಕತೆ ಇದೆ?” ಎಂದು ಟೀಕಾ ಪ್ರಹಾರ ಮಾಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಮಹಿಳಾ ನಾಯಕಿಯರನ್ನು ನೇಮಕ ಮಾಡುವ ಕುರಿತು ಕೇಂದ್ರ ಬಿಜೆಪಿ ನಾಯಕರು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಬಿ.ಕೆ ಹರಿಪ್ರಸಾದ್, “ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅರ್ಧನಾರೀಶ್ವರರನ್ನು ಬೇಕಾದರು ಹುಡುಕಿಕೊಳ್ಳಲಿ” ಎಂದಿದ್ದರು.

ಇದಕ್ಕೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಿರುಗೇಟು ನೀಡಿದ್ದ ಸುನೀಲ್ ಕುಮಾರ್, “ಮಾನ್ಯ ಹರಿಪ್ರಸಾದ್ ಅವರೇ, ಮೊದಲನೆಯದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಸ್ಥಾನ ಖಾಲಿ ಇಲ್ಲ. ಅಧ್ಯಕ್ಷರ ಆಯ್ಕೆ ಮಾಡುವುದಕ್ಕೆ ಬಿಜೆಪಿ ತನ್ನದೇ ಆದ ನಿಯಮ ಹಾಗೂ ಪದ್ಧತಿಯನ್ನು ಹೊಂದಿದ್ದು ಆ ಪ್ರಕ್ರಿಯೆಯ ಭಾಗ ಈಗ ಅಂತಿಮ ಹಂತಕ್ಕೆ ತಲುಪಿದೆ. ”

“ದಶಕಗಳ ಕಾಲ ಎಐಸಿಸಿ ಅಖಾಡದಲ್ಲಿ ಅಲೆದಾಡಿದ ನಿಮಗೆ ಪ್ರತಿಸ್ಪರ್ಧಿ ರಾಜಕೀಯ ಪಕ್ಷವೊಂದರ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ ಎಂಬ ಬಗ್ಗೆ ಸಾಮಾನ್ಯ ಜ್ಞಾನದ ಕೊರತೆ ಇರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ” ಎಂದಿದ್ದರು.

“ಇನ್ನು ಎರಡನೆಯದಾಗಿ ತಾವು ಬಿಜೆಪಿಯನ್ನು ಟೀಕಿಸುವ ಭರದಲ್ಲಿ ” ಅರ್ಧನಾರೀಶ್ವರ” ನನ್ನು ಬೇಕಾದರೂ ಅಧ್ಯಕ್ಷರನ್ನಾಗಿ ಮಾಡಿಕೊಳ್ಳಲಿ ಎಂದು ಹೇಳುವ ಮೂಲಕ ಭಾರತೀಯ ತತ್ವಶಾಸ್ತ್ರದ ಮಹೋನ್ನತ ಚಿಂತನೆಯೊಂದನ್ನು ಅಣಕ ಮಾಡಿದ್ದೀರಿ. ಅರ್ಧನಾರೀಶ್ವರ ಎಂಬುದರ ಅರ್ಥ ವಿಸ್ತಾರವನ್ನು ನಿಮಗೆ ಪಾಠ ಮಾಡಬೇಕಾದ ಅನಿವಾರ್ಯತೆ ನಮಗಿಲ್ಲ”

“ಆದರೆ ಈ ಪದವನ್ನು ವ್ಯಂಗ್ಯಕ್ಕೆ ಬಳಸಿಕೊಂಡ ನೀವು ನಾರೀ ಶಕ್ತಿ ಹಾಗೂ ನಾರಿ ತತ್ವವನ್ನೇ ಅಪಮಾನಕ್ಕೆ ಗುರಿ ಮಾಡಿದ್ದೀರಿ. ಇತ್ತೀಚಿನ ದಿನಗಳಲ್ಲಿ ಅತೀವವಾಗಿ ಮಹಿಳಾಪರ ಕಾಳಜಿ ವ್ಯಕ್ತಪಡಿಸುತ್ತಿರುವ ನಿಮ್ಮ ಪಕ್ಷ ಈ ವಿಚಾರವನ್ನು ಹೇಗೆ ಗ್ರಹಿಸುತ್ತದೆ ಎಂಬ ಬಗ್ಗೆ ಸ್ಪಷ್ಟನೆ ನೀಡಿ ಎಂದು ನಾವು ಬಯಸುವುದಿಲ್ಲ” ಎಂದು ಹೇಳಿದ್ದರು.

ಸುನೀಲ್ ಕುಮಾರ್ ಅವರ ಮೇಲಿನ ಪೋಸ್ಟ್‌ಗೆ ಹರಿಪ್ರಸಾದ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿವಾದ: 11 ದಾಖಲೆಗಳಲ್ಲಿ 5ರಲ್ಲಿ ಜನ್ಮ ದಿನಾಂಕ ಇಲ್ಲ, 25% ಮತದಾರರ ಹೆಸರು ಡಿಲೀಟ್ ಆತಂಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...