Homeಕರ್ನಾಟಕ"ಬೇಟಿ ಬಚಾವೋ" ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು: ಬಿ.ಕೆ ಹರಿಪ್ರಸಾದ್

“ಬೇಟಿ ಬಚಾವೋ” ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು: ಬಿ.ಕೆ ಹರಿಪ್ರಸಾದ್

- Advertisement -
- Advertisement -

“ಬೇಟಿ ಬಚಾವೋ” ಎಂದು ಕೇಂದ್ರದ ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು ಅಲ್ಲವೇ.? ಅಸಲಿಗೂ ನಾರಿ ಶಕ್ತಿಯಿಂದ ಬೆದರಿ ಬೆಂಡಾಗಿರುವುದು ನಿಮ್ಮದೇ ಪಕ್ಷದ ನಾಯಕರೇ ಹೊರತು ಸಾಮಾನ್ಯ ಜನರಲ್ಲ. ಅಷ್ಟಕ್ಕೂ ನಿಮ್ಮ ಪಕ್ಷದ ಘಟಾನುಘಟಿ 19 ನಾಯಕರು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತರಲು ಯಾವ ನಾರಿ ಶಕ್ತಿ ಅಡ್ಡ ಬಂದಿದೆ ಒಮ್ಮೆ ಜನರಿಗೆ ಹೇಳುವ ಧೈರ್ಯ ಮಾಡಿ ಎಂದು ಕಾಂಗ್ರೆಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರು ಕಾರ್ಕಳದ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ಅವರಿಗೆ ಸವಾಲು ಹಾಕಿದ್ದಾರೆ.

ತನ್ನ ವಿರುದ್ಧ ಸುನೀಲ್ ಕುಮಾರ್ ‘ಎಕ್ಸ್’ನಲ್ಲಿ ಮಾಡಿರುವ ಟೀಕೆಗೆ ‘ಫೇಸ್ ಬುಕ್ ಖಾತೆಯಲ್ಲಿ ತಿರುಗೇಟು ನೀಡಿರುವ ಬಿ.ಕೆ ಹರಿಪ್ರಸಾದ್, “ನಾನು ಚುನಾವಣಾ ಕಲಿ ಆಗದೇ ಇದ್ದರೂ ಪರವಾಗಿಲ್ಲ, ಆದರೆ ನಿಮ್ಮಂತೆ ‘ಪರಶುರಾಮನ’ ಕಲಿಯಂತೂ ಆಗಲಾರೆ. ಬಿಜೆಪಿಯ ಅಧ್ಯಕ್ಷ ಸ್ಥಾನಕ್ಕೆ ಅರ್ಧನಾರೀಶ್ವರನ್ನಾದರೂ ಮಾಡಲಿ ಎಂದು ಹೇಳುವ ಬದಲು ‘ಅರ್ಧನಾರೀಶ್ವರ ಪ್ರತಿಮೆ’ ಮಾಡಲಿ ಎಂದು ಹೇಳಿಕೆ ಕೊಟ್ಟಿದ್ದರೆ ಬಹುಶಃ ನಿಮಿಗೆ ಲಾಭವಾಗುತ್ತಿತ್ತು” ಎಂದು ಕುಟುಕಿದ್ದಾರೆ.

“ನಾರಿ ಶಕ್ತಿ, ನಾರಿ ತತ್ವದ ಉಪದೇಶ ನಿಮ್ಮ ಸಂಘದ ಸರ ಸಂಘ ಸಂಚಾಲಕರಿಗೆ ಮಾಡುವಿರಂತೆ, ಇಲ್ಲಿಯವರೆಗೂ ಬಿಜೆಪಿ ಪಕ್ಷ ಒಬ್ಬೇ ಒಬ್ಬ ಮಹಿಳೆಯನ್ನ ಯಾಕೆ ಅಧ್ಯಕ್ಷರನ್ನಾಗಿ ಮಾಡಿಲ್ಲ ಎಂಬ ಪ್ರಶ್ನೆಗೆ ಉತ್ತರ ಇದ್ಯಾ? ಅಥವಾ “ಮಹಿಳೆ ನಾಲ್ಕು ಗೋಡೆಯಲ್ಲೇ ಬದುಕಬೇಕು” ಎಂದು ಮೋಹನ್ ಭಾಗವತ್ ಹೇಳಿಕೆಯಲ್ಲೇ ಉತ್ತರವಿದ್ಯಾ?” ಎಂದು ಪ್ರಶ್ನಿಸಿದ್ದಾರೆ.

“ಮಹಿಳೆಯರಿಗೆ ಗೌರವ ನೀಡುವ, ಸ್ಥಾನಮಾನ ಕೊಡುವ, ಸ್ವಾಭಿಮಾನದ ಬದುಕಿಗೆ ಅರ್ಥ ನೀಡುವ ಯಾವ ಮಾನದಂಡವೂ ಬಿಜೆಪಿಯ ಡಿಎನ್‌ಎ ಅಲ್ಲೇ ಇಲ್ಲ. ಅಷ್ಟಕ್ಕೂ ರಾಮ-ಪರಶುರಾಮನ ಮೂರ್ತಿ ಪ್ರತಿಷ್ಠಾಪನೆ ಮಾಡಿ ಅಮಾಯಕ ಜನರ ತೆರಿಗೆ ಹಣವನ್ನು ಜೇಬಿಗೆ ಇಳಿಸಿಕೊಂಡಂತೆ ಸುಲಭವಲ್ಲ ನಾರಿ ಶಕ್ತಿ ಬಗ್ಗೆ ಮಾತಾಡುವುದು. ಕರಾವಳಿಯ ಬಿಜೆಪಿ ಯುವಕರ ಪಟಾಲಂ ಮಹಿಳೆಯರನ್ನ, ಯುವತಿಯರನ್ನ ಯಾಮಾರಿಸಿ ಅತ್ಯಾಚಾರ ನಡೆಸಿ ಮೋಸ ಮಾಡುತ್ತಿರುವುದರ ವಿರುದ್ಧ ತುಟಿ ಬಿಚ್ಚದ ನಿಮಿಗೆ ಅದ್ಯಾವ ನಾರಿ ಶಕ್ತಿ, ನಾರಿ ತತ್ವದ ಬಗ್ಗೆ ಮಾತಾಡುವ ನೈತಿಕತೆ ಇದೆ?” ಎಂದು ಟೀಕಾ ಪ್ರಹಾರ ಮಾಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಮಹಿಳಾ ನಾಯಕಿಯರನ್ನು ನೇಮಕ ಮಾಡುವ ಕುರಿತು ಕೇಂದ್ರ ಬಿಜೆಪಿ ನಾಯಕರು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಬಿ.ಕೆ ಹರಿಪ್ರಸಾದ್, “ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅರ್ಧನಾರೀಶ್ವರರನ್ನು ಬೇಕಾದರು ಹುಡುಕಿಕೊಳ್ಳಲಿ” ಎಂದಿದ್ದರು.

ಇದಕ್ಕೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಿರುಗೇಟು ನೀಡಿದ್ದ ಸುನೀಲ್ ಕುಮಾರ್, “ಮಾನ್ಯ ಹರಿಪ್ರಸಾದ್ ಅವರೇ, ಮೊದಲನೆಯದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಸ್ಥಾನ ಖಾಲಿ ಇಲ್ಲ. ಅಧ್ಯಕ್ಷರ ಆಯ್ಕೆ ಮಾಡುವುದಕ್ಕೆ ಬಿಜೆಪಿ ತನ್ನದೇ ಆದ ನಿಯಮ ಹಾಗೂ ಪದ್ಧತಿಯನ್ನು ಹೊಂದಿದ್ದು ಆ ಪ್ರಕ್ರಿಯೆಯ ಭಾಗ ಈಗ ಅಂತಿಮ ಹಂತಕ್ಕೆ ತಲುಪಿದೆ. ”

“ದಶಕಗಳ ಕಾಲ ಎಐಸಿಸಿ ಅಖಾಡದಲ್ಲಿ ಅಲೆದಾಡಿದ ನಿಮಗೆ ಪ್ರತಿಸ್ಪರ್ಧಿ ರಾಜಕೀಯ ಪಕ್ಷವೊಂದರ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ ಎಂಬ ಬಗ್ಗೆ ಸಾಮಾನ್ಯ ಜ್ಞಾನದ ಕೊರತೆ ಇರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ” ಎಂದಿದ್ದರು.

“ಇನ್ನು ಎರಡನೆಯದಾಗಿ ತಾವು ಬಿಜೆಪಿಯನ್ನು ಟೀಕಿಸುವ ಭರದಲ್ಲಿ ” ಅರ್ಧನಾರೀಶ್ವರ” ನನ್ನು ಬೇಕಾದರೂ ಅಧ್ಯಕ್ಷರನ್ನಾಗಿ ಮಾಡಿಕೊಳ್ಳಲಿ ಎಂದು ಹೇಳುವ ಮೂಲಕ ಭಾರತೀಯ ತತ್ವಶಾಸ್ತ್ರದ ಮಹೋನ್ನತ ಚಿಂತನೆಯೊಂದನ್ನು ಅಣಕ ಮಾಡಿದ್ದೀರಿ. ಅರ್ಧನಾರೀಶ್ವರ ಎಂಬುದರ ಅರ್ಥ ವಿಸ್ತಾರವನ್ನು ನಿಮಗೆ ಪಾಠ ಮಾಡಬೇಕಾದ ಅನಿವಾರ್ಯತೆ ನಮಗಿಲ್ಲ”

“ಆದರೆ ಈ ಪದವನ್ನು ವ್ಯಂಗ್ಯಕ್ಕೆ ಬಳಸಿಕೊಂಡ ನೀವು ನಾರೀ ಶಕ್ತಿ ಹಾಗೂ ನಾರಿ ತತ್ವವನ್ನೇ ಅಪಮಾನಕ್ಕೆ ಗುರಿ ಮಾಡಿದ್ದೀರಿ. ಇತ್ತೀಚಿನ ದಿನಗಳಲ್ಲಿ ಅತೀವವಾಗಿ ಮಹಿಳಾಪರ ಕಾಳಜಿ ವ್ಯಕ್ತಪಡಿಸುತ್ತಿರುವ ನಿಮ್ಮ ಪಕ್ಷ ಈ ವಿಚಾರವನ್ನು ಹೇಗೆ ಗ್ರಹಿಸುತ್ತದೆ ಎಂಬ ಬಗ್ಗೆ ಸ್ಪಷ್ಟನೆ ನೀಡಿ ಎಂದು ನಾವು ಬಯಸುವುದಿಲ್ಲ” ಎಂದು ಹೇಳಿದ್ದರು.

ಸುನೀಲ್ ಕುಮಾರ್ ಅವರ ಮೇಲಿನ ಪೋಸ್ಟ್‌ಗೆ ಹರಿಪ್ರಸಾದ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿವಾದ: 11 ದಾಖಲೆಗಳಲ್ಲಿ 5ರಲ್ಲಿ ಜನ್ಮ ದಿನಾಂಕ ಇಲ್ಲ, 25% ಮತದಾರರ ಹೆಸರು ಡಿಲೀಟ್ ಆತಂಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...