Homeಮುಖಪುಟಮಹಾರಾಷ್ಟ್ರ | ಕ್ಯಾಂಟೀನ್ ಸಿಬ್ಬಂದಿಗೆ ಥಳಿಸಿದ ಶಿವಸೇನೆ ಶಾಸಕ

ಮಹಾರಾಷ್ಟ್ರ | ಕ್ಯಾಂಟೀನ್ ಸಿಬ್ಬಂದಿಗೆ ಥಳಿಸಿದ ಶಿವಸೇನೆ ಶಾಸಕ

- Advertisement -
- Advertisement -

ಮುಂಬೈನ ಸರ್ಕಾರಿ ಕ್ಯಾಂಟೀನ್‌ವೊಂದರಲ್ಲಿ ಹಳಸಿದ ಆಹಾರ ನೀಡಿದ್ದಕ್ಕೆ ಆಡಳಿತಾರೂಢ ಶಿವಸೇನೆ ಶಾಸಕ ಸಂಜಯ್‌ ಗಾಯಕ್ವಾಡ್ ಸಿಬ್ಬಂದಿಗೆ ಥಳಿಸಿದ ಘಟನೆ ನಡೆದಿದೆ.

ಶಿವಸೇನೆ (ಯುಬಿಟಿ)ಯ ರಾಜ್ಯಸಭಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಈ ಕುರಿತ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ, ಅದರಲ್ಲಿ ಗಾಯಕ್ವಾಡ್ ಕ್ಯಾಂಟೀನ್ ಸಿಬ್ಬಂದಿಯ ಕಪಾಳ ಬಾರಿಸಿರುವುದು ಮತ್ತು ಬಲವಾಗಿ ಗುದ್ದಿರುವುದನ್ನು ನೋಡಬಹುದು.

“ಶಾಹ್ ಸೇನಾದ ಶಾಸಕ ಸಂಜಯ್ ಗಾಯಕ್ವಾಡ್ ಅವರನ್ನು ನೋಡಿ. ಕಳೆದ ವರ್ಷ, ಅವರು ರಾಹುಲ್ ಗಾಂಧಿಯವರ ನಾಲಿಗೆಯನ್ನು ಕತ್ತರಿಸಿದವರಿಗೆ 11 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದ್ದರು ಮತ್ತು ಬೆದರಿಕೆ ಹಾಕಿದ್ದರು. ಈಗ ಆ ವ್ಯಕ್ತಿ ಬಡ, ಅಸಹಾಯಕ ಕ್ಯಾಂಟೀನ್ ಸಿಬ್ಬಂದಿಗೆ ಹೊಡೆಯುತ್ತಿರುವುದು ಕಂಡುಬಂದಿದೆ. ಆದರೆ, ಸ್ವಲ್ಪ ಕಾಯಿರಿ – ಅವರು ಬಿಜೆಪಿ ಮಿತ್ರರಾಗಿರುವುದರಿಂದ ಯಾವುದೇ ಟಿವಿ ಸುದ್ದಿಗಳ ಆರ್ಭಟಿಸುತ್ತಿಲ್ಲ” ಎಂದು ಪ್ರಿಯಾಂಕಾ ಚತುರ್ವೇದಿ ಬರೆದುಕೊಂಡಿದ್ದಾರೆ.

ಈ ನಡುವೆ, ಹಲ್ಲೆ ಮಾಡಿರುವ ಬಗ್ಗೆ ತನಗೆ ‘ಯಾವುದೇ ವಿಷಾದವಿಲ್ಲ’ ಮತ್ತು ಯಾರಾದರೂ ಪ್ರಜಾಪ್ರಭುತ್ವದ ಭಾಷೆಯನ್ನು ಅರ್ಥಮಾಡಿಕೊಳ್ಳಲು ವಿಫಲವಾದರೆ ‘ಇದನ್ನು ಪುನರಾವರ್ತಿಸುತ್ತೇನೆ’ ಎಂದು ಶಾಸಕ ಗಾಯಕ್ವಾಡ್ ಹೇಳಿದ್ದಾರೆ.

“ರಾಜ್ಯದ ವಿವಿದೆಡೆಗಳಿಂದ ಜನರು ಇಲ್ಲಿಗೆ ಬರುತ್ತಾರೆ. ಕಾರ್ಮಿಕರು, ಅಧಿಕಾರಿಗಳು, ಎಲ್ಲರೂ ಇಲ್ಲಿಗೆ ಆಹಾರ ಸೇವಿಸಲು ಆಗಮಿಸುತ್ತಾರೆ. ಇದು ಸರ್ಕಾರಿ ಕ್ಯಾಂಟೀನ್ ಆಗಿರುವುದರಿಂದ ಇಲ್ಲಿ ಆಹಾರದ ಗುಣಮಟ್ಟ ಉತ್ತಮವಾಗಿರಬೇಕು. ನಾನು ಮಾಡಿದ್ದಕ್ಕೆ ನನಗೆ ಯಾವುದೇ ವಿಷಾದವಿಲ್ಲ. ನಾನು ಸಾರ್ವಜನಿಕ ಪ್ರತಿನಿಧಿ” ಎಂದು ಗಾಯಕ್ವಾಡ್ ಹೇಳಿದ್ದಾಗಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

“ಯಾರಾದರೂ ಪ್ರಜಾಪ್ರಭುತ್ವ ಭಾಷೆಯನ್ನು ಅರ್ಥಮಾಡಿಕೊಳ್ಳಲು ವಿಫಲರಾದಾಗ ನಾನು ಈ ರೀತಿಯ ಭಾಷೆಯನ್ನು ಬಳಸಬೇಕಾಗುತ್ತದೆ. ಅವರು ಮರಾಠಿ ಮಾತನಾಡುತ್ತಾರಾ ಅಥವಾ ಹಿಂದಿ ಮಾತನಾಡುತ್ತಾರಾ ಎಂದು ನೋಡಿ ನಾನು ಥಳಿಸಲಿಲ್ಲ” ಎಂದಿದ್ದಾರೆ.

ನಾನು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವಾರು ಬಾರಿ ದೂರು ನೀಡಿದ್ದೇನೆ. ನಾನು ಅದನ್ನು ಪುನರಾವರ್ತಿಸುತ್ತೇನೆ ಶಾಸಕ ಸಂಜಯ್ ಗಾಯಕ್ವಾಡ್ ಹೇಳಿದ್ದಾರೆ.

ಕಳೆದ ವರ್ಷ, ರಾಹುಲ್ ಗಾಂಧಿಯವರ ನಾಲಿಗೆಯನ್ನು ಕತ್ತರಿಸಿದವರಿಗೆ 11 ಲಕ್ಷ ರೂಪಾಯಿಗಳ ಬಹುಮಾನ ನೀಡುವುದಾಗಿ ಘೋಷಿಸುವ ಮೂಲಕ ಗಾಯಕ್ವಾಡ್ ಸುದ್ದಿಯಾಗಿದ್ದರು.

ಈ ವರ್ಷದ ಮಹಾರಾಷ್ಟ್ರದಲ್ಲಿ ಭಾಷಾ ವಿವಾದ ಭುಗಿಲೆದ್ದಿರುವ ಮಧ್ಯೆ ಶಾಸಕ ಹಲ್ಲೆ ಮಾಡಿದ್ದಾರೆ. ಹಾಗಾಗಿ, ಇಲ್ಲಿ ಹಿಂದಿ vs ಮರಾಠಿ ಚರ್ಚೆಗಳು ತೀವ್ರಗೊಂಡಿದೆ. ರಾಜ್ಯದಲ್ಲಿ ಹಿಂದಿ ಮಾತನಾಡುವ ವ್ಯಕ್ತಿಗಳಿಗೆ ರಾಜಕೀಯ ನಾಯಕರು ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಮಂಗಳವಾರ ಮುಂಬೈ ಬಳಿಯ ಮೀರಾ ಭಯಂದರ್ ಪ್ರದೇಶದಲ್ಲಿ ಮರಾಠಿ ಅಸ್ಮಿತೆ ರಕ್ಷಿಸಲು ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ. ಮರಾಠಿಯಲ್ಲಿ ಮಾತನಾಡಲು ನಿರಾಕರಿಸಿದ್ದಕ್ಕಾಗಿ ಅಂಗಡಿಯವನ ಮೇಲೆ ಹಲ್ಲೆ ನಡೆಸಿದ ನಂತರ ಉಂಟಾದ ರಾಜಕೀಯ ಉದ್ವಿಗ್ನತೆಯ ನಡುವೆ ಪ್ರತಿಭಟನೆ ನಡೆದಿದೆ.

ಗುಜರಾತ್‌ನಲ್ಲಿ ಮತ್ತೊಂದು ಸೇತುವೆ ಕುಸಿತ: ನದಿಗೆ ಬಿದ್ದ ವಾಹನಗಳು; 9 ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...