Homeಮುಖಪುಟಸೌಜನ್ಯ ಪ್ರಕರಣ| ಹೈಕೋರ್ಟ್ ನ್ಯಾಯಮೂರ್ತಿ ದೇವದಾಸ್ ವಾಗ್ದಂಡನೆಗೆ ಒತ್ತಾಯ

ಸೌಜನ್ಯ ಪ್ರಕರಣ| ಹೈಕೋರ್ಟ್ ನ್ಯಾಯಮೂರ್ತಿ ದೇವದಾಸ್ ವಾಗ್ದಂಡನೆಗೆ ಒತ್ತಾಯ

- Advertisement -
- Advertisement -

ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಆರ್. ದೇವದಾಸ್ ಅವರ ವಾಗ್ದಂಡನೆಗೆ ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ 2025ರ ಜೂನ್ 25ರಂದು ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ.

ಧರ್ಮಸ್ಥಳ ದೇವಾಲಯದ ಮುಖ್ಯಸ್ಥ ಹಾಗೂ ರಾಜ್ಯಸಭಾ ಸದಸ್ಯರಾಗಿರುವ ಡಾ. ಡಿ ವಿರೇಂದ್ರ ಹೆಗ್ಗಡೆ ಅವರ ವಿರುದ್ಧ ಪ್ರತಿಭಟನೆಗಳನ್ನು ನಡೆಸಿದ್ದಕ್ಕಾಗಿ ಮತ್ತು ಆರೋಪಗಳನ್ನು ಮಾಡಿದ್ದಕ್ಕಾಗಿ ಹಿಂದುತ್ವ ಮುಖಂಡ ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನ್ಯಾಯಾಧೀಶ ದೇವದಾಸ್ ಅವರು 2025ರ ಜನವರಿ 20ರಂದು ಪೊಲೀಸರಿಗೆ ಆದೇಶಿಸಿದ್ದರು.

ಈ ಆದೇಶವು ಶಂಕಾಸ್ಪದವಾಗಿದೆ. ಇದರಿಂದಾಗಿ ರಾಜ್ಯಾದ್ಯಂತ ಆಯೋಜಿಸಲಾಗಿದ್ದ ನೂರಾರು ಪ್ರತಿಭಟನೆಗಳಿಗೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ಪ್ರತಿಭಟನೆಗಳನ್ನು ಹತ್ತಿಕ್ಕುವ ಉದ್ದೇಶದಿಂದಲೇ ಈ ಆದೇಶ ನೀಡಲಾಗಿದೆ. ಹಾಗಾಗಿ, ಆದೇಶ ನೀಡಿದ ನ್ಯಾಯಾಧೀಶ ದೇವದಾಸ್ ಅವರ ವಾಗ್ದಂಡನೆಯಾಗಬೇಕು. ಸೌಜನ್ಯ ಪ್ರಕರಣದ ವಿಚಾರಣೆಯಿಂದ ಅವರನ್ನು ವಜಾಗೊಳಿಸಬೇಕು ಎಂದು ರವಿಕೃಷ್ಣಾ ರೆಡ್ಡಿ ಒತ್ತಾಯಿಸಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

2012ರಲ್ಲಿ ಧರ್ಮಸ್ಥಳದ ಬಳಿ ವಿದ್ಯಾರ್ಥಿನಿ ಸೌಜನ್ಯ ಅವರನ್ನು ಅಪಹರಿಸಿ, ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿತ್ತು. ಸೌರ್ಜನ್ಯ ಮೇಲಿನ ಅತ್ಯಾಚಾರ-ಕೊಲೆ ಪ್ರಕರಣದ ವಿರುದ್ಧ ಭಾರೀ ಪ್ರತಿಭಟನೆಗಳು ಭುಗಿಲೆದ್ದಿದ್ದವು. ಪೊಲೀಸರು ಅಮಾಯಕ ಸಂತೋಷ್ ರಾವ್ ಅವರನ್ನು ಬಂಧಿಸಿದ್ದರು. ಆದರೆ, ಸೌಜನ್ಯ ಪ್ರಕರಣಕ್ಕೂ ಸಂತೋಷ್ ರಾವ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ಸಂತೋಷ್ ರಾವ್ ಅವರನ್ನು 2023ರಲ್ಲಿ ಪ್ರಕರಣದಿಂದ ಖುಲಾಸೆಗೊಳಿಸಿತ್ತು.

ಸಂತೋಷ್ ರಾವ್ ಖುಲಾಸೆಯಾದ ಬಳಿಕ, ಸೌಜನ್ಯ ಪ್ರಕರಣವನ್ನು ಮರುತನಿಖೆ ನಡೆಸಬೇಕು. ನೈಜ ಅಪರಾಧಿಗಳನ್ನು ಬಂಧಿಸಿ, ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಕರಾವಳಿಯಾದ್ಯಂತ ಭಾರೀ ಪ್ರತಿಭಟನೆಗಳು ಭುಗಿಲೆದ್ದವು. ಈ ಪ್ರತಿಭಟನೆಗಳನ್ನು ಮಹೇಶ್ ಶೆಟ್ಟಿ ತಿಮರೋಡಿ ಮುನ್ನಡೆಸಿದ್ದರು.

ತಿಮರೋಡಿ ನೇತೃತ್ವದ ಪ್ರತಿಭಟನೆಗಳನ್ನು ಹತ್ತಿಕ್ಕಲು ಹಲವು ಪ್ರಯತ್ನಗಳು ನಡೆದಿತ್ತು. ಅವರ ವಿರುದ್ಧ 2023ರಲ್ಲಿ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ (SKDRDP) ಉದ್ಯೋಗಿ ಶೀನಪ್ಪ ಮತ್ತು ನಂದೀಶ್ ಕುಮಾರ್ ಜೈನ್ ಎಂಬವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ತಿಮರೋಡಿ ಅವರು ಈ ಹಿಂದೆ ಪ್ರತಿಭಟನೆಗಳನ್ನು ನಡೆಸದಂತೆ ವಿಧಿಸಲಾಗಿದ್ದ ಹೈಕೋರ್ಟ್‌ನ ತಡೆಯಾಜ್ಞೆಯನ್ನು ಉಲ್ಲಂಘಿಸಿದ್ದಾರೆ. ಧರ್ಮಸ್ಥಳ ಮತ್ತು ವಿರೇಂದ್ರ ಹೆಗ್ಗಡೆ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ವಿರುದ್ಧ ದೂರು ನೀಡಿದರೂ, ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದರು.

ಆ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ದೇವದಾಸ್ ಅವರು, 2025ರ ಜನವರಿಯಲ್ಲಿ ತಿಮರೋಡಿ ವಿರುದ್ಧ ಆದೇಶ ನೀಡಿದ್ದರು. “ವಾಕ್ ಸ್ವಾತಂತ್ರ್ಯವು ಒಬ್ಬ ವ್ಯಕ್ತಿಯ ಘನತೆಗೆ ಧಕ್ಕೆ ತರುವಂತಿರಬಾರದು. ಮಹೇಶ್ ಶೆಟ್ಟಿ ತಿಮ್ಮರೋಡಿ ಅಥವಾ ಅವರ ಬೆಂಗಲಿಗರು ಹೆಗ್ಗದೆ ವಿರುದ್ಧ ಯಾವುದೇ ಹೇಳಿಕೆ ನೀಡಿದ್ದರೆ ಅಥವಾ ಅಂತಹ ಯಾವುದೇ ಅವಹೇಳನಕಾರಿ ಹೇಳಿಕೆಯನ್ನು ಪ್ರಕಟಿಸಿದ್ದರೆ ಪೊಲೀಸರು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು” ಎಂದು ನ್ಯಾಯಾಧೀಶರು ಹೇಳಿದ್ದರು.

ನ್ಯಾಯಾಧೀಶ ದೇವದಾಸ್ ಅವರ ಆದೇಶದ ವಿರುದ್ಧ ರವಿಕೃಷ್ಣಾ ರೆಡ್ಡಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ. “ಸೌಜನ್ಯ ಪ್ರಕರಣದಲ್ಲಿ ಹೋರಾಟಗಾರರು ಮತ್ತು ಇತರರು ಸಭೆ ನಡೆಸಲು, ಪ್ರತಿಭಟನೆಗಳನ್ನು ಮಾಡಲು ಕರ್ನಾಟಕ ಹೈಕೋರ್ಟ್‌ ಅನುಮತಿ ನೀಡಿದೆ. ಅದರ ಅನುಸಾರ ರಾಜ್ಯಾದ್ಯಂತ ಪ್ರತಿಭಟನೆಗಳನ್ನು ಆಯೋಜಿಸಲಾಗಿತ್ತು. ಆದರೆ, ನ್ಯಾಯಮೂರ್ತಿ ದೇವದಾಸ್ ಅವರು ನೀಡಿದ ತೀರ್ಪನ್ನು ಉಲ್ಲೇಖಿಸಿ ಪೊಲೀಸರು ಎಲ್ಲಾ ಪ್ರತಿಭಟನೆಗಳಿಗೆ ಅವಕಾಶ ನಿರಾಕರಿಸಿದ್ದಾರೆ. ಪ್ರತಿಭಟನೆ ನಡೆಸಿದರೆ, ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ರೆಡ್ಡಿ ಆರೋಪಿಸಿದ್ದಾರೆ.

ಕೆಳ ನ್ಯಾಯಾಲಯಗಳು, ವಿಶೇಷವಾಗಿ ಬೆಂಗಳೂರು ನಗರ ಸಿವಿಲ್ ನ್ಯಾಯಾಧೀಶ ಎಸ್. ನಟರಾಜ್ ನೀಡಿರುವ ತಾತ್ಕಾಲಿಕ ತಡೆಯಾಜ್ಞೆಗಳ ಕುರಿತು ಗಮನ ಸೆಳೆದಿರುವ ರವಿಕೃಷ್ಣಾ ರೆಡ್ಡಿ ಅವರು, “ಮಾರ್ಚ್ 21ರಂದು ದಾಖಲಾಗಿದ್ದ ಪ್ರಕರಣವೊಂದರಲ್ಲಿ, ನ್ಯಾಯಾಧೀಶ ನಟರಾಜ್ ಅವರು ಸೌಜನ್ಯ ಪ್ರಕರಣ ಮತ್ತು ಧರ್ಮಸ್ಥಳಕ್ಕೆ ಸಂಬಂಧಿಸಿದ 1,588 ಯೂಟ್ಯೂಬ್ ವಿಡಿಯೋಗಳನ್ನು, 645 ಇನ್‌ಸ್ಟಾಗ್ರಾಮ್ ವಿಡಿಯೋಗಳು ಮತ್ತು ಸ್ಲೈಡ್‌ಗಳು ಹಾಗೂ 633 ಫೇಸ್‌ಬುಕ್ ವಿಡಿಯೋಗಳು ಮತ್ತು ಸ್ಲೈಡ್‌ಗಳನ್ನು ತೆಗೆದುಹಾಕಲು ಆದೇಶ ಹೊರಡಿಸಿದ್ದಾರೆ. ಆದರೆ, 2,200ಕ್ಕೂ ಹೆಚ್ಚು ವಿಶಿಷ್ಟ ಯುಆರ್‌ಎಲ್‌ಗಳನ್ನು 24 ಗಂಟೆಗಳ ಒಳಗೆ ಪರಿಶೀಲಿಸಿ ಅವುಗಳ ಮಾನನಷ್ಟಕರ ಸ್ವರೂಪವನ್ನು ಖಚಿತಪಡಿಸಿಕೊಳ್ಳುವುದು ತಾಂತ್ರಿಕವಾಗಿ ಅಸಾಧ್ಯ” ಎಂದು ಹೇಳಿದ್ದಾರೆ.

ವಿರೇಂದ್ರ ಹೆಗ್ಗಡೆ ಪರವಾಗಿ ಕೆಲಸ ಮಾಡುತ್ತಿರುವ ಒಂದು ಗುಂಪಿನ ದಾವೆದಾರರು ಬಹು ರೀತಿಯ ಮೊಕದ್ದಮೆಗಳನ್ನು ದಾಖಲಿಸಿರುವುದು ಮತ್ತು ಅವೆಲ್ಲವನ್ನೂ ನ್ಯಾಯಾಧೀಶ ಎಸ್. ನಟರಾಜ್‌ ಅವರ ಪೀಠಕ್ಕೆ ನಿಗದಿ ಮಾಡುತ್ತಿರುವುದು ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ ಮೊಕದ್ದಮೆಗಳ ನೋಂದಾವಣೆ ಕುರಿತು ಅನುಮಾನಗಳನ್ನು ಹುಟ್ಟುಹಾಕುತ್ತದೆ ಎಂದು ರವಿಕೃಷ್ಣಾ ರೆಡ್ಡಿ ಹೇಳಿದ್ದಾರೆ.

“ಸೌಜನ್ಯ ಪ್ರಕರಣದಲ್ಲಿನ ತಡೆಯಾಜ್ಞೆಗಳು ಮತ್ತು ಆದೇಶಗಳಲ್ಲಿ ನ್ಯಾಯಾಧೀಶ ಎಸ್. ನಟರಾಜ್ ಮತ್ತು ರಿಜಿಸ್ಟ್ರಿಯ ಪಾತ್ರದ ಬಗ್ಗೆ ತನಿಖೆ ನಡೆಸಲು ಹಾಗೂ ನ್ಯಾಯಮೂರ್ತಿ ದೇವದಾಸ್ ಅವರನ್ನು ಪದಚ್ಯುತಿಗೊಳಿಸಲು ‘ವಿಚಾರಣಾ ಆಯೋಗಗಳ ಕಾಯ್ದೆ-1951ರ ಅಡಿಯಲ್ಲಿ ತನಿಖಾ ಆಯೋಗವನ್ನು ಸ್ಥಾಪಿಸಬೇಕು” ಎಂದು ಮನವಿ ಮಾಡಿದ್ದಾರೆ.

ಗಮನಾರ್ಹವಾಗಿ, ಸೌಜನ್ಯ ಅತ್ಯಾಚಾರ, ಕೊಲೆ ಖಂಡಿಸಿ 2025ರ ಏಪ್ರಿಲ್ 6ರಂದು ಧರ್ಮಸ್ಥಳದಲ್ಲಿ ನಡೆಸಲು ಉದ್ದೇಶಿಸಿ ಪ್ರತಿಭಟನೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿತ್ತು.

ಪ್ರತಿಭಟನೆಗೆ ತಡೆ ನೀಡಬೇಕು ಎಂದು ಕೋರಿ ಧನಕೀರ್ತಿ ಆರಿಗ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಮುಂದಿನ ವಿಚಾರಣೆಯವರೆಗೂ ಪ್ರತಿಭಟನೆ ನಡೆಸದಂತೆ ತಾತ್ಕಾಲಿಕ ತಡೆ ನೀಡಿ ಆದೇಶಿಸಿತ್ತು.

ಇದಕ್ಕೂ ಮುನ್ನ, ಸೌಜನ್ಯಾಳ ನ್ಯಾಯಕ್ಕೆ ಆಗ್ರಹಿಸಿ ಮತ್ತು ಊಳಿಗಮಾನ್ಯ ದರ್ಪದ ವಿರುದ್ಧ ಆಯೋಜಿಸಿದ್ದ ಸಮಾನ ಮನಸ್ಕ ಸಾಹಿತಿ, ಚಿಂತಕರ ಹೋರಾಟದ ದಿಕ್ಸೂಚಿ ಸಭೆಗೆ ಅವಕಾಶ ನಿರಾಕರಿಸಲಾಗಿತ್ತು.

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದ 2025ರ ಮಾರ್ಚ್ 9ರಂದು ಆಯೋಜಿಸಿದ್ದ ಸಭೆಗೆ ಪೊಲೀಸರು ನೋಟಿಸ್ ನೀಡಿದ್ದಾರೆ ಎಂಬ ಕಾರಣ ಕೊಟ್ಟು ಕೊನೆ ಕ್ಷಣದಲ್ಲಿ ಅನುಮತಿ ನಿರಾಕರಿಸಲಾಗಿತ್ತು.

ಆ ಬಳಿಕ, ಇದೇ ಸಭೆಯನ್ನು ಬೆಂಗಳೂರಿನ ಶೇಷಾದ್ರಿಪುರದ ಎಐಟಿಯುಸಿ ಸಭಾಂಗಣದಲ್ಲಿ ಮಾರ್ಚ್ 18ರಂದು ಆಯೋಜಿಸಲಾಗಿತ್ತು. ಆಗಲೂ ನ್ಯಾಯಾಲಯದ ನಿರ್ದೇಶನದ ಕಾರಣ ನೀಡಿ ಪೊಲೀಸರು ಅವಕಾಶ ನೀಡಿರಲಿಲ್ಲ.

ಸೌಜನ್ಯ: eedina.com & thenewsminute.com

ಕರ್ನಾಟಕದಲ್ಲಿ ಡಿಫೆನ್ಸ್‌ ಕಾರಿಡಾರ್‌ಗಳ ಸ್ಥಾಪನೆಗೆ ಮನವಿ; ರಕ್ಷಣಾ ಸಚಿವರನ್ನು ಭೇಟಿಯಾದ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...