Homeಮುಖಪುಟಪೋರ್ಷೆ ಕಾರು ಅಪಘಾತ ಪ್ರಕರಣ: ಎರಡನೇ ಬಾರಿ ರಕ್ತದ ಮಾದರಿ ತಿರುಚಲು ಯತ್ನಿಸಿದ್ದ ಆರೋಪಿಗಳು!

ಪೋರ್ಷೆ ಕಾರು ಅಪಘಾತ ಪ್ರಕರಣ: ಎರಡನೇ ಬಾರಿ ರಕ್ತದ ಮಾದರಿ ತಿರುಚಲು ಯತ್ನಿಸಿದ್ದ ಆರೋಪಿಗಳು!

- Advertisement -
- Advertisement -

ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣದಲ್ಲಿ 17 ವರ್ಷದ ಆರೋಪಿಯ ಪೋಷಕರು ಎರಡನೇ ಬಾರಿಗೆ ರಕ್ತದ ಮಾದರಿಯನ್ನು ತಿರುಚಲು ಯತ್ನಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ನಗರದ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮೇ 19, 2024ರಂದು ನಸುಕಿನ ವೇಳೆ ಪುಣೆಯ ಕಲ್ಯಾಣಿ ನಗರ ಪ್ರದೇಶದಲ್ಲಿ ವೇಗವಾಗಿ ಬಂದ ಐಷಾರಾಮಿ ಪೋರ್ಷೆ ಕಾರು ಜನರ ಮೇಲೆ ಹರಿದಿತ್ತು. ಈ ಘಟನೆಯಲ್ಲಿ ರಸ್ತೆ ಬದಿ ಬೈಕ್‌ ಮೇಲೆ ಕುಳಿತಿದ್ದ ಇಬ್ಬರು ಐಟಿ ಉದ್ಯೋಗಿಗಳು ಸಾವನ್ನಪ್ಪಿದ್ದರು. ಕಾರು ಚಲಾಯಿಸಿದ ವ್ಯಕ್ತಿ ನಗರದ ಪ್ರಮುಖ ರಿಯಲ್ ಎಸ್ಟೇಟ್ ಉದ್ಯಮಿಯ ಮಗನಾಗಿದ್ದು, ಆತ ಮದ್ಯದ ನಶೆಯಲ್ಲಿ ಕಾರು ಚಲಾಯಿಸಿ ಜೀವಹಾನಿ ಮಾಡಿದ್ದ. ಘಟನೆ ಬಳಿಕ ಹಣದ ಪ್ರಭಾವ ಬಳಸಿ ಆರೋಪಿಯ ರಕ್ಷಣೆಯ ಪ್ರಯತ್ನ ನಡೆದಿತ್ತು.

ಅಪಘಾತ ನಡೆದ ಗಂಟೆಗಳ ಬಳಿಕ ಆರೋಪಿ ಬಾಲಕನ ರಕ್ತದ ಮಾದರಿಯನ್ನು ನಗರದ ಸಸೂನ್ ಜನರಲ್ ಆಸ್ಪತ್ರೆಯಲ್ಲಿ ತೆಗೆದುಕೊಳ್ಳಲಾಗಿತ್ತು. ತಡವಾಗಿ ರಕ್ತದ ಮಾದರಿ ಸಂಗ್ರಹಿಸುವ ಮೂಲಕ ಆರೋಪಿಯ ರಕ್ಷಣೆಗೆ ಪ್ರಯತ್ನಿಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಬಿಸಿ ಬಿಸಿ ಚರ್ಚೆ ಶುರುವಾಗಿತ್ತು. ಈ ನಡುವೆ ಸಂಭಾವ್ಯ ಕಲ್ಮಷದ ವರದಿಗಳಿಂದಾಗಿ ಪೊಲೀಸರು ಮತ್ತೊಮ್ಮೆ ರಕ್ತದ ಮಾದರಿ ಸಂಗ್ರಹಿಸಲು ವಿನಂತಿಸಿದ್ದರು. ಹಾಗಾಗಿ, ಎರಡನೇ ಬಾರಿಗೆ ಔಂಧ್ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದ ಮಾದರಿಯನ್ನು ಪಡೆಯಲಾಗಿತ್ತು.

ಔಂಧ್‌ನ ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತದ ಮಾದರಿ ಬದಲಾಯಿಸಲು ಪ್ರಯತ್ನಿಸಲಾಗಿತ್ತು. ಆದರೆ, ವೈದ್ಯರು ತಿರುಚಲು ನಿರಾಕರಿಸಿದ್ದರಿಂದ ಅದು ವಿಫಲವಾಯಿತು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರಕರಣದ ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಿದೆ. ಅದರಲ್ಲಿ, ಮೇ 19, 2024 ರಂದು ಪೊಲೀಸ್ ತಂಡವು ಎರಡನೇ ಬಾರಿಗೆ ರಕ್ತದ ಮಾದರಿಯನ್ನು ಸಂಗ್ರಹಿಸಲು ಆರೋಪಿ ಅಪ್ರಾಪ್ತ ವಯಸ್ಕನನ್ನು ಔಂಧ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಾಗ, ಆತನ ತಂದೆ-ತಾಯಿ ಮತ್ತು ಮಧ್ಯವರ್ತಿ ಅಶ್ಫಾಕ್ ಮಕಂದರ್ ಎಂಬಾತ ಅಲ್ಲಿಗೆ ಹೋಗಿದ್ದರು ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.

ರಕ್ತದ ಮಾದರಿಯನ್ನು ಗೌಪ್ಯವಾಗಿ ತೆಗೆದುಕೊಳ್ಳಬೇಕಿತ್ತು. ಆದರೆ, ಅದು ಆರೋಪಿಯ ಕುಟುಂಬಸ್ಥರಿಗೆ ಗೊತ್ತಾಗಿದೆ. ಏಕೆಂದರೆ, ಅವರು ಯರವಾಡ ಪೊಲೀಸ್ ಠಾಣೆಯಲ್ಲಿ ಇದ್ದರು. ಹಾಗಾಗಿ, ಎರಡನೇ ಬಾರಿಯೂ ರಕ್ತದ ಮಾದರಿಯನ್ನು ತಿರುಚುವ ಪ್ರಯತ್ನ ನಡೆಸಿದ್ದಾರೆ ಎಂದು ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ಹೇಳಿದೆ.

ಮೇ 20, 2024ರಂದು, ಎರಡೂ ರಕ್ತದ ಮಾದರಿಗಳನ್ನು ಡಿಎನ್ಎ ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.

ಅಪಘಾತದ ಸಮಯದಲ್ಲಿ 17 ವರ್ಷದ ಬಾಲಕ ಕುಡಿದ ಮತ್ತಿನಲ್ಲಿದ್ದ ಎಂಬುದನ್ನು ಮರೆಮಾಚಲು ಸಸೂನ್ ಜನರಲ್ ಆಸ್ಪತ್ರೆಯಲ್ಲಿ ಆತನ ರಕ್ತದ ಮಾದರಿಯನ್ನು ತಾಯಿಯ ರಕ್ತದ ಮಾದರಿಯೊಂದಿಗೆ ಬದಲಾಯಿಸಲಾಗಿತ್ತು ಎಂದು ಈ ಹಿಂದೆ ತನಿಖೆಯಿಂದ ಬಯಲಾಗಿತ್ತು.

ಈ ಪ್ರಕರಣದಲ್ಲಿ ಸಸೂನ್ ಜನರಲ್ ಆಸ್ಪತ್ರೆಯ ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥ ಅಜಯ್ ತಾವರೆ, ವೈದ್ಯಾಧಿಕಾರಿ ಶ್ರೀಹರಿ ಹಲ್ನೋರ್ ಮತ್ತು ಸಿಬ್ಬಂದಿ ಅತುಲ್ ಘಟ್ಕಾಂಬಳೆ ಅವರನ್ನು ಬಂಧಿಸಲಾಗಿದೆ ಎಂದು ವರದಿಗಳು ಹೇಳಿವೆ.

ಬಂಧಿತರಲ್ಲಿ ಬಾಲಕನ ತಂದೆ-ತಾಯಿ, ಮಧ್ಯವರ್ತಿ ಅಶ್ಫಾಕ್ ಮಕಂದರ್ ಮತ್ತು ಅಮರ್ ಗಾಯಕ್ವಾಡ್, ಆದಿತ್ಯ ಅವಿನಾಶ್ ಸೂದ್, ಆಶಿಶ್ ಮಿತ್ತಲ್ ಮತ್ತು ಅರುಣ್ ಕುಮಾರ್ ಸಿಂಗ್ ಎಂಬವರೂ ಸೇರಿದ್ದಾರೆ.

ಸೌಜನ್ಯ ಪ್ರಕರಣ| ಹೈಕೋರ್ಟ್ ನ್ಯಾಯಮೂರ್ತಿ ದೇವದಾಸ್ ವಾಗ್ದಂಡನೆಗೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...