Homeಮುಖಪುಟಪೋರ್ಷೆ ಕಾರು ಅಪಘಾತ ಪ್ರಕರಣ: ಎರಡನೇ ಬಾರಿ ರಕ್ತದ ಮಾದರಿ ತಿರುಚಲು ಯತ್ನಿಸಿದ್ದ ಆರೋಪಿಗಳು!

ಪೋರ್ಷೆ ಕಾರು ಅಪಘಾತ ಪ್ರಕರಣ: ಎರಡನೇ ಬಾರಿ ರಕ್ತದ ಮಾದರಿ ತಿರುಚಲು ಯತ್ನಿಸಿದ್ದ ಆರೋಪಿಗಳು!

- Advertisement -
- Advertisement -

ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣದಲ್ಲಿ 17 ವರ್ಷದ ಆರೋಪಿಯ ಪೋಷಕರು ಎರಡನೇ ಬಾರಿಗೆ ರಕ್ತದ ಮಾದರಿಯನ್ನು ತಿರುಚಲು ಯತ್ನಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ನಗರದ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮೇ 19, 2024ರಂದು ನಸುಕಿನ ವೇಳೆ ಪುಣೆಯ ಕಲ್ಯಾಣಿ ನಗರ ಪ್ರದೇಶದಲ್ಲಿ ವೇಗವಾಗಿ ಬಂದ ಐಷಾರಾಮಿ ಪೋರ್ಷೆ ಕಾರು ಜನರ ಮೇಲೆ ಹರಿದಿತ್ತು. ಈ ಘಟನೆಯಲ್ಲಿ ರಸ್ತೆ ಬದಿ ಬೈಕ್‌ ಮೇಲೆ ಕುಳಿತಿದ್ದ ಇಬ್ಬರು ಐಟಿ ಉದ್ಯೋಗಿಗಳು ಸಾವನ್ನಪ್ಪಿದ್ದರು. ಕಾರು ಚಲಾಯಿಸಿದ ವ್ಯಕ್ತಿ ನಗರದ ಪ್ರಮುಖ ರಿಯಲ್ ಎಸ್ಟೇಟ್ ಉದ್ಯಮಿಯ ಮಗನಾಗಿದ್ದು, ಆತ ಮದ್ಯದ ನಶೆಯಲ್ಲಿ ಕಾರು ಚಲಾಯಿಸಿ ಜೀವಹಾನಿ ಮಾಡಿದ್ದ. ಘಟನೆ ಬಳಿಕ ಹಣದ ಪ್ರಭಾವ ಬಳಸಿ ಆರೋಪಿಯ ರಕ್ಷಣೆಯ ಪ್ರಯತ್ನ ನಡೆದಿತ್ತು.

ಅಪಘಾತ ನಡೆದ ಗಂಟೆಗಳ ಬಳಿಕ ಆರೋಪಿ ಬಾಲಕನ ರಕ್ತದ ಮಾದರಿಯನ್ನು ನಗರದ ಸಸೂನ್ ಜನರಲ್ ಆಸ್ಪತ್ರೆಯಲ್ಲಿ ತೆಗೆದುಕೊಳ್ಳಲಾಗಿತ್ತು. ತಡವಾಗಿ ರಕ್ತದ ಮಾದರಿ ಸಂಗ್ರಹಿಸುವ ಮೂಲಕ ಆರೋಪಿಯ ರಕ್ಷಣೆಗೆ ಪ್ರಯತ್ನಿಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಬಿಸಿ ಬಿಸಿ ಚರ್ಚೆ ಶುರುವಾಗಿತ್ತು. ಈ ನಡುವೆ ಸಂಭಾವ್ಯ ಕಲ್ಮಷದ ವರದಿಗಳಿಂದಾಗಿ ಪೊಲೀಸರು ಮತ್ತೊಮ್ಮೆ ರಕ್ತದ ಮಾದರಿ ಸಂಗ್ರಹಿಸಲು ವಿನಂತಿಸಿದ್ದರು. ಹಾಗಾಗಿ, ಎರಡನೇ ಬಾರಿಗೆ ಔಂಧ್ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದ ಮಾದರಿಯನ್ನು ಪಡೆಯಲಾಗಿತ್ತು.

ಔಂಧ್‌ನ ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತದ ಮಾದರಿ ಬದಲಾಯಿಸಲು ಪ್ರಯತ್ನಿಸಲಾಗಿತ್ತು. ಆದರೆ, ವೈದ್ಯರು ತಿರುಚಲು ನಿರಾಕರಿಸಿದ್ದರಿಂದ ಅದು ವಿಫಲವಾಯಿತು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರಕರಣದ ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಿದೆ. ಅದರಲ್ಲಿ, ಮೇ 19, 2024 ರಂದು ಪೊಲೀಸ್ ತಂಡವು ಎರಡನೇ ಬಾರಿಗೆ ರಕ್ತದ ಮಾದರಿಯನ್ನು ಸಂಗ್ರಹಿಸಲು ಆರೋಪಿ ಅಪ್ರಾಪ್ತ ವಯಸ್ಕನನ್ನು ಔಂಧ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಾಗ, ಆತನ ತಂದೆ-ತಾಯಿ ಮತ್ತು ಮಧ್ಯವರ್ತಿ ಅಶ್ಫಾಕ್ ಮಕಂದರ್ ಎಂಬಾತ ಅಲ್ಲಿಗೆ ಹೋಗಿದ್ದರು ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.

ರಕ್ತದ ಮಾದರಿಯನ್ನು ಗೌಪ್ಯವಾಗಿ ತೆಗೆದುಕೊಳ್ಳಬೇಕಿತ್ತು. ಆದರೆ, ಅದು ಆರೋಪಿಯ ಕುಟುಂಬಸ್ಥರಿಗೆ ಗೊತ್ತಾಗಿದೆ. ಏಕೆಂದರೆ, ಅವರು ಯರವಾಡ ಪೊಲೀಸ್ ಠಾಣೆಯಲ್ಲಿ ಇದ್ದರು. ಹಾಗಾಗಿ, ಎರಡನೇ ಬಾರಿಯೂ ರಕ್ತದ ಮಾದರಿಯನ್ನು ತಿರುಚುವ ಪ್ರಯತ್ನ ನಡೆಸಿದ್ದಾರೆ ಎಂದು ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ಹೇಳಿದೆ.

ಮೇ 20, 2024ರಂದು, ಎರಡೂ ರಕ್ತದ ಮಾದರಿಗಳನ್ನು ಡಿಎನ್ಎ ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.

ಅಪಘಾತದ ಸಮಯದಲ್ಲಿ 17 ವರ್ಷದ ಬಾಲಕ ಕುಡಿದ ಮತ್ತಿನಲ್ಲಿದ್ದ ಎಂಬುದನ್ನು ಮರೆಮಾಚಲು ಸಸೂನ್ ಜನರಲ್ ಆಸ್ಪತ್ರೆಯಲ್ಲಿ ಆತನ ರಕ್ತದ ಮಾದರಿಯನ್ನು ತಾಯಿಯ ರಕ್ತದ ಮಾದರಿಯೊಂದಿಗೆ ಬದಲಾಯಿಸಲಾಗಿತ್ತು ಎಂದು ಈ ಹಿಂದೆ ತನಿಖೆಯಿಂದ ಬಯಲಾಗಿತ್ತು.

ಈ ಪ್ರಕರಣದಲ್ಲಿ ಸಸೂನ್ ಜನರಲ್ ಆಸ್ಪತ್ರೆಯ ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥ ಅಜಯ್ ತಾವರೆ, ವೈದ್ಯಾಧಿಕಾರಿ ಶ್ರೀಹರಿ ಹಲ್ನೋರ್ ಮತ್ತು ಸಿಬ್ಬಂದಿ ಅತುಲ್ ಘಟ್ಕಾಂಬಳೆ ಅವರನ್ನು ಬಂಧಿಸಲಾಗಿದೆ ಎಂದು ವರದಿಗಳು ಹೇಳಿವೆ.

ಬಂಧಿತರಲ್ಲಿ ಬಾಲಕನ ತಂದೆ-ತಾಯಿ, ಮಧ್ಯವರ್ತಿ ಅಶ್ಫಾಕ್ ಮಕಂದರ್ ಮತ್ತು ಅಮರ್ ಗಾಯಕ್ವಾಡ್, ಆದಿತ್ಯ ಅವಿನಾಶ್ ಸೂದ್, ಆಶಿಶ್ ಮಿತ್ತಲ್ ಮತ್ತು ಅರುಣ್ ಕುಮಾರ್ ಸಿಂಗ್ ಎಂಬವರೂ ಸೇರಿದ್ದಾರೆ.

ಸೌಜನ್ಯ ಪ್ರಕರಣ| ಹೈಕೋರ್ಟ್ ನ್ಯಾಯಮೂರ್ತಿ ದೇವದಾಸ್ ವಾಗ್ದಂಡನೆಗೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...