Homeಮುಖಪುಟಪೋರ್ಷೆ ಕಾರು ಅಪಘಾತ ಪ್ರಕರಣ: ಎರಡನೇ ಬಾರಿ ರಕ್ತದ ಮಾದರಿ ತಿರುಚಲು ಯತ್ನಿಸಿದ್ದ ಆರೋಪಿಗಳು!

ಪೋರ್ಷೆ ಕಾರು ಅಪಘಾತ ಪ್ರಕರಣ: ಎರಡನೇ ಬಾರಿ ರಕ್ತದ ಮಾದರಿ ತಿರುಚಲು ಯತ್ನಿಸಿದ್ದ ಆರೋಪಿಗಳು!

- Advertisement -
- Advertisement -

ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣದಲ್ಲಿ 17 ವರ್ಷದ ಆರೋಪಿಯ ಪೋಷಕರು ಎರಡನೇ ಬಾರಿಗೆ ರಕ್ತದ ಮಾದರಿಯನ್ನು ತಿರುಚಲು ಯತ್ನಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ನಗರದ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮೇ 19, 2024ರಂದು ನಸುಕಿನ ವೇಳೆ ಪುಣೆಯ ಕಲ್ಯಾಣಿ ನಗರ ಪ್ರದೇಶದಲ್ಲಿ ವೇಗವಾಗಿ ಬಂದ ಐಷಾರಾಮಿ ಪೋರ್ಷೆ ಕಾರು ಜನರ ಮೇಲೆ ಹರಿದಿತ್ತು. ಈ ಘಟನೆಯಲ್ಲಿ ರಸ್ತೆ ಬದಿ ಬೈಕ್‌ ಮೇಲೆ ಕುಳಿತಿದ್ದ ಇಬ್ಬರು ಐಟಿ ಉದ್ಯೋಗಿಗಳು ಸಾವನ್ನಪ್ಪಿದ್ದರು. ಕಾರು ಚಲಾಯಿಸಿದ ವ್ಯಕ್ತಿ ನಗರದ ಪ್ರಮುಖ ರಿಯಲ್ ಎಸ್ಟೇಟ್ ಉದ್ಯಮಿಯ ಮಗನಾಗಿದ್ದು, ಆತ ಮದ್ಯದ ನಶೆಯಲ್ಲಿ ಕಾರು ಚಲಾಯಿಸಿ ಜೀವಹಾನಿ ಮಾಡಿದ್ದ. ಘಟನೆ ಬಳಿಕ ಹಣದ ಪ್ರಭಾವ ಬಳಸಿ ಆರೋಪಿಯ ರಕ್ಷಣೆಯ ಪ್ರಯತ್ನ ನಡೆದಿತ್ತು.

ಅಪಘಾತ ನಡೆದ ಗಂಟೆಗಳ ಬಳಿಕ ಆರೋಪಿ ಬಾಲಕನ ರಕ್ತದ ಮಾದರಿಯನ್ನು ನಗರದ ಸಸೂನ್ ಜನರಲ್ ಆಸ್ಪತ್ರೆಯಲ್ಲಿ ತೆಗೆದುಕೊಳ್ಳಲಾಗಿತ್ತು. ತಡವಾಗಿ ರಕ್ತದ ಮಾದರಿ ಸಂಗ್ರಹಿಸುವ ಮೂಲಕ ಆರೋಪಿಯ ರಕ್ಷಣೆಗೆ ಪ್ರಯತ್ನಿಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಬಿಸಿ ಬಿಸಿ ಚರ್ಚೆ ಶುರುವಾಗಿತ್ತು. ಈ ನಡುವೆ ಸಂಭಾವ್ಯ ಕಲ್ಮಷದ ವರದಿಗಳಿಂದಾಗಿ ಪೊಲೀಸರು ಮತ್ತೊಮ್ಮೆ ರಕ್ತದ ಮಾದರಿ ಸಂಗ್ರಹಿಸಲು ವಿನಂತಿಸಿದ್ದರು. ಹಾಗಾಗಿ, ಎರಡನೇ ಬಾರಿಗೆ ಔಂಧ್ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದ ಮಾದರಿಯನ್ನು ಪಡೆಯಲಾಗಿತ್ತು.

ಔಂಧ್‌ನ ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತದ ಮಾದರಿ ಬದಲಾಯಿಸಲು ಪ್ರಯತ್ನಿಸಲಾಗಿತ್ತು. ಆದರೆ, ವೈದ್ಯರು ತಿರುಚಲು ನಿರಾಕರಿಸಿದ್ದರಿಂದ ಅದು ವಿಫಲವಾಯಿತು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರಕರಣದ ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಿದೆ. ಅದರಲ್ಲಿ, ಮೇ 19, 2024 ರಂದು ಪೊಲೀಸ್ ತಂಡವು ಎರಡನೇ ಬಾರಿಗೆ ರಕ್ತದ ಮಾದರಿಯನ್ನು ಸಂಗ್ರಹಿಸಲು ಆರೋಪಿ ಅಪ್ರಾಪ್ತ ವಯಸ್ಕನನ್ನು ಔಂಧ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಾಗ, ಆತನ ತಂದೆ-ತಾಯಿ ಮತ್ತು ಮಧ್ಯವರ್ತಿ ಅಶ್ಫಾಕ್ ಮಕಂದರ್ ಎಂಬಾತ ಅಲ್ಲಿಗೆ ಹೋಗಿದ್ದರು ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.

ರಕ್ತದ ಮಾದರಿಯನ್ನು ಗೌಪ್ಯವಾಗಿ ತೆಗೆದುಕೊಳ್ಳಬೇಕಿತ್ತು. ಆದರೆ, ಅದು ಆರೋಪಿಯ ಕುಟುಂಬಸ್ಥರಿಗೆ ಗೊತ್ತಾಗಿದೆ. ಏಕೆಂದರೆ, ಅವರು ಯರವಾಡ ಪೊಲೀಸ್ ಠಾಣೆಯಲ್ಲಿ ಇದ್ದರು. ಹಾಗಾಗಿ, ಎರಡನೇ ಬಾರಿಯೂ ರಕ್ತದ ಮಾದರಿಯನ್ನು ತಿರುಚುವ ಪ್ರಯತ್ನ ನಡೆಸಿದ್ದಾರೆ ಎಂದು ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ಹೇಳಿದೆ.

ಮೇ 20, 2024ರಂದು, ಎರಡೂ ರಕ್ತದ ಮಾದರಿಗಳನ್ನು ಡಿಎನ್ಎ ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.

ಅಪಘಾತದ ಸಮಯದಲ್ಲಿ 17 ವರ್ಷದ ಬಾಲಕ ಕುಡಿದ ಮತ್ತಿನಲ್ಲಿದ್ದ ಎಂಬುದನ್ನು ಮರೆಮಾಚಲು ಸಸೂನ್ ಜನರಲ್ ಆಸ್ಪತ್ರೆಯಲ್ಲಿ ಆತನ ರಕ್ತದ ಮಾದರಿಯನ್ನು ತಾಯಿಯ ರಕ್ತದ ಮಾದರಿಯೊಂದಿಗೆ ಬದಲಾಯಿಸಲಾಗಿತ್ತು ಎಂದು ಈ ಹಿಂದೆ ತನಿಖೆಯಿಂದ ಬಯಲಾಗಿತ್ತು.

ಈ ಪ್ರಕರಣದಲ್ಲಿ ಸಸೂನ್ ಜನರಲ್ ಆಸ್ಪತ್ರೆಯ ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥ ಅಜಯ್ ತಾವರೆ, ವೈದ್ಯಾಧಿಕಾರಿ ಶ್ರೀಹರಿ ಹಲ್ನೋರ್ ಮತ್ತು ಸಿಬ್ಬಂದಿ ಅತುಲ್ ಘಟ್ಕಾಂಬಳೆ ಅವರನ್ನು ಬಂಧಿಸಲಾಗಿದೆ ಎಂದು ವರದಿಗಳು ಹೇಳಿವೆ.

ಬಂಧಿತರಲ್ಲಿ ಬಾಲಕನ ತಂದೆ-ತಾಯಿ, ಮಧ್ಯವರ್ತಿ ಅಶ್ಫಾಕ್ ಮಕಂದರ್ ಮತ್ತು ಅಮರ್ ಗಾಯಕ್ವಾಡ್, ಆದಿತ್ಯ ಅವಿನಾಶ್ ಸೂದ್, ಆಶಿಶ್ ಮಿತ್ತಲ್ ಮತ್ತು ಅರುಣ್ ಕುಮಾರ್ ಸಿಂಗ್ ಎಂಬವರೂ ಸೇರಿದ್ದಾರೆ.

ಸೌಜನ್ಯ ಪ್ರಕರಣ| ಹೈಕೋರ್ಟ್ ನ್ಯಾಯಮೂರ್ತಿ ದೇವದಾಸ್ ವಾಗ್ದಂಡನೆಗೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...