Homeಕರ್ನಾಟಕಮೈಸೂರು | ಅನ್ನಭಾಗ್ಯ ಹಮಾಲಿ ಕಾರ್ಮಿಕರಿಂದ ಪ್ರತಿಭಟನೆ

ಮೈಸೂರು | ಅನ್ನಭಾಗ್ಯ ಹಮಾಲಿ ಕಾರ್ಮಿಕರಿಂದ ಪ್ರತಿಭಟನೆ

- Advertisement -
- Advertisement -

ಅನ್ನಭಾಗ್ಯ ಪಡಿತರ ಯೋಜನೆಯಡಿ ಆಹಾರ ನಿಗಮದ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಮ್‌ಸಿ ಗೋದಾಮುಗಳಲ್ಲಿ ದುಡಿಯುವ ಹಮಾಲಿ ಕಾರ್ಮಿಕರಿಗೆ ಸಮರ್ಪಕ ಕಾರ್ಮಿಕ ಕಾನೂನುಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಮೈಸೂರಿನಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.

ಕರ್ನಾಟಕ ರಾಜ್ಯ ಲೋಡಿಂಗ್ & ಅನ್‌ಲೋಡಿಂಗ್ ಕಾರ್ಮಿಕ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಹಮಾಲಿ ಕಾರ್ಮಿಕರು, ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು.

ಪಡಿತರ ಯೋಜನೆಗೆ ಅನ್ನಭಾಗ್ಯ ಎಂದು ಹೆಸರಿಟ್ಟು ಇಂದಿಗೆ 12 ವರ್ಷದ ಪೂರ್ಣಗೊಂಡಿದೆ. ಆದರೆ, ಅದನ್ನು ಜಾರಿ ಮಾಡುವ ಹಮಾಲಿ ಕಾರ್ಮಿಕರ ಬದುಕು ಇನ್ನೂ ಅತಂತ್ರವಾಗಿದೆ. ರಾಜ್ಯಾದ್ಯಂತ ಅನ್ನಭಾಗ್ಯ ಯೋಜನೆಯಡಿ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಮ್‌ಸಿ ಗೋದಾಮುಗಳಲ್ಲಿ ಆಹಾರ ಧಾನ್ಯಗಳ ಎತುವಳಿ ಲೋಡಿಂಗ್ & ಅನ್‌ಲೋಡಿಂಗ್ ಕೆಲಸ ಮಾಡುವವರಿಗೆ ಕಾರ್ಮಿಕ ಕಾನೂನುಗಳು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಆದರೆ, ಸಾಗಾಣಿಕೆ ಗುತ್ತಿಗೆದಾರರಿಂದ ಕಿರುಕುಳ ಮಾತ್ರ ತಪ್ಪಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಕಾರ್ಮಿಕ ಅಧಿಕಾರಿಗಳು, ಕಾರ್ಮಿಕರು- ಸಾಗಾಣಿಕೆ ಗುತ್ತಿಗೆದಾರರ ಜೊತೆ , ಇಎಸ್‌ಐ ಮತ್ತು ಪಿಎಫ್‌ ಕುರಿತು ಸಭೆ ನಡೆಸುವಂತೆ ಪ್ರತಿಭಟನಾ ನಿರತರು ಆಗ್ರಹಿಸಿದರು.

ಅಪರ ಜಿಲ್ಲಾಧಿಕಾರಿ ಪ್ರತಿಭಟನಾ ಸ್ಥಳಕ್ಕೆ ಬಂದು ಕಾರ್ಮಿಕರ ಮನವಿ ಸ್ವೀಕರಿಸಿದರು. ಆದಷ್ಟು ಬೇಗ ಸಮಸ್ಯೆ ಬಗೆ ಹರಿಸುವುದಾಗಿ ಭರವಸೆ ನೀಡಿದರು.

ಕಾರ್ಮಿಕ ಕಾನೂನು ಕನಿಷ್ಠ ವೇತನ ಕಾಯ್ದೆ ಪ್ರಕಾರ ಪ್ರತಿವರ್ಷ ಬೆಲೆ ಏರಿಕೆ, ತುಟ್ಟುಭತ್ಯೆಗೆ ಅನುಗುಣವಾಗಿ ಕನಿಷ್ಠ ವೇತನ ನಿಗದಿ ಮಾಡಿ ಏಪ್ರಿಲ್ 1ರಿಂದ ಜಾರಿ ಮಾಡುವುದು ಕಾನೂನು. ಆದರೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಯಾವುದೇ ಮಾನದಂಡವಿಲ್ಲದೆ ತನ್ನಿಚ್ಚೆ ಬಂದಾಗ ಕೂಲಿ ಹೆಚ್ಚಳ ಮಾಡುತ್ತಿದ್ದು, ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. ಕೂಲಿ ಹೆಚ್ಚಳಕ್ಕೆ ಹಾಗೂ ಕಾರ್ಮಿಕ ಕಾನೂನುಗಳ ಜಾರಿಗೆ ಒಂದು ಸಮಪರ್ಕಕ ನಿಯಮ ಬೇಕಾಗಿದೆ. ಅದನ್ನು ಜಾರಿ ಮಾಡಬೇಕು ಎಂದು ಕಾರ್ಮಿಕರು ಮುಖ್ಯಮಂತ್ರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಹೇಳಿದ್ದಾರೆ.

ಉದಾಹರಣೆಗೆ ಗೋದಾಮುಗಳಿಂದ ಪಡಿತರ ನ್ಯಾಯಬೆಲೆ ಅಂಗಡಿಗೆ ಆಹಾರ ಧಾನ್ಯಗಳ ಎತುವಳಿ ಲೋಡಿಂಗ್ & ಅನ್‌ಲೋಡಿಂಗ್ ಕೆಲಸ ಚಿಲ್ಲರೆ ಸಾಗಾಣಿಕೆ ಕೂಲಿದರ ಹೆಚ್ಚಳ 2018 ನವೆಂಬರ್‌ನಲ್ಲಿ ಕ್ವಿಂಟಾಲ್‌ಗೆ 16 ರೂ. 2023ರ ಜೂನ್‌ನಲ್ಲಿ ಕ್ವಿಂಟಾಲ್‌ಗೆ 19 ರೂ. 2025ರ ಫೆಬ್ರವರಿಯಲ್ಲಿ ಟೆಂಡರ್ ಆಗಿರುವ ತಾಲೂಕುಗಳಿಗೆ ಮಾತ್ರ 23.62 ರೂ. ನಿಗದಿ ಮಾಡಲಾಗಿದೆ. 120ಕ್ಕೂ ಹೆಚ್ಚು ತಾಲೂಕುಗಳಲ್ಲಿ ತಾಂತ್ರಿಕ ಕಾರಣಗಳಿಂದ ಟೆಂಡರ್ ಆಗದೆ ಉಳಿದಿದ್ದು, ಅಲ್ಲಿ ಹಳೆಯ ದರವೇ 19 ರೂ. ಇದೆ. ಕಾರ್ಮಿಕರಿಗೆ ಕ್ವಿಂಟ್ವಾಲ್‌ಗೆ 4.62 ರೂ. ಹಾಗೆಯೇ ಸಗಟು ಸಾಗಾಣಿಕೆ ಟೆಂಡರ್‌ ಆಗದೇ ಉಳಿದಿರುವ ತಾಲೂಕುಗಳಲ್ಲಿ 10ರೂ. ಇದೆ. ಟೆಂಡರ್ ಆಗಿರುವ ತಾಲೂಕುಗಳಿಗೆ 10.92 ರೂ. ಇದೆ. ಇದರಿಂದ ಪ್ರತಿ ಕ್ವಿಂಟ್ವಾಲ್‌ಗೆ ಕಾರ್ಮಿಕರಿಗೆ 5.54 ರೂ. ನಷ್ಟ ಉಂಟಾಗುತ್ತಿದೆ. ಕಾರ್ಮಿಕರು ಪ್ರತಿತಿಂಗಳು ಲಕ್ಷಾಂತರ ರೂ. ನಷ್ಟವಾಗುತ್ತಿದೆ ಎಂದಿದ್ದಾರೆ.

ಮೈಸೂರು ಜಿಲ್ಲೆ ಪಿರಿಯಾಪಟ್ಟಣ, ಕೆ.ಆರ್‌ ನಗರ ಕೆಎಫ್‌ಸಿಎಸ್‌ಸಿ, ಸರಗೂರು, ಹೆಚ್‌.ಡಿ ಕೋಟೆ, ಹುಣಸೂರು, ನಂಜನಗೂಡು ತಾಲೂಕುಗಳಿಗೆ ಟೆಂಡರ್ ಆಗದೇ ಉಳಿದಿದ್ದು, ಆ ತಾಲೂಕುಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಈ ಕೂಡಲೇ ಹೊಸ ದರ ಚಿಲ್ಲರೆ ಸಾಗಾಣಿಕೆ ಕ್ವಿಂಟಾಲ್‌ಗೆ 23.62 ರೂ. ಸಗಟು ಸಾಗಾಣಿಕೆ ಟೆಂಡರ್ ಕ್ವಿಂಟಾಲ್‌ಗೆ 10.92 ರೂ. ನಿಗದಿ ಮಾಡಿ ಆದೇಶ ಮಾಡಬೇಕು. ತಿಂಗಳಿಗೆ ಲಕ್ಷಾಂತರ ರೂ. ಕಾರ್ಮಿಕರಿಗೆ ನಷ್ಟ ಉಂಟಾಗುತ್ತಿದ್ದು, ಫೆಬ್ರವರಿ 2025ರಿಂದಲೇ ಜಾರಿಗೆ ಬರುವಂತೆ ಈ ಕೂಡಲೇ ಕೂಲಿ ಹೆಚ್ಚಳ ಮಾಡಿ ಆದೇಶ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಆಹಾರ ನಿಗಮದ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಂಸಿ ಗೋದಾಮುಗಳಲ್ಲಿ ಆಹಾರ ಧಾನ್ಯಗಳ ಎತುವಳಿ ಲೋಡಿಂಗ್ &ಅನ್‌ಲೋಡಿಂಗ್ ಕೆಲಸ ಮಾಡುವ ಹಮಾಲಿ ಕಾರ್ಮಿಕರಿಗೆ ಸರ್ಕಾರ 2024-2026 ಟೆಂಡರ್ ನಿಯಮಾವಳಿಯಲ್ಲಿ ಇಎಸ್‌ಐ ಮತ್ತು ಪಿಎಫ್ ಪಾವತಿಸುವುದು ಕಡ್ಡಾಯ ಮಾಡಿದೆ. ಆದರೆ, ಇದು ಮೈಸೂರು ಜಿಲ್ಲೆಯಲ್ಲಿ ಇನ್ನೂ ಜಾರಿಯಾಗಿಲ್ಲ. ಇಎಸ್ಐ ಕಟ್ಟದೆ ಇರುವ ಕಾರಣದಿಂದ ಆನಾರೋಗ್ಯಕ್ಕೀಡಾದ ಕಾರ್ಮಿಕರಿಗೆ ತುಂಬಾ ತೊಂದರೆಯಾಗುತ್ತಿದ್ದು, ಕೈಯಿಂದ ಹಣ ಪಾವತಿಸಬೇಕಾದ ಸಂದರ್ಭ ಬಂದಿದೆ. ಇಎಸ್ಐ ಇದ್ದರೂ ಉಪಯೋಗಕ್ಕೆ ಬಾರದಂತಾಗಿದೆ ಎಂದು ಹೇಳಿದ್ದಾರೆ.

2025ರ ಫೆಬ್ರವರಿ ಮಾಹೆಯಿಂದಲೂ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರರು ಕಾರ್ಮಿಕರಿಂದ ಇಎಸ್ಐ ಮತ್ತು ಪಿಎಫ್ ವಂತಿಗೆ ಕಡಿತ ಮಾಡಿದ್ದು, ಇಲ್ಲಿಯವರೆಗೂ ಪಾವತಿ ಮಾಡದೇ ಇರುವುದು ಕಾನೂನೂ ಬಾಹಿರ ಮತ್ತು ಕ್ರಿಮಿನಲ್ ಅಪರಾಧ. ಹಾಗಾಗಿ, ಇದರ ಬಗ್ಗೆ ತುರ್ತಾಗಿ ಗಮನವಹಿಸಿ, ಕ್ರಮವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ಚಿಲ್ಲರೆ ಸಾಗಾಣಿಕೆಗೆ ಯಾವುದೇ ಗುತ್ತಿಗೆದಾರರು ಗುತ್ತಿಗೆ ಕಾರ್ಮಿಕ ಕಾಯ್ದೆ ಪ್ರಕಾರ ನಿಯಮಾವಳಿಗಳನ್ನು ಪಾಲಿಸುತಿಲ್ಲ. ಸರಿಯಾದ ಸಮಯಕ್ಕೆ ಸಂಬಳ (ಕೂಲಿ) ಪಾವತಿ ಮಾಡುತ್ತಿಲ್ಲ. ಸಂಬಳ ಪಾವತಿ ರಸೀದಿ ಅಥವಾ ಸಂಬಳ ಚೀಟಿ (WAGE SLIP ) ಇಎಸ್ಐ ಮತ್ತು ಪಿಎಫ್‌ ವಂತಿಕೆ ಪಾವತಿ ರಸೀದಿ ನೀಡುತ್ತಿಲ್ಲ. ಹಾಗಾಗಿ, ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ಸಂಬಳ ಪಾವತಿಸಲು ಹಾಗೂ ಆಯಾ ತಿಂಗಳು ಇಎಸ್ಐ ಮತ್ತು ಪಿಎಫ್ ವಂತಿಕೆ ಪಾವತಿಸಿ ರಸೀದಿ ನೀಡಲು ಕ್ರಮವಹಿಸಬೇಕು ಎಂದು ಮನವಿ ಮಾಡಿದ್ದಾರೆ.

2023ರ ಆಗಸ್ಟ್ 30ರಂದು ನಡೆದ ದ್ವಿಪಕ್ಷೀಯ ಕರಾರಿನಲ್ಲಿ ಮೂರು ತಿಂಗಳು ಕಾಲವಕಾಶ ಕೋರಿ, ನಂತರ ಅದರ ಉಲ್ಲಂಘನೆ ಮಾಡಿ 2023ರ ಜುಲೈನಿಂದ ಚಿಲ್ಲರೆ ಸಾಗಣಿಕೆ ಗುತ್ತಿಗೆದಾರರು ಆಹಾರ ಧಾನ್ಯಗಳ ಎತ್ತುವಳಿ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕೂಲಿ ದರ 1.90ರೂ. ಕಡಿಮೆ ಪಾವತಿ ಮಾಡಿಲಾಗಿದೆ. ಇದರ ಬಗ್ಗೆ 2024ರ ಸೆಪ್ಟಂಬರ್ 20ರಂದು ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ. ಆದರೆ, ಇದುವರೆಗೆ ಪಾವತಿಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಹಾಗಾಗಿ, ಮೈಸೂರು ಜಿಲ್ಲೆಯ ಕೆಲವು ತಾಲೂಕುಗಳಿಗೆ ಸಾಗಾಣಿಕೆ ಗುತ್ತಿಗೆದಾರರು ಬದಲಾಗಿದ್ದಾರೆ. ಈ ಗುತ್ತಿಗೆದಾರರ ಇಎಂಡಿ ಹಣ ಮತ್ತು ಸಾಗಾಣಿಕೆ ಬಿಲ್ ಹಣ ಪಾವತಿ ಮಾಡದೆ ಕಡ್ಡಾಯವಾಗಿ ತಡೆ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.

ತಮ್ಮ ಸಮಸ್ಯೆ ಇತ್ಯರ್ಥಪಡಿಸದಿದ್ದರೆ ಆಗಸ್ಟ್ 15ರಂದು ಕರಾಳ ಸ್ವಾತಂತ್ರ್ಯ ದಿನ ಆಚರಿಸುವುದಾಗಿ ಕಾರ್ಮಿಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಒಕ್ಕೂಟದ ಜಿಲ್ಲಾಧ್ಯ ಕ್ಷ ಕರಿನಾಯಕ, ಕಾರ್ಯದರ್ಶಿ ಮಹದೇವ ಹಾಗೂ ಮಂಡ್ಯ ಜಿಲ್ಲಾ ಮುಖಂಡರಾದ ಕೃಷ್ಣಪ್ಪ, ಪುಟ್ಟಸ್ವಾಮಿ ಸೇರಿದತೆ ಪ್ರಮುಖರು ಇದ್ದರು.

“ಬೇಟಿ ಬಚಾವೋ” ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು: ಬಿ.ಕೆ ಹರಿಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...