Homeಕರ್ನಾಟಕಮೈಸೂರು | ಅನ್ನಭಾಗ್ಯ ಹಮಾಲಿ ಕಾರ್ಮಿಕರಿಂದ ಪ್ರತಿಭಟನೆ

ಮೈಸೂರು | ಅನ್ನಭಾಗ್ಯ ಹಮಾಲಿ ಕಾರ್ಮಿಕರಿಂದ ಪ್ರತಿಭಟನೆ

- Advertisement -
- Advertisement -

ಅನ್ನಭಾಗ್ಯ ಪಡಿತರ ಯೋಜನೆಯಡಿ ಆಹಾರ ನಿಗಮದ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಮ್‌ಸಿ ಗೋದಾಮುಗಳಲ್ಲಿ ದುಡಿಯುವ ಹಮಾಲಿ ಕಾರ್ಮಿಕರಿಗೆ ಸಮರ್ಪಕ ಕಾರ್ಮಿಕ ಕಾನೂನುಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಮೈಸೂರಿನಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.

ಕರ್ನಾಟಕ ರಾಜ್ಯ ಲೋಡಿಂಗ್ & ಅನ್‌ಲೋಡಿಂಗ್ ಕಾರ್ಮಿಕ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಹಮಾಲಿ ಕಾರ್ಮಿಕರು, ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು.

ಪಡಿತರ ಯೋಜನೆಗೆ ಅನ್ನಭಾಗ್ಯ ಎಂದು ಹೆಸರಿಟ್ಟು ಇಂದಿಗೆ 12 ವರ್ಷದ ಪೂರ್ಣಗೊಂಡಿದೆ. ಆದರೆ, ಅದನ್ನು ಜಾರಿ ಮಾಡುವ ಹಮಾಲಿ ಕಾರ್ಮಿಕರ ಬದುಕು ಇನ್ನೂ ಅತಂತ್ರವಾಗಿದೆ. ರಾಜ್ಯಾದ್ಯಂತ ಅನ್ನಭಾಗ್ಯ ಯೋಜನೆಯಡಿ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಮ್‌ಸಿ ಗೋದಾಮುಗಳಲ್ಲಿ ಆಹಾರ ಧಾನ್ಯಗಳ ಎತುವಳಿ ಲೋಡಿಂಗ್ & ಅನ್‌ಲೋಡಿಂಗ್ ಕೆಲಸ ಮಾಡುವವರಿಗೆ ಕಾರ್ಮಿಕ ಕಾನೂನುಗಳು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಆದರೆ, ಸಾಗಾಣಿಕೆ ಗುತ್ತಿಗೆದಾರರಿಂದ ಕಿರುಕುಳ ಮಾತ್ರ ತಪ್ಪಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಕಾರ್ಮಿಕ ಅಧಿಕಾರಿಗಳು, ಕಾರ್ಮಿಕರು- ಸಾಗಾಣಿಕೆ ಗುತ್ತಿಗೆದಾರರ ಜೊತೆ , ಇಎಸ್‌ಐ ಮತ್ತು ಪಿಎಫ್‌ ಕುರಿತು ಸಭೆ ನಡೆಸುವಂತೆ ಪ್ರತಿಭಟನಾ ನಿರತರು ಆಗ್ರಹಿಸಿದರು.

ಅಪರ ಜಿಲ್ಲಾಧಿಕಾರಿ ಪ್ರತಿಭಟನಾ ಸ್ಥಳಕ್ಕೆ ಬಂದು ಕಾರ್ಮಿಕರ ಮನವಿ ಸ್ವೀಕರಿಸಿದರು. ಆದಷ್ಟು ಬೇಗ ಸಮಸ್ಯೆ ಬಗೆ ಹರಿಸುವುದಾಗಿ ಭರವಸೆ ನೀಡಿದರು.

ಕಾರ್ಮಿಕ ಕಾನೂನು ಕನಿಷ್ಠ ವೇತನ ಕಾಯ್ದೆ ಪ್ರಕಾರ ಪ್ರತಿವರ್ಷ ಬೆಲೆ ಏರಿಕೆ, ತುಟ್ಟುಭತ್ಯೆಗೆ ಅನುಗುಣವಾಗಿ ಕನಿಷ್ಠ ವೇತನ ನಿಗದಿ ಮಾಡಿ ಏಪ್ರಿಲ್ 1ರಿಂದ ಜಾರಿ ಮಾಡುವುದು ಕಾನೂನು. ಆದರೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಯಾವುದೇ ಮಾನದಂಡವಿಲ್ಲದೆ ತನ್ನಿಚ್ಚೆ ಬಂದಾಗ ಕೂಲಿ ಹೆಚ್ಚಳ ಮಾಡುತ್ತಿದ್ದು, ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. ಕೂಲಿ ಹೆಚ್ಚಳಕ್ಕೆ ಹಾಗೂ ಕಾರ್ಮಿಕ ಕಾನೂನುಗಳ ಜಾರಿಗೆ ಒಂದು ಸಮಪರ್ಕಕ ನಿಯಮ ಬೇಕಾಗಿದೆ. ಅದನ್ನು ಜಾರಿ ಮಾಡಬೇಕು ಎಂದು ಕಾರ್ಮಿಕರು ಮುಖ್ಯಮಂತ್ರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಹೇಳಿದ್ದಾರೆ.

ಉದಾಹರಣೆಗೆ ಗೋದಾಮುಗಳಿಂದ ಪಡಿತರ ನ್ಯಾಯಬೆಲೆ ಅಂಗಡಿಗೆ ಆಹಾರ ಧಾನ್ಯಗಳ ಎತುವಳಿ ಲೋಡಿಂಗ್ & ಅನ್‌ಲೋಡಿಂಗ್ ಕೆಲಸ ಚಿಲ್ಲರೆ ಸಾಗಾಣಿಕೆ ಕೂಲಿದರ ಹೆಚ್ಚಳ 2018 ನವೆಂಬರ್‌ನಲ್ಲಿ ಕ್ವಿಂಟಾಲ್‌ಗೆ 16 ರೂ. 2023ರ ಜೂನ್‌ನಲ್ಲಿ ಕ್ವಿಂಟಾಲ್‌ಗೆ 19 ರೂ. 2025ರ ಫೆಬ್ರವರಿಯಲ್ಲಿ ಟೆಂಡರ್ ಆಗಿರುವ ತಾಲೂಕುಗಳಿಗೆ ಮಾತ್ರ 23.62 ರೂ. ನಿಗದಿ ಮಾಡಲಾಗಿದೆ. 120ಕ್ಕೂ ಹೆಚ್ಚು ತಾಲೂಕುಗಳಲ್ಲಿ ತಾಂತ್ರಿಕ ಕಾರಣಗಳಿಂದ ಟೆಂಡರ್ ಆಗದೆ ಉಳಿದಿದ್ದು, ಅಲ್ಲಿ ಹಳೆಯ ದರವೇ 19 ರೂ. ಇದೆ. ಕಾರ್ಮಿಕರಿಗೆ ಕ್ವಿಂಟ್ವಾಲ್‌ಗೆ 4.62 ರೂ. ಹಾಗೆಯೇ ಸಗಟು ಸಾಗಾಣಿಕೆ ಟೆಂಡರ್‌ ಆಗದೇ ಉಳಿದಿರುವ ತಾಲೂಕುಗಳಲ್ಲಿ 10ರೂ. ಇದೆ. ಟೆಂಡರ್ ಆಗಿರುವ ತಾಲೂಕುಗಳಿಗೆ 10.92 ರೂ. ಇದೆ. ಇದರಿಂದ ಪ್ರತಿ ಕ್ವಿಂಟ್ವಾಲ್‌ಗೆ ಕಾರ್ಮಿಕರಿಗೆ 5.54 ರೂ. ನಷ್ಟ ಉಂಟಾಗುತ್ತಿದೆ. ಕಾರ್ಮಿಕರು ಪ್ರತಿತಿಂಗಳು ಲಕ್ಷಾಂತರ ರೂ. ನಷ್ಟವಾಗುತ್ತಿದೆ ಎಂದಿದ್ದಾರೆ.

ಮೈಸೂರು ಜಿಲ್ಲೆ ಪಿರಿಯಾಪಟ್ಟಣ, ಕೆ.ಆರ್‌ ನಗರ ಕೆಎಫ್‌ಸಿಎಸ್‌ಸಿ, ಸರಗೂರು, ಹೆಚ್‌.ಡಿ ಕೋಟೆ, ಹುಣಸೂರು, ನಂಜನಗೂಡು ತಾಲೂಕುಗಳಿಗೆ ಟೆಂಡರ್ ಆಗದೇ ಉಳಿದಿದ್ದು, ಆ ತಾಲೂಕುಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಈ ಕೂಡಲೇ ಹೊಸ ದರ ಚಿಲ್ಲರೆ ಸಾಗಾಣಿಕೆ ಕ್ವಿಂಟಾಲ್‌ಗೆ 23.62 ರೂ. ಸಗಟು ಸಾಗಾಣಿಕೆ ಟೆಂಡರ್ ಕ್ವಿಂಟಾಲ್‌ಗೆ 10.92 ರೂ. ನಿಗದಿ ಮಾಡಿ ಆದೇಶ ಮಾಡಬೇಕು. ತಿಂಗಳಿಗೆ ಲಕ್ಷಾಂತರ ರೂ. ಕಾರ್ಮಿಕರಿಗೆ ನಷ್ಟ ಉಂಟಾಗುತ್ತಿದ್ದು, ಫೆಬ್ರವರಿ 2025ರಿಂದಲೇ ಜಾರಿಗೆ ಬರುವಂತೆ ಈ ಕೂಡಲೇ ಕೂಲಿ ಹೆಚ್ಚಳ ಮಾಡಿ ಆದೇಶ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಆಹಾರ ನಿಗಮದ ಕೆಎಫ್‌ಸಿಎಸ್‌ಸಿ ಹಾಗೂ ಟಿಎಪಿಸಿಎಂಸಿ ಗೋದಾಮುಗಳಲ್ಲಿ ಆಹಾರ ಧಾನ್ಯಗಳ ಎತುವಳಿ ಲೋಡಿಂಗ್ &ಅನ್‌ಲೋಡಿಂಗ್ ಕೆಲಸ ಮಾಡುವ ಹಮಾಲಿ ಕಾರ್ಮಿಕರಿಗೆ ಸರ್ಕಾರ 2024-2026 ಟೆಂಡರ್ ನಿಯಮಾವಳಿಯಲ್ಲಿ ಇಎಸ್‌ಐ ಮತ್ತು ಪಿಎಫ್ ಪಾವತಿಸುವುದು ಕಡ್ಡಾಯ ಮಾಡಿದೆ. ಆದರೆ, ಇದು ಮೈಸೂರು ಜಿಲ್ಲೆಯಲ್ಲಿ ಇನ್ನೂ ಜಾರಿಯಾಗಿಲ್ಲ. ಇಎಸ್ಐ ಕಟ್ಟದೆ ಇರುವ ಕಾರಣದಿಂದ ಆನಾರೋಗ್ಯಕ್ಕೀಡಾದ ಕಾರ್ಮಿಕರಿಗೆ ತುಂಬಾ ತೊಂದರೆಯಾಗುತ್ತಿದ್ದು, ಕೈಯಿಂದ ಹಣ ಪಾವತಿಸಬೇಕಾದ ಸಂದರ್ಭ ಬಂದಿದೆ. ಇಎಸ್ಐ ಇದ್ದರೂ ಉಪಯೋಗಕ್ಕೆ ಬಾರದಂತಾಗಿದೆ ಎಂದು ಹೇಳಿದ್ದಾರೆ.

2025ರ ಫೆಬ್ರವರಿ ಮಾಹೆಯಿಂದಲೂ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರರು ಕಾರ್ಮಿಕರಿಂದ ಇಎಸ್ಐ ಮತ್ತು ಪಿಎಫ್ ವಂತಿಗೆ ಕಡಿತ ಮಾಡಿದ್ದು, ಇಲ್ಲಿಯವರೆಗೂ ಪಾವತಿ ಮಾಡದೇ ಇರುವುದು ಕಾನೂನೂ ಬಾಹಿರ ಮತ್ತು ಕ್ರಿಮಿನಲ್ ಅಪರಾಧ. ಹಾಗಾಗಿ, ಇದರ ಬಗ್ಗೆ ತುರ್ತಾಗಿ ಗಮನವಹಿಸಿ, ಕ್ರಮವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ಚಿಲ್ಲರೆ ಸಾಗಾಣಿಕೆಗೆ ಯಾವುದೇ ಗುತ್ತಿಗೆದಾರರು ಗುತ್ತಿಗೆ ಕಾರ್ಮಿಕ ಕಾಯ್ದೆ ಪ್ರಕಾರ ನಿಯಮಾವಳಿಗಳನ್ನು ಪಾಲಿಸುತಿಲ್ಲ. ಸರಿಯಾದ ಸಮಯಕ್ಕೆ ಸಂಬಳ (ಕೂಲಿ) ಪಾವತಿ ಮಾಡುತ್ತಿಲ್ಲ. ಸಂಬಳ ಪಾವತಿ ರಸೀದಿ ಅಥವಾ ಸಂಬಳ ಚೀಟಿ (WAGE SLIP ) ಇಎಸ್ಐ ಮತ್ತು ಪಿಎಫ್‌ ವಂತಿಕೆ ಪಾವತಿ ರಸೀದಿ ನೀಡುತ್ತಿಲ್ಲ. ಹಾಗಾಗಿ, ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ಸಂಬಳ ಪಾವತಿಸಲು ಹಾಗೂ ಆಯಾ ತಿಂಗಳು ಇಎಸ್ಐ ಮತ್ತು ಪಿಎಫ್ ವಂತಿಕೆ ಪಾವತಿಸಿ ರಸೀದಿ ನೀಡಲು ಕ್ರಮವಹಿಸಬೇಕು ಎಂದು ಮನವಿ ಮಾಡಿದ್ದಾರೆ.

2023ರ ಆಗಸ್ಟ್ 30ರಂದು ನಡೆದ ದ್ವಿಪಕ್ಷೀಯ ಕರಾರಿನಲ್ಲಿ ಮೂರು ತಿಂಗಳು ಕಾಲವಕಾಶ ಕೋರಿ, ನಂತರ ಅದರ ಉಲ್ಲಂಘನೆ ಮಾಡಿ 2023ರ ಜುಲೈನಿಂದ ಚಿಲ್ಲರೆ ಸಾಗಣಿಕೆ ಗುತ್ತಿಗೆದಾರರು ಆಹಾರ ಧಾನ್ಯಗಳ ಎತ್ತುವಳಿ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕೂಲಿ ದರ 1.90ರೂ. ಕಡಿಮೆ ಪಾವತಿ ಮಾಡಿಲಾಗಿದೆ. ಇದರ ಬಗ್ಗೆ 2024ರ ಸೆಪ್ಟಂಬರ್ 20ರಂದು ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ. ಆದರೆ, ಇದುವರೆಗೆ ಪಾವತಿಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಹಾಗಾಗಿ, ಮೈಸೂರು ಜಿಲ್ಲೆಯ ಕೆಲವು ತಾಲೂಕುಗಳಿಗೆ ಸಾಗಾಣಿಕೆ ಗುತ್ತಿಗೆದಾರರು ಬದಲಾಗಿದ್ದಾರೆ. ಈ ಗುತ್ತಿಗೆದಾರರ ಇಎಂಡಿ ಹಣ ಮತ್ತು ಸಾಗಾಣಿಕೆ ಬಿಲ್ ಹಣ ಪಾವತಿ ಮಾಡದೆ ಕಡ್ಡಾಯವಾಗಿ ತಡೆ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.

ತಮ್ಮ ಸಮಸ್ಯೆ ಇತ್ಯರ್ಥಪಡಿಸದಿದ್ದರೆ ಆಗಸ್ಟ್ 15ರಂದು ಕರಾಳ ಸ್ವಾತಂತ್ರ್ಯ ದಿನ ಆಚರಿಸುವುದಾಗಿ ಕಾರ್ಮಿಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಒಕ್ಕೂಟದ ಜಿಲ್ಲಾಧ್ಯ ಕ್ಷ ಕರಿನಾಯಕ, ಕಾರ್ಯದರ್ಶಿ ಮಹದೇವ ಹಾಗೂ ಮಂಡ್ಯ ಜಿಲ್ಲಾ ಮುಖಂಡರಾದ ಕೃಷ್ಣಪ್ಪ, ಪುಟ್ಟಸ್ವಾಮಿ ಸೇರಿದತೆ ಪ್ರಮುಖರು ಇದ್ದರು.

“ಬೇಟಿ ಬಚಾವೋ” ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು: ಬಿ.ಕೆ ಹರಿಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...