Homeಕರ್ನಾಟಕದೇವನಹಳ್ಳಿ| ಹಠಾತ್ ಕಾಣಿಸಿಕೊಂಡ ಭೂಸ್ವಾಧೀನ 'ಪರ' ಗುಂಪು; 'ಸರ್ಕಾರಿ ಪ್ರಾಯೋಜಿತ' ಎಂದ ರೈತರು?

ದೇವನಹಳ್ಳಿ| ಹಠಾತ್ ಕಾಣಿಸಿಕೊಂಡ ಭೂಸ್ವಾಧೀನ ‘ಪರ’ ಗುಂಪು; ‘ಸರ್ಕಾರಿ ಪ್ರಾಯೋಜಿತ’ ಎಂದ ರೈತರು?

- Advertisement -
- Advertisement -

1777 ಎಕರೆ ಬಲವಂತದ ಭೂಸ್ವಾಧೀನ ವಿರೋಧಿಸಿ ಸುಮಾರು 1200 ದಿನಗಳಿಂದ ಚನ್ನರಾಯಪಟ್ಟಣದ 13 ಹಳ್ಳಿಗಳ ರೈತರು ನಿರಂತರ ಹೋರಾಟ ನಡೆಸುತ್ತಾ ಬಂದಿದ್ದಾರೆ; ಶೇ.73 ರೈತರು ಭೂಮಿ ಕೊಡುವುದಿಲ್ಲ ಎಂದು ಮೂರುವರೆ ವರ್ಷದಿಂದ ಕೆಐಎಡಿಬಿ ವಿರುದ್ಧ ದೃಢವಾಗಿ ನಿಂತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗಿನ ಹಲವು ಸುತ್ತಿನ ಸಭೆಗಳ ಬಳಿಕ ಜು.15ಕ್ಕೆ ಅಂತಿಮ ಮಾತುಕತೆಗೆ ದಿನ ನಿಗದಿಯಾಗಿದೆ. ಆದರೆ, ಸರ್ಕಾರ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಐದು ದಿನ ಮಾತ್ರ ಬಾಕಿ ಇರುವಾಗ, ಇದ್ದಕ್ಕಿದ್ದಂತೆ ಭೂಸ್ವಾಧೀನ ‘ಪರ’ ಗುಂಪೊಂದು ಸುದ್ದಿಗೋಷ್ಠಿ ನಡೆಸಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ‘ಸರ್ಕಾರ ಹತ್ತು ದಿನ ಸಮಯ ತೆಗೆದುಕೊಂಡಿದ್ದೇ ಹೋರಾಟವನ್ನು ಹಣಿಯುವುದಕ್ಕೆ’ ಎಂದು ರೈತರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಜೂ.25ರ ‘ದೇವನಹಳ್ಳಿ ಚಲೋ’ ಹೋರಾಟದ ಬಳಿಕ ಜು.4ರಂದು ಮುಖ್ಯಮಂತ್ರಿಗಳೊಂದಿಗೆ ಚನ್ನರಾಯಪಟ್ಟಣ ‘ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ ರೈತರು ಮತ್ತು ಸಂಯುಕ್ತ ‘ಹೋರಾಟ-ಕರ್ನಾಟಕ’ ಮುಖಂಡರ ಸಭೆ ನಿಗದಿಯಾಗಿತ್ತು. ಅಂದು, ” ಈಗ ನಿರ್ಧಾರ ಕೈಗೊಳ್ಳುವುದು ಅಸಾಧ್ಯ” ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಡಿನೋಟಿಫೈ ಮಾಡಲು ಕಾನೂನಿನ ತೊಡಕುಗಳ ಬಗ್ಗೆ ಚರ್ಚೆ ಮಾಡಬೇಕು, ಜು.15ರಂದು ರೈತರೊಂದಿಗೆ ಅಂತಿಮ ಸುತ್ತಿನ ಸಭೆ ನಡೆಸಿ ನನ್ನ ನಿರ್ಧಾರ ತಿಳಿಸುತ್ತೇನೆ” ಎಂದಿದ್ದರು.

ಸಭೆಗೆ ಇನ್ನು ನಾಲ್ಕು ದಿನ ಇರುವಾಗ ಇದ್ದಕ್ಕಿದ್ದಂತೆ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಗುಂಪೊಂದು, “ಶೇ.80ರಷ್ಟು ರೈತರು ಭೂಮಿ ಕೊಡುವುದಕ್ಕೆ ಒಪ್ಪಿದ್ದಾರೆ; ನಮ್ಮಲ್ಲಿ ಅಂತರ್ಜಲವಿಲ್ಲ, ಈ ಭೂಮಿ ಕೃಷಿಗೆ ಯೋಗ್ಯವಾಗಿಲ್ಲ. ಸರ್ಕಾರ ಸೂಕ್ತ ಬೆಲೆ ಕೊಟ್ಟು ಭೂಮಿ ಪಡೆದುಕೊಳ್ಳಲಿ” ಎಂದು ಹೇಳಿದ್ದಾರೆ.

“ಭೂಸ್ವಾಧೀನದ ಬದಲಿಗೆ 20 ವರ್ಷಗಳ ಕಾಲ ಈ ಪ್ರದೇಶವನ್ನು ‘ಹಸಿರುವ ವಲಯ’ ಎಂದು ಘೋಷಿಸಿ, ಸರ್ಕಾರ ‘ಪರಭಾರೆ ನಿಷೇಧ’ ಜಾರಿ ಮಾಡಲಿದೆ ಎಂಬ ಸುದ್ದಿಯಿಂದ ಹಿಡಿದು, ಮುಖ್ಯಮಂತ್ರಿಗಳು ಮತ್ತು ಸಚಿವರ ದೆಹಲಿ ಭೇಟಿ ಸೇರಿದಂತೆ ಇಂದಿನ ಸುದ್ದಿಗೋಷ್ಠಿಯೂ ಸಹ ರೈತರಿಂದ ಭೂಮಿ ಕಸಿದುಕೊಳ್ಳುವ ಹುನ್ನಾರ” ಎಂದು ಭೂಸ್ವಾಧೀನ ವಿರೋಧಿ ಹೋರಾಟಗಾರರು ಆರೋಪ ಮಾಡಿದ್ದಾರೆ.

ಇದೆಲ್ಲವೂ ಸರ್ಕಾರಿ ಪ್ರಾಯೋಜಿತ

“ಇಂದು ಎಲ್ಲವೂ ಸರ್ಕಾರಿ ಪ್ರಾಯೋಜಿತವಾಗಿಯೇ ನಡೆದಿದೆ. ನಾಲ್ಕು ವರ್ಷದಿಂದ ಸುಮ್ಮನಿದ್ದವರನ್ನು ಸರ್ಕಾರ ಈಗ ಬಳಸಿಕೊಳ್ಳುತ್ತಿದೆ. ನಮ್ಮ ಹೋರಾಟಕ್ಕೆ ರಾಷ್ಟ್ರಮಟ್ಟದಲ್ಲಿ ಬೆಂಬಲ ಸಿಗುತ್ತಿರುವುದನ್ನು ನೋಡಿ ಸರ್ಕಾರ ವಿಚಲಿತವಾಗಿದೆ. ಮುಂದಕ್ಕೆ ಏನೇ ನಡೆದರೂ ‘ಮೇಲಿನವರ’ ಅಣತಿಯಂತೆಯೇ ನಡೆಯುತ್ತದೆ. ಅದಕ್ಕಾಗಿಯೇ ಅವರು 10 ದಿನ ಸಮಯಾವಾಕಾಶ ತೆಗೆದುಕೊಂಡರು. ಇದರಿಂದ ನಾವು ಯಾವುದೇ ಕಾರಣಕ್ಕೂ ಎದೆಗುಂದಲ್ಲ; 13 ಹಳ್ಳಿಗಳ ಶೇ.80ರಷ್ಟು ರೈತರು ನಮ್ಮೊಂದಿಗೆ ದೃಢವಾಗಿ ನಿಂತಿದ್ದಾರೆ. ಅವರ ಯಾವ ಹುನ್ನಾರಗಳೂ ಫಲ ಕೊಡುವುದಿಲ್ಲ” ಎಂದು ‘ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ ಸಂಚಾಲಕರಾದ ಕಾರಳ್ಳಿ ಶ್ರೀನಿವಾಸ್ ಹೇಳಿದರು.

ಪೋಲನಹಳ್ಳಿ ಗ್ರಾಮದ ಯುವ ರೈತ ಪ್ರಮೋದ್ ಮಾತನಾಡಿ, “13 ಹಳ್ಳಿಗಳ ಶೇ.80ರಷ್ಟು ಜನ ನಾವು ಭೂಮಿ ಕೊಡುವುದಿಲ್ಲ ಎಂದು ದೃಢವಾಗಿ ನಿಂತಿದ್ದೇವೆ, ಇದಕ್ಕೆ ನಾವು ಬದ್ಧರಾಗಿದ್ದೇವೆ. ಈ ಬಗ್ಗೆ ಸರ್ಕಾರ ಯಾವುದೇ ರೀತಿಯ ತನಿಖೆ ಮಾಡಲಿ; ದಿನದಿಂದ ದಿನ್ಕಕೆ ಭೂಮಿ ಕೊಡುವುದಿಲ್ಲ ಎಂಬುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಷ್ಟು ದಿನ ಸುಮ್ಮನಿದ್ದವರು ಈಗ ಸುದ್ದಿಗೋಷ್ಠಿ ನಡೆಸಿದ್ದು ಯಾಕೆ? ಸರ್ಕಾರ ಹತ್ತು ದಿನ ಸಮಯ ತೆಗೆದುಕೊಂಡಾಗಲೇ ಇವರು ಸುದ್ದಿಗೋಷ್ಠಿ ನಡೆಸಿರುವುದು ಸಾಕಷ್ಟು ಅನುಮಾನ ಮೂಡಿಸಿದೆ. ಇಂದು ಅಲ್ಲಿದ್ದವರಲ್ಲಿ ಕೆಲವರು ಸಚಿವ ಕೆ.ಎಚ್‌.ಮುನಿಯಪ್ಪ ಅವರಿಗೆ ಆಪ್ತರಿದ್ದಾರೆ; ಸಚಿವರೇ ಇವರನ್ನು ಮುಂದೆ ಬಿಟ್ಟಿರುವ ಸಾಧ್ಯತೆಗಳಿವೆ. ಯಾವುದೇ ಕಾರಣಕ್ಕೂ ನಾವು ಇದನ್ನು ಒಪ್ಪುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭೂಸ್ವಾಧೀನ ವಿರೋಧಿಸಿ ಪೋಲನಹಳ್ಳಿ ಗ್ರಾಮದಲ್ಲಿ ಇಂದು ನಡೆದ ರೈತರ ಸಭೆ

ಚನ್ನರಾಯಪಟ್ಟಣ ಗ್ರಾಮದ ರೈತ ಮೋಹನ್ ಮಾತನಾಡಿ, ಭೂಮಿ ಕೊಡುವುದಕ್ಕೆ ಶೇ.80ರಷ್ಟು ರೈತರು ಒಪ್ಪಿದ್ದಾರೆ ಎಂದು ಸುದ್ದಿಗೋಷ್ಠಿ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ಚನ್ನರಾಯಪಟ್ಟಣದಲ್ಲಿ ರೈತರೆಲ್ಲಾ ಭೂಮಿ ಕೊಡುವುದಕ್ಕೆ ಒಪ್ಪಿದ್ದಾರೆ ಎಂದು ಹೇಳುವುದಕ್ಕೆ ಅವರು ಯಾರು? ಇಂದು ಪತ್ರಿಕಾಗೋಷ್ಠಿ ನಡೆಸಿದವರಿಗೆ ಇಲ್ಲಿ ಹೆಚ್ಚಿನ ಭೂಮಿಯೇ ಇಲ್ಲ. ಅವರಲ್ಲಿ ಬಹುತೇಕರು ಭೂ ದಲ್ಲಾಳಿಗಳು; ಹಲವು ಅಮಾಯಕರಿಗೆ ವಂಚಿಸಿದ್ದಾರೆ. ಈ ಹಿಂದೆ ಇದೇ ರೀತಿ ಸುಳ್ಳು ಹೇಳಿದಾಗ ದಲಿತರೆಲ್ಲಾ ಸೇರಿಕೊಂಡು ಊರಿನ ಮಧ್ಯೆ ಅವರಿಗೆ ಛೀಮಾರಿ ಹಾಕಿದ್ದೆವು. ಯಾವುದೇ ಕಾರಣಕ್ಕೂ ನಾವು ಭೂಮಿ ಕೊಡುವುದಕ್ಕೆ ಒಪ್ಪಿಕೊಳ್ಳುವುದಿಲ್ಲ. ನಮ್ಮ ಪ್ರಾಣ ಹೋದರೂ ಭೂಮಿ ಕೊಡುವುದಿಲ್ಲ. ಏಕೆಂದರೆ, ಭೂಮಿಯೇ ನಮ್ಮ ಅಸ್ತಿತ್ವ. ನನ್ನ ತಾತನ ಕಾಲದಿಂದ ಮಣ್ಣನ್ನೇ ನಂಬಿಕೊಂಡಿರುವ ನಮಗೆ ಭೂಮಿ ಜೊತೆಗೆ ಅವಿನಾಭಾವ ಸಂಬಂಧ ಇದೆ. ನಾನೂ ಸೇರಿದಂತೆ ಚನ್ನರಾಯಪಟ್ಟಣ ಗ್ರಾಮದ ಹಲವಾರು ದಲಿತ ಕುಟುಂಬಗಳು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕೊಳವೆ ಬಾವಿ ಕೊರೆಸಿದ್ದೇವೆ. ಪಾಲಿ ಹೌಸ್‌ ಮಾಡಿ ಆಧುನಿಕ ಕೃಷಿ ಮಾಡುತ್ತಿದ್ದೇವೆ. ಗ್ರಾಮದ ಎಲ್ಲ ದಲಿತರೂ ನೀರಾವರಿ ಕೃಷಿ ಮಾಡುತ್ತಿದ್ದಾರೆ, ನಾವು ಭೂಮಿ ಕೊಡುವುದಿಲ್ಲ ಕೆಐಎಡಿಬಿ ಅಧಿಕಾರಿಗಳಿಗೆ ಈ ಬಗ್ಗೆ ಮೊದಲೇ ತಿಳಿಸಿದ್ದೇವೆ” ಎಂದು ಸುದ್ದಿಗೋಷ್ಠೀ ನಡೆಸಿದವರ ವಿರುದ್ಧ ಕಿಡಿಕಾರಿದರು.

ಎಐ ಯುಗದಲ್ಲಿ ಉದ್ಯೋಗದ ಭದ್ರತೆ ಇಲ್ಲ

ಎಐ ಯುಗದಲ್ಲಿ ನಮಗೆ ಉದ್ಯೋಗದ ಭದ್ರತೆ ಇಲ್ಲ, ಅದಕ್ಕಾಗಿಯೇ ನಾನು ಕೃಷಿ ಆಯ್ದುಕೊಂಡಿದ್ದೇನೆ ಎಂದು ಮಟ್ಟಬಾರ್ಲು ಗ್ರಾಮದ ಯುವ ರೈತ ನಂದನ್ ಹೇಳಿದರು. ಭೂಮಿ ಕೊಡುತ್ತೇವೆ ಎಂದು ಸುದ್ದಿಗೋಷ್ಠಿ ನಡೆಸಿದವರ ನಡೆಯನ್ನು ಖಂಡಿಸಿದರು.

“ನಾನು ಇಂಜಿನಿಯರಿಂಗ್ ಮುಗಿಸಿ ಕೃಷಿ ಮಾಡುತ್ತಿದ್ದೇನೆ. ಕೃಷಿಯನ್ನೂ ಈಗ ಲಾಭದಾಯಕವಾಗಿಸಬಹುದು. ನಮ್ಮ ಹಿರೀಕರು ಸಹ ಕೃಷಿ ಮಾಡಿಕೊಂಡೇ ಇಲ್ಲೀವರೆಗೆ ಬಂದಿದ್ದಾರೆ. ಈಗಿರುವ ಎಐ ಯುಗದಲ್ಲಿ ನಮಗೆ ಉದ್ಯೋಗದ ಭದ್ರತೆಯೇ ಇಲ್ಲ. ಪ್ರಸಿದ್ಧ ಕಂಪನಿಯೊಂದು 9 ಸಾವಿರ ಜನರನ್ನು ಉದ್ದೋಗದಿಂದ ತೆಗೆದಿದ್ದಾರೆ. ಆದ್ದರಿಂದ, ಕೃಷಿಯೇ ನಮಗೆ ಆಧಾರ. ಕಂಪನಿಗಳು ಕೊಡುವ 20 ಸಾವಿರ ರೂಪಾಯಿ ಸಂಬಳದ ಬದಲಿಗೆ ಕೃಷಿಯನ್ನು ಲಾಭದಾಯಕ ಮಾಡುವ ಬಗ್ಗೆ ಯೋಚಿಸಬೇಕು. ನಾನೀಗ ತರಕಾರಿ, ಹೂ ಮತ್ತು ಹಣ್ಣಿನ ಜೊತೆಗೆ ಹೈನುಗಾರಿಯನ್ನೂ ಮಾಡಿಕೊಂಡಿದ್ದೇನೆ” ಎಂದರು.

ಕರ್ನಾಟಕದಲ್ಲಿ ಡಿಫೆನ್ಸ್‌ ಕಾರಿಡಾರ್‌ಗಳ ಸ್ಥಾಪನೆಗೆ ಮನವಿ; ರಕ್ಷಣಾ ಸಚಿವರನ್ನು ಭೇಟಿಯಾದ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...