Homeಕರ್ನಾಟಕದೇವನಹಳ್ಳಿ| ಹಠಾತ್ ಕಾಣಿಸಿಕೊಂಡ ಭೂಸ್ವಾಧೀನ 'ಪರ' ಗುಂಪು; 'ಸರ್ಕಾರಿ ಪ್ರಾಯೋಜಿತ' ಎಂದ ರೈತರು?

ದೇವನಹಳ್ಳಿ| ಹಠಾತ್ ಕಾಣಿಸಿಕೊಂಡ ಭೂಸ್ವಾಧೀನ ‘ಪರ’ ಗುಂಪು; ‘ಸರ್ಕಾರಿ ಪ್ರಾಯೋಜಿತ’ ಎಂದ ರೈತರು?

- Advertisement -
- Advertisement -

1777 ಎಕರೆ ಬಲವಂತದ ಭೂಸ್ವಾಧೀನ ವಿರೋಧಿಸಿ ಸುಮಾರು 1200 ದಿನಗಳಿಂದ ಚನ್ನರಾಯಪಟ್ಟಣದ 13 ಹಳ್ಳಿಗಳ ರೈತರು ನಿರಂತರ ಹೋರಾಟ ನಡೆಸುತ್ತಾ ಬಂದಿದ್ದಾರೆ; ಶೇ.73 ರೈತರು ಭೂಮಿ ಕೊಡುವುದಿಲ್ಲ ಎಂದು ಮೂರುವರೆ ವರ್ಷದಿಂದ ಕೆಐಎಡಿಬಿ ವಿರುದ್ಧ ದೃಢವಾಗಿ ನಿಂತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗಿನ ಹಲವು ಸುತ್ತಿನ ಸಭೆಗಳ ಬಳಿಕ ಜು.15ಕ್ಕೆ ಅಂತಿಮ ಮಾತುಕತೆಗೆ ದಿನ ನಿಗದಿಯಾಗಿದೆ. ಆದರೆ, ಸರ್ಕಾರ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಐದು ದಿನ ಮಾತ್ರ ಬಾಕಿ ಇರುವಾಗ, ಇದ್ದಕ್ಕಿದ್ದಂತೆ ಭೂಸ್ವಾಧೀನ ‘ಪರ’ ಗುಂಪೊಂದು ಸುದ್ದಿಗೋಷ್ಠಿ ನಡೆಸಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ‘ಸರ್ಕಾರ ಹತ್ತು ದಿನ ಸಮಯ ತೆಗೆದುಕೊಂಡಿದ್ದೇ ಹೋರಾಟವನ್ನು ಹಣಿಯುವುದಕ್ಕೆ’ ಎಂದು ರೈತರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಜೂ.25ರ ‘ದೇವನಹಳ್ಳಿ ಚಲೋ’ ಹೋರಾಟದ ಬಳಿಕ ಜು.4ರಂದು ಮುಖ್ಯಮಂತ್ರಿಗಳೊಂದಿಗೆ ಚನ್ನರಾಯಪಟ್ಟಣ ‘ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ ರೈತರು ಮತ್ತು ಸಂಯುಕ್ತ ‘ಹೋರಾಟ-ಕರ್ನಾಟಕ’ ಮುಖಂಡರ ಸಭೆ ನಿಗದಿಯಾಗಿತ್ತು. ಅಂದು, ” ಈಗ ನಿರ್ಧಾರ ಕೈಗೊಳ್ಳುವುದು ಅಸಾಧ್ಯ” ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಡಿನೋಟಿಫೈ ಮಾಡಲು ಕಾನೂನಿನ ತೊಡಕುಗಳ ಬಗ್ಗೆ ಚರ್ಚೆ ಮಾಡಬೇಕು, ಜು.15ರಂದು ರೈತರೊಂದಿಗೆ ಅಂತಿಮ ಸುತ್ತಿನ ಸಭೆ ನಡೆಸಿ ನನ್ನ ನಿರ್ಧಾರ ತಿಳಿಸುತ್ತೇನೆ” ಎಂದಿದ್ದರು.

ಸಭೆಗೆ ಇನ್ನು ನಾಲ್ಕು ದಿನ ಇರುವಾಗ ಇದ್ದಕ್ಕಿದ್ದಂತೆ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಗುಂಪೊಂದು, “ಶೇ.80ರಷ್ಟು ರೈತರು ಭೂಮಿ ಕೊಡುವುದಕ್ಕೆ ಒಪ್ಪಿದ್ದಾರೆ; ನಮ್ಮಲ್ಲಿ ಅಂತರ್ಜಲವಿಲ್ಲ, ಈ ಭೂಮಿ ಕೃಷಿಗೆ ಯೋಗ್ಯವಾಗಿಲ್ಲ. ಸರ್ಕಾರ ಸೂಕ್ತ ಬೆಲೆ ಕೊಟ್ಟು ಭೂಮಿ ಪಡೆದುಕೊಳ್ಳಲಿ” ಎಂದು ಹೇಳಿದ್ದಾರೆ.

“ಭೂಸ್ವಾಧೀನದ ಬದಲಿಗೆ 20 ವರ್ಷಗಳ ಕಾಲ ಈ ಪ್ರದೇಶವನ್ನು ‘ಹಸಿರುವ ವಲಯ’ ಎಂದು ಘೋಷಿಸಿ, ಸರ್ಕಾರ ‘ಪರಭಾರೆ ನಿಷೇಧ’ ಜಾರಿ ಮಾಡಲಿದೆ ಎಂಬ ಸುದ್ದಿಯಿಂದ ಹಿಡಿದು, ಮುಖ್ಯಮಂತ್ರಿಗಳು ಮತ್ತು ಸಚಿವರ ದೆಹಲಿ ಭೇಟಿ ಸೇರಿದಂತೆ ಇಂದಿನ ಸುದ್ದಿಗೋಷ್ಠಿಯೂ ಸಹ ರೈತರಿಂದ ಭೂಮಿ ಕಸಿದುಕೊಳ್ಳುವ ಹುನ್ನಾರ” ಎಂದು ಭೂಸ್ವಾಧೀನ ವಿರೋಧಿ ಹೋರಾಟಗಾರರು ಆರೋಪ ಮಾಡಿದ್ದಾರೆ.

ಇದೆಲ್ಲವೂ ಸರ್ಕಾರಿ ಪ್ರಾಯೋಜಿತ

“ಇಂದು ಎಲ್ಲವೂ ಸರ್ಕಾರಿ ಪ್ರಾಯೋಜಿತವಾಗಿಯೇ ನಡೆದಿದೆ. ನಾಲ್ಕು ವರ್ಷದಿಂದ ಸುಮ್ಮನಿದ್ದವರನ್ನು ಸರ್ಕಾರ ಈಗ ಬಳಸಿಕೊಳ್ಳುತ್ತಿದೆ. ನಮ್ಮ ಹೋರಾಟಕ್ಕೆ ರಾಷ್ಟ್ರಮಟ್ಟದಲ್ಲಿ ಬೆಂಬಲ ಸಿಗುತ್ತಿರುವುದನ್ನು ನೋಡಿ ಸರ್ಕಾರ ವಿಚಲಿತವಾಗಿದೆ. ಮುಂದಕ್ಕೆ ಏನೇ ನಡೆದರೂ ‘ಮೇಲಿನವರ’ ಅಣತಿಯಂತೆಯೇ ನಡೆಯುತ್ತದೆ. ಅದಕ್ಕಾಗಿಯೇ ಅವರು 10 ದಿನ ಸಮಯಾವಾಕಾಶ ತೆಗೆದುಕೊಂಡರು. ಇದರಿಂದ ನಾವು ಯಾವುದೇ ಕಾರಣಕ್ಕೂ ಎದೆಗುಂದಲ್ಲ; 13 ಹಳ್ಳಿಗಳ ಶೇ.80ರಷ್ಟು ರೈತರು ನಮ್ಮೊಂದಿಗೆ ದೃಢವಾಗಿ ನಿಂತಿದ್ದಾರೆ. ಅವರ ಯಾವ ಹುನ್ನಾರಗಳೂ ಫಲ ಕೊಡುವುದಿಲ್ಲ” ಎಂದು ‘ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ ಸಂಚಾಲಕರಾದ ಕಾರಳ್ಳಿ ಶ್ರೀನಿವಾಸ್ ಹೇಳಿದರು.

ಪೋಲನಹಳ್ಳಿ ಗ್ರಾಮದ ಯುವ ರೈತ ಪ್ರಮೋದ್ ಮಾತನಾಡಿ, “13 ಹಳ್ಳಿಗಳ ಶೇ.80ರಷ್ಟು ಜನ ನಾವು ಭೂಮಿ ಕೊಡುವುದಿಲ್ಲ ಎಂದು ದೃಢವಾಗಿ ನಿಂತಿದ್ದೇವೆ, ಇದಕ್ಕೆ ನಾವು ಬದ್ಧರಾಗಿದ್ದೇವೆ. ಈ ಬಗ್ಗೆ ಸರ್ಕಾರ ಯಾವುದೇ ರೀತಿಯ ತನಿಖೆ ಮಾಡಲಿ; ದಿನದಿಂದ ದಿನ್ಕಕೆ ಭೂಮಿ ಕೊಡುವುದಿಲ್ಲ ಎಂಬುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಷ್ಟು ದಿನ ಸುಮ್ಮನಿದ್ದವರು ಈಗ ಸುದ್ದಿಗೋಷ್ಠಿ ನಡೆಸಿದ್ದು ಯಾಕೆ? ಸರ್ಕಾರ ಹತ್ತು ದಿನ ಸಮಯ ತೆಗೆದುಕೊಂಡಾಗಲೇ ಇವರು ಸುದ್ದಿಗೋಷ್ಠಿ ನಡೆಸಿರುವುದು ಸಾಕಷ್ಟು ಅನುಮಾನ ಮೂಡಿಸಿದೆ. ಇಂದು ಅಲ್ಲಿದ್ದವರಲ್ಲಿ ಕೆಲವರು ಸಚಿವ ಕೆ.ಎಚ್‌.ಮುನಿಯಪ್ಪ ಅವರಿಗೆ ಆಪ್ತರಿದ್ದಾರೆ; ಸಚಿವರೇ ಇವರನ್ನು ಮುಂದೆ ಬಿಟ್ಟಿರುವ ಸಾಧ್ಯತೆಗಳಿವೆ. ಯಾವುದೇ ಕಾರಣಕ್ಕೂ ನಾವು ಇದನ್ನು ಒಪ್ಪುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭೂಸ್ವಾಧೀನ ವಿರೋಧಿಸಿ ಪೋಲನಹಳ್ಳಿ ಗ್ರಾಮದಲ್ಲಿ ಇಂದು ನಡೆದ ರೈತರ ಸಭೆ

ಚನ್ನರಾಯಪಟ್ಟಣ ಗ್ರಾಮದ ರೈತ ಮೋಹನ್ ಮಾತನಾಡಿ, ಭೂಮಿ ಕೊಡುವುದಕ್ಕೆ ಶೇ.80ರಷ್ಟು ರೈತರು ಒಪ್ಪಿದ್ದಾರೆ ಎಂದು ಸುದ್ದಿಗೋಷ್ಠಿ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ಚನ್ನರಾಯಪಟ್ಟಣದಲ್ಲಿ ರೈತರೆಲ್ಲಾ ಭೂಮಿ ಕೊಡುವುದಕ್ಕೆ ಒಪ್ಪಿದ್ದಾರೆ ಎಂದು ಹೇಳುವುದಕ್ಕೆ ಅವರು ಯಾರು? ಇಂದು ಪತ್ರಿಕಾಗೋಷ್ಠಿ ನಡೆಸಿದವರಿಗೆ ಇಲ್ಲಿ ಹೆಚ್ಚಿನ ಭೂಮಿಯೇ ಇಲ್ಲ. ಅವರಲ್ಲಿ ಬಹುತೇಕರು ಭೂ ದಲ್ಲಾಳಿಗಳು; ಹಲವು ಅಮಾಯಕರಿಗೆ ವಂಚಿಸಿದ್ದಾರೆ. ಈ ಹಿಂದೆ ಇದೇ ರೀತಿ ಸುಳ್ಳು ಹೇಳಿದಾಗ ದಲಿತರೆಲ್ಲಾ ಸೇರಿಕೊಂಡು ಊರಿನ ಮಧ್ಯೆ ಅವರಿಗೆ ಛೀಮಾರಿ ಹಾಕಿದ್ದೆವು. ಯಾವುದೇ ಕಾರಣಕ್ಕೂ ನಾವು ಭೂಮಿ ಕೊಡುವುದಕ್ಕೆ ಒಪ್ಪಿಕೊಳ್ಳುವುದಿಲ್ಲ. ನಮ್ಮ ಪ್ರಾಣ ಹೋದರೂ ಭೂಮಿ ಕೊಡುವುದಿಲ್ಲ. ಏಕೆಂದರೆ, ಭೂಮಿಯೇ ನಮ್ಮ ಅಸ್ತಿತ್ವ. ನನ್ನ ತಾತನ ಕಾಲದಿಂದ ಮಣ್ಣನ್ನೇ ನಂಬಿಕೊಂಡಿರುವ ನಮಗೆ ಭೂಮಿ ಜೊತೆಗೆ ಅವಿನಾಭಾವ ಸಂಬಂಧ ಇದೆ. ನಾನೂ ಸೇರಿದಂತೆ ಚನ್ನರಾಯಪಟ್ಟಣ ಗ್ರಾಮದ ಹಲವಾರು ದಲಿತ ಕುಟುಂಬಗಳು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕೊಳವೆ ಬಾವಿ ಕೊರೆಸಿದ್ದೇವೆ. ಪಾಲಿ ಹೌಸ್‌ ಮಾಡಿ ಆಧುನಿಕ ಕೃಷಿ ಮಾಡುತ್ತಿದ್ದೇವೆ. ಗ್ರಾಮದ ಎಲ್ಲ ದಲಿತರೂ ನೀರಾವರಿ ಕೃಷಿ ಮಾಡುತ್ತಿದ್ದಾರೆ, ನಾವು ಭೂಮಿ ಕೊಡುವುದಿಲ್ಲ ಕೆಐಎಡಿಬಿ ಅಧಿಕಾರಿಗಳಿಗೆ ಈ ಬಗ್ಗೆ ಮೊದಲೇ ತಿಳಿಸಿದ್ದೇವೆ” ಎಂದು ಸುದ್ದಿಗೋಷ್ಠೀ ನಡೆಸಿದವರ ವಿರುದ್ಧ ಕಿಡಿಕಾರಿದರು.

ಎಐ ಯುಗದಲ್ಲಿ ಉದ್ಯೋಗದ ಭದ್ರತೆ ಇಲ್ಲ

ಎಐ ಯುಗದಲ್ಲಿ ನಮಗೆ ಉದ್ಯೋಗದ ಭದ್ರತೆ ಇಲ್ಲ, ಅದಕ್ಕಾಗಿಯೇ ನಾನು ಕೃಷಿ ಆಯ್ದುಕೊಂಡಿದ್ದೇನೆ ಎಂದು ಮಟ್ಟಬಾರ್ಲು ಗ್ರಾಮದ ಯುವ ರೈತ ನಂದನ್ ಹೇಳಿದರು. ಭೂಮಿ ಕೊಡುತ್ತೇವೆ ಎಂದು ಸುದ್ದಿಗೋಷ್ಠಿ ನಡೆಸಿದವರ ನಡೆಯನ್ನು ಖಂಡಿಸಿದರು.

“ನಾನು ಇಂಜಿನಿಯರಿಂಗ್ ಮುಗಿಸಿ ಕೃಷಿ ಮಾಡುತ್ತಿದ್ದೇನೆ. ಕೃಷಿಯನ್ನೂ ಈಗ ಲಾಭದಾಯಕವಾಗಿಸಬಹುದು. ನಮ್ಮ ಹಿರೀಕರು ಸಹ ಕೃಷಿ ಮಾಡಿಕೊಂಡೇ ಇಲ್ಲೀವರೆಗೆ ಬಂದಿದ್ದಾರೆ. ಈಗಿರುವ ಎಐ ಯುಗದಲ್ಲಿ ನಮಗೆ ಉದ್ಯೋಗದ ಭದ್ರತೆಯೇ ಇಲ್ಲ. ಪ್ರಸಿದ್ಧ ಕಂಪನಿಯೊಂದು 9 ಸಾವಿರ ಜನರನ್ನು ಉದ್ದೋಗದಿಂದ ತೆಗೆದಿದ್ದಾರೆ. ಆದ್ದರಿಂದ, ಕೃಷಿಯೇ ನಮಗೆ ಆಧಾರ. ಕಂಪನಿಗಳು ಕೊಡುವ 20 ಸಾವಿರ ರೂಪಾಯಿ ಸಂಬಳದ ಬದಲಿಗೆ ಕೃಷಿಯನ್ನು ಲಾಭದಾಯಕ ಮಾಡುವ ಬಗ್ಗೆ ಯೋಚಿಸಬೇಕು. ನಾನೀಗ ತರಕಾರಿ, ಹೂ ಮತ್ತು ಹಣ್ಣಿನ ಜೊತೆಗೆ ಹೈನುಗಾರಿಯನ್ನೂ ಮಾಡಿಕೊಂಡಿದ್ದೇನೆ” ಎಂದರು.

ಕರ್ನಾಟಕದಲ್ಲಿ ಡಿಫೆನ್ಸ್‌ ಕಾರಿಡಾರ್‌ಗಳ ಸ್ಥಾಪನೆಗೆ ಮನವಿ; ರಕ್ಷಣಾ ಸಚಿವರನ್ನು ಭೇಟಿಯಾದ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...