Homeಕರ್ನಾಟಕದೇವನಹಳ್ಳಿ| ಹಠಾತ್ ಕಾಣಿಸಿಕೊಂಡ ಭೂಸ್ವಾಧೀನ 'ಪರ' ಗುಂಪು; 'ಸರ್ಕಾರಿ ಪ್ರಾಯೋಜಿತ' ಎಂದ ರೈತರು?

ದೇವನಹಳ್ಳಿ| ಹಠಾತ್ ಕಾಣಿಸಿಕೊಂಡ ಭೂಸ್ವಾಧೀನ ‘ಪರ’ ಗುಂಪು; ‘ಸರ್ಕಾರಿ ಪ್ರಾಯೋಜಿತ’ ಎಂದ ರೈತರು?

- Advertisement -
- Advertisement -

1777 ಎಕರೆ ಬಲವಂತದ ಭೂಸ್ವಾಧೀನ ವಿರೋಧಿಸಿ ಸುಮಾರು 1200 ದಿನಗಳಿಂದ ಚನ್ನರಾಯಪಟ್ಟಣದ 13 ಹಳ್ಳಿಗಳ ರೈತರು ನಿರಂತರ ಹೋರಾಟ ನಡೆಸುತ್ತಾ ಬಂದಿದ್ದಾರೆ; ಶೇ.73 ರೈತರು ಭೂಮಿ ಕೊಡುವುದಿಲ್ಲ ಎಂದು ಮೂರುವರೆ ವರ್ಷದಿಂದ ಕೆಐಎಡಿಬಿ ವಿರುದ್ಧ ದೃಢವಾಗಿ ನಿಂತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗಿನ ಹಲವು ಸುತ್ತಿನ ಸಭೆಗಳ ಬಳಿಕ ಜು.15ಕ್ಕೆ ಅಂತಿಮ ಮಾತುಕತೆಗೆ ದಿನ ನಿಗದಿಯಾಗಿದೆ. ಆದರೆ, ಸರ್ಕಾರ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಐದು ದಿನ ಮಾತ್ರ ಬಾಕಿ ಇರುವಾಗ, ಇದ್ದಕ್ಕಿದ್ದಂತೆ ಭೂಸ್ವಾಧೀನ ‘ಪರ’ ಗುಂಪೊಂದು ಸುದ್ದಿಗೋಷ್ಠಿ ನಡೆಸಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ‘ಸರ್ಕಾರ ಹತ್ತು ದಿನ ಸಮಯ ತೆಗೆದುಕೊಂಡಿದ್ದೇ ಹೋರಾಟವನ್ನು ಹಣಿಯುವುದಕ್ಕೆ’ ಎಂದು ರೈತರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಜೂ.25ರ ‘ದೇವನಹಳ್ಳಿ ಚಲೋ’ ಹೋರಾಟದ ಬಳಿಕ ಜು.4ರಂದು ಮುಖ್ಯಮಂತ್ರಿಗಳೊಂದಿಗೆ ಚನ್ನರಾಯಪಟ್ಟಣ ‘ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ ರೈತರು ಮತ್ತು ಸಂಯುಕ್ತ ‘ಹೋರಾಟ-ಕರ್ನಾಟಕ’ ಮುಖಂಡರ ಸಭೆ ನಿಗದಿಯಾಗಿತ್ತು. ಅಂದು, ” ಈಗ ನಿರ್ಧಾರ ಕೈಗೊಳ್ಳುವುದು ಅಸಾಧ್ಯ” ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಡಿನೋಟಿಫೈ ಮಾಡಲು ಕಾನೂನಿನ ತೊಡಕುಗಳ ಬಗ್ಗೆ ಚರ್ಚೆ ಮಾಡಬೇಕು, ಜು.15ರಂದು ರೈತರೊಂದಿಗೆ ಅಂತಿಮ ಸುತ್ತಿನ ಸಭೆ ನಡೆಸಿ ನನ್ನ ನಿರ್ಧಾರ ತಿಳಿಸುತ್ತೇನೆ” ಎಂದಿದ್ದರು.

ಸಭೆಗೆ ಇನ್ನು ನಾಲ್ಕು ದಿನ ಇರುವಾಗ ಇದ್ದಕ್ಕಿದ್ದಂತೆ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಗುಂಪೊಂದು, “ಶೇ.80ರಷ್ಟು ರೈತರು ಭೂಮಿ ಕೊಡುವುದಕ್ಕೆ ಒಪ್ಪಿದ್ದಾರೆ; ನಮ್ಮಲ್ಲಿ ಅಂತರ್ಜಲವಿಲ್ಲ, ಈ ಭೂಮಿ ಕೃಷಿಗೆ ಯೋಗ್ಯವಾಗಿಲ್ಲ. ಸರ್ಕಾರ ಸೂಕ್ತ ಬೆಲೆ ಕೊಟ್ಟು ಭೂಮಿ ಪಡೆದುಕೊಳ್ಳಲಿ” ಎಂದು ಹೇಳಿದ್ದಾರೆ.

“ಭೂಸ್ವಾಧೀನದ ಬದಲಿಗೆ 20 ವರ್ಷಗಳ ಕಾಲ ಈ ಪ್ರದೇಶವನ್ನು ‘ಹಸಿರುವ ವಲಯ’ ಎಂದು ಘೋಷಿಸಿ, ಸರ್ಕಾರ ‘ಪರಭಾರೆ ನಿಷೇಧ’ ಜಾರಿ ಮಾಡಲಿದೆ ಎಂಬ ಸುದ್ದಿಯಿಂದ ಹಿಡಿದು, ಮುಖ್ಯಮಂತ್ರಿಗಳು ಮತ್ತು ಸಚಿವರ ದೆಹಲಿ ಭೇಟಿ ಸೇರಿದಂತೆ ಇಂದಿನ ಸುದ್ದಿಗೋಷ್ಠಿಯೂ ಸಹ ರೈತರಿಂದ ಭೂಮಿ ಕಸಿದುಕೊಳ್ಳುವ ಹುನ್ನಾರ” ಎಂದು ಭೂಸ್ವಾಧೀನ ವಿರೋಧಿ ಹೋರಾಟಗಾರರು ಆರೋಪ ಮಾಡಿದ್ದಾರೆ.

ಇದೆಲ್ಲವೂ ಸರ್ಕಾರಿ ಪ್ರಾಯೋಜಿತ

“ಇಂದು ಎಲ್ಲವೂ ಸರ್ಕಾರಿ ಪ್ರಾಯೋಜಿತವಾಗಿಯೇ ನಡೆದಿದೆ. ನಾಲ್ಕು ವರ್ಷದಿಂದ ಸುಮ್ಮನಿದ್ದವರನ್ನು ಸರ್ಕಾರ ಈಗ ಬಳಸಿಕೊಳ್ಳುತ್ತಿದೆ. ನಮ್ಮ ಹೋರಾಟಕ್ಕೆ ರಾಷ್ಟ್ರಮಟ್ಟದಲ್ಲಿ ಬೆಂಬಲ ಸಿಗುತ್ತಿರುವುದನ್ನು ನೋಡಿ ಸರ್ಕಾರ ವಿಚಲಿತವಾಗಿದೆ. ಮುಂದಕ್ಕೆ ಏನೇ ನಡೆದರೂ ‘ಮೇಲಿನವರ’ ಅಣತಿಯಂತೆಯೇ ನಡೆಯುತ್ತದೆ. ಅದಕ್ಕಾಗಿಯೇ ಅವರು 10 ದಿನ ಸಮಯಾವಾಕಾಶ ತೆಗೆದುಕೊಂಡರು. ಇದರಿಂದ ನಾವು ಯಾವುದೇ ಕಾರಣಕ್ಕೂ ಎದೆಗುಂದಲ್ಲ; 13 ಹಳ್ಳಿಗಳ ಶೇ.80ರಷ್ಟು ರೈತರು ನಮ್ಮೊಂದಿಗೆ ದೃಢವಾಗಿ ನಿಂತಿದ್ದಾರೆ. ಅವರ ಯಾವ ಹುನ್ನಾರಗಳೂ ಫಲ ಕೊಡುವುದಿಲ್ಲ” ಎಂದು ‘ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ ಸಂಚಾಲಕರಾದ ಕಾರಳ್ಳಿ ಶ್ರೀನಿವಾಸ್ ಹೇಳಿದರು.

ಪೋಲನಹಳ್ಳಿ ಗ್ರಾಮದ ಯುವ ರೈತ ಪ್ರಮೋದ್ ಮಾತನಾಡಿ, “13 ಹಳ್ಳಿಗಳ ಶೇ.80ರಷ್ಟು ಜನ ನಾವು ಭೂಮಿ ಕೊಡುವುದಿಲ್ಲ ಎಂದು ದೃಢವಾಗಿ ನಿಂತಿದ್ದೇವೆ, ಇದಕ್ಕೆ ನಾವು ಬದ್ಧರಾಗಿದ್ದೇವೆ. ಈ ಬಗ್ಗೆ ಸರ್ಕಾರ ಯಾವುದೇ ರೀತಿಯ ತನಿಖೆ ಮಾಡಲಿ; ದಿನದಿಂದ ದಿನ್ಕಕೆ ಭೂಮಿ ಕೊಡುವುದಿಲ್ಲ ಎಂಬುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಷ್ಟು ದಿನ ಸುಮ್ಮನಿದ್ದವರು ಈಗ ಸುದ್ದಿಗೋಷ್ಠಿ ನಡೆಸಿದ್ದು ಯಾಕೆ? ಸರ್ಕಾರ ಹತ್ತು ದಿನ ಸಮಯ ತೆಗೆದುಕೊಂಡಾಗಲೇ ಇವರು ಸುದ್ದಿಗೋಷ್ಠಿ ನಡೆಸಿರುವುದು ಸಾಕಷ್ಟು ಅನುಮಾನ ಮೂಡಿಸಿದೆ. ಇಂದು ಅಲ್ಲಿದ್ದವರಲ್ಲಿ ಕೆಲವರು ಸಚಿವ ಕೆ.ಎಚ್‌.ಮುನಿಯಪ್ಪ ಅವರಿಗೆ ಆಪ್ತರಿದ್ದಾರೆ; ಸಚಿವರೇ ಇವರನ್ನು ಮುಂದೆ ಬಿಟ್ಟಿರುವ ಸಾಧ್ಯತೆಗಳಿವೆ. ಯಾವುದೇ ಕಾರಣಕ್ಕೂ ನಾವು ಇದನ್ನು ಒಪ್ಪುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭೂಸ್ವಾಧೀನ ವಿರೋಧಿಸಿ ಪೋಲನಹಳ್ಳಿ ಗ್ರಾಮದಲ್ಲಿ ಇಂದು ನಡೆದ ರೈತರ ಸಭೆ

ಚನ್ನರಾಯಪಟ್ಟಣ ಗ್ರಾಮದ ರೈತ ಮೋಹನ್ ಮಾತನಾಡಿ, ಭೂಮಿ ಕೊಡುವುದಕ್ಕೆ ಶೇ.80ರಷ್ಟು ರೈತರು ಒಪ್ಪಿದ್ದಾರೆ ಎಂದು ಸುದ್ದಿಗೋಷ್ಠಿ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ಚನ್ನರಾಯಪಟ್ಟಣದಲ್ಲಿ ರೈತರೆಲ್ಲಾ ಭೂಮಿ ಕೊಡುವುದಕ್ಕೆ ಒಪ್ಪಿದ್ದಾರೆ ಎಂದು ಹೇಳುವುದಕ್ಕೆ ಅವರು ಯಾರು? ಇಂದು ಪತ್ರಿಕಾಗೋಷ್ಠಿ ನಡೆಸಿದವರಿಗೆ ಇಲ್ಲಿ ಹೆಚ್ಚಿನ ಭೂಮಿಯೇ ಇಲ್ಲ. ಅವರಲ್ಲಿ ಬಹುತೇಕರು ಭೂ ದಲ್ಲಾಳಿಗಳು; ಹಲವು ಅಮಾಯಕರಿಗೆ ವಂಚಿಸಿದ್ದಾರೆ. ಈ ಹಿಂದೆ ಇದೇ ರೀತಿ ಸುಳ್ಳು ಹೇಳಿದಾಗ ದಲಿತರೆಲ್ಲಾ ಸೇರಿಕೊಂಡು ಊರಿನ ಮಧ್ಯೆ ಅವರಿಗೆ ಛೀಮಾರಿ ಹಾಕಿದ್ದೆವು. ಯಾವುದೇ ಕಾರಣಕ್ಕೂ ನಾವು ಭೂಮಿ ಕೊಡುವುದಕ್ಕೆ ಒಪ್ಪಿಕೊಳ್ಳುವುದಿಲ್ಲ. ನಮ್ಮ ಪ್ರಾಣ ಹೋದರೂ ಭೂಮಿ ಕೊಡುವುದಿಲ್ಲ. ಏಕೆಂದರೆ, ಭೂಮಿಯೇ ನಮ್ಮ ಅಸ್ತಿತ್ವ. ನನ್ನ ತಾತನ ಕಾಲದಿಂದ ಮಣ್ಣನ್ನೇ ನಂಬಿಕೊಂಡಿರುವ ನಮಗೆ ಭೂಮಿ ಜೊತೆಗೆ ಅವಿನಾಭಾವ ಸಂಬಂಧ ಇದೆ. ನಾನೂ ಸೇರಿದಂತೆ ಚನ್ನರಾಯಪಟ್ಟಣ ಗ್ರಾಮದ ಹಲವಾರು ದಲಿತ ಕುಟುಂಬಗಳು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕೊಳವೆ ಬಾವಿ ಕೊರೆಸಿದ್ದೇವೆ. ಪಾಲಿ ಹೌಸ್‌ ಮಾಡಿ ಆಧುನಿಕ ಕೃಷಿ ಮಾಡುತ್ತಿದ್ದೇವೆ. ಗ್ರಾಮದ ಎಲ್ಲ ದಲಿತರೂ ನೀರಾವರಿ ಕೃಷಿ ಮಾಡುತ್ತಿದ್ದಾರೆ, ನಾವು ಭೂಮಿ ಕೊಡುವುದಿಲ್ಲ ಕೆಐಎಡಿಬಿ ಅಧಿಕಾರಿಗಳಿಗೆ ಈ ಬಗ್ಗೆ ಮೊದಲೇ ತಿಳಿಸಿದ್ದೇವೆ” ಎಂದು ಸುದ್ದಿಗೋಷ್ಠೀ ನಡೆಸಿದವರ ವಿರುದ್ಧ ಕಿಡಿಕಾರಿದರು.

ಎಐ ಯುಗದಲ್ಲಿ ಉದ್ಯೋಗದ ಭದ್ರತೆ ಇಲ್ಲ

ಎಐ ಯುಗದಲ್ಲಿ ನಮಗೆ ಉದ್ಯೋಗದ ಭದ್ರತೆ ಇಲ್ಲ, ಅದಕ್ಕಾಗಿಯೇ ನಾನು ಕೃಷಿ ಆಯ್ದುಕೊಂಡಿದ್ದೇನೆ ಎಂದು ಮಟ್ಟಬಾರ್ಲು ಗ್ರಾಮದ ಯುವ ರೈತ ನಂದನ್ ಹೇಳಿದರು. ಭೂಮಿ ಕೊಡುತ್ತೇವೆ ಎಂದು ಸುದ್ದಿಗೋಷ್ಠಿ ನಡೆಸಿದವರ ನಡೆಯನ್ನು ಖಂಡಿಸಿದರು.

“ನಾನು ಇಂಜಿನಿಯರಿಂಗ್ ಮುಗಿಸಿ ಕೃಷಿ ಮಾಡುತ್ತಿದ್ದೇನೆ. ಕೃಷಿಯನ್ನೂ ಈಗ ಲಾಭದಾಯಕವಾಗಿಸಬಹುದು. ನಮ್ಮ ಹಿರೀಕರು ಸಹ ಕೃಷಿ ಮಾಡಿಕೊಂಡೇ ಇಲ್ಲೀವರೆಗೆ ಬಂದಿದ್ದಾರೆ. ಈಗಿರುವ ಎಐ ಯುಗದಲ್ಲಿ ನಮಗೆ ಉದ್ಯೋಗದ ಭದ್ರತೆಯೇ ಇಲ್ಲ. ಪ್ರಸಿದ್ಧ ಕಂಪನಿಯೊಂದು 9 ಸಾವಿರ ಜನರನ್ನು ಉದ್ದೋಗದಿಂದ ತೆಗೆದಿದ್ದಾರೆ. ಆದ್ದರಿಂದ, ಕೃಷಿಯೇ ನಮಗೆ ಆಧಾರ. ಕಂಪನಿಗಳು ಕೊಡುವ 20 ಸಾವಿರ ರೂಪಾಯಿ ಸಂಬಳದ ಬದಲಿಗೆ ಕೃಷಿಯನ್ನು ಲಾಭದಾಯಕ ಮಾಡುವ ಬಗ್ಗೆ ಯೋಚಿಸಬೇಕು. ನಾನೀಗ ತರಕಾರಿ, ಹೂ ಮತ್ತು ಹಣ್ಣಿನ ಜೊತೆಗೆ ಹೈನುಗಾರಿಯನ್ನೂ ಮಾಡಿಕೊಂಡಿದ್ದೇನೆ” ಎಂದರು.

ಕರ್ನಾಟಕದಲ್ಲಿ ಡಿಫೆನ್ಸ್‌ ಕಾರಿಡಾರ್‌ಗಳ ಸ್ಥಾಪನೆಗೆ ಮನವಿ; ರಕ್ಷಣಾ ಸಚಿವರನ್ನು ಭೇಟಿಯಾದ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...