Homeಕರ್ನಾಟಕಮಂಗಳೂರು ಎಂಆರ್‌ಪಿಎಲ್‌ನಲ್ಲಿ ಅವಘಡ: ಇಬ್ಬರು ಕಾರ್ಮಿಕರು ಸಾವು, ಓರ್ವ ಗಂಭೀರ

ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಅವಘಡ: ಇಬ್ಬರು ಕಾರ್ಮಿಕರು ಸಾವು, ಓರ್ವ ಗಂಭೀರ

- Advertisement -
- Advertisement -

ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನ (ಎಂಆರ್‌ಪಿಎಲ್‌) ಇಬ್ಬರು ಕಾರ್ಮಿಕರು ಶನಿವಾರ (ಜು. 12) ಬೆಳಿಗ್ಗೆ ಕಂಪನಿಯ ತೈಲ ಸಾಗಣೆ ಪ್ರದೇಶದಲ್ಲಿ (ಒಎಂಎಸ್‌) ಕೆಲಸ ನಿರ್ವಹಿಸುತ್ತಿದ್ದಾಗ ಸಾವನ್ನಪ್ಪಿದ್ದಾರೆ.

ಮೃತರು ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಮೂಲದ ಫೀಲ್ಡ್ ಆಪರೇಟರ್‌ಗಳಾದ ದೀಪ್ ಚಂದ್ರ ಭಾರ್ತೀಯಾ (33) ಮತ್ತು ಕೇರಳದ ಬಿಜಿಲ್ ಪ್ರಸಾದ್ (33) ಎಂದು ತಿಳಿದು ಬಂದಿದೆ. ತನ್ನ ಇಬ್ಬರು ಸಹೋದ್ಯೋಗಿಗಳನ್ನು ರಕ್ಷಿಸಲು ಹೋದ ಗದಗ ಜಿಲ್ಲೆಯ ಫೀಲ್ಡ್ ಆಪರೇಟರ್ ವಿನಾಯಕ್ ಮೈಗೇರಿ ಅಪಾಯದಿಂದ ಪಾರಾಗಿದ್ದಾರೆ.

ಅನುಭವಿ ಫೀಲ್ಡ್ ಆಪರೇಟರ್‌ಗಳಾದ ಭಾರ್ತೀಯಾ ಮತ್ತು ಪ್ರಸಾದ್ ತೈಲ ಸಾಗಣೆ ಪ್ರದೇಶದಲ್ಲಿ ಟ್ಯಾಂಕ್‌ನ ಶಂಕಿತ ಮಟ್ಟದ ಅಸಮರ್ಪಕ ಕಾರ್ಯವನ್ನು (Suspected level malfunction) ಪರಿಶೀಲಿಸಲು ಬೆಳಿಗ್ಗೆ 8 ಗಂಟೆ ಸುಮಾರಿಗೆ ಟ್ಯಾಂಕ್‌ನ ರೂಫ್ ಪ್ಲಾಟ್‌ಫಾರ್ಮ್‌ಗೆ ಹೋಗಿದ್ದರು ಎಂದು ಎಂಆರ್‌ಪಿಎಲ್‌ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಟ್ಯಾಂಕ್ ರೂಫ್ ಪ್ಲಾಟ್‌ಫಾರ್ಮ್‌ನಲ್ಲಿ ಭಾರ್ತಿಯ ಮತ್ತು ಪ್ರಸಾದ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಸಾವನ್ನಪ್ಪಿದ್ದಾರೆ. ತನ್ನ ಸಹೋದ್ಯೋಗಿಗಳನ್ನು ರಕ್ಷಿಸಲು ಹೋದ ಮೂರನೇ ಫೀಲ್ಡ್ ಆಪರೇಟರ್ ವಿನಾಯಕ್ ಮೈಗೇರಿ ಅಪಾಯದಿಂದ ಪಾರಾಗಿದ್ದಾರೆ. ಅವರು ಪ್ರಸ್ತುತ ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದಾರೆ ಎಂದು ವರದಿಗಳು ಹೇಳಿವೆ.

ಘಟನೆ ಕುರಿತು ತನಿಖೆ ನಡೆಸಲು ಗ್ರೂಪ್ ಜನರಲ್ ಮ್ಯಾನೇಜರ್‌ಗಳ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. ಎಲ್ಲಾ ಸಂಬಂಧಿತ ಇಲಾಖಾ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಎಂಆರ್‌ಪಿಎಲ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ ಸಂತೋಷ್ ಕುಮಾರ್ ಮತ್ತು ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸುರಕ್ಷತಾ ಕ್ರಮಗಳನ್ನು ಹೆಚ್ಚಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಾಧ್ಯವಾಗುವ ಗರಿಷ್ಠ ಪರಿಹಾರ ಪಾವತಿಸುವಂತೆಯೂ ಅವರು ಕಂಪನಿಗೆ ಮನವಿ ಸೂಚನೆ ನೀಡಿದ್ದಾರೆ.

ಎಂಆರ್‌ಪಿಎಲ್‌ನ ಎಚ್ 2ಎಸ್ ಗ್ಯಾಸ್ ಉತ್ಪಾದನಾ ಘಟಕದಲ್ಲಿ ಸಣ್ಣ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗಿದೆ. ನಿಯಮಿತ ಕರ್ತವ್ಯದ ಭಾಗವಾಗಿ ಅದನ್ನು ಪರಿಶೀಲಿಸುವಾಗ ಇಬ್ಬರೂ ಕಾರ್ಮಿಕರು ಅನಿಲವನ್ನು ಉಸಿರಾಡಿದ್ದಾರೆ ಎಂದು ತೋರುತ್ತದೆ ಎಂದು ಮಂಗಳೂರು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಎಂಆರ್‌ಪಿಎಲ್ ಅಗ್ನಿಶಾಮಕ ಮತ್ತು ಸುರಕ್ಷತಾ ಸಿಬ್ಬಂದಿ ಸೋರಿಕೆಯನ್ನು ಸರಿಪಡಿಸಿದ್ದಾರೆ ಮತ್ತು ಪ್ರದೇಶವು ಈಗ ಸುರಕ್ಷಿತವಾಗಿದೆ. ಮೃತರ ಕುಟುಂಬ ಸದಸ್ಯರು, ಸಂಬಂಧಿಕರ ಹೇಳಿಕೆಗಳ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಧರ್ಮಸ್ಥಳ ಪ್ರಕರಣ | ಪೊಲೀಸ್ ರಕ್ಷಣೆಯೊಂದಿಗೆ ಬೆಳ್ತಂಗಡಿ ಕೋರ್ಟ್‌ಗೆ ಹಾಜರಾದ ದೂರುದಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...