Homeಮುಖಪುಟರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಲಾಗುವುದು: ತೆಲಂಗಾಣ ಉಪ ಮುಖ್ಯಮಂತ್ರಿ

ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಲಾಗುವುದು: ತೆಲಂಗಾಣ ಉಪ ಮುಖ್ಯಮಂತ್ರಿ

"ರೋಹಿತ್ ಪ್ರಕರಣದ ಆರೋಪಿಯನ್ನು ತೆಲಂಗಾಣದ ಅಧ್ಯಕ್ಷರನ್ನಾಗಿ ನೇಮಿಸಿದ್ದಕ್ಕೆ ಬಿಜೆಪಿ ಜನರ ಕ್ಷಮೆಯಾಚಿಸಬೇಕು"

- Advertisement -
- Advertisement -

ಹೈದರಾಬಾದ್ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಯಾಗಿದ್ದ ರೋಹಿತ್ ವೇಮುಲ ಅವರ ಆತ್ಮಹತ್ಯೆ ಪ್ರಕರಣದ ಮರು ತನಿಖೆ ನಡೆಸುವ ಕಾನೂನು ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಆರಂಭಿಸಿದೆ ಎಂದು ತೆಲಂಗಾಣದ ಉಪ ಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ತಿಳಿಸಿದ್ದಾರೆ.

“ಪ್ರಕರಣದ ಮರು ತನಿಖೆಗೆ ನಿರ್ದೇಶನ ನೀಡುವಂತೆ ನಾವು ಈಗಾಗಲೇ ಹೈಕೋರ್ಟ್‌ಗೆ ಟಿಪ್ಪಣಿ ಸಲ್ಲಿಸಿದ್ದೇವೆ. ಪ್ರಕರಣದ ಹಿಂದೆ ಎಷ್ಟೇ ಪ್ರಭಾವಿಗಳಿದ್ದರೂ ಬಿಡುವುದಿಲ್ಲ” ಎಂದು ವಿಕ್ರಮಾರ್ಕ ಹೇಳಿದ್ದಾರೆ.

ತೆಲಂಗಾಣದ ಬಿಜೆಪಿ ಅಧ್ಯಕ್ಷರಾಗಿ ರಾಮಚಂದರ್ ರಾವ್ ಅವರ ನೇಮಕದ ಕುರಿತು ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ “ಆಗ ಎಂಎಲ್‌ಸಿ ಆಗಿದ್ದ ರಾವ್, ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣದಲ್ಲಿ ಹೆಸರಿಸಲಾದ ಆರೋಪಿಗಳಲ್ಲಿ ಒಬ್ಬರು” ಎಂದಿದ್ದಾರೆ.

“ರಾವ್ ಅವರ ನೇಮಕಾರಿ ಆದಿವಾಸಿಗಳ, ದಲಿತರ ವಿರುದ್ಧ ಯಾರು ಇರುತ್ತಾರೋ ಅವರಿಗೆ ಬಿಜೆಪಿಯಿಂದ ಪ್ರತಿಫಲ ಸಿಗುತ್ತದೆ ಎಂಬುದನ್ನು ತೋರಿಸುತ್ತದೆ” ಎಂದ ವಿಕ್ರಮಾರ್ಕ, “ಬಿಜೆಪಿ ರಾಷ್ಟ್ರದ ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದ್ದಾರೆ. “ರಾವ್ ಅವರನ್ನು ಅಧ್ಯಕ್ಷರಾಗಿ ನೇಮಿಸುವ ಮೂಲಕ ನೀವು ದಲಿತರನ್ನು ಗುರಿಯಾಗಿಸಿಕೊಂಡಿದ್ದೀರಾ?” ಎಂದು ಬಿಜೆಪಿ ಹೈಕಮಾಂಡ್‌ ಅನ್ನು ಪ್ರಶ್ನಿಸಿದ್ದಾರೆ.

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ಯಾರ್ಥಿಯಾಗಿದ್ದ ರೋಹಿತ್ ವೇಮುಲ 2016ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಚಾಲ್ತಿಯಲ್ಲಿರುವ ಜಾತಿ ತಾರತಮ್ಯಕ್ಕೆ ರೋಹಿತ್ ಬಲಿಯಾಗಿದ್ದಾರೆ ಎನ್ನಲಾಗಿದೆ. ರೋಹಿತ್ ಸಾವು ಖಂಡಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆದಿತ್ತು.

ರೋಹಿತ್ ಸಾವು ಸಂಬಂಧ, ಆತ್ಮಹತ್ಯೆಗೆ ಪ್ರಚೋದನೆ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ರೋಹಿತ್ ನಿಧನದ ಎಂಟು ವರ್ಷಗಳ ನಂತರ, ಅಂದರೆ ಮೇ 2024ರಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯ ವರದಿಯನ್ನು ಸಲ್ಲಿಸಿದ್ದಾರೆ. ನ್ಯಾಯಾಲಯ ಪ್ರಕರಣದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಮುಕ್ತಾಯ ವರದಿಯಲ್ಲಿ ರೋಹಿತ್ ವೇಮುಲ ದಲಿತನಲ್ಲ, ಒಬಿಸಿ ಎಂದು ಹೇಳಲಾಗಿದೆ.

ರಾಹುಲ್ ಗಾಂಧಿಯವರ ಮನವಿ ಮೇರೆಗೆ ತೆಲಂಗಾಣ ಸರ್ಕಾರವು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಯಲು ರೋಹಿತ್ ವೇಮುಲ ಕಾಯ್ದೆಯನ್ನು ಜಾರಿಗೆ ತರಲಿದೆ. ನಾವು ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಭವಿಷ್ಯದಲ್ಲಿ ಯಾವುದೇ ರೀತಿಯ ಕಾನೂನು ಸವಾಲನ್ನು ಎದುರಿಸದಂತೆ ಕಾಯ್ದೆಯನ್ನು ಸರಿಯಾಗಿ ಮತ್ತು ಸಂಪೂರ್ಣವಾಗಿ ಪರಿಶೀಲಿಸಲು ಕಾನೂನು ಇಲಾಖೆಗೆ ನೀಡಿದ್ದೇವೆ” ಎಂದು ಭಟ್ಟಿ ವಿಕ್ರಮಾರ್ಕ ಹೇಳಿದ್ದಾರೆ.

ರೋಹಿತ್ ವೇಮುಲ ಆತ್ಮಹತ್ಯೆಯನ್ನು ಒಂದು ಸಾಂಸ್ಥಿಕ ಕೊಲೆ ಎಂದು ಕರೆದ ವಿಕ್ರಮಾರ್ಕ, “ಪಿಎಚ್‌ಡಿ ಮಟ್ಟಕ್ಕೆ ತಲುಪಿದ್ದ ಯುವಕ, ವರ್ಣರಂಜಿತ ಜೀವನವನ್ನು ನಡೆಸುವ ಕನಸು ಕಂಡಿದ್ದ ಯುವಕ, ತನ್ನ ಜೀವನವನ್ನು ಕೊನೆಗೊಳಿಸುವ ನಿರ್ಧಾರ ತೆಗೆದುಕೊಳ್ಳುವ ಹಂತಕ್ಕೂ ಹೋಗಿದ್ದರೆ ಯೋಚಿಸಿ, ಅವರು ಆ ತೀರ್ಮಾನಕ್ಕೆ ಬರಲು ಏನು ಪ್ರೇರೇಪಿಸರಬಹುದು ಎಂದು. ಇದು ಸಾಂಸ್ಥಿಕ ಕೊಲೆಯಲ್ಲವೇ?” ಎಂದು ವಿಕ್ರಮಾರ್ಕ ಪ್ರಶ್ನಿಸಿದ್ದಾರೆ.

ಒಡಿಶಾ: ಬುಡಕಟ್ಟು ನಿಯಮ ಮೀರಿ ಮದುವೆ ಆರೋಪ-ಜೋಡಿಗೆ ನೇಗಿಲು ಕಟ್ಟಿ ಹೊಲ ಉಳುಮೆ ಮಾಡಿದ ಗ್ರಾಮಸ್ಥರು-video

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...