Homeಕರ್ನಾಟಕದೇವನಹಳ್ಳಿ: 'ಶೀಘ್ರ ಮಧ್ಯಪ್ರವೇಶ ಮಾಡಿ, ರೈತರ ಪರ ನಿಲ್ಲಿ' – ಕಾಂಗ್ರೆಸ್ ಹೈಕಮಾಂಡ್‌ಗೆ 65...

ದೇವನಹಳ್ಳಿ: ‘ಶೀಘ್ರ ಮಧ್ಯಪ್ರವೇಶ ಮಾಡಿ, ರೈತರ ಪರ ನಿಲ್ಲಿ’ – ಕಾಂಗ್ರೆಸ್ ಹೈಕಮಾಂಡ್‌ಗೆ 65 ಪ್ರಜ್ಞಾವಂತರಿಂದ ಪತ್ರ

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ರೈತರ ಭೂಸ್ವಾಧೀನ ವಿವಾದದಲ್ಲಿ ರಾಜ್ಯ ಸರ್ಕಾರ ರೈತಪರ ತೀರ್ಪು ಕೈಗೊಳ್ಳಲು ಕಾಂಗ್ರೆಸ್ ಹೈಕಮಾಂಡ್ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿ, 65ಕ್ಕೂ ಹೆಚ್ಚು ವಿದ್ವಾಂಸರು, ವಿಜ್ಞಾನಿಗಳು, ಸಾರ್ವಜನಿಕ ಬುದ್ಧಿಜೀವಿಗಳು, ಬರಹಗಾರರು, ಕಲಾವಿದರು ಮತ್ತು ನಾಗರಿಕ ಸಮಾಜದ ಮುಖಂಡರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಮೂರು ವರ್ಷಗಳ ರೈತರ ಅಚಲ ಹೋರಾಟ: ಬೆಂಗಳೂರು ವಿಮಾನ ನಿಲ್ದಾಣದ ಉತ್ತರಕ್ಕಿರುವ ದೇವನಹಳ್ಳಿ ತಾಲ್ಲೂಕಿನ 13 ಗ್ರಾಮಗಳ ರೈತರು ಕಳೆದ ಮೂರು ವರ್ಷಗಳಿಂದ, ಅಂದರೆ ಏಪ್ರಿಲ್ 2022ರಿಂದ, ತಮ್ಮ ಫಲವತ್ತಾದ ಭೂಮಿಗಾಗಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಪ್ರಸ್ತಾಪಿಸಿರುವ 1,777 ಎಕರೆ ಕೃಷಿ ಭೂಮಿಯನ್ನು ‘ಹೈಟೆಕ್ ರಕ್ಷಣಾ ಮತ್ತು ಏರೋಸ್ಪೇಸ್ ಪಾರ್ಕ್’ಗಾಗಿ ಸ್ವಾಧೀನಪಡಿಸಿಕೊಳ್ಳುವ ವಿರುದ್ಧ ಅವರ ಪ್ರತಿರೋಧ ಅಚಲವಾಗಿದೆ. ಈ ಚಳುವಳಿಗೆ ರೈತರು, ಕಾರ್ಮಿಕರು, ದಲಿತರು, ಮಹಿಳೆಯರು ಮತ್ತು ಯುವಕರಂತಹ ತಳಮಟ್ಟದ ಸಂಘಟನೆಗಳು ಸಕ್ರಿಯ ಬೆಂಬಲ ನೀಡುತ್ತಿವೆ. ಈ ಪ್ರದೇಶವು ಬೆಂಗಳೂರಿಗೆ ತರಕಾರಿಗಳು, ಹಣ್ಣುಗಳು, ಹಾಲು ಮತ್ತು ಇತರ ಅಗತ್ಯ ಆಹಾರ ಪದಾರ್ಥಗಳನ್ನು ಪೂರೈಸುವ ಮೂಲಕ ಆಹಾರ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. “ನಾವು ಸಾಯಲು ಸಿದ್ಧ, ಆದರೆ ನಮ್ಮ ಭೂಮಿಯನ್ನು ಬಿಟ್ಟುಕೊಡಲು ಸಿದ್ಧರಿಲ್ಲ” ಎಂಬ ರೈತರ ಸಾಮೂಹಿಕ ಸಂಕಲ್ಪವನ್ನು ಡೆಕ್ಕನ್ ಹೆರಾಲ್ಡ್ ವರದಿ ಪ್ರತಿಬಿಂಬಿಸಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರವು ಜುಲೈ 4ರಂದು ರೈತ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಜುಲೈ 15ರೊಳಗೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿತ್ತು. ಆದರೆ, ಸರ್ಕಾರದ ಕೆಲವು ವಲಯಗಳಿಂದ, ರೈತರ ಬೇಡಿಕೆಗಳನ್ನು ಈಡೇರಿಸಿದರೆ ‘ಅಭಿವೃದ್ಧಿಗೆ ಅಡ್ಡಿಯಾಗಬಹುದು’ ಎಂಬ ಆತಂಕದ ಮಾತುಗಳು ಕೇಳಿಬರುತ್ತಿವೆ. ಈ ನಿರೂಪಣೆಯು ಭರವಸೆಯಿಂದ ಹಿಂದೆ ಸರಿಯುವ ಅಥವಾ ವಿಳಂಬ ಮಾಡುವ ಪ್ರಯತ್ನದಂತೆ ಕಾಣುತ್ತಿದೆ. ಇಂತಹ ಹಿನ್ನಡೆಯು ರಾಜ್ಯ ಸರ್ಕಾರದ ವಿಶ್ವಾಸಾರ್ಹತೆಯನ್ನು ಕುಗ್ಗಿಸುವುದಲ್ಲದೆ, ಗ್ರಾಮೀಣ ಸಮುದಾಯಗಳಲ್ಲಿ ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಗಂಭೀರ ಹಾನಿ ಉಂಟುಮಾಡಲಿದೆ ಎಂದು ಬಹಿರಂಗ ಪತ್ರದಲ್ಲಿ ಸ್ಪಷ್ಟವಾಗಿ ಎಚ್ಚರಿಸಲಾಗಿದೆ.

2013ರ ಭೂಸ್ವಾಧೀನ ಕಾಯಿದೆ ಅಡಿಯಲ್ಲಿ 70% ಭೂಮಾಲೀಕರ ಸಮ್ಮತಿ ಅಗತ್ಯವಿದ್ದರೂ, KIADB ಯ 2022ರ ಸಮೀಕ್ಷೆಯು ದೇವನಹಳ್ಳಿಯಲ್ಲಿ 80% ಕ್ಕಿಂತ ಹೆಚ್ಚು ರೈತರು ಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಬಹಿರಂಗಪಡಿಸಿದೆ. ಸಮ್ಮತಿಯಿಲ್ಲದೆ ಮುಂದುವರಿಯುವುದು ಕಾನೂನುಬಾಹಿರವಾಗಿದೆ. ಇಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಭೂಮಿಯನ್ನು ಕಿತ್ತುಕೊಳ್ಳಲು ಹೊರಟಿರುವುದು ಕಾಂಗ್ರೆಸ್ ಪಕ್ಷ  ಎತ್ತಿಹಿಡಿದಿರುವ ಸಾಮಾಜಿಕ ನ್ಯಾಯದ ತತ್ವಕ್ಕೆ ತಿಲಾಂಜಲಿ ಯಾಗಿದೆ. ಇವೆಲ್ಲವನ್ನೂ ಸರಿಪಡಿಸುವ ಭರವಸೆಯನ್ನು ವಿರೋಧ ಪಕ್ಷದಲ್ಲಿದ್ದ ಹಾಲಿ ಮುಖ್ಯಮಂತ್ರಿಗಳು ನೀಡಿದ್ದರು. ರಾಜ್ಯದ ಭೂ ಸುಧಾರಣೆ ಕಾಯ್ದೆಗೆ ಹಿಂದಿನ ಸರ್ಕಾರ ತಂದಿರುವ ಮಾರಕ ತಿದ್ದುಪಡಿಗಳನ್ನು ಸರಿಪಡಿಸಿ ರೈತಪರ ನೀತಿ ನಿಲುವುಗಳನ್ನು ರೂಪಿಸುವ ಭರವಸೆಯನ್ನು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಲಾಗಿರುತ್ತದೆ. ಹಾಗಿದ್ದರೂ  ಎರಡುವರೆ ವರ್ಷಗಳ ಅವಧಿ ಮುಗಿದರು ಸರ್ಕಾರ ಗಮನಹರಿಸದೆ ಕೊಟ್ಟಿರುವ ವಚನವನ್ನು ಪಾಲಿಸುತ್ತಿಲ್ಲ ಇತ್ಯಾದಿ ವಿಚಾರಗಳನ್ನು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.

KIADB ಕರ್ನಾಟಕದಾದ್ಯಂತ ಗಣನೀಯ ಪ್ರಮಾಣದ ಬಳಕೆಯಾಗದ ಭೂಮಿ ಹೊಂದಿದ್ದರೂ, ಫಲವತ್ತಾದ ಕೃಷಿಭೂಮಿಯ ಸ್ವಾಧೀನಕ್ಕೆ ಮುಂದಾಗಿರುವುದು ಪಾರದರ್ಶಕತೆ ಮತ್ತು ಭೂಬಳಕೆ ಯೋಜನೆಯ ಸಮಗ್ರತೆಯ ಬಗ್ಗೆ ಕಳವಳ ಮೂಡಿಸಿದೆ. CAG ವರದಿಯು KIADBಯ ಸ್ವಾಧೀನ ಮತ್ತು ಹಂಚಿಕೆ ಪದ್ಧತಿಗಳಲ್ಲಿನ ಲೋಪಗಳನ್ನು ಎತ್ತಿ ತೋರಿಸಿದೆ. ಇತ್ತೀಚೆಗೆ, ISRO ಯೋಜನೆ ಮತ್ತು NICE ಯೋಜನೆಗಳಲ್ಲಿನ ವಿಳಂಬಕ್ಕೆ ಹೈಕೋರ್ಟ್ KIADB ವಿರುದ್ಧ ತೀರ್ಪು ನೀಡಿದೆ. ದೇವನಹಳ್ಳಿ ಪ್ರಕರಣದಲ್ಲಿ ಮೂರು ವರ್ಷಗಳ ವಿಳಂಬ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಕೂಡ ಪತ್ರವು ತಿಳಿಸಿದೆ.

ಹಾಗೆಯೇ, ರೈತರು ಮತ್ತು ಕೈಗಾರಿಕಾ ವಲಯಗಳ ಅಭಿಪ್ರಾಯ ಸಲಹೆ ಸೂಚನೆ ಪಡೆದು ರಾಜ್ಯದ ಆಹಾರ ಭದ್ರತೆ ಮತ್ತು ರೈತರ ಹಿತಕ್ಕೆ ಧಕ್ಕೆ ಬರದ ರೀತಿಯಲ್ಲಿ ಕೈಗಾರಿಕೆಗೆ ಅತ್ಯಗತ್ಯವಾಗಿರುವ ಭೂ ಖರೀದಿ ವ್ಯವಹಾರದ ನಿಟ್ಟಿನಲ್ಲಿ ಸಮಗ್ರ ನೀತಿ ರೂಪಿಸಿ, ಮತ್ತು ಈ ಮೂಲಕ ದೇಶಕ್ಕೆ ಒಂದು ಮಾದರಿ ನೀತಿಯನ್ನು  ಕರ್ನಾಟಕ ಸರ್ಕಾರ 15 ರಂದು ಮುಂದಿಡಲಿ ಎಂದು ಆಗ್ರಹಿಸಲಾಗಿದೆ.

ಈ ಮನವಿಯ ಪ್ರತಿಯನ್ನು ಸೋನಿಯಾ ಗಾಂಧಿ,  ರಾಹುಲ್ ಗಾಂಧಿ,  ವೇಣುಗೋಪಾಲ್,  ಜೈರಾಮ್ ರಮೇಶ್, ಕರ್ನಾಟಕ ಮುಖ್ಯಮಂತ್ರಿ  ಸಿದ್ದರಾಮಯ್ಯ, ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್, ಸಚಿವರಾದ  ಎಂ.ಬಿ. ಪಾಟೀಲ್,  ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಕರ್ನಾಟಕದ ಕಾಂಗ್ರೆಸ್ ಸಂಸದರಿಗೆ ರವಾನಿಸಲಾಗಿದೆ.

ಸಹಿ ಮಾಡಿದವರ ಪಟ್ಟಿ (ಪ್ರಮುಖರು): ಪ್ರೊ. ರಾಮಚಂದ್ರ ಗುಹಾ (ಇತಿಹಾಸಕಾರ, ಪರಿಸರವಾದಿ),  ದೇವನೂರ ಮಹಾದೇವ (ಪದ್ಮಶ್ರೀ ಪುರಸ್ಕೃತ ಕನ್ನಡ ಬರಹಗಾರರು), ಡಾ. ಎ.ಎನ್.ಯಲ್ಲಪ್ಪ ರೆಡ್ಡಿ (ಪರಿಸರವಾದಿ),  ಬಿ.ಜಯಶ್ರೀ (ರಂಗಭೂಮಿ ಕಲಾವಿದೆ), ಪ್ರೊ. ಕೆ. ನಾರಾಯಣ ಗೌಡ (ಮಾಜಿ ಉಪಕುಲಪತಿ, UAS), ಡಾ. ಜಿ. ಎನ್. ದೇವ್ಯ (ಭಾಷಾಶಾಸ್ತ್ರಜ್ಞ, ಸಾಹಿತ್ಯ ವಿಮರ್ಶಕ), ಗಿರೀಶ್ ಕಾಸರವಳ್ಳಿ (ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕರು), ಅರುಂಧತಿ ನಾಗ (ಪ್ರಶಸ್ತಿ ವಿಜೇತ ನಟಿ), ಡಾ. ಸುಧೀರ್ ವೋಂಬತ್ಕೆರೆ, ಪ್ರೊ. ವಿ. ಕೆ. ಗೌರ್, ಪ್ರೊ. ವಿನೋದ್ ವ್ಯಾಸಲು, ಪ್ರೊ. ದೀಪಕ್ ಮಾಲ್ಘಾನ್, ಕಿಶೋರ್ ಕುಮಾರ್ ಜಿ, ಸುರೇಶ್ ಹೆಬ್ಳೀಕರ್, ಪಾಂಡುರಂಗ ಹೆಗಡೆ ಸೇರಿದಂತೆ ಒಟ್ಟು 65 ವಿದ್ವಾಂಸರು, ವಿಜ್ಞಾನಿಗಳು, ಬುದ್ಧಿಜೀವಿಗಳು, ಬರಹಗಾರರು, ಕಲಾವಿದರು ಮತ್ತು ನಾಗರಿಕ ಸಮಾಜದ ಮುಖಂಡರು ಈ ಬಹಿರಂಗ ಪತ್ರಕ್ಕೆ ಸಹಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...