Homeಮುಖಪುಟಐಐಎಂ-ಕಲ್ಕತ್ತಾ ಕ್ಯಾಂಪಸ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ಆರೋಪ: ವಿದ್ಯಾರ್ಥಿ ಬಂಧನ

ಐಐಎಂ-ಕಲ್ಕತ್ತಾ ಕ್ಯಾಂಪಸ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ಆರೋಪ: ವಿದ್ಯಾರ್ಥಿ ಬಂಧನ

- Advertisement -
- Advertisement -

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ಕಲ್ಕತ್ತಾ ಕ್ಯಾಂಪಸ್‌ನಲ್ಲಿ, ಎರಡನೇ ವರ್ಷದ ವಿದ್ಯಾರ್ಥಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿಯೊಬ್ಬರು ಆರೋಪಿಸಿದ್ದಾರೆ.

ಆರೋಪಿ ಕರ್ನಾಟಕ ಮೂಲದ ವಿದ್ಯಾರ್ಥಿಯನ್ನು ಬಂಧಿಸಲಾಗಿದ್ದು, ಶನಿವಾರ ಅಲಿಪೋರ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ವರದಿಗಳು ಹೇಳಿವೆ.

ಬೇರೊಂದು ಸಂಸ್ಥೆಯ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆಯನ್ನು ಕೌನ್ಸೆಲಿಂಗ್ ಅವಧಿಗೆ ಕ್ಯಾಂಪಸ್‌ಗೆ ಆಹ್ವಾನಿಸಿದ್ದ ಆರೋಪಿ ತನ್ನ ಹಾಸ್ಟೆಲ್ ಕೊಠಡಿಗೆ ಕರೆದೊಯ್ದು ಮಾದಕ ವಸ್ತು ಕೊಟ್ಟು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿ ಮತ್ತು ಸಂತ್ರಸ್ತೆ ಇಬ್ಬರೂ ಆನ್‌ಲೈನ್‌ ಮೂಲಕ ಪರಿಚಯಸ್ಥರಾಗಿದ್ದರು. ತಮ್ಮ ಅಧ್ಯಯನ ಮತ್ತು ವೃತ್ತಿಜೀವನದ ಬಗ್ಗೆ ಅಲ್ಲಿ ಚರ್ಚಿಸುತ್ತಿದ್ದರು. ಶುಕ್ರವಾರ ಕೌನ್ಸೆಲಿಂಗ್‌ಗೆ ಎಂದು ಸಂತ್ರಸ್ತೆ ಐಐಎಂಗೆ ಬಂದಿದ್ದರು. ಈ ವೇಳೆ ಗೇಟ್ ಬಳಿ ಸಂದರ್ಶಕರ ನೋಂದಣಿಗೆ ಸಹಿ ಹಾಕದಂತೆ ಆರೋಪಿ ತಡೆದಿದ್ದ. ನಂತರ ಕೌನ್ಸೆಲಿಂಗ್ ಸ್ಥಳದ ಬದಲು ಕೆಲಸ ಇದೆ ಎಂದು ಆತನ ಹಾಸ್ಟೆಲ್‌ಗೆ ಕರೆದೊಯ್ದಿದ್ದ ಎಂದು ವರದಿಯಾಗಿದೆ.

“ಹಾಸ್ಟೆಲ್‌ನಲ್ಲಿ ಆತ ತನಗೆ ಪಿಝ್ಝಾ ಮತ್ತು ನೀರು ಕೊಟ್ಟಿದ್ದ. ಅದರಲ್ಲಿ ಮಾದಕ ವಸ್ತು ಬೆರೆಸಲಾಗಿತ್ತು. ನಾನು ಅದನ್ನು ತಿಂದು ಪ್ರಜ್ಞೆ ತಪ್ಪಿ ಬಿದ್ದಾಗ ಆತ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಪಿಝ್ಝಾ ತಿಂದ ಬಳಿಕ ಸ್ವಲ್ಪ ಹೊತ್ತು ನಾನು ಅರೆಪ್ರಜ್ಞಾವಸ್ಥೆಯಲ್ಲಿದ್ದೆ. ನಂತರ ಸಂಪೂರ್ಣವಾಗಿ ಪ್ರಜ್ಞೆ ಕಳೆದುಕೊಂಡಿದ್ದೆ. ಪ್ರಜ್ಞೆ ಬಂದಾಗ ನಾನು ಹಾಸ್ಟೆಲ್ ಕೊಠಡಿಯಲ್ಲಿ ಒಬ್ಬಳೇ ಇದ್ದೆ. ತಕ್ಷಣ ನಾನು ಅಲ್ಲಿಂದ ಹೊರ ಬಂದು ಸ್ನೇಹಿತೆಗೆ ಕರೆ ಮಾಡಿದೆ. ನಂತರ ನಾವಿಬ್ಬರು ಒಟ್ಟಿಗೆ ಪೊಲೀಸ್‌ ಠಾಣೆಗೆ ತೆರಳಿ ದೂರು ನೀಡಿದೆವು” ಎಂದು ಸಂತ್ರಸ್ಥೆ ದೂರಿನಲ್ಲಿ ಹೇಳಿಕೊಂಡಿದ್ದಾಗಿ ವರದಿಗಳು ತಿಳಿಸಿವೆ.

ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಅತ್ಯಾಚಾರ ಮತ್ತು ಇತರ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರಕರಣದಲ್ಲಿ ಇತರ ನಾಲ್ವರು ಭಾಗಿಯಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ ಇಂಡಿಯನ್ ಎಕ್ಸ್‌ಪ್ರೆಸ್ ಹೇಳಿದೆ.

ಘಟನೆ ನಡೆದ ಹಾಸ್ಟೆಲ್ ಕೊಠಡಿಯನ್ನು ಸೀಲ್ ಮಾಡಲಾಗಿದೆ ಮತ್ತು ಘಟನಾ ಸ್ಥಳದಿಂದ ವಿಧಿವಿಜ್ಞಾನ ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದು ವರದಿ ತಿಳಿಸಿದೆ.

ಊರಿಗೆ ರಸ್ತೆ ನಿರ್ಮಿಸುವಂತೆ ಗರ್ಭಿಣಿ ಬೇಡಿಕೆ: ಹೆರಿಗೆ ದಿನಾಂಕ ತಿಳಿಸಿ ಎಂದ ಬಿಜೆಪಿ ಸಂಸದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...