Homeಮುಖಪುಟಛತ್ತೀಸ್‌ಗಢ: 1.18 ಕೋಟಿ ರೂ. ಬಹುಮಾನ ಘೋಷಣೆಯಾಗಿದ್ದ 23 ನಕ್ಸಲರು ಪೊಲೀಸರಿಗೆ ಶರಣು

ಛತ್ತೀಸ್‌ಗಢ: 1.18 ಕೋಟಿ ರೂ. ಬಹುಮಾನ ಘೋಷಣೆಯಾಗಿದ್ದ 23 ನಕ್ಸಲರು ಪೊಲೀಸರಿಗೆ ಶರಣು

- Advertisement -
- Advertisement -

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ 23 ನಕ್ಸಲರು ಪೊಲೀಸರ ಮುಂದೆ ಶರಣಾಗಿದ್ದಾರೆ. 14 ಪುರುಷರು ಮತ್ತು 9 ಮಹಿಳೆಯರ ಈ ತಂಡದ ಮೇಲೆ ಒಟ್ಟು 1.18 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ.

ನಿಷೇಧಿತ ಭಾರತ ಕಮ್ಯುನಿಸ್ಟ್ ಪಕ್ಷದ (ಮಾವೋವಾದಿ) ಸಶಸ್ತ್ರ ವಿಭಾಗವಾದ ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ (ಪಿಎಲ್‌ಜಿಎ)ಯ ಬಲಿಷ್ಠ ಬೆಟಾಲಿಯನ್ 1ರ ಎಂಟು ಕಟ್ಟಾ ಮಾವೋವಾದಿಗಳು ಶರಣಾದವರಲ್ಲಿ ಸೇರಿದ್ದಾರೆ. ಶರಣಾಗುವಾಗ 23 ಜನರ ಪೈಕಿ ಯಾರ ಬಳಿಯೂ ಶಸ್ತ್ರಾಸ್ತ್ರಗಳು ಇರಲಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್.ಕಾಂ ವರದಿ ಮಾಡಿದೆ.

ಒಟ್ಟು 23 ನಕ್ಸಲರು ಶರಣಾಗಿದ್ದಾರೆ. ಅವರೆಲ್ಲರೂ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದರು. ಸರ್ಕಾರದ ನಿಯಮಗಳ ಪ್ರಕಾರ ಅವರಿಗೆ ಸೌಲಭ್ಯಗಳನ್ನು ಒದಗಿಸಲಾಗುವುದು. ನಕ್ಸಲರು ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬರುವಂತೆ ನಾನು ಈ ಸಂದರ್ಭದಲ್ಲಿ ಮನವಿ ಮಾಡುತ್ತೇನೆ ಎಂದು ಸುಕ್ಮಾ ಎಸ್ಪಿ ಕಿರಣ್ ಚೌಹಾಣ್ ಹೇಳಿದ್ದಾರೆ.

ಶರಣಾದವರಲ್ಲಿ 35 ವರ್ಷದ ಲೋಕೇಶ್ ಅಲಿಯಾಸ್ ಪೋಡಿಯಂ ಭೀಮಾ ಎಂಬ ವಿಭಾಗೀಯ ಸಮಿತಿ ಸದಸ್ಯ (ಡಿವಿಸಿಎಂ) ಸೇರಿದ್ದಾರೆ. 2007ರಿಂದ, ಇವರು ಬಸ್ತಾರ್ ಪ್ರದೇಶದಲ್ಲಿ ಹಲವಾರು ಭದ್ರತಾ ಸಿಬ್ಬಂದಿಯನ್ನು ಕೊಂದ ಕನಿಷ್ಠ ಒಂಬತ್ತು ದಾಳಿ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ರಾಜ್ಯ ಮಟ್ಟದಲ್ಲಿ, ದಂಡಕಾರಣ್ಯ ವಿಶೇಷ ವಲಯ ಸಮಿತಿಯು ಉನ್ನತ ಸಮಿತಿಯಾಗಿದ್ದು, ನಂತರ ಪ್ರತಿ ವಿಭಾಗದಲ್ಲಿ ಡಿವಿಸಿಎಂಗಳು ಇರುತ್ತಾರೆ ಎಂದು ಎಸ್ಪಿ ವಿವರಿಸಿದ್ದಾರೆ.

ಶರಣಾದ ಮತ್ತೊಬ್ಬ ಮಾವೋವಾದಿಯನ್ನು ರಮೇಶ್ ಅಲಿಯಾಸ್ ಕಲ್ಮು (35) ಎಂದು ಗುರುತಿಸಲಾಗಿದ್ದು, ಇವರು ಉನ್ನತ ಮಾವೋವಾದಿ ನಾಯಕ ಮದ್ವಿ ಹಿಡ್ಮಾ ಅವರ ಗಾರ್ಡ್ ಕಮಾಂಡರ್ ಆಗಿದ್ದರು. ಇಬ್ಬರ ಮೇಲೂ ತಲಾ 8 ಲಕ್ಷ ರೂ. ಬಹುಮಾನ ಘೋಷಣೆಯಾಗಿತ್ತು. ಶರಣಾದ ಪ್ರತಿಯೊಬ್ಬ ಮಾವೋವಾದಿಗೂ ಶರಣಾಗತಿ ಮೊತ್ತವಾಗಿ 50,000 ರೂ.ಗಳನ್ನು ನೀಡಲಾಗುತ್ತದೆ ಮತ್ತು ಕೌಶಲ್ಯ ತರಬೇತಿ ಒದಗಿಸಲಾಗುತ್ತದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್.ಕಾಂ ವರದಿ ಹೇಳಿದೆ

ಶುಕ್ರವಾರ, ಡಿವಿಸಿಎಂ ಸದಸ್ಯ ಸೇರಿದಂತೆ 37.50 ಲಕ್ಷ ರೂ. ಬಹುಮಾನ ಘೋಷಣೆಯಾಗಿದ್ದ 22 ಮಾವೋವಾದಿಗಳು ನಾರಾಯಣಪುರದಲ್ಲಿ ಶರಣಾಗಿದ್ದರು.

ಜೂನ್ 18ರಂದು ಛತ್ತೀಸ್‌ಗಢದ ಅವಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ತಿಮಾಪುರ-ಮುರ್ದಂಡ ರಸ್ತೆಯಲ್ಲಿ ನಕ್ಸಲರು ಇಟ್ಟಿದ್ದ ಐಇಡಿ ಸ್ಪೋಟಗೊಂಡು ಇಬ್ಬರು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಜವಾನವರು ಗಾಯಗೊಂಡಿದ್ದರು.

ಅವಘಡ ನಡೆದಾಗ ಗಾಯಗೊಂಡ ಸಿರ್‌ಪಿಎಫ್ ಜವಾನರು ಕರ್ತವ್ಯದಲ್ಲಿದ್ದರು. ಅವರಿಗೆ ಘಟನಾ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗೆ ಬಿಜಾಪುರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜ್ಯವು ಶೀಘ್ರದಲ್ಲೇ ನಕ್ಸಲ್ ಹಿಂಸಾಚಾರದಿಂದ ಮುಕ್ತವಾಗಲಿದೆ. ನಕ್ಸಲ್ ಬಾಧಿತ ಪ್ರದೇಶಗಳು ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಪಡೆಯಲಿದೆ ಎಂದು ಜುಲೈ 5ರಂದು ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಹೇಳಿದ್ದರು.

ಎಲ್ಲಾ ರೀತಿಯಲ್ಲೂ ನಮ್ಮ ರಾಜ್ಯ ಶ್ರೀಮಂತವಾಗಿದೆ. ಶೇಕಡ 44 ಕ್ಕಿಂತ ಹೆಚ್ಚಿನ ಭೂಮಿ ಅರಣ್ಯವನ್ನು ಹೊಂದಿದೆ. ಮಣ್ಣು ಫಲತ್ತವಾಗಿದೆ ಮತ್ತು ರೈತರು ಕಷ್ಟಪಟ್ಟು ದುಡಿಯುತ್ತಿದ್ದಾರೆ. ನಕ್ಸಲಿಸಂ ನಮ್ಮ ಅಭಿವೃದ್ದಿಗೆ ದೊಡ್ಡ ತಡೆಯಾಗಿದೆ. ಆದರೆ, ನಾವು ಅದರಿಂದ ಹೊರ ಬರುತ್ತೇವೆ. ಶರಣಾದ ನಕ್ಸಲರಿಗೆ ನಾವು ಅದ್ಬುತವಾದ ಪುನರ್ವಸತಿ ನಿಯಮಗಳನ್ನು ರೂಪಿಸಿದ್ದೇವೆ. ಶೀಘ್ರದಲ್ಲೇ ಛತ್ತೀಸ್‌ಗಢ ನಕ್ಸಲ್ ಹಿಂಸಾಚಾರ ಮುಕ್ತವಾಗಲಿದೆ ಮತ್ತು ಬಸ್ತಾರ್‌ನಂತಹ ಪ್ರದೇಶಗಳು ರಸ್ತೆ, ವಿದ್ಯುತ್, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಪಡೆಯಲಿದೆ ಎಂದಿದ್ದರು.

ಕೇಂದ್ರ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ, 2024 ಒಂದರಲ್ಲೇ 290 ನಕ್ಸಲರನ್ನು ಹತ್ಯೆಗೈಯ್ಯಲಾಗಿದೆ, 1,090 ಜನರನ್ನು ಬಂಧಿಸಲಾಗಿದೆ ಮತ್ತು 881 ಮಂದಿ ಶರಣಾಗಿದ್ದಾರೆ. ಇತ್ತೀಚಿನ ಕಾರ್ಯಾಚರಣೆ, ಅಂದರೆ 2025ರ ಮಾರ್ಚ್‌ ತಿಂಗಳಲ್ಲಿ ಬಿಜಾಪುರದಲ್ಲಿ 50 ನಕ್ಸಲರು ಶರಣಾಗಿದ್ದಾರೆ. ಸುಕ್ಮಾದಲ್ಲಿ 16, ಕನ್ಕೇರ್ ಮತ್ತು ಬಿಜಾಪುರದಲ್ಲಿ 22 ಜನರನ್ನು ಹತ್ಯೆ ಮಾಡಲಾಗಿದೆ. ಮಾರ್ಚ್ 31, 2026ರೊಳಗೆ ದೇಶದಲ್ಲಿ ನಕ್ಸಲಿಸಂ ಅನ್ನು ನಿರ್ಮೂಲನೆ ಮಾಡುವುದಾಗಿ ಸರ್ಕಾರ ಹೇಳಿಕೊಂಡಿದೆ.

ಐಐಎಂ-ಕಲ್ಕತ್ತಾ ಕ್ಯಾಂಪಸ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ಆರೋಪ: ವಿದ್ಯಾರ್ಥಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೊಲ್ಲುವಂತೆ ಪೊಲೀಸರೇ ನನ್ನ ಸಹೋದರನಿಗೆ ಪ್ರಚೋದಿಸಿದರು..’; ಪ್ರೇಮಿಯ ಶವವನ್ನು ‘ಮದುವೆ’ಯಾದ ಯುವತಿಯ ಗಂಭೀರ ಆರೋಪ

ಮರ್ಯಾದೆಗೇಡು ಹತ್ಯೆ ಬಳಿಕ ತನ್ನ ಪ್ರೇಮಿಯ ಶವವನ್ನು 'ಮದುವೆ'ಯಾದ ಮಹಾರಾಷ್ಟ್ರದ ಯುವತಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನನ್ನ ಗೆಳೆಯನನ್ನು ಇಬ್ಬರು ಪೊಲೀಸರು ನಿಂದಿಸಿದ ಬಳಿಕ ನನ್ನ ಸಹೋದರ ಕೊಂದಿದ್ದಾನೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ...

ಮದುವೆ ಮನೆಯಲ್ಲಿ ಮಹಿಳೆಯರೊಂದಿಗೆ ಅನುಚಿತ ವರ್ತನೆ ಪ್ರಶ್ನಿಸಿದ್ದಕ್ಕೆ, ರಾಷ್ಟ್ರ ಮಟ್ಟದ ಬಾಡಿ ಬಿಲ್ಡರ್ ಹತ್ಯೆ

ಮದುವೆ ಸಮಾರಂಭದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಪುರುಷರ ಗುಂಪನ್ನು ಪ್ರಶ್ನಿಸಿದ್ದಕ್ಕಾಗಿ 20 ಜನ ದುಷ್ಕರ್ಮಿಗಳ ಗುಂಪು ಹೊಂಚುಹಾಕಿ, 26 ವರ್ಷದ ರಾಷ್ಟ್ರ ಮಟ್ಟದ ಬಾಡಿ ಬಿಲ್ಡರ್ ಅನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಂದಿರುವ ಘಟನೆ...

ಉತ್ತರ ಪ್ರದೇಶ| ಎಸ್‌ಐಆರ್‌ ಕೆಲಸದ ಒತ್ತಡಕ್ಕೆ ಮತ್ತೋರ್ವ ಅಧಿಕಾರಿ ಬಲಿ; ಸಾವಿಗೂ ಮೊದಲು ವಿಡಿಯೊ ಮಾಡಿ ಕಣ್ಣೀರಿಟ್ಟ ಬಿಎಲ್‌ಒ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಶೀಲನೆ (ಎಸ್‌ಐಆರ್) ಕೆಲಸದ ಒತ್ತಡಕ್ಕೆ ಸಂಬಂಧಿಸಿದಂತೆ ಮತ್ತೊಂದು ಆತ್ಮಹತ್ಯೆ ಪ್ರಕರಣ ವರದಿಯಾಗಿದೆ. ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಆಗಿ ಕೆಲಸ ಮಾಡುತ್ತಿದ್ದ 46 ವರ್ಷದ ಶಿಕ್ಷಕ ಸರ್ವೇಶ್...

ಎಸ್‌ಐಆರ್ ಚರ್ಚೆಗೆ ಪಟ್ಟು ಹಿಡಿದ ಪ್ರತಿಪಕ್ಷಗಳು : ಸಂಸತ್ತಿನ ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತು ಚರ್ಚೆ ನಡೆಸುವಂತೆ ಪ್ರತಿಪಕ್ಷಗಳು ಪಟ್ಟು ಹಿಡಿದು ಪ್ರತಿಭಟಿಸಿದ ಹಿನ್ನೆಲೆ, ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ನಾಳೆಗೆ (ಡಿಸೆಂಬರ್ 2) ಮುಂದೂಡಿಕೆಯಾಗಿದೆ. ಲೋಕಸಭೆಯಲ್ಲಿ ಪ್ರತಿಪಕ್ಷ ಸದಸ್ಯರ...

‘ನಿಜವಾದ ನಾಯಿಗಳು ಸಂಸತ್ತಿನಲ್ಲಿ ಕುಳಿತಿವೆ, ಅವು ಪ್ರತಿದಿನ ಜನರನ್ನು ಕಚ್ಚುತ್ತಿವೆ’: ಸಂಸದೆ ರೇಣುಕಾ ಚೌಧರಿ

ನವದೆಹಲಿ: ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ಅವರು ಸೋಮವಾರ ಸಂಸತ್ತಿನ ಆವರಣಕ್ಕೆ ನಾಯಿಯೊಂದನ್ನು ಕರೆತಂದಿದ್ದು, ಕೆಲವು ಸಂಸದರು ಬೀದಿನಾಯಿಯನ್ನು ಕರೆತಂದಿದ್ದಾರೆ ಎಂದು ಆಕ್ಷೇಪಿಸಿದ್ದಾರೆ, ಮಾಧ್ಯಮಗಳ ಎದಿರು ಈ ಆಕ್ಷೇಪಣೆಗಳನ್ನು ತಳ್ಳಿಹಾಕಿರುವ ರೇಣುಕಾ ಚೌಧರಿ...

ಕರೆಯದ ಮದುವೆಗೆ ಊಟಕ್ಕೆ ಹೋದ ಬಾಲಕನಿಗೆ ಗುಂಡಿಕ್ಕಿ ಹತ್ಯೆ ; ಸಿಐಎಸ್‌ಎಫ್‌ ಹೆಡ್‌ ಕಾನ್‌ಸ್ಟೆಬಲ್‌ ಅರೆಸ್ಟ್

ಕರೆಯದ ಮದುವೆಗೆ ಊಟಕ್ಕೆ ಹೋದ ಕೊಳಗೇರಿಯ ಬಾಲಕನಿಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ಹೆಡ್‌ ಕಾನ್‌ಸ್ಟೆಬಲ್ ಗುಂಡಿಕ್ಕಿ ಹತ್ಯೆಗೈದ ಆಘಾತಕಾರಿ ಘಟನೆ ದೆಹಲಿಯ ಶಾಹದರಾದಲ್ಲಿ ಶನಿವಾರ (ನವೆಂಬರ್ 29) ಸಂಜೆ ನಡೆದಿದೆ. ಶಾಹದರಾದ...

ಸಿದ್ದರಾಮಯ್ಯ-ಶಿವಕುಮಾರ್ ಜಗಳದಲ್ಲಿ ಮೂರನೆ ವ್ಯಕ್ತಿ ಮೇಲೆ ಹೈಕಮಾಂಡ್‌ ಕಣ್ಣು; ಕರ್ನಾಟಕದ ಮುಂದಿನ ಸಿಎಂ ಯಾರು..?

ನವೆಂಬರ್‌ ಮಾಸ ಮುಗಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಎರಡೂವರೆ ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. 'ಈ ಹಿಂದೆ' ಮಾಡಿಕೊಂಡ ಒಪ್ಪಂದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನಿಡಿ, ಡಿ.ಕೆ. ಶಿವಕುಮಾರ್ ಪ್ರಮಾಣವಚನ...

ಪಶ್ಚಿಮ ಬಂಗಾಳ| ಸಿಎಎ ಅಡಿಯಲ್ಲಿ ಪೌರತ್ವ ಪಡೆದ ಬಾಂಗ್ಲಾದೇಶದಿಂದ ಬಂದ 12 ಹಿಂದೂ ನಿರಾಶ್ರಿತ ಕುಟುಂಬಗಳು

ಧಾರ್ಮಿಕ ಹಿಂಸಾಚಾರದಿಂದ ತಪ್ಪಿಸಿಕೊಳ್ಳಲು ಹಲವು ವರ್ಷಗಳ ಹಿಂದೆ ಭಾರತಕ್ಕೆ ಪಲಾಯನ ಮಾಡಿದ ಬಾಂಗ್ಲಾದೇಶದ 12 ಹಿಂದೂ ನಿರಾಶ್ರಿತರಿಗೆ ಕೇಂದ್ರ ಸರ್ಕಾರ ಭಾರತೀಯ ಪೌರತ್ವ ನೀಡಿದೆ ಎಂದು 'ದಿ ಅಬ್ಸರ್ವರ್‌ ಪೋಸ್ಟ್‌' ವರದಿ ಮಾಡಿದೆ. ...

“ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವುದು ನಾಟಕವಲ್ಲ” : ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ದೆಹಲಿಯ ವಾಯು ಮಾಲಿನ್ಯದಂತಹ ನಿರ್ಣಾಯಕ ವಿಷಯಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುವುದು ನಾಟಕವಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ...

ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ: ಸಿಬಿಐ ತನಿಖೆಗೆ ಆಗ್ರಹಿಸಿ, ಕೇರಳ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ರಾಜೀವ್ ಚಂದ್ರಶೇಖರ್

ಕೊಚ್ಚಿ: ಶಬರಿಮಲೆ ದೇವಸ್ಥಾನದಿಂದ ಚಿನ್ನ ನಾಪತ್ತೆಯಾಗಿರುವ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಘಟನೆಯ ಬಗ್ಗೆ ಸಮಗ್ರ ತನಿಖೆ ಅಗತ್ಯ ಎಂದು ಚಂದ್ರಶೇಖರ್ ತಮ್ಮ ಅರ್ಜಿಯಲ್ಲಿ...