Homeಮುಖಪುಟಛತ್ತೀಸ್‌ಗಢ: 1.18 ಕೋಟಿ ರೂ. ಬಹುಮಾನ ಘೋಷಣೆಯಾಗಿದ್ದ 23 ನಕ್ಸಲರು ಪೊಲೀಸರಿಗೆ ಶರಣು

ಛತ್ತೀಸ್‌ಗಢ: 1.18 ಕೋಟಿ ರೂ. ಬಹುಮಾನ ಘೋಷಣೆಯಾಗಿದ್ದ 23 ನಕ್ಸಲರು ಪೊಲೀಸರಿಗೆ ಶರಣು

- Advertisement -
- Advertisement -

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ 23 ನಕ್ಸಲರು ಪೊಲೀಸರ ಮುಂದೆ ಶರಣಾಗಿದ್ದಾರೆ. 14 ಪುರುಷರು ಮತ್ತು 9 ಮಹಿಳೆಯರ ಈ ತಂಡದ ಮೇಲೆ ಒಟ್ಟು 1.18 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ.

ನಿಷೇಧಿತ ಭಾರತ ಕಮ್ಯುನಿಸ್ಟ್ ಪಕ್ಷದ (ಮಾವೋವಾದಿ) ಸಶಸ್ತ್ರ ವಿಭಾಗವಾದ ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ (ಪಿಎಲ್‌ಜಿಎ)ಯ ಬಲಿಷ್ಠ ಬೆಟಾಲಿಯನ್ 1ರ ಎಂಟು ಕಟ್ಟಾ ಮಾವೋವಾದಿಗಳು ಶರಣಾದವರಲ್ಲಿ ಸೇರಿದ್ದಾರೆ. ಶರಣಾಗುವಾಗ 23 ಜನರ ಪೈಕಿ ಯಾರ ಬಳಿಯೂ ಶಸ್ತ್ರಾಸ್ತ್ರಗಳು ಇರಲಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್.ಕಾಂ ವರದಿ ಮಾಡಿದೆ.

ಒಟ್ಟು 23 ನಕ್ಸಲರು ಶರಣಾಗಿದ್ದಾರೆ. ಅವರೆಲ್ಲರೂ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದರು. ಸರ್ಕಾರದ ನಿಯಮಗಳ ಪ್ರಕಾರ ಅವರಿಗೆ ಸೌಲಭ್ಯಗಳನ್ನು ಒದಗಿಸಲಾಗುವುದು. ನಕ್ಸಲರು ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬರುವಂತೆ ನಾನು ಈ ಸಂದರ್ಭದಲ್ಲಿ ಮನವಿ ಮಾಡುತ್ತೇನೆ ಎಂದು ಸುಕ್ಮಾ ಎಸ್ಪಿ ಕಿರಣ್ ಚೌಹಾಣ್ ಹೇಳಿದ್ದಾರೆ.

ಶರಣಾದವರಲ್ಲಿ 35 ವರ್ಷದ ಲೋಕೇಶ್ ಅಲಿಯಾಸ್ ಪೋಡಿಯಂ ಭೀಮಾ ಎಂಬ ವಿಭಾಗೀಯ ಸಮಿತಿ ಸದಸ್ಯ (ಡಿವಿಸಿಎಂ) ಸೇರಿದ್ದಾರೆ. 2007ರಿಂದ, ಇವರು ಬಸ್ತಾರ್ ಪ್ರದೇಶದಲ್ಲಿ ಹಲವಾರು ಭದ್ರತಾ ಸಿಬ್ಬಂದಿಯನ್ನು ಕೊಂದ ಕನಿಷ್ಠ ಒಂಬತ್ತು ದಾಳಿ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ರಾಜ್ಯ ಮಟ್ಟದಲ್ಲಿ, ದಂಡಕಾರಣ್ಯ ವಿಶೇಷ ವಲಯ ಸಮಿತಿಯು ಉನ್ನತ ಸಮಿತಿಯಾಗಿದ್ದು, ನಂತರ ಪ್ರತಿ ವಿಭಾಗದಲ್ಲಿ ಡಿವಿಸಿಎಂಗಳು ಇರುತ್ತಾರೆ ಎಂದು ಎಸ್ಪಿ ವಿವರಿಸಿದ್ದಾರೆ.

ಶರಣಾದ ಮತ್ತೊಬ್ಬ ಮಾವೋವಾದಿಯನ್ನು ರಮೇಶ್ ಅಲಿಯಾಸ್ ಕಲ್ಮು (35) ಎಂದು ಗುರುತಿಸಲಾಗಿದ್ದು, ಇವರು ಉನ್ನತ ಮಾವೋವಾದಿ ನಾಯಕ ಮದ್ವಿ ಹಿಡ್ಮಾ ಅವರ ಗಾರ್ಡ್ ಕಮಾಂಡರ್ ಆಗಿದ್ದರು. ಇಬ್ಬರ ಮೇಲೂ ತಲಾ 8 ಲಕ್ಷ ರೂ. ಬಹುಮಾನ ಘೋಷಣೆಯಾಗಿತ್ತು. ಶರಣಾದ ಪ್ರತಿಯೊಬ್ಬ ಮಾವೋವಾದಿಗೂ ಶರಣಾಗತಿ ಮೊತ್ತವಾಗಿ 50,000 ರೂ.ಗಳನ್ನು ನೀಡಲಾಗುತ್ತದೆ ಮತ್ತು ಕೌಶಲ್ಯ ತರಬೇತಿ ಒದಗಿಸಲಾಗುತ್ತದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್.ಕಾಂ ವರದಿ ಹೇಳಿದೆ

ಶುಕ್ರವಾರ, ಡಿವಿಸಿಎಂ ಸದಸ್ಯ ಸೇರಿದಂತೆ 37.50 ಲಕ್ಷ ರೂ. ಬಹುಮಾನ ಘೋಷಣೆಯಾಗಿದ್ದ 22 ಮಾವೋವಾದಿಗಳು ನಾರಾಯಣಪುರದಲ್ಲಿ ಶರಣಾಗಿದ್ದರು.

ಜೂನ್ 18ರಂದು ಛತ್ತೀಸ್‌ಗಢದ ಅವಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ತಿಮಾಪುರ-ಮುರ್ದಂಡ ರಸ್ತೆಯಲ್ಲಿ ನಕ್ಸಲರು ಇಟ್ಟಿದ್ದ ಐಇಡಿ ಸ್ಪೋಟಗೊಂಡು ಇಬ್ಬರು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಜವಾನವರು ಗಾಯಗೊಂಡಿದ್ದರು.

ಅವಘಡ ನಡೆದಾಗ ಗಾಯಗೊಂಡ ಸಿರ್‌ಪಿಎಫ್ ಜವಾನರು ಕರ್ತವ್ಯದಲ್ಲಿದ್ದರು. ಅವರಿಗೆ ಘಟನಾ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗೆ ಬಿಜಾಪುರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜ್ಯವು ಶೀಘ್ರದಲ್ಲೇ ನಕ್ಸಲ್ ಹಿಂಸಾಚಾರದಿಂದ ಮುಕ್ತವಾಗಲಿದೆ. ನಕ್ಸಲ್ ಬಾಧಿತ ಪ್ರದೇಶಗಳು ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಪಡೆಯಲಿದೆ ಎಂದು ಜುಲೈ 5ರಂದು ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಹೇಳಿದ್ದರು.

ಎಲ್ಲಾ ರೀತಿಯಲ್ಲೂ ನಮ್ಮ ರಾಜ್ಯ ಶ್ರೀಮಂತವಾಗಿದೆ. ಶೇಕಡ 44 ಕ್ಕಿಂತ ಹೆಚ್ಚಿನ ಭೂಮಿ ಅರಣ್ಯವನ್ನು ಹೊಂದಿದೆ. ಮಣ್ಣು ಫಲತ್ತವಾಗಿದೆ ಮತ್ತು ರೈತರು ಕಷ್ಟಪಟ್ಟು ದುಡಿಯುತ್ತಿದ್ದಾರೆ. ನಕ್ಸಲಿಸಂ ನಮ್ಮ ಅಭಿವೃದ್ದಿಗೆ ದೊಡ್ಡ ತಡೆಯಾಗಿದೆ. ಆದರೆ, ನಾವು ಅದರಿಂದ ಹೊರ ಬರುತ್ತೇವೆ. ಶರಣಾದ ನಕ್ಸಲರಿಗೆ ನಾವು ಅದ್ಬುತವಾದ ಪುನರ್ವಸತಿ ನಿಯಮಗಳನ್ನು ರೂಪಿಸಿದ್ದೇವೆ. ಶೀಘ್ರದಲ್ಲೇ ಛತ್ತೀಸ್‌ಗಢ ನಕ್ಸಲ್ ಹಿಂಸಾಚಾರ ಮುಕ್ತವಾಗಲಿದೆ ಮತ್ತು ಬಸ್ತಾರ್‌ನಂತಹ ಪ್ರದೇಶಗಳು ರಸ್ತೆ, ವಿದ್ಯುತ್, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಪಡೆಯಲಿದೆ ಎಂದಿದ್ದರು.

ಕೇಂದ್ರ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ, 2024 ಒಂದರಲ್ಲೇ 290 ನಕ್ಸಲರನ್ನು ಹತ್ಯೆಗೈಯ್ಯಲಾಗಿದೆ, 1,090 ಜನರನ್ನು ಬಂಧಿಸಲಾಗಿದೆ ಮತ್ತು 881 ಮಂದಿ ಶರಣಾಗಿದ್ದಾರೆ. ಇತ್ತೀಚಿನ ಕಾರ್ಯಾಚರಣೆ, ಅಂದರೆ 2025ರ ಮಾರ್ಚ್‌ ತಿಂಗಳಲ್ಲಿ ಬಿಜಾಪುರದಲ್ಲಿ 50 ನಕ್ಸಲರು ಶರಣಾಗಿದ್ದಾರೆ. ಸುಕ್ಮಾದಲ್ಲಿ 16, ಕನ್ಕೇರ್ ಮತ್ತು ಬಿಜಾಪುರದಲ್ಲಿ 22 ಜನರನ್ನು ಹತ್ಯೆ ಮಾಡಲಾಗಿದೆ. ಮಾರ್ಚ್ 31, 2026ರೊಳಗೆ ದೇಶದಲ್ಲಿ ನಕ್ಸಲಿಸಂ ಅನ್ನು ನಿರ್ಮೂಲನೆ ಮಾಡುವುದಾಗಿ ಸರ್ಕಾರ ಹೇಳಿಕೊಂಡಿದೆ.

ಐಐಎಂ-ಕಲ್ಕತ್ತಾ ಕ್ಯಾಂಪಸ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ಆರೋಪ: ವಿದ್ಯಾರ್ಥಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...