Homeಮುಖಪುಟಚೆನ್ನೈ। ತಿರುವಳ್ಳೂರು ಬಳಿ ಕಚ್ಚಾ ತೈಲ ಸಾಗಣೆ ರೈಲಿನಲ್ಲಿ ಬೆಂಕಿ ಅವಘಡ: ರೈಲು ಸೇವೆಗಳಲ್ಲಿ ವ್ಯತ್ಯಯ

ಚೆನ್ನೈ। ತಿರುವಳ್ಳೂರು ಬಳಿ ಕಚ್ಚಾ ತೈಲ ಸಾಗಣೆ ರೈಲಿನಲ್ಲಿ ಬೆಂಕಿ ಅವಘಡ: ರೈಲು ಸೇವೆಗಳಲ್ಲಿ ವ್ಯತ್ಯಯ

- Advertisement -
- Advertisement -

ತಮಿಳುನಾಡಿನ ತಿರುವಲ್ಲೂರು ಬಳಿ ಕಚ್ಚಾ ತೈಲ ಸಾಗಿಸುತ್ತಿದ್ದ ಸರಕು ಸಾಗಣೆ ರೈಲಿನಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡ ನಂತರ ಚೆನ್ನೈ-ಅರಕ್ಕೋಣಂ ವಿಭಾಗದಲ್ಲಿ ರೈಲು ಸೇವೆಗಳು ವ್ಯತ್ಯಯಗೊಂಡಿದ್ದು, ಸಾವಿರಾರು ರೈಲು ಪ್ರಯಾಣಿಕರು ಸಮಸ್ಯೆಗೆ ಸಿಲುಕಿದ್ದಾರೆ.

ರೈಲಿಗೆ ಬೆಂಕಿ ಆವರಿಸಿ ಹೊತ್ತಿ ಉರಿದಿದೆ. ಆಕಾಶದೆತ್ತರಕ್ಕೆ ದಟ್ಟವಾದ ಹೊಗೆ ಮತ್ತು ಬೆಂಕಿಯ ಜ್ವಾಲೆ ಕಾಣಿಸಿಕೊಂಡಿದೆ. ಇದರಿಂದ ಸುತ್ತಮುತ್ತಲಿನ ಹಳ್ಳಿಯ ಜನರು ಭಯಭೀತರಾಗಿದ್ದರು. ಮುನ್ನೆಚ್ಚರಿಕ ಕ್ರಮವಾಗಿ ಅವರನ್ನು ಸ್ಥಳಾಂತರಿಸಲಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಎನ್ನೋರ್‌ನಿಂದ ಜೋಲಾರ್‌ಪೆಟ್ಟೈಗೆ ಕಚ್ಚಾ ತೈಲ ಸಾಗಿಸುತ್ತಿದ್ದ 45 ಬೋಗಿಗಳನ್ನು ಹೊಂದಿದ್ದ ಸರಕು ಸಾಗಣೆ ರೈಲು, ಚೆನ್ನೈ ಸೆಂಟ್ರಲ್‌ನಿಂದ 43 ಕಿ.ಮೀ ದೂರದಲ್ಲಿರುವ ತಿರುವಳ್ಳೂರು-ಎಗತ್ತೂರು ವಿಭಾಗದ ಮೂಲಕ ಹಾದುಹೋಗುವಾಗ ಬೆಳಿಗ್ಗೆ 4.45ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ. ರೈಲಿನ ಎರಡು ವ್ಯಾಗನ್‌ಗಳು ಹಳಿತಪ್ಪಿದ ಕಾರಣ ಬೆಂಕಿ ಆವರಿಸಿರಬಹುದು ಎಂದು ಶಂಕಿಸಲಾಗಿದೆ. ಆದಾಗ್ಯೂ, ಅವಗಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಬೆಳಿಗ್ಗೆ 9 ಗಂಟೆಯ ಹೊತ್ತಿಗೆ ಐದು ಬೋಗಿಗಳನ್ನು ರೇಕ್‌ನಿಂದ ಬೇರ್ಪಡಿಸಲಾಗಿದೆ ಎಂದು ವರದಿ ವಿವರಿಸಿದೆ.

ನಾಲ್ಕು ಬೋಗಿಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಬೆಂಕಿ ಇತರ ಬೋಗಿಗಳಿಗೂ ವ್ಯಾಪಿಸಿದೆ. ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಬೆಂಕಿ ಅವಘಢದ ಹಿನ್ನೆಲೆ, ಚೆನ್ನೈ-ಅರಕ್ಕೋಣಂ ವಿಭಾಗದಲ್ಲಿನ ಎಲ್ಲಾ ಉಪನಗರ ರೈಲು ಸೇವೆಗಳನ್ನು ಬೆಳಿಗ್ಗೆ 5 ಗಂಟೆಯಿಂದ ಸ್ಥಗಿತಗೊಳಿಸಲಾಗಿದೆ.

ಶನಿವಾರ ಚೆನ್ನೈಗೆ ಹೊರಟಿದ್ದ ಮಂಗಳೂರು ಮೇಲ್, ನೀಲಗಿರಿ ಎಕ್ಸ್‌ಪ್ರೆಸ್, ಮೈಸೂರು ಎಕ್ಸ್‌ಪ್ರೆಸ್, ಕೊಯಮತ್ತೂರು ಇಂಟರ್‌ಸಿಟಿ, ತಿರುವನಂತಪುರಂ ಮೇಲ್ ಮತ್ತು ಜೋಲಾರ್‌ಪೇಟೆ ಎಕ್ಸ್‌ಪ್ರೆಸ್ ಸೇರಿದಂತೆ ಸುಮಾರು ಎಂಟು ಎಕ್ಸ್‌ಪ್ರೆಸ್ ರೈಲುಗಳು ಅರಕ್ಕೋಣಂ ಮತ್ತು ಕಟ್ಪಾಡಿ ನಡುವೆ ಅಲ್ಪಾವಧಿಗೆ ಸ್ಥಗಿತಗೊಂಡವು.

ಅದೇ ರೀತಿ, ಚೆನ್ನೈ ಸೆಂಟ್ರಲ್‌ನಿಂದ ಬೆಳಿಗ್ಗೆ 6 ರಿಂದ 8.30 ರವರೆಗೆ ಹೊರಡಬೇಕಿದ್ದ ಎಂಟು ಎಕ್ಸ್‌ಪ್ರೆಸ್ ರೈಲುಗಳಾದ ಚೆನ್ನೈ-ಮೈಸೂರು ಶತಾಬ್ದಿ, ಚೆನ್ನೈ-ಕೊಯಮತ್ತೂರು ಕೋವೈ ಎಕ್ಸ್‌ಪ್ರೆಸ್, ಚೆನ್ನೈ-ತಿರುಪತಿ ಸಪ್ತಗಿರಿ ಎಕ್ಸ್‌ಪ್ರೆಸ್ ಮತ್ತು ಚೆನ್ನೈ-ಬೆಂಗಳೂರು ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್ ರೈಲುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಗುಡೂರು ಮತ್ತು ರೇಣಿಗುಂಟ ಮೂಲಕ ನಾಲ್ಕು ರೈಲುಗಳ ಹಳಿ ಬದಲಿಸಲಾಗಿದೆ ಎಂದು ವರದಿಯಾಗಿದೆ.

ಅಗ್ನಿಶಾಮಕ ಸೇರಿದಂತೆ ರಕ್ಷಣಾ ತಂಡಗಳು ಅವಘಡ ನಡೆಸ ಸ್ಥಳಕ್ಕೆ ತೆರಳಿದ್ದು, ರೈಲು ಸೇವೆಯನ್ನು ಪುನಸ್ಥಾಪಿಸುವ ಕಾರ್ಯ ನಡೆಯುತ್ತಿದೆ.

ಸ್ಥಳ ಪರಿಶೀಲನೆ ನಡೆಸಿದ ತಿರುವಳ್ಳೂರು ಜಿಲ್ಲಾಧಿಕಾರಿ ಎಂ. ಪ್ರತಾಪ್, “ಹಳಿ ಪಕ್ಕದಲ್ಲಿರುವ ನಿವಾಸಿಗಳನ್ನು ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಕಿ ನಿಯಂತ್ರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಭರವಸೆ ನೀಡಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ಅರಕ್ಕೋಣಂ ಘಟಕದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಉಜ್ವಲ್ ನಿಕಮ್, ಮೀನಾಕ್ಷಿ ಜೈನ್ ಸೇರಿ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...