Homeಮುಖಪುಟಚೆನ್ನೈ। ತಿರುವಳ್ಳೂರು ಬಳಿ ಕಚ್ಚಾ ತೈಲ ಸಾಗಣೆ ರೈಲಿನಲ್ಲಿ ಬೆಂಕಿ ಅವಘಡ: ರೈಲು ಸೇವೆಗಳಲ್ಲಿ ವ್ಯತ್ಯಯ

ಚೆನ್ನೈ। ತಿರುವಳ್ಳೂರು ಬಳಿ ಕಚ್ಚಾ ತೈಲ ಸಾಗಣೆ ರೈಲಿನಲ್ಲಿ ಬೆಂಕಿ ಅವಘಡ: ರೈಲು ಸೇವೆಗಳಲ್ಲಿ ವ್ಯತ್ಯಯ

- Advertisement -
- Advertisement -

ತಮಿಳುನಾಡಿನ ತಿರುವಲ್ಲೂರು ಬಳಿ ಕಚ್ಚಾ ತೈಲ ಸಾಗಿಸುತ್ತಿದ್ದ ಸರಕು ಸಾಗಣೆ ರೈಲಿನಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡ ನಂತರ ಚೆನ್ನೈ-ಅರಕ್ಕೋಣಂ ವಿಭಾಗದಲ್ಲಿ ರೈಲು ಸೇವೆಗಳು ವ್ಯತ್ಯಯಗೊಂಡಿದ್ದು, ಸಾವಿರಾರು ರೈಲು ಪ್ರಯಾಣಿಕರು ಸಮಸ್ಯೆಗೆ ಸಿಲುಕಿದ್ದಾರೆ.

ರೈಲಿಗೆ ಬೆಂಕಿ ಆವರಿಸಿ ಹೊತ್ತಿ ಉರಿದಿದೆ. ಆಕಾಶದೆತ್ತರಕ್ಕೆ ದಟ್ಟವಾದ ಹೊಗೆ ಮತ್ತು ಬೆಂಕಿಯ ಜ್ವಾಲೆ ಕಾಣಿಸಿಕೊಂಡಿದೆ. ಇದರಿಂದ ಸುತ್ತಮುತ್ತಲಿನ ಹಳ್ಳಿಯ ಜನರು ಭಯಭೀತರಾಗಿದ್ದರು. ಮುನ್ನೆಚ್ಚರಿಕ ಕ್ರಮವಾಗಿ ಅವರನ್ನು ಸ್ಥಳಾಂತರಿಸಲಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಎನ್ನೋರ್‌ನಿಂದ ಜೋಲಾರ್‌ಪೆಟ್ಟೈಗೆ ಕಚ್ಚಾ ತೈಲ ಸಾಗಿಸುತ್ತಿದ್ದ 45 ಬೋಗಿಗಳನ್ನು ಹೊಂದಿದ್ದ ಸರಕು ಸಾಗಣೆ ರೈಲು, ಚೆನ್ನೈ ಸೆಂಟ್ರಲ್‌ನಿಂದ 43 ಕಿ.ಮೀ ದೂರದಲ್ಲಿರುವ ತಿರುವಳ್ಳೂರು-ಎಗತ್ತೂರು ವಿಭಾಗದ ಮೂಲಕ ಹಾದುಹೋಗುವಾಗ ಬೆಳಿಗ್ಗೆ 4.45ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ. ರೈಲಿನ ಎರಡು ವ್ಯಾಗನ್‌ಗಳು ಹಳಿತಪ್ಪಿದ ಕಾರಣ ಬೆಂಕಿ ಆವರಿಸಿರಬಹುದು ಎಂದು ಶಂಕಿಸಲಾಗಿದೆ. ಆದಾಗ್ಯೂ, ಅವಗಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಬೆಳಿಗ್ಗೆ 9 ಗಂಟೆಯ ಹೊತ್ತಿಗೆ ಐದು ಬೋಗಿಗಳನ್ನು ರೇಕ್‌ನಿಂದ ಬೇರ್ಪಡಿಸಲಾಗಿದೆ ಎಂದು ವರದಿ ವಿವರಿಸಿದೆ.

ನಾಲ್ಕು ಬೋಗಿಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಬೆಂಕಿ ಇತರ ಬೋಗಿಗಳಿಗೂ ವ್ಯಾಪಿಸಿದೆ. ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಬೆಂಕಿ ಅವಘಢದ ಹಿನ್ನೆಲೆ, ಚೆನ್ನೈ-ಅರಕ್ಕೋಣಂ ವಿಭಾಗದಲ್ಲಿನ ಎಲ್ಲಾ ಉಪನಗರ ರೈಲು ಸೇವೆಗಳನ್ನು ಬೆಳಿಗ್ಗೆ 5 ಗಂಟೆಯಿಂದ ಸ್ಥಗಿತಗೊಳಿಸಲಾಗಿದೆ.

ಶನಿವಾರ ಚೆನ್ನೈಗೆ ಹೊರಟಿದ್ದ ಮಂಗಳೂರು ಮೇಲ್, ನೀಲಗಿರಿ ಎಕ್ಸ್‌ಪ್ರೆಸ್, ಮೈಸೂರು ಎಕ್ಸ್‌ಪ್ರೆಸ್, ಕೊಯಮತ್ತೂರು ಇಂಟರ್‌ಸಿಟಿ, ತಿರುವನಂತಪುರಂ ಮೇಲ್ ಮತ್ತು ಜೋಲಾರ್‌ಪೇಟೆ ಎಕ್ಸ್‌ಪ್ರೆಸ್ ಸೇರಿದಂತೆ ಸುಮಾರು ಎಂಟು ಎಕ್ಸ್‌ಪ್ರೆಸ್ ರೈಲುಗಳು ಅರಕ್ಕೋಣಂ ಮತ್ತು ಕಟ್ಪಾಡಿ ನಡುವೆ ಅಲ್ಪಾವಧಿಗೆ ಸ್ಥಗಿತಗೊಂಡವು.

ಅದೇ ರೀತಿ, ಚೆನ್ನೈ ಸೆಂಟ್ರಲ್‌ನಿಂದ ಬೆಳಿಗ್ಗೆ 6 ರಿಂದ 8.30 ರವರೆಗೆ ಹೊರಡಬೇಕಿದ್ದ ಎಂಟು ಎಕ್ಸ್‌ಪ್ರೆಸ್ ರೈಲುಗಳಾದ ಚೆನ್ನೈ-ಮೈಸೂರು ಶತಾಬ್ದಿ, ಚೆನ್ನೈ-ಕೊಯಮತ್ತೂರು ಕೋವೈ ಎಕ್ಸ್‌ಪ್ರೆಸ್, ಚೆನ್ನೈ-ತಿರುಪತಿ ಸಪ್ತಗಿರಿ ಎಕ್ಸ್‌ಪ್ರೆಸ್ ಮತ್ತು ಚೆನ್ನೈ-ಬೆಂಗಳೂರು ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್ ರೈಲುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಗುಡೂರು ಮತ್ತು ರೇಣಿಗುಂಟ ಮೂಲಕ ನಾಲ್ಕು ರೈಲುಗಳ ಹಳಿ ಬದಲಿಸಲಾಗಿದೆ ಎಂದು ವರದಿಯಾಗಿದೆ.

ಅಗ್ನಿಶಾಮಕ ಸೇರಿದಂತೆ ರಕ್ಷಣಾ ತಂಡಗಳು ಅವಘಡ ನಡೆಸ ಸ್ಥಳಕ್ಕೆ ತೆರಳಿದ್ದು, ರೈಲು ಸೇವೆಯನ್ನು ಪುನಸ್ಥಾಪಿಸುವ ಕಾರ್ಯ ನಡೆಯುತ್ತಿದೆ.

ಸ್ಥಳ ಪರಿಶೀಲನೆ ನಡೆಸಿದ ತಿರುವಳ್ಳೂರು ಜಿಲ್ಲಾಧಿಕಾರಿ ಎಂ. ಪ್ರತಾಪ್, “ಹಳಿ ಪಕ್ಕದಲ್ಲಿರುವ ನಿವಾಸಿಗಳನ್ನು ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಕಿ ನಿಯಂತ್ರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಭರವಸೆ ನೀಡಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ಅರಕ್ಕೋಣಂ ಘಟಕದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಉಜ್ವಲ್ ನಿಕಮ್, ಮೀನಾಕ್ಷಿ ಜೈನ್ ಸೇರಿ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...