Homeಮುಖಪುಟಚುನಾವಣಾ ಆಯೋಗ ಸದಾ ಮೋದಿ ಸರ್ಕಾರದ ಕೈಗೊಂಬೆಯಾಗಿದೆ: ಕಪಿಲ್ ಸಿಬಲ್

ಚುನಾವಣಾ ಆಯೋಗ ಸದಾ ಮೋದಿ ಸರ್ಕಾರದ ಕೈಗೊಂಬೆಯಾಗಿದೆ: ಕಪಿಲ್ ಸಿಬಲ್

- Advertisement -
- Advertisement -

ಚುನಾವಣಾ ಆಯೋಗ ಯಾವಾಗಲೂ ಮೋದಿ ಸರ್ಕಾರದ ಕೈಗೊಂಬೆಯಾಗಿದೆ ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಆರೋಪಿಸಿದ್ದಾರೆ. ಬಿಹಾರದಲ್ಲಿ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಬಹುಸಂಖ್ಯಾತರ ಸರ್ಕಾರಗಳು ಅಧಿಕಾರದಲ್ಲಿ ಉಳಿಯುವಂತೆ ಮಾಡುವ ಗುರಿಯನ್ನು ಹೊಂದಿರುವ ‘ಅಸಂವಿಧಾನಿಕ’ ಕ್ರಮ ಎಂದು ಅವರು ಟೀಕಿಸಿದ್ದಾರೆ.

“ಪ್ರತಿಯೊಬ್ಬ ಚುನಾವಣಾ ಆಯುಕ್ತರೂ ಸರ್ಕಾರದೊಂದಿಗಿನ ಹೊಂದಾಣಿಕೆಯಲ್ಲಿ ಅವರ ಹಿಂದಿನವರನ್ನು ಮೀರಿಸುತ್ತಾರೆ” ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಸಿಬಲ್ ಹೇಳಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಟೀಕಿಸಿದ ಸಿಬಲ್, “ಚುನಾವಣಾ ಆಯೋಗ ಪೌರತ್ವದ ತಕರಾರುಗಳನ್ನು ನಿರ್ಧರಿಸುವ ಅಧಿಕಾರ ಹೊಂದಿಲ್ಲ”ಎಂದಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಮೇಲೆ ಪ್ರತಿಪಕ್ಷಗಳು ನಡೆಸುತ್ತಿರುವ ವಾಗ್ವಾಳಿ ಬಗ್ಗೆ ಕೇಳಿದಾಗ “ಈ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಚುನಾವಣಾ ಆಯೋಗ ಅದರ ಕೈಗೊಂಬೆಯಾಗಿದೆ. ಚುನಾವಣಾ ಆಯೋಗದ ನಡವಳಿಕೆ ಬಗ್ಗೆ ಕಡಿಮೆ ಮಾತನಾಡಿದಷ್ಟೂ ಒಳ್ಳೆಯದು” ಎಂದು ಹೇಳಿದ್ದಾರೆ.

“ಮತದಾರರ ಪಟ್ಟಿಯ ಪರಿಷ್ಕರಣೆಯು ಸಂಪೂರ್ಣವಾಗಿ ಸಂವಿಧಾನ ಬಾಹಿರವಾಗಿದೆ. ಚುನಾವಣಾ ಆಯೋಗಕ್ಕೆ, ಅದರಲ್ಲೂ ಒಬ್ಬ ಬ್ಲಾಕ್ ಮಟ್ಟದ ಅಧಿಕಾರಿಗೆ ಪೌರತ್ವದ ತಕರಾರುಗಳನ್ನು ನಿರ್ಧರಿಸುವ ಅಧಿಕಾರ ಇಲ್ಲ. ಅವರು (ಬಿಜೆಪಿ) ಚುನಾವಣೆ ಗೆಲ್ಲಲು ಸಾಧ್ಯವಿರುವ ಎಲ್ಲಾ ವಿಧಾನಗಳನ್ನು ಚುನಾವಣಾ ಆಯೋಗದವರು ಅಳವಡಿಸಿಕೊಳ್ಳುತ್ತಾರೆ. ವಾಸ್ತವವಾಗಿ, ವಿಶೇಷ ತೀವ್ರ ಪರಿಷ್ಕರಣೆಯು ಮುಂಬವರುವ ಎಲ್ಲಾ ಸಮಯದಲ್ಲೂ ಬಹು ಸಂಖ್ಯಾತರ ಸರ್ಕಾರಗಳನ್ನು ಉಳಿಸಿಕೊಳ್ಳುವ ಒಂದು ಪ್ರಕ್ರಿಯೆಯಾಗಿದೆ” ಕಪಿಲ್ ಸಿಬಲ್ ಆರೋಪಿಸಿದ್ದಾರೆ.

ಬಡವರು, ತಳಮಟ್ಟದ ಜನರು, ಆದಿವಾಸಿಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿದರೆ, ಬಹುಸಂಖ್ಯಾತರ ಪಕ್ಷವು ಯಾವಾಗಲೂ ಗೆಲ್ಲುತ್ತದೆ. ಇದು ಉದ್ದೇಶವಾಗಿದೆ. ಆದ್ದರಿಂದ ಇದು ಕಳವಳಕಾರಿಯಾಗಿದೆ ಎಂದು ಸಿಬಲ್ ಹೇಳಿದ್ದಾರೆ.

ಚುನಾವಣಾ ಆಯೋಗದ ಸ್ವಾತಂತ್ರ್ಯದ ಮೇಲೆ ನಾನು ನಂಬಿಕೆ ಇಡುವುದಿಲ್ಲ. ಏಕೆಂದರೆ ಆ ಸಂಸ್ಥೆಯು ನಿರೀಕ್ಷಿಸಿದ ಸ್ವಾತಂತ್ರ್ಯವನ್ನು ಪ್ರತಿಬಿಂಬಿಸಿಲ್ಲ ಎಂದು ಸಿಬಲ್ ಹೇಳಿದ್ದು, ಸುಪ್ರೀಂ ಕೋರ್ಟ್‌ನ ಮಧ್ಯಂತರ ಆದೇಶದ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ. ಈ ವಿಷಯದಲ್ಲಿ ನಾನು ವಕೀಲ ಎಂದಿದ್ದಾರೆ.

“ನ್ಯಾಯಾಲಯ ಏನು ಹೇಳಿದೆಯೋ ಅದನ್ನು ಚುನಾವಣಾ ಆಯೋಗವೇ ಗಣನೆಗೆ ತೆಗೆದುಕೊಳ್ಳುತ್ತದೆ ಎಂದು ಆಶಿಸುತ್ತೇವೆ. ಆದ್ದರಿಂದ ಈ ವಿವಾದ ಮುಂದುವರಿಯದಂತೆ ನೋಡಿಕೊಳ್ಳೋಣ” ಎಂದು ಸಿಬಲ್ ಪ್ರತಿಕ್ರಿಯಿಸಿದ್ದಾರೆ.

ಸಂಸತ್ತಿನ ಮಳೆಗಾಲದ ಅಧಿವೇಶನ ಬರುತ್ತಿದೆ. ಈ ಅಧಿವೇಶನದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಚರ್ಚಿಸುವುದು ಎಲ್ಲದ್ದಕ್ಕಿಂತ ಹೆಚ್ಚು ಮಹತ್ವದ್ದಾಗಿದೆ. ಬಿಜೆಪಿ ಗೆದ್ದ ಕ್ಷೇತ್ರಗಳಲ್ಲಿ ಮಾತ್ರ ಮತದಾರರು ಹಠಾತ್ತನೆ ಹೇಗೆ ಹೆಚ್ಚಾದರು ಎಂಬುದನ್ನು ಚುನಾವಣಾ ಆಯೋಗ ಇನ್ನೂ ವಿವರಿಸಲು ಸಾಧ್ಯವಾಗಿಲ್ಲ. ಆದ್ದರಿಂದ ಮಹಾರಾಷ್ಟ್ರ ವಿಷಯವೂ ಮುಖ್ಯವಾಗಿದೆ ಎಂದಿದ್ದಾರೆ.

ಬಿಹಾರದ ಮತದಾರರ ಪಟ್ಟಿ ಪರಿಷ್ಕರಣೆಗೆ ಮಾನ್ಯ ದಾಖಲೆಯಾಗಿ ಆಧಾರ್ ಕಾರ್ಡ್, ವೋಟರ್ ಐಡಿ ಮತ್ತು ಪಡಿತರ ಚೀಟಿಯನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚಿಸಿದ ಬೆನ್ನಲ್ಲೇ ಕಪಿಲ್ ಸಿಬಲ್ ಮೇಲಿನ ಹೇಳಿಕೆ ನೀಡಿದ್ದಾರೆ.

ಸೌಜನ್ಯ : theprint.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...