Homeಮುಖಪುಟಟೆನ್ನಿಸ್‌ ಆಟಗಾರ್ತಿ ರಾಧಿಕಾ ಯಾದವ್ ಹತ್ಯೆ ಪ್ರಕರಣ: 'ಗೋಧಿ ಮೀಡಿಯಾ'ಗಳ 'ಲವ್ ಜಿಹಾದ್' ಆರೋಪ ಟುಸ್ಸಾಗಿದ್ದು...

ಟೆನ್ನಿಸ್‌ ಆಟಗಾರ್ತಿ ರಾಧಿಕಾ ಯಾದವ್ ಹತ್ಯೆ ಪ್ರಕರಣ: ‘ಗೋಧಿ ಮೀಡಿಯಾ’ಗಳ ‘ಲವ್ ಜಿಹಾದ್’ ಆರೋಪ ಟುಸ್ಸಾಗಿದ್ದು ಹೇಗೆ?

- Advertisement -
- Advertisement -

ನವದೆಹಲಿ: ಹರಿಯಾಣದ ರಾಜ್ಯಮಟ್ಟದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಅವರ ಹತ್ಯೆಯು ಕೇವಲ ವೈಯಕ್ತಿಕ ದ್ವೇಷ ಮತ್ತು ಸಾಮಾಜಿಕ ಕಳಂಕದಿಂದ ನಡೆದ ಘಟನೆಯಾಗಿತ್ತು. ಅಲ್ಲಿ ಆಕೆಯ ತಂದೆಯೇ ಆಕೆಗೆ ನಾಲ್ಕು ಸುತ್ತು ಗುಂಡುಗಳನ್ನು ಹಾರಿಸಿದ್ದನು. ಆದರೆ, ಈ ಘಟನೆ ನಡೆದ ಕೆಲವೇ ಸಮಯದಲ್ಲಿ ‘ಗೋಧಿ ಮೀಡಿಯಾ’ ಎಂದು ಗುರುತಿಸಲ್ಪಡುವ ಕೆಲವು ಮುಖ್ಯವಾಹಿನಿ ಮಾಧ್ಯಮಗಳು ಇದಕ್ಕೆ ಕೋಮು ಬಣ್ಣ ಹಚ್ಚಲು ಪ್ರಯತ್ನಿಸಿದವು.

ಹಲವು ಮುಖ್ಯವಾಹಿನಿ ಮಾಧ್ಯಮಗಳು ಆರಂಭದಲ್ಲಿ ರಾಧಿಕಾ ಹತ್ಯೆಗೆ  ‘ಲವ್ ಜಿಹಾದ್’ ಕಾರಣ ಎಂದು ದೊಡ್ಡದಾಗಿ ಬಿತ್ತರಿಸಿದ್ದವು. ರಾಧಿಕಾ ಕೆಲವು ವರ್ಷಗಳ ಹಿಂದೆ ಮುಸ್ಲಿಂ ಕಲಾವಿದ ಇನಾಮ್-ಉಲ್-ಹಕ್‌ ಅವರೊಂದಿಗೆ ಒಂದು ಮ್ಯೂಸಿಕ್ ಆಲ್ಬಂ ಮಾಡಿದ್ದು ಇದಕ್ಕೆ ಏಕೈಕ ಆಧಾರವಾಗಿತ್ತು. ಆದರೆ, ರಾಧಿಕಾ ಅವರ ತಂದೆ ದೀಪಕ್ ಯಾದವ್ ತಾನೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡ ತಕ್ಷಣವೇ ಸತ್ಯಾಂಶ ಹೊರಬಿತ್ತು.

ಈ ಮಧ್ಯೆ, ವೈರಲ್ ಆದ ಮ್ಯೂಸಿಕ್ ವೀಡಿಯೊದಲ್ಲಿ ರಾಧಿಕಾ ಯಾದವ್ ಜೊತೆ ಕಾಣಿಸಿಕೊಂಡಿದ್ದ ನಟ ಶುಕ್ರವಾರ ಒಂದು ಸ್ಪಷ್ಟನೆ ನೀಡಿದ್ದಾರೆ. ಅವರು ತಮ್ಮ ವೃತ್ತಿಪರ ಸಂಬಂಧವನ್ನು ಹೊರತುಪಡಿಸಿ ರಾಧಿಕಾಳೊಂದಿಗೆ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ಇನಾಮ್-ಉಲ್-ಹಕ್ ಅವರು ದುಬೈನಲ್ಲಿ ಟೆನಿಸ್ ಪ್ರೀಮಿಯರ್ ಲೀಗ್ ವೇಳೆ ರಾಧಿಕಾಳನ್ನು ಮೊದಲ ಬಾರಿಗೆ ಭೇಟಿಯಾಗಿದ್ದರು ಮತ್ತು ನಂತರ ಒಂದು ಮ್ಯೂಸಿಕ್ ವೀಡಿಯೊದಲ್ಲಿ ಕೆಲಸ ಮಾಡಿದ್ದರು. ಆ ವೀಡಿಯೊ ಯೂಟ್ಯೂಬ್‌ನಲ್ಲಿ ಲಭ್ಯವಿದ್ದು, ಅದಕ್ಕಾಗಿಯೇ ಅದನ್ನು ಪದೇ ಪದೇ ಪ್ರಸ್ತಾಪಿಸಲಾಗುತ್ತಿದೆ ಎಂದೂ ಕೆಲ ಮಾಧ್ಯಮಗಳ ವರದಿಗಳು ಹೇಳಿವೆ.

ಮುಸ್ಲಿಂ ವಿರೋಧಿ, ಇಸ್ಲಾಮೋಫೋಬಿಕ್ ದ್ವೇಷ ಭಾಷಣಗಳನ್ನು ಹರಡಲು ಯಾವುದೇ ಅವಕಾಶವನ್ನು ಬಿಡದ ಕೆಲ ಮುಖ್ಯವಾಹಿನಿ ಮಾಧ್ಯಮಗಳು, 25 ವರ್ಷದ ರಾಧಿಕಾಳ ಹತ್ಯೆಯಾದ ಕೆಲವೇ ಸಮಯದಲ್ಲಿ ತಾವು ‘ಲವ್‌ ಜಿಹಾದ್’ ಎಂದು ಬಿತ್ತರಿಸಿದ್ದು ತಪ್ಪು ಎಂದು ಒಪ್ಪಿಕೊಳ್ಳಬೇಕಾಯಿತು. ರಾಧಿಕಾಳ ತಂದೆ ತಮ್ಮ ಪರವಾನಗಿ ಪಡೆದ ರಿವಾಲ್ವರ್‌ನಿಂದ ಆಕೆಯನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ ಮತ್ತು ತಾನೇ ಮಗಳನ್ನು ಹತ್ಯೆಗೈದಿರುವುದಾಗಿ ಅಪರಾಧದ ನಂತರ ತನ್ನ ಸಹೋದರನೊಂದಿಗೆ ಒಪ್ಪಿಕೊಂಡಿದ್ದಾರೆ ಎಂಬುದು ಶೀಘ್ರದಲ್ಲೇ ದೃಢಪಟ್ಟಿತು.

ರಾಧಿಕಾ ಯಾದವ್ ಅವರ ಚಿಕ್ಕಪ್ಪ ವಿಜಯ್ ಯಾದವ್, “ಒಬ್ಬ ವ್ಯಕ್ತಿ ತಾನೇ ತಪ್ಪಿತಸ್ಥ ಎಂದು ಅರಿತುಕೊಂಡಾಗ, ಅದಕ್ಕಿಂತ ದೊಡ್ಡ ಶಿಕ್ಷೆ ಬೇರಿಲ್ಲ” ಎಂದಿದ್ದಾರೆ.

ವಿಜಯ್ ಯಾದವ್, “ದೀಪಕ್‌ ಯಾದವ್ ನನ್ನ ಸಹೋದರ. ಅವನೇ ತನ್ನ ಮಗಳನ್ನು ಕೊಂದಿದ್ದೇನೆ, ತನ್ನನ್ನು ಕೊಂದುಬಿಡು…’ ಎಂದು ಹೇಳಿದ. ಕಾರಣ ಕೇಳಿದರೆ ಹೇಳಲಿಲ್ಲ. ‘ಕೇವಲ ಮನಸ್ಸು ಕೆಟ್ಟಿತ್ತು’ ಎಂದು ಹೇಳಿದ” ಎಂದು ತಿಳಿಸಿದ್ದಾರೆ.

ಸಾರ್ವಜನಿಕರಿಂದ ತನಗೆ ಮಗಳ ದುಡಿಮೆಯಲ್ಲಿ ಬದುಕು ಸಾಗಿಸುತ್ತಿದ್ದೀಯಾ ಎಂಬ “ನಿಂದನೆಗಳು”, ಟೆನಿಸ್ ಅಕಾಡೆಮಿ, ಇನ್‌ಸ್ಟಾಗ್ರಾಮ್ ರೀಲ್ ಮತ್ತು ಮ್ಯೂಸಿಕ್ ವೀಡಿಯೊ ಸೇರಿದಂತೆ ಹಲವು ಕಾರಣಗಳು ಮಗಳ ಹತ್ಯೆಗೆ ಕಾರಣವೆಂದು ದೀಪಕ್ ಯಾದವ್  ಅವರು  ಹೇಳಿಕೊಂಡಿದ್ದಾರೆ ಎಂದು ಕೆಲವು ದೃಢಪಡಿಸದ ವರದಿಗಳು ಹೇಳಿವೆ.

ಗುರುಗ್ರಾಮ್ ನ್ಯಾಯಾಲಯ ಶನಿವಾರ ದೀಪಕ್ ಯಾದವ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

25 ವರ್ಷದ ರಾಧಿಕಾ ಅವರ ದೇಹಕ್ಕೆ ನಾಲ್ಕು ಗುಂಡುಗಳು ತಗುಲಿವೆ.  ಇವುಗಳಲ್ಲಿ ಮೂರು ಗುಂಡುಗಳು ಬೆನ್ನಿಗೆ ಮತ್ತು ಒಂದು ಭುಜಕ್ಕೆ ಹೊಕ್ಕಿದೆ ಎಂದು ಮೂವರು ವೈದ್ಯರ ತಂಡದ ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ ಎಂದು ಪೊಲೀಸರು ಶುಕ್ರವಾರ ಮಾಹಿತಿ ನೀಡಿದ್ದಾರೆ. ಶನಿವಾರ ವಜಿರಾಬಾದ್‌ನಲ್ಲಿ ಆಕೆಯ ಅಂತ್ಯಕ್ರಿಯೆ ನಡೆದಿದೆ.

ಗುರುವಾರ ಬೆಳಿಗ್ಗೆ 10:30 ರ ಸುಮಾರಿಗೆ, ಸುಶಾಂತ್ ಲೋಕ್-2 ರ ‘ಬ್ಲಾಕ್-ಜಿ’ನಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ರಾಧಿಕಾ ಉಪಹಾರ ತಯಾರಿಸುತ್ತಿದ್ದಾಗ ದೀಪಕ್ ಯಾದವ್ ಆಕೆಯನ್ನು ನಾಲ್ಕು ಸುತ್ತು ಗುಂಡು ಹಾರಿಸಿ ಹತ್ಯೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ತಂದೆಯು ತಾನು ಮಗಳ ಕೊಲೆಗೆ ಮೊದಲೇ ಸಂಚು ರೂಪಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಗುರುಗ್ರಾಮ್ ಪೊಲೀಸರ ಸಾರ್ವಜನಿಕ ಸಂಪರ್ಕ ಅಧಿಕಾರಿ ಸಂದೀಪ್ ಕುಮಾರ್ ಹೇಳಿದ್ದಾರೆ.

ದೀಪಕ್‌ ಯಾದವ್‌ ಸಾಮಾನ್ಯವಾಗಿ ಬೆಳಿಗ್ಗೆ ಹಾಲು ತರಲು ತಾವೇ ಹೋಗುತ್ತಿದ್ದರು. ಆದರೆ ಗುರುವಾರ ಮಗನಿಗೆ ಹೋಗುವಂತೆ ಹೇಳಿದರು. ಮನೆಯಲ್ಲಿ ರಾಧಿಕಾಳೊಂದಿಗೆ ಒಬ್ಬಂಟಿಯಾಗಿದ್ದಾಗ, ಅವಳು ಉಪಹಾರ ತಯಾರಿಸುತ್ತಿದ್ದಾಗ ಆಕೆಯ ಮೇಲೆ ದೀಪಕ್ ಗುಂಡುಗಳನ್ನು ಹಾರಿಸಿದನು ಎಂದು ಸಂದೀಪ್‌ ಕುಮಾರ್ ವಿವರಿಸಿದರು.

ಈ ಪ್ರಕರಣಕ್ಕೆ ಲವ್ ಜಿಹಾದ್ ಹಣೆಪಟ್ಟಿ ಕಟ್ಟುವ ಮೂಲಕ ಕೋಮು ಉದ್ವಿಗ್ನತೆಯನ್ನು ಹೆಚ್ಚಿಸಲು  ‘ಗೋಧಿ ಮೀಡಿಯಾ’ಗಳು ಪ್ರಯತ್ನಿಸಿದವು. ಈ ಪ್ರಕರಣವು ವಾಸ್ತವ ಸ್ಥಿತಿಯನ್ನು ಮರೆಮಾಚಿ ಸುದ್ದಿಯನ್ನು ತಿರುಚಲು ಗೋಧಿ ಮೀಡಿಯಾಗಳು ಹೇಗೆ ಬಳಸಿಕೊಳ್ಳುತ್ತವೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ.

ಕಾಶ್ಮೀರದ ಮುಸ್ಲಿಂ ಪ್ರಾಬಲ್ಯ ಪ್ರದೇಶಗಳಿಗೆ ಭೇಟಿ ಕೊಡಬೇಡಿ: ಬಂಗಾಳಿಗಳಿಗೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...