Homeಮುಖಪುಟಪ್ರೀತಿಸಿ ಮದುವೆ: ಮತ್ತೊಂದು ಜೋಡಿಗೆ ನೇಗಿಲು ಕಟ್ಟಿ ಹೊಲ ಉಳುಮೆ ಮಾಡಿದ ಗ್ರಾಮಸ್ಥರು

ಪ್ರೀತಿಸಿ ಮದುವೆ: ಮತ್ತೊಂದು ಜೋಡಿಗೆ ನೇಗಿಲು ಕಟ್ಟಿ ಹೊಲ ಉಳುಮೆ ಮಾಡಿದ ಗ್ರಾಮಸ್ಥರು

- Advertisement -
- Advertisement -

ಬುಡಕಟ್ಟು ನಿಯಮ ಮೀರಿ ಪ್ರೀತಿಸಿ ಮದುವೆಯಾದ ಜೋಡಿಯೊಂದಕ್ಕೆ ನೇಗಿಲು ಕಟ್ಟಿ ಹೊಲ ಉಳುಮೆ ಮಾಡಿದ ಅಮಾನವೀಯ ಘಟನೆ ಒಡಿಶಾದ ರಾಯಗಢ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿತ್ತು. ಈಗ ಅಂತದ್ದೇ ಮತ್ತೊಂದು ಘಟನೆ ಕೊರಾಪುಟ್ ಜಿಲ್ಲೆಯಲ್ಲಿ ವರದಿಯಾಗಿದೆ.

ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ರಕ್ತ ಸಂಬಂಧಿಗಳಾದ ಜೋಡಿಗೆ ಎತ್ತುಗಳಂತೆ ನೇಗಿಲು ಕಟ್ಟಿ ಹೊಲ ಉಳುಮೆ ಮಾಡಲಾಗಿದೆ. ಕಳೆದ ಭಾನುವಾರ ನಾರಾಯಣಪಟ್ಟಣ ಬ್ಲಾಕ್‌ನಲ್ಲಿರುವ ಪೆಡೈಟಿಕಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಪೆಡೈಟಿಕಿಯ ನರೇಂದ್ರ ಪಿಡಿಕಾ (22) ಮತ್ತು ನಾರಾಯಣಪಟ್ಟಣ ಬ್ಲಾಕ್ ವ್ಯಾಪ್ತಿಯ ನದಿಮಿಟಿಕಿ ಗ್ರಾಮದ ಅಸಾಂತಿ ಪಿಡಿಕಾ (21) ಒಂದೇ ಕುಲದವರು.ಕೊಂಡ ಸಮುದಾಯದ ಈ ಜೋಡಿ ಪ್ರೀತಿಸಿ ಮದುವೆಯಾಗಿದ್ದರು. ಊರಿನಲ್ಲಿ ಹಬ್ಬದ ಸಮಯದಲ್ಲಿ ಅವರು ಆಂಧ್ರಪ್ರದೇಶಕ್ಕೆ ಓಡಿಹೋಗಿದ್ದರು. ವಾಪಸ್ ತಮ್ಮ ತಮ್ಮ ಹಳ್ಳಿಗಳಿಗೆ ಮರಳಿದಾಗ, ಸಮುದಾಯದ ಜನರು ಅವರ ಮದುವೆಯನ್ನು ನಿಷಿದ್ಧ ಎಂದು ತೀರ್ಮಾನಿಸಿ ಶಿಕ್ಷೆ ವಿಧಿಸಿದ್ದಾರೆ.

ಗ್ರಾಮದಲ್ಲಿ ಸಮುದಾಯದ ಹಿರಿಯರೆಲ್ಲ ಸೇರಿ ಜೋಡಿಯ ಮದುವೆಯ ಕುರಿತು ಚರ್ಚಿಸಿದ್ದರು. ಅಲ್ಲಿ ಮದುವೆಯನ್ನು ಒಪ್ಪಿಕೊಳ್ಳಬೇಕಾದರೆ ಸಮುದಾಯದ ನಿಯಮದಂತೆ ನೊಗ ಕಟ್ಟಿ ಗದ್ದೆ ಉಳುಮೆಗೈದು ಶುದ್ದೀಕರಣ ಮಾಡಬೇಕು ಎಂದು ತೀರ್ಮಾನಿಸಲಾಗಿದೆ. ನಂತರ ಜೋಡಿಗೆ ನೇಗಿಲು ಕಟ್ಟಿ ಪೆಡೈಟಿಕಿಯ ಬೀದಿಗಳಲ್ಲಿ ಎತ್ತುಗಳಂತೆ ಮೆರವಣಿಗೆ ಮಾಡಲಾಗಿದೆ. ಕೊನೆಗೆ ಗ್ರಾಮ ದೇವತೆಯ ಮುಂದೆ ಪ್ರಾರ್ಥನೆ ಸಲ್ಲಿಸಿ,ಗಂಡ ನರೇಂದ್ರನ ಮನೆಯಲ್ಲಿ ಇರಲು ಅಸಾಂತಿಗೆ ಅವಕಾಶ ನೀಡಲಾಗಿದೆ ಎಂದು ವರದಿಗಳು ಹೇಳಿವೆ.

“ನಮ್ಮ ನಂಬಿಕೆಯ ಪ್ರಕಾರ, ಒಂದೇ ಕುಲದೊಳಗೆ ಮದುವೆ ನಡೆದರೆ, ಅದು ದೇವಿಯ ಕೋಪಕ್ಕೆ ಕಾರಣವಾಗುತ್ತದೆ. ಬೆಳೆ ವೈಫಲ್ಯ ಮತ್ತು ರೋಗ ಹರಡುವಿಕೆಗೆ ಕಾರಣವಾಗುತ್ತದೆ. ಈ ಆಚರಣೆಯು ಗ್ರಾಮವನ್ನು ಆ ಪಾಪದಿಂದ ಶುದ್ಧೀಕರಿಸುವ ಉದ್ದೇಶವನ್ನು ಹೊಂದಿದೆ” ಎಂದು ನರೇಂದ್ರ ಅವರ ಸೋದರಸಂಬಂಧಿ ಸಂತೋಷ್ ಪಿಡಿಕಾ ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸ್ಥಳೀಯ ವಾರ್ಡ್ ಸದಸ್ಯೆ ಗುಂಫಾ ಹುಯಿಕಾ ಕೂಡ ಇದೇ ಭಾವನೆಯನ್ನು ವ್ಯಕ್ತಪಡಿಸಿದ್ದು,ದಂಪತಿ ಹಿರಿಯರಿಂದ ಕ್ಷಮೆ ಯಾಚಿಸುವ ‘ಸಾಂಪ್ರದಾಯಿಕ ಶುದ್ಧೀಕರಣ ಪ್ರಕ್ರಿಯೆ’ನಡೆಸಲಾಗಿದೆ ಎಂದಿದ್ದಾರೆ.

“ಇಂತಹ ಆಚರಣೆಯ ನಂತರವೇ ಅವರನ್ನು ಒಟ್ಟಿಗೆ ವಾಸಿಸಲು ಅನುಮತಿಸಬಹುದು” ಎಂದು ಹುಯಿಕಾ ಹೇಳಿದ್ದು, “ಅಸಾಂತಿಯ ಕುಟುಂಬವು ಬುಡಕಟ್ಟು ಪದ್ಧತಿಗಳನ್ನು ಗೌರವಿಸುವ ಷರತ್ತಿನ ಮೇಲೆ ಮಾತ್ರ ಮದುವೆಗೆ ಒಪ್ಪಿಕೊಂಡಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ.

ಈ ಘಟನೆಯನ್ನು ಸಾಮಾಜಿಕ ಸಂಘಟನೆಗಳ ಕಾರ್ಯಕರ್ತರು ಖಂಡಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಮಧ್ಯ ಪ್ರವೇಶಿಸಿ ಇಂತಹ ಕೃತ್ಯಕ್ಕೆ ಕಾರಣರಾದವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಘಟನೆ ಸಂಬಂಧ ಇದುವರೆಗೆ ಯಾವುದೇ ದೂರು ದಾಖಲಾಗಿಲ್ಲ. ಸಂಬಂಧಪಟ್ಟ ಅಧಿಕಾರಿಗಳೂ ಈ ಬಗ್ಗೆ ಪ್ರತಿಕ್ರಿಯಿಸಿಲ್ಲ ಎಂದು ವರದಿಗಳು ಹೇಳಿವೆ.

ಟೆನ್ನಿಸ್‌ ಆಟಗಾರ್ತಿ ರಾಧಿಕಾ ಯಾದವ್ ಹತ್ಯೆ ಪ್ರಕರಣ: ‘ಗೋಧಿ ಮೀಡಿಯಾ’ಗಳ ‘ಲವ್ ಜಿಹಾದ್’ ಆರೋಪ ಟುಸ್ಸಾಗಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...