Homeಕರ್ನಾಟಕನಾಳೆಯ ಸಭೆಯಲ್ಲಿ ಭೂ ಸ್ವಾಧೀನ ಕೈ ಬಿಡುವ ಬಗ್ಗೆ ತಿಳಿಸಿ, ಪರಿಹಾರ ಹಣದ ಮಾತು ಬೇಡ:...

ನಾಳೆಯ ಸಭೆಯಲ್ಲಿ ಭೂ ಸ್ವಾಧೀನ ಕೈ ಬಿಡುವ ಬಗ್ಗೆ ತಿಳಿಸಿ, ಪರಿಹಾರ ಹಣದ ಮಾತು ಬೇಡ: ನಟ ಪ್ರಕಾಶ್ ರಾಜ್

"ದೇವನಹಳ್ಳಿಯ ರೈತರಿಂದ 10 ದಿನಗಳ ಸಮಯ ಕೇಳಿ ಸಿಎಂ, ಸಚಿವರು ದಿಲ್ಲಿಗೆ ಹೋಗಿದ್ದು ಏಕೆ? ಡಿಫೆನ್ಸ್ ಕಾರಿಡಾರ್, ಏರೋ ಸ್ಪೇಸ್‌ಗೆ ಮನವಿ ಮಾಡಿದ್ದು ಏಕೆ? "

- Advertisement -
- Advertisement -

ದೇವನಹಳ್ಳಿ ರೈತರ ಭೂಸ್ವಾಧೀನ ಸಂಬಂಧ ನಾಳೆ ಮುಖ್ಯಮಂತ್ರಿ ಕರೆದಿರುವ ಸಭೆಯಲ್ಲಿ ಭೂ ಸ್ವಾಧೀನ ಕೈ ಬಿಡುವ ಬಗ್ಗೆ ಮಾತ್ರ ಚರ್ಚೆ ನಡೆಯಬೇಕೇ ಹೊರತು, ಭೂಮಿ ಕೊಟ್ಟರೆ ಪರಿಹಾರ ಕೊಡುತ್ತೇವೆ ಎಂಬುವುದು ಅಲ್ಲ ಎಂದು ನಟ ಪ್ರಕಾಶ್ ರಾಜ್ ಹೇಳಿದರು.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಎದ್ದೇಳು ಕರ್ನಾಟಕ ಸೋಮವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ರೈತರಿಂದ 10 ದಿನಗಳ ಸಮಯ ಕೇಳಿ ಸಿಎಂ ಸಿದ್ದರಾಮಯ್ಯ, ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ದೆಹಲಿಗೆ ಹೋಗಿದ್ದಾರೆ. ಅಲ್ಲಿ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಡಿಫೆನ್ಸ್ ಕಾರಿಡಾರ್ ಮತ್ತು ಏರೋ ಸ್ಪೇಸ್‌ಗೆ ಮನವಿ ಮಾಡಿದ್ದಾರೆ. ದೇವನಹಳ್ಳಿ ರೈತರ ಭೂಸ್ವಾಧೀನ ಕೈ ಬಿಡಲು ಕಾನೂನು ತೊಡಕಿದೆ ಎಂದು ನಮಗೆ ಹೇಳಿ, ನೀವು ದೆಹಲಿಗೆ ಹೋಗಿದ್ದು ಏಕೆ? ಎಂದು ಪ್ರಶ್ನಿಸಿದರು.

ದೇವನಹಳ್ಳಿಯ ರೈತರು ನಾವು ಭೂಮಿ ಕೊಡುವುದಿಲ್ಲ ಎಂದು ಮೂರುವರೆ ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಆ ಬಗ್ಗೆ ಗಮನ ಹರಿಸಲು ಸರ್ಕಾರಕ್ಕೆ ಇಷ್ಟು ಸಮಯ ಬೇಕಾಯಿತು. ಈಗ ಕಾನೂನಿನ ತೊಡಕಿದೆ ಎಂದು 15ನೇ ತಾರೀಖಿನವರೆಗೆ ಸಮಯ ಕೇಳಿದ್ದಾರೆ. ಈ ನಡುವೆ ನಾವು ಭೂಮಿ ಕೊಡುತ್ತೀವಿ ಎಂದು ದೀಢೀರ್ ಕಾಣಿಸಿಕೊಂಡ ಗುಂಪಿಗೆ ಭೇಟಿ ಮಾಡಲು ಅವಕಾಶ ಕೊಟ್ಟಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಭೂಮಿ ಕೊಡುತ್ತೇವೆ ಎಂದು ದಿಢೀರ್ ಕಾಣಿಸಿಕೊಂಡ ಗುಂಪು ಎಕರೆಗೆ 3.5 ಕೋಟಿ ಕೇಳಿದೆ. ಸುತ್ತಮುತ್ತಲ ಉಳಿದ ಪ್ರದೇಶವನ್ನು ಹಳದಿ ವಲಯ ಮಾಡುವಂತೆ ಕೋರಿದೆ. ರೈತರು ಮೂರುವರೆ ಕೋಟಿ ಕೇಳಿದ್ದಾರೆ ಎಂದು ಎಂ.ಬಿ ಪಾಟೀಲರು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಪಾಟೀಲರೇ ನೀವು ಮಾತನಾಡುತ್ತಿರುವುದು ನ್ಯಾಯನಾ? ಎಕರೆಗೆ ಮೂರುವರೆ ಕೋಟಿ ಕೊಡಲು ನೀವು ಯಾರು? ಅಷ್ಟೊಂದು ಹಣ ಎಲ್ಲಿಂದ ಕೊಡುತ್ತೀರಿ? ಎಂದು ಪ್ರಕಾಶ್ ರಾಜ್ ಪ್ರಶ್ನಿಸಿದರು.

ಎಂ.ಬಿ ಪಾಟೀಲರೇ ನಿಮ್ಮ ಸುಸ್ಥಿರ ಅಭಿವೃದ್ಧಿ ಏನು? ಪಕ್ಕದ ರಾಜ್ಯದಲ್ಲಿ 95 ಪೈಸೆಗೆ ಕಂಪನಿಗಳಿಗೆ ಜಮೀನು ಕೊಟ್ಟರು ಅಂತ ನೀವು ರೈತರಿಂದ ಮೂರುವರೆ ಕೋಟಿಗೆ ಜಮೀನು ತಗೊಂಡು ಅದನ್ನು ಕಂಪನಿಗಳಿಗೆ 75 ಪೈಸೆಗೆ ಕೊಡುತ್ತೀರಾ? ಮೂರುವರೆ ಕೋಟಿ ಯಾರಪ್ಪನ ದುಡ್ಡು? ನಿಮ್ಮ ಮನೆಯಿಂದ ತಂದಿದ್ದೀರಾ? ಅದು ನಮ್ಮಂತ ನಾಗರಿಕರ ತೆರಿಗೆ ಹಣ. ನೀವು ಗ್ಯಾರಂಟಿಗಳನ್ನು ಕೊಟ್ಟು ಅದಕ್ಕೆ ದುಡ್ಡಿಲ್ಲ ಎನ್ನುತ್ತೀರಿ, ಇಲ್ಲಿ ಸಾವಿರಾರು ಎಕರೆಗೆ ತಲಾ ಮೂರುವರೆ ಕೋಟಿ ಕೊಡುತ್ತೀವಿ ಎನ್ನುತ್ತೀರಿ. ಎಲ್ಲಿಂದ ದುಡ್ಡು ತರುತ್ತೀರಿ? ಎಂದು ಕೇಳಿದರು.

ರೈತರ ನಡುವೆ ನಾವು ಒಡಕು ಹುಟ್ಟಿಸಿಲ್ಲ ಎಂದು ಎಂ.ಬಿ ಪಾಟೀಲ್ ಹೇಳುತ್ತಿದ್ದಾರೆ. ಹಾಗಾದರೆ ಒಡಕು ಹುಟ್ಟಿಸಿದವರು ಯಾರು? ನೀವು ಒಡಕು ಮೂಡಿಸಲು 10 ದಿನಗಳ ಕಾಲವಕಾಶ ತೆಗೆದುಕೊಂಡಿದ್ದಾ? ಸಿಎಂ 10 ದಿನಗಳ ಸಮಯ ಕೇಳಿದ ಮೇಲೆ ಸಚಿವರೊಂದಿಗೆ ದೆಹಲಿಗೆ ಭೇಟಿ ನೀಡಿದ್ದಾರೆ. ದಲ್ಲಾಲಿಗಳ ಭೇಟಿಗೆ ಅವಕಾಶ ಕೊಟ್ಟಿದ್ದಾರೆ. ಎಂ.ಬಿ ಪಾಟೀಲ್ ಕುಹದ ಮಾತುಗಳನ್ನು ಆಡುತ್ತಿದ್ದಾರೆ. ಹೋರಾಟಗಾರರ ಹಿಂದೆ ಯಾರಿದ್ದಾರೆ ಎಂಬುವುದು ನಮಗೆ ಗೊತ್ತಿದೆ ಎಂದಿದ್ದಾರೆ. ನಮ್ಮ ಹಿಂದೆ ಇರುವವರ ಪಟ್ಟಿಯನ್ನು ನಾವು ಕೊಡುತ್ತೇವೆ ಎಂದರು.

ದೇವನಹಳ್ಳಿ ರೈತರ ಹೋರಾಟಕ್ಕೆ ದೇಶದ ವಿವಿಧ ಭಾಗಗಳ 50 ರಷ್ಟು ಜನಪರ ಸಂಘಟನೆಗಳು, ಪ್ರಖ್ಯಾತ ಚಿಂತಕರು ಹಾಗೂ ಹೋರಾಟಗಾರರು ಬೆಂಬಲ ನೀಡಿದ್ದಾರೆ. ನಮ್ಮ ಹಿಂದೆ ಯಾರಿದ್ದಾರೆ ಎಂದು ನಾವು ಹೇಳಿದ್ದೇವೆ. ನಿಮ್ಮ ಹಿಂದೆ ಯಾರಿದ್ದಾರೆ ಅಂತ ನೀವು ಹೇಳಿ ಎಂದು ಹೇಳಿದರು.

ಎಂ.ಬಿ ಪಾಟೀಲರೆ ನೀವು ಕಥೆಗಳನ್ನು ಹೇಳುವುದನ್ನು ನಿಲ್ಲಿಸಿ. ನಾಳೆಯ ಸಭೆಯಲ್ಲಿ ಮುಖ್ಯಮಂತ್ರಿಗಳು ಭೂ ಸ್ವಾಧೀನ ಕೈ ಬಿಡಲು ಇರುವ ಕಾನೂನು ತೊಡಕುಗಳು ಏನು? ಅದಕ್ಕೆ ಪರಿಹಾರಗಳೇನು ಎಂದು ಹೇಳಬೇಕು. ಅದನ್ನು ಹೊರತು ಎಕರೆಗೆ ಇಷ್ಟು ಪರಿಹಾರ ಕೊಡುತ್ತೇವೆ ಎಂಬ ಮಾತುಗಳು ನಮಗೆ ಬೇಡ. ಮಣ್ಣು ಮಾರಲ್ಲ ಎಂದು ರೈತರು ಸ್ಪಷ್ಟಪಡಿಸಿದ್ದಾರೆ ಎಂದರು.

ನಮಗೆ ಗೊತ್ತಿರುವ ಕಾನೂನಿನ ಪ್ರಕಾರ, ನಮ್ಮ ಸಂವಿಧಾನದ ಪ್ರಕಾರ ಭೂ ಸ್ವಾಧೀನ ಸಂಬಂಧ ಹೊರಡಿಸಿರುವ ಸರ್ಕಾರದ ಮೊದಲ ಅಧಿಸೂಚನೆಯೇ ತಪ್ಪು. ಹಸಿರು ವಲಯವನ್ನು ಕೈಗಾರಿಕಾ ಪ್ರದೇಶ ಮಾಡಲು ಕೈಗಾರಿಕಾ ನೀತಿಯಲ್ಲಿ ಅವಕಾಶ ಇಲ್ಲ. ಸಂವಿಧಾನದ ಪ್ರಕಾರ ಭೂಮಿಯನ್ನು ಕೈಗಾರಿಕಾ ಪ್ರದೇಶ ಎಂದು ಗುರುತಿಸದೆ ನೀವು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ, ನಿಮ್ಮ ಅಧಿಸೂಚನೆಯೇ ಸರಿ ಇಲ್ಲ. ಅದನ್ನು ಮೊದಲು ಸರಿಪಡಿಸಿಕೊಳ್ಳಿ ಎಂದು ತಿಳಿಸಿದರು.

ಸಂವಿಧಾನದ ಪ್ರಕಾರ ಒಂದು ಪ್ರದೇಶವನ್ನು ಹಳದಿ ವಲಯ ಎಂದು ಘೋಷಿಸಬೇಕಾದರೆ ಸ್ಥಳೀಯ ಸಂಸ್ಥೆಯ ನಾಲ್ಕನೇ ಒಂದು ಭಾಗದಷ್ಟು ಜನರು ನಮ್ಮ ಪ್ರದೇಶದಲ್ಲಿ ಕೃಷಿ ಮಾಡಲು ಸಾಧ್ಯವಿಲ್ಲ ಎಂದು ಹೇಳಬೇಕು. ಆ ಬಳಿಕ ಪರಿಸರ ಸಮೀಕ್ಷೆ ಮಾಡಬೇಕು. ಆ ಬಳಿಕ ನಿರ್ಧರಿಸಬೇಕು. ದೇವನಹಳ್ಳಿಯಲ್ಲಿ ಇದೆಲ್ಲಾ ಆಗಿದೆಯಾ? ನೀವು ಕಾನೂನಿನ ಕಥೆಗಳನ್ನು ಹೇಳುತ್ತಿರುವುದು ಯಾರಿಗೆ? ಹಸಿರು ವಲಯವನ್ನು ತೆಗೆದು ಹಾಕುತ್ತೀವಿ ಎನ್ನುತ್ತೀರಿ. ನೀವೇನು ರೈತರನ್ನು ಹೆದರಿಸುತ್ತಿದ್ದೀರಾ? ಎಂದು ಕಿಡಿಕಾರಿದರು.

ಎಂ.ಬಿ ಪಾಟೀಲರು ನಾವು ಬಿಜಾಪುರವನ್ನು ಸಂಪತ್ಬರಿತ ನಾಡು ಮಾಡಿದ್ದೇನೆ ಎನ್ನುತ್ತಿದ್ದಾರೆ. ಬಿಜಾಪುರದಲ್ಲೂ ರೈತರ ಹೋರಾಟ ನಡೆಯುತ್ತಿದೆ. ಹಾಗಾಗಿ, ಯಾವುದೋ ಊರಿನ ಕಥೆ ಹೇಳಿ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡಬೇಡಿ. ಕುತಂತ್ರಗಳನ್ನು ನಿಲ್ಲಿಸಿ. ನೀವು ನಿಮ್ಮ ಸರ್ಕಾರ ಹೋರಾಟಗಾರರಿಗೆ ಕಾನೂನು ತೊಡಕಿದೆ ಎಂದು ಹೇಳಿದ್ದೀರಿ. ನಾಳೆ ಅದರ ಮಾತುಕತೆ ಮಾತ್ರ ನಡೆಯಬೇಕು, ಹೊರತು ಪರಿಹಾರದ ಮಾತುಕಥೆಯಲ್ಲ ಎಂದರು.

ರಾಜ್ಯ ಸರ್ಕಾರ ಮನಸ್ಸು ಮಾಡಿದರೆ ಈ ಕ್ಷಣವೇ ಭೂ ಸ್ವಾಧೀನ ಕೈ ಬಿಡಬಹುದು. ಆದರೆ, ಸಿದ್ದರಾಮಯ್ಯ ಸರ್ಕಾರಕ್ಕೆ ರೈತ ಹಿತ ಕಾಯುವ ಇಚ್ಚಾಶಕ್ತಿ ಇದೆಯಾ? ಅಥವಾ ಕಾರ್ಪೋರೇಟ್ ಹಿತಾಸಕ್ತಿ ಇದೆಯಾ? ಇದು ಗೊತ್ತಾಗಬೇಕಿದೆ. ರೈತ ಹಿತ ಕಾಯುವ ಇಚ್ಚಾಶಕ್ತಿ ಇದ್ದರೆ ಕಾನೂನಿನಡಿ ಸರ್ಕಾರಕ್ಕೆ ಎಲ್ಲಾ ಅಧಿಕಾರವೂ ಇದೆ. ಹಾಗಾಗಿ, ಸರ್ಕಾರದ ನಿಲುವು ನಾಳೆ ಗೊತ್ತಾಗಲಿದೆ ಎಂದರು.

ಕಳೆದ ಮೂರು ವರ್ಷಗಳಿಂದ ರೈತರು ಹೋರಾಟ ಮಾಡುತ್ತಿದ್ದರೂ, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಯಾವುದೇ ಪಕ್ಷಗಳ ಒಬ್ಬನೇ ಒಬ್ಬ ಜನಪ್ರತಿನಿಧಿ ರೈತರನ್ನು ಬೆಂಬಲಿಸಿಲ್ಲ. ಇದು ಈ ರಾಜ್ಯದ ದೌರ್ಭಾಗ್ಯ. ನಮ್ಮ ಹೋರಾಟ ನಿಲ್ಲಲ್ಲ, ಕಾನೂನು ಹೋರಾಟವೂ ನಡೆಯಲಿದೆ. ರೈತರ ಭೂ ಕಬಳಿಸುವ ಸರ್ಕಾರಗಳ ಕ್ರಮ ದೇವನಹಳ್ಳಿಯಲ್ಲೇ ಕೊನೆಯಾಗಬೇಕು ಎಂದು ಪ್ರಕಾಶ್ ರಾಜ್ ಹೇಳಿದರು.

ಎದ್ದೇಳು ಕರ್ನಾಟಕದ ಕೆ.ಎಲ್‌ ಅಶೋಕ್ ಅವರು ಮಾತನಾಡಿ, ” ದೇವನಹಳ್ಳಿಯ ರೈತರು ಕಳೆದ ಮೂರುವರೆ ವರ್ಷಗಳಿಂದ ಹೋರಾಟ ಮಾಡಿಕೊಂಡು ಬರುತ್ತಿದ್ದಾರೆ. ನಾಳೆಯ ಮುಖ್ಯಮಂತ್ರಿಗಳ ನಿರ್ಣಾಯಕ ಸಭೆಯಲ್ಲಿ ರೈತಪರ ನಿಲುವು ಪ್ರಕಟಿಸಲಿದ್ದಾರೆ ಎಂಬ ವಿಶ್ವಾಸ ನಮಗಿದೆ. ದೇವನಹಳ್ಳಿಯ ಹೋರಾಟ ಇಡೀ ದೇಶದ ರೈತ ಹೋರಾಟಕ್ಕೆ ಹೊಸತೊಂದು ದಿಕ್ಕನ್ನು ತೋರಿಸಿದೆ ಎಂದರು.

ಮಾನವ ಹಕ್ಕುಗಳ ಕಾರ್ಯಕರ್ತೆ ಹಾಗೂ ಎದ್ದೇಳು ಕರ್ನಾಟಕದ ಪ್ರಮುಖರಾದ ತಾರಾರಾವ್, ಬೋರಯ್ಯ ಚಿತ್ರದುರ್ಗ, ರೈತ ನಾಯಕ ವೀರಸಂಗಯ್ಯ, ದಲಿತ ಮುಖಂಡರಾದ ವೆಂಕಟೇಶ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ದೇವನಹಳ್ಳಿ: “ರೈತರಿಗೆ ಭೂಮಿ ಕೇವಲ ಆಸ್ತಿಯಲ್ಲ, ಗುರುತು!” – ರೈತ ಹೋರಾಟಕ್ಕೆ ದೇಶದ 30 ಸಂಘಟನೆಗಳ ಬೆಂಬಲ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...