Homeಅಂತರಾಷ್ಟ್ರೀಯನಿಮಿಷಾ ಪ್ರಿಯಾ ಮರಣದಂಡನೆ: ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಮಧ್ಯಪ್ರವೇಶದ ಬಳಿಕ ಯೆಮನ್‌ನಲ್ಲಿ ಮಹತ್ವದ ಸಭೆ;...

ನಿಮಿಷಾ ಪ್ರಿಯಾ ಮರಣದಂಡನೆ: ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಮಧ್ಯಪ್ರವೇಶದ ಬಳಿಕ ಯೆಮನ್‌ನಲ್ಲಿ ಮಹತ್ವದ ಸಭೆ; ವರದಿ

- Advertisement -
- Advertisement -

ಯೆಮನ್‌ನಲ್ಲಿ ಮರಣದಂಡನೆ ಘೋಷಣೆಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ರಕ್ಷಣೆಗೆ ಕೊನೆಯ ಪ್ರಯತ್ನ ನಡೆದಿದೆ.

ಭಾರತದ ಗ್ರ್ಯಾಂಡ್ ಮುಫ್ತಿ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಮಧ್ಯಪ್ರವೇಶದ ಬಳಿಕ ಯೆಮನ್‌ನಲ್ಲಿ ಸೋಮವಾರ ಮಹತ್ವದ ಸಭೆ ನಡೆದಿದೆ ಎಂದು ವರದಿಯಾಗಿದೆ.

ಜುಲೈ 16ರಂದು, ಅಂದರೆ ನಾಳೆ ನಿಮಿಷಾ ಪ್ರಿಯಾ ಅವರನ್ನು ಗಲ್ಲಿಗೇರಿಸಲು ದಿನಾಂಕ ನಿಗದಿಯಾಗಿದೆ. ಸೋಮವಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿರುವ ಕೇಂದ್ರ ಸರ್ಕಾರ, “ನಮ್ಮಿಂದ ಹೆಚ್ಚಿನದ್ದೇನೂ ಮಾಡಲು ಸಾಧ್ಯವಿಲ್ಲ” ಎಂದು ಹೇಳುವ ಮೂಲಕ ಕೈಚೆಲ್ಲಿದೆ.

ಈ ನಡುವೆ ಅಖಿಲ ಭಾರತ ಸುನ್ನೀ ಉಲಮಾ ಒಕ್ಕೂಟದ (ಸುನ್ನೀ ಮುಸ್ಲಿಂ ವಿದ್ವಾಂಸರ ಸಂಘಟನೆ) ಪ್ರಧಾನ ಕಾರ್ಯದರ್ಶಿ ಹಾಗೂ ಭಾರತದ ಗ್ರ್ಯಾಂಡ್ ಮುಫ್ತಿ (ಭಾರತೀಯ ಸುನ್ನೀ ಮುಸ್ಲಿಮರ ಪರಮೋನ್ನತ ನಾಯಕ) ಆಗಿರುವ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅಥವಾ ಎಪಿ ಉಸ್ತಾದರ ಮಧ್ಯಪ್ರವೇಶ ಆಶಾ ಭಾವನೆ ಮೂಡಿಸಿದೆ.

ಯೆಮನ್‌ನ ಪ್ರಸಿದ್ದ ಸೂಫಿ ಪಂಡಿತ ಹಬೀಬ್ ಉಮರ್ ಇಬ್ನ್ ಹಾಫಿಝ್ ಅವರ ಮೂಲಕ ಎಪಿ ಉಸ್ತಾದ್ ನಿಮಿಷಾ ಅವರನ್ನು ಮರಣದಂಡನೆಯಿಂದ ಪಾರು ಮಾಡಲು ಪ್ರಯತ್ನ ಮಾಡಿದ್ದಾರೆ ಎಂದು ಅವರ ಕಚೇರಿ ಹೇಳಿದೆ.

ಎಪಿ ಉಸ್ತಾದ್ ಅವರ ಮಧ್ಯಪ್ರವೇಶದ ಬಳಿಕ ಸೋಮವಾರ ಸಂಜೆ ಮೃತ ತಲಾಲ್ ಅಬ್ದೋ ಮಹ್ದಿ ಅವರ ಕುಟುಂಬದ ಜೊತೆ ಉತ್ತರ ಯೆಮೆನ್‌ನಲ್ಲಿ ಮಹತ್ವದ ಮಾತುಕತೆ ನಡೆದಿದೆ. ಈ ಮಾತುಕತೆಯಲ್ಲಿ ಹಬೀಬ್ ಉಮರ್ ಅವರ ಪ್ರತಿನಿಧಿ ಅಬ್ದುರಹ್ಮಾನ್ ಅಲೀ ಮಶ್ಹೂರ್, ಜಿನಾಯತ್ ನ್ಯಾಯಾಲಯದ ನ್ಯಾಯಾಧೀಶರು, ಬುಡಕಟ್ಟು ಮುಖಂಡರು ಮತ್ತು ಮೃತ ತಲಾಲ್ ಅವರ ಸಹೋದರ ಭಾಗವಹಿಸಿದ್ದಾರೆ ಎಂದು ವರದಿಗಳು ಹೇಳಿವೆ.

ನಿಮಿಷಾ ಅವರ ಮರಣದಂಡನೆಯನ್ನು ಯೆಮನ್‌ನ ಎಲ್ಲಾ ಹಂತದ ನ್ಯಾಯಾಲಯಗಳು ಎತ್ತಿ ಹಿಡಿದಿವೆ. ಈಗ ಉಳಿದಿರುವ ಆಯ್ಕೆ ಮೃತ ತಲಾಲ್ ಅವರ ಕುಟುಂಬ ರಕ್ತಧನ ಅಥವಾ ಬ್ಲಡ್ ಮನಿ ಪಡೆದು ಕ್ಷಮಾಧಾನ ನೀಡುವುದು ಮಾತ್ರವಾಗಿದೆ. ಯೆಮನ್‌ನ ಷರಿಯಾ ಕಾನೂನಿನ ಪ್ರಕಾರ, ಮೃತನ ಕುಟುಂಬ ಕ್ಷಮೆ ನೀಡಿದರೆ ಮಾತ್ರ ನಿಮಿಷಾ ಸಾವಿನ ದವಡೆಯಿಂದ ಪಾರಾಗಲಿದ್ದಾರೆ. ಆ ಪ್ರಯತ್ನವನ್ನು ಹಬೀಬ್ ಉಮರ್ ಅವರ ಮೂಲಕ ಎಪಿ ಉಸ್ತಾದ್ ಮಾಡುತ್ತಿದ್ದಾರೆ ಎನ್ನಲಾಗಿದೆ.

ಇಂದು (ಮಂಗಳವಾರ) ಮೃತನ ಕುಟುಂಬದ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಿಗದಿಯಾಗಿದೆ ಎಂದು ವರದಿಗಳು ಹೇಳಿವೆ. ಈ ಮಾತುಕತೆ ಬಳಿಕ ಸ್ಪಷ್ಟ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ. ಎಪಿ ಉಸ್ತಾದರ ಮಧ್ಯಸ್ಥಿಕೆ ಫಲ ಕಾಣಲಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನರು ಹಾರೈಸಿದ್ದಾರೆ.

ನಿಮಿಷಾ ಪ್ರಿಯಾ ಆಕ್ಷನ್ ಕಮಿಟಿ

ನಿಮಿಷಾ ಪ್ರಿಯಾ ಅವರನ್ನು ಜೀವಂತವಾಗಿ ಯೆಮನ್‌ನಿಂದ ಕರೆ ತರಲು 2020ರಲ್ಲಿ ‘ನಿಮಿಷಾ ಪ್ರಿಯಾ ಆಕ್ಷನ್ ಕಮಿಟಿ’ ರಚಿಸಲಾಗಿದೆ. ವಕೀಲರು, ಮಾನವ ಹಕ್ಕುಗಳ ಕಾರ್ಯಕರ್ತರು, ರಾಜಕೀಯ, ಸಾಮಾಜಿಕ ಮುಖಂಡರು ಈ ಕಮಿಟಿಯಲ್ಲಿ ಇದ್ದಾರೆ.

ಕೇರಳ ವಿಧಾನಸಭೆಯ ಸದಸ್ಯ, ಪಾಲಕ್ಕಾಡ್ ಜಿಲ್ಲೆಯ ನೆನ್ಮರ ಕ್ಷೇತ್ರದ ಶಾಸಕ ಕೆ.ಬಾಬು ನೇತೃತ್ವದ ಈ ಸಮಿತಿ, ಭಾರತ ಮೂಲದ ಯೆಮನ್‌ನ ಸಾಮಾಜಿಕ ಕಾರ್ಯಕರ್ತ ಸ್ಯಾಮ್ಯುಯೆಲ್ ಜೆರೋಮ್ ಭಾಸ್ಕರನ್ ಅವರ ಮೂಲಕ ನಿಮಿಷಾ ಪ್ರಿಯಾ ಅವರ ರಕ್ಷಣೆಗೆ ಪ್ರಯತ್ನಿಸುತ್ತಿದೆ.

ವರದಿಗಳ ಪ್ರಕಾರ, ಕಮಿಟಿಯು ಸುಮಾರು 40 ಸಾವಿರ ಡಾಲರ್ ಹಣವನ್ನು ಕ್ರೌಡ್ ಫಂಡಿಂಗ್ ಮೂಲಕ ಈಗಾಗಲೇ ಸಂಗ್ರಹಿಸಿದ್ದು, ಅದನ್ನು ಜೆರೋಮ್ ಸೇರಿದಂತೆ ಯೆಮನ್‌ನಲ್ಲಿರುವ ಮಧ್ಯವರ್ತಿಗಳಿಗೆ ಮುಂಗಡವಾಗಿ ಎರಡು ಕಂತುಗಳಲ್ಲಿ ಪಾವತಿಸಿದೆ. ಸುಮಾರು 1 ಮಿಲಿಯನ್ ಡಾಲರ್‌ವರೆಗೆ ಬ್ಲಡ್ ಮನಿಯನ್ನು ನೀಡಲು ಸಿದ್ದ ಎಂದು ಮೃತ ತಲಾಲ್ ಅವರ ಕುಟುಂಬಕ್ಕೆ ತಿಳಿಸಿದೆ. ಆದರೆ, ತಲಾಲ್ ಕುಟುಂಬಸ್ಥರು ಇದುವರೆಗೆ ಹಣ ಸ್ವೀಕರಿಸಿಲ್ಲ ಎನ್ನಲಾಗಿದೆ.

ಮೋದಿಗೆ ಕೇರಳ ಸಿಎಂ ಪತ್ರ

ನಿಮಿಷಾ ಪ್ರಿಯಾ ಪ್ರಕರಣದಲ್ಲಿ ತುರ್ತಾಗಿ ಮಧ್ಯಪ್ರವೇಶಿಸುವಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಮವಾರ ಮತ್ತೊಮ್ಮೆ ಪತ್ರ ಬರೆದು ಮನವಿ ಮಾಡಿದ್ದಾರೆ. ಆದರೆ, ಕೇಂದ್ರ ಸರ್ಕಾರ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಕೈ ಚೆಲ್ಲಿರುವುದರಿಂದ ಈ ವಿಷಯದಲ್ಲಿ ಯಾವುದೇ ಪ್ರಯತ್ನ ಮಾಡುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಅಲ್ಲದೆ, ಮರಣದಂಡನೆ ಜಾರಿಯಾಗಲು ಇನ್ನೇನು ಕೆಲವೇ ಗಂಟೆಗಳು ಬಾಕಿಯಿದೆ.

2017ರ ಜುಲೈನಲ್ಲಿ ಯೆಮನ್‌ ಪ್ರಜೆ ತಲಾಲ್ ಅಬ್ದೋ ಮಹ್ದಿ ಎಂಬಾತನನ್ನು ಹತ್ಯೆಗೈದ ಪ್ರಕರಣದಲ್ಲಿ ನಿಮಿಷಾ ಪ್ರಿಯಾ ಮರಣದಂಡನೆಗೆ ಗುರಿಯಾಗಿದ್ದಾರೆ. ಮೃತ ಅಬ್ದೋ ಮಹ್ದಿ ನಿಮಿಷಾ ಅವರ ಪಾಸ್‌ಪೋರ್ಟ್ ತನ್ನ ಬಳಿ ಇಟ್ಟುಕೊಂಡು ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ನಿಮಿಷಾ ಅವರು, ಆತನಿಗೆ ನಿದ್ರೆ ಬರುವ ಚುಚ್ಚುಮದ್ದನ್ನು ಚುಚ್ಚಿ ಪಾಸ್‌ಪೋರ್ಟ್ ತೆಗೆದುಕೊಳ್ಳುವ ಪ್ಲಾನ್ ಮಾಡಿದ್ದರು. ಆದರೆ ಚುಚ್ಚುಮದ್ದು ಓವರ್ ಡೋಸ್ ಆಗಿ ಅಬ್ದೋ ಮೃತಪಟ್ಟಿದ್ದ. ಈ ಪ್ರಕರಣದಲ್ಲಿ ಬಂಧಿತಾಗಿದ್ದ ನಿಮಿಷಾ ಅವರಿಗೆ ಯೆಮನ್ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಶಿಕ್ಷೆ ಜಾರಿಗೆ ಜುಲೈ 16ರಂದು ಸಮಯ ನಿಗದಿಯಾಗಿದೆ.

“ಸರ್ಕಾರ ಹೆಚ್ಚಿನದನ್ನೇನೂ ಮಾಡಲು ಸಾಧ್ಯವಿಲ್ಲ”: ನಿಮಿಷಾ ಪ್ರಿಯಾ ಮರಣದಂಡನೆ ಕುರಿತು ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...