Homeಮುಖಪುಟಒಡಿಶಾ ವಿದ್ಯಾರ್ಥಿನಿ ಸಾವು 'ವ್ಯವಸ್ಥೆ ಮಾಡಿದ ಕೊಲೆ': ಮೋದಿ ಮೌನ ಪ್ರಶ್ನಿಸಿದ ರಾಹುಲ್ ಗಾಂಧಿ

ಒಡಿಶಾ ವಿದ್ಯಾರ್ಥಿನಿ ಸಾವು ‘ವ್ಯವಸ್ಥೆ ಮಾಡಿದ ಕೊಲೆ’: ಮೋದಿ ಮೌನ ಪ್ರಶ್ನಿಸಿದ ರಾಹುಲ್ ಗಾಂಧಿ

- Advertisement -
- Advertisement -

ಪ್ರಾಧ್ಯಾಪಕನ ವಿರುದ್ದ ಲೈಂಗಿಕ ಕಿರುಕುಳ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡ ಒಡಿಶಾದ ಕಾಲೇಜು ವಿದ್ಯಾರ್ಥಿನಿಯ ಅಂತ್ಯ ಸಂಸ್ಕಾರ ಬಾಲಸೋರ್ ಜಿಲ್ಲೆಯ ಆಕೆಯ ಸ್ವಗ್ರಾಮದಲ್ಲಿ ಮಂಗಳವಾರ ನೆರವೇರಿದೆ.

ಕುಟುಂಬ ಸದಸ್ಯರು, ಗ್ರಾಮಸ್ಥರು, ಅಧಿಕಾರಿಗಳು, ಬಾಲಸೋರ್ ಸಂಸದ ಪ್ರತಾಪ್ ಸಾರಂಗಿ ಮತ್ತು ಸಾವಿರಾರು ಜನರು ವಿದ್ಯಾರ್ಥಿನಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಘಟನೆಯನ್ನು ಒಡಿಶಾದ ಪ್ರತಿಪಕ್ಷಗಳು ತೀವ್ರವಾಗಿ ಖಂಡಿಸಿದ್ದು, ಬಿಜೆಪಿ ಸರ್ಕಾರದ ವಿರುದ್ದ ಹರಿಹಾಯ್ದಿವೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ‘ಇದು ವ್ಯವಸ್ಥೆ ನಡೆಸಿದ ಕೊಲೆ’ ಎಂದು ಆರೋಪಿಸಿದ್ದಾರೆ.

ಬಾಲಸೋರ್‌ನ ಫಕೀರ್ ಮೋಹನ್ (ಸ್ವಾಯತ್ತ) ಕಾಲೇಜಿನ ಎರಡನೇ ವರ್ಷದ ಬಿ.ಎಡ್ ವಿದ್ಯಾರ್ಥಿನಿ 20 ವರ್ಷದ ಹೆಣ್ಣು ಮಗಳು, ತನ್ನ ವಿಭಾಗದ ಮುಖ್ಯಸ್ಥ ಸಮೀರ್ ಕುಮಾರ್ ಸಾಹು ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು.

ಈ ಬಗ್ಗೆ ಕಾಲೇಜಿನ ಆಂತರಿಕ ದೂರು ಸಮಿತಿ (ಐಸಿಸಿ)ಗೆ ದೂರು ನೀಡಿದ್ದರು. ಆದರೆ, ಪ್ರಾಂಶುಪಾಲ ಆದಿಯಾಗಿ ಕಾಲೇಜಿನ ಅಧಿಕಾರಿಗಳು ಪ್ರಾಧ್ಯಾಪಕನ ವಿರುದ್ದ ಕ್ರಮ ಕೈಗೊಳ್ಳುವ ಬದಲು, ದೂರು ಹಿಂಪಡೆಯುವಂತೆ ವಿದ್ಯಾರ್ಥಿನಿಗೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ವಿದ್ಯಾರ್ಥಿನಿ ಮೇಲಿನ ದೌರ್ಜನ್ಯ ಖಂಡಿಸಿ ಆಕೆಯ ಸಹಪಾಠಿಗಳು ಕಳೆದ ಶನಿವಾರ ಕಾಲೇಜಿನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ಪ್ರಾಂಶುಪಾಲರ ಕಚೇರಿ ಮುಂದೆ ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

ಶೇಕಡ 95ರಷ್ಟು ಸುಟ್ಟ ಗಾಯಗಳಿಗೆ ಒಳಗಾಗಿದ್ದ ವಿದ್ಯಾರ್ಥಿನಿಯನ್ನು ಭುವನೇಶ್ವರದ ಏಮ್ಸ್‌ಗೆ ದಾಖಲಿಸಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಆಕೆ ಮೃತಪಟ್ಟಿದ್ದಾರೆ.

ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಮಂಗಳವಾರ ವಿದ್ಯಾರ್ಥಿನಿಯ ಕುಟುಂಬಕ್ಕೆ 20 ಲಕ್ಷ ರೂಪಾಯಿಗಳ ಪರಿಹಾರ ಘೋಷಿಸಿದ್ದಾರೆ. ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಝಿ ನಿರ್ದೇಶನ ನೀಡಿದ್ದಾರೆ. ಎಲ್ಲಾ ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗುತ್ತದೆ ಎಂದು ಸಿಎಂ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ವಿದ್ಯಾರ್ಥಿನಿಯ ಸಾವು ಖಂಡಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಎಂಟು ವಿರೋಧ ಪಕ್ಷಗಳು ಜುಲೈ 17 ರಂದು ‘ಒಡಿಶಾ ಬಂದ್‌’ಗೆ ಕರೆ ಕೊಟ್ಟಿವೆ. ಎಡಪಕ್ಷಗಳು ಸೇರಿದಂತೆ ಎಂಟು ಪಕ್ಷಗಳು ಬಂದ್‌ಗೆ ಬೆಂಬಲ ನೀಡುತ್ತಿವೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಭಕ್ತ ಚರಣ್ ದಾಸ್ ತಿಳಿಸಿದ್ದಾರೆ.

“ಬಾಲಸೋರ್‌ನ ಫಕೀರ್ ಮೋಹನ್ (ಸ್ವಾಯತ್ತ) ಕಾಲೇಜಿನಲ್ಲಿ ನಡೆದ ಘಟನೆಯು ರಾಜ್ಯ ಸರ್ಕಾರವು ಮಹಿಳೆಯರನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂಬುದನ್ನು ತೋರಿಸಿದೆ” ಎಂದು ಭಕ್ತ ಚರಣ್ ದಾಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆತ್ಮಹತ್ಯೆ ಮಾಡಿಕೊಳ್ಳಲು ವಿದ್ಯಾರ್ಥಿನಿ ಪೆಟ್ರೋಲ್ ತಂದಿದ್ದರು. ಆದರೆ, ಎಲ್ಲರೂ ನಿಂತು ನೋಡಿದ್ದಾರೆ. ಯಾರೂ ಏನೂ ಮಾಡಿಲ್ಲ” ಎಂದು ಆಡಳಿತರೂಢ ಬಿಜೆಪಿ ವಿರುದ್ದ ಚರಣ್ ದಾಸ್ ವಾಗ್ವಾಳಿ ನಡೆಸಿದ್ದಾರೆ.

ವಿದ್ಯಾರ್ಥಿಯ ಸಾವು ‘ವ್ಯವಸ್ಥೆ ನಡೆಸಿದ ಸಂಘಟಿತ ಕೊಲೆ’ ಗಿಂತ ಕಡಿಮೆಯೇನಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

“ಒಡಿಶಾದಲ್ಲಿ ನ್ಯಾಯಕ್ಕಾಗಿ ಹೋರಾಡುತ್ತಿದ್ದ ಹೆಣ್ಣು ಮಗಳ ಸಾವು ಬಿಜೆಪಿಯ ವ್ಯವಸ್ಥೆಯಿಂದ ನಡೆದ ಕೊಲೆಗಿಂತ ಕಡಿಮೆಯಿಲ್ಲ. ಆ ಧೈರ್ಯಶಾಲಿ ವಿದ್ಯಾರ್ಥಿನಿ ಲೈಂಗಿಕ ಕಿರುಕುಳದ ವಿರುದ್ಧ ಧ್ವನಿ ಎತ್ತಿದ್ದಳು. ಆದರೆ, ಆಕೆಗೆ ನ್ಯಾಯ ಒದಗಿಸುವ ಬದಲು, ಬೆದರಿಕೆ, ಹಿಂಸೆ ನೀಡಲಾಯಿತು. ಪದೇ ಪದೇ ಅವಮಾನಿಸಲಾಯಿತು” ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.

“ಆಕೆಯನ್ನು ರಕ್ಷಿಸಬೇಕಾದವರೆ ಒಡೆದು ಹಾಕಿದರು. ಎಂದಿನಂತೆ ಬಿಜೆಪಿಯ ವ್ಯವಸ್ಥೆಯು ಇಲ್ಲಿ ಆರೋಪಿಗಳನ್ನು ರಕ್ಷಿಸಿದೆ. ಈ ಮೂಲಕ ಅಮಾಯಕ ಹೆಣ್ಣು ಮಗಳು ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರೇರೆಪಿಸಿದೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

“ವಿದ್ಯಾರ್ಥಿನಿಯ ಸಾವು ಆತ್ಮಹತ್ಯೆಯಲ್ಲ, ಅದು ವ್ಯವಸ್ಥೆಯಿಂದ ನಡೆದ ಸಂಘಟಿತ ಕೊಲೆ. ಮೋದಿ ಜೀ, ಒಡಿಶಾದಲ್ಲಾಗಲಿ ಅಥವಾ ಮಣಿಪುರದಲ್ಲಾಗಲಿ – ದೇಶದ ಹೆಣ್ಣುಮಕ್ಕಳು ಸಾಯುತ್ತಿದ್ದಾರೆ. ನೀವು ಮೌನವಾಗಿರುತ್ತೀರಿ. ದೇಶಕ್ಕೆ ನಿಮ್ಮ ಮೌನ ಬೇಕಾಗಿಲ್ಲ; ಉತ್ತರಗಳು ಬೇಕು. ಭಾರತದ ಹೆಣ್ಣುಮಕ್ಕಳಿಗೆ ಸುರಕ್ಷತೆ ಮತ್ತು ನ್ಯಾಯ ಬೇಕು” ಎಂದು ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.

ವಿದ್ಯಾರ್ಥಿನಿಯ ಸಾವಿನ ಬಗ್ಗೆ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ವಿರೋಧ ಪಕ್ಷದ ನಾಯಕ ಮತ್ತು ಬಿಜೆಡಿ ಅಧ್ಯಕ್ಷ ನವೀನ್ ಪಟ್ನಾಯಕ್, “ಇದು ಸಾಂಸ್ಥಿಕ ದ್ರೋಹ ಮತ್ತು ಯೋಜಿತ ಅನ್ಯಾಯಕ್ಕಿಂತ ಕಡಿಮೆಯಿಲ್ಲ” ಎಂದಿದ್ದಾರೆ.

ವಿದ್ಯಾರ್ಥಿನಿಯ ಸಾವಿನ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ ಪಟ್ನಾಯಕ್ “ವಿಫಲ ವ್ಯವಸ್ಥೆಯು ಒಬ್ಬರ ಜೀವವನ್ನು ಹೇಗೆ ತೆಗೆದುಕೊಳ್ಳಬಹುದು ಎಂಬುದನ್ನು ಯೋಚಿಸುವುದು ತುಂಬಾ ಕಳವಳಕಾರಿಯಾಗಿದೆ” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ಅತ್ಯಂತ ನೋವಿನ ಸಂಗತಿಯೆಂದರೆ ಇದು ಆಕಸ್ಮಿಕವಲ್ಲ, ಬದಲಾಗಿ ಸಹಾಯ ಮಾಡುವ ಬದಲು ಮೌನವಾಗಿದ್ದ ವ್ಯವಸ್ಥೆಯ ಪರಿಣಾಮವಾಗಿದೆ” ಎಂದು ಎಂದಿದ್ದಾರೆ.

ಪ್ರಾಧ್ಯಾಪಕನ ಲೈಂಗಿಕ ಕಿರುಕುಳ ತಡೆಯದ ಕಾಲೇಜು: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...