Homeಕರ್ನಾಟಕಬೆಂಗಳೂರು ವಿಶ್ವವಿದ್ಯಾಲಯದಲ್ಲಿ ದಲಿತ ಪ್ರಾಧ್ಯಾಪಕರಿಗೆ ತಾರತಮ್ಯ ಆರೋಪ: ಕುಲಪತಿ ರಾಜೀನಾಮೆಗೆ ಆಗ್ರಹ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ದಲಿತ ಪ್ರಾಧ್ಯಾಪಕರಿಗೆ ತಾರತಮ್ಯ ಆರೋಪ: ಕುಲಪತಿ ರಾಜೀನಾಮೆಗೆ ಆಗ್ರಹ

- Advertisement -
- Advertisement -

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ (ಬೆಂವಿವಿ) ದಲಿತ ಸಮುದಾಯದ ಪ್ರಾಧ್ಯಾಪಕರಿಗೆ ಬಡ್ತಿ ಮತ್ತು ಅಧಿಕಾರ ಹಂಚಿಕೆಯಲ್ಲಿ ವ್ಯಾಪಕ ತಾರತಮ್ಯ ನಡೆಯುತ್ತಿದೆ ಎಂದು ಗಂಭೀರ ಆರೋಪ ಕೇಳಿಬಂದಿದೆ. ವಿಶ್ವವಿದ್ಯಾಲಯಗಳ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ದಲಿತ ಪ್ರಾಧ್ಯಾಪಕರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಸ್ನಾತಕೋತ್ತರ ಮತ್ತು ಸಂಶೋಧನ ವಿದ್ಯಾರ್ಥಿಗಳ ಒಕ್ಕೂಟದ ವಿದ್ಯಾರ್ಥಿ ನಾಯಕ ಚಂದ್ರು ಪೆರಿಯಾರ್ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕುಲಪತಿ ಡಾ. ಜಯಕರ ಎಸ್.ಎಂ. ಅವರನ್ನು ತಕ್ಷಣ ಹುದ್ದೆಯಿಂದ ಹಿಂತೆಗೆದುಕೊಳ್ಳುವಂತೆ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಂದ್ರು ಪೆರಿಯಾರ್, ರೋಸ್ಟರ್ ನಿಯಮಗಳನ್ನು ಮೀರಿ ದಲಿತ ಸಮುದಾಯದ ಪ್ರತಿಭಾವಂತ ಪ್ರಾಧ್ಯಾಪಕರನ್ನು ಕಡೆಗಣಿಸಿ, ಹೊರಗಿನಿಂದ ಐವರು ಬಲಾಢ್ಯ ಜಾತಿಗಳಿಗೆ ಸೇರಿದ ಪ್ರಾಧ್ಯಾಪಕರನ್ನು ವರ್ಗಾವಣೆ ಮಾಡಿಕೊಳ್ಳಲಾಗಿದೆ ಎಂದು ದೂರಿದರು. ಬೆಂವಿವಿ ಸ್ಥಾಪನೆಯಾದಾಗಿನಿಂದಲೂ ಒಬ್ಬರೂ ದಲಿತರು ಕುಲಪತಿಯಾಗಿಲ್ಲ. “ಇದು ದಲಿತರ ಮೇಲಿನ ಅಸಹನೆಗೆ ಹಿಡಿದ ಕನ್ನಡಿ” ಎಂದು ಅವರು ಬೇಸರ ವ್ಯಕ್ತಪಡಿಸಿದರು.

ನಿಯಮಬಾಹಿರ ಕಾರ್ಯನಿರ್ವಹಣೆ ಮತ್ತು ದಲಿತ ವಿರೋಧಿ ಧೋರಣೆ:

ಕುಲಪತಿ ರಜೆಯಲ್ಲಿರುವಾಗ ಅವರ ಜವಾಬ್ದಾರಿಯನ್ನು ಹಿರಿಯ ಡೀನ್‌ಗೆ ವಹಿಸುವುದು ನಿಯಮ. ಆದರೆ, ಬೆಂವಿವಿಯಲ್ಲಿರುವ ಎಲ್ಲಾ ಹಿರಿಯ ಡೀನ್‌ಗಳು ದಲಿತ ಸಮುದಾಯಕ್ಕೆ ಸೇರಿರುವ ಕಾರಣಕ್ಕಾಗಿ ಅವರಿಗೆ ಉಸ್ತುವಾರಿ ನೀಡದೆ, ಕುಲಸಚಿವರಿಗೆ ನೀಡಲಾಗಿದೆ ಎಂದು ಚಂದ್ರು ಪೆರಿಯಾರ್ ಹೇಳಿದರು. “ಇದು ಕಾನೂನು ಬಾಹಿರವಷ್ಟೇ ಅಲ್ಲದೆ, ಕುಲಪತಿಗೆ ದಲಿತರ ಮೇಲಿರುವ ಅಸಹನೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ಅಲ್ಲದೆ, ದಲಿತ ವಿತ್ತಾಧಿಕಾರಿಗಳ ಅಧಿಕಾರವನ್ನು ಕಟ್ಟಡ ನವೀಕರಣದ ನೆಪವೊಡ್ಡಿ ಸುಮಾರು ಒಂದು ವರ್ಷಗಳ ಕಾಲ ‘ಒಂದೇ ಸೂರಿನ ತತ್ವ’ದಡಿ ಕುಲಸಚಿವರಿಗೆ ವಹಿಸಲಾಗಿದೆ. ದಲಿತ ಅತಿಥಿ ಉಪನ್ಯಾಸಕರನ್ನು ವಿನಾ ಕಾರಣ ಕೆಲಸದಿಂದ ತೆಗೆದುಹಾಕಿ, ವರ್ಷಾನುಗಟ್ಟಲೆ ಸಂಬಳ ನೀಡದೆ ವಂಚಿಸಲಾಗಿದೆ. ಇದರಿಂದ ಕೆಲವರು ಜೀವನ ಭದ್ರತೆ ಇಲ್ಲದೆ ಮಾನಸಿಕವಾಗಿ ಕುಗ್ಗಿ ಆಸ್ಪತ್ರೆ ಸೇರಿದ್ದಾರೆ ಎಂದೂ ಚಂದ್ರು ಪೆರಿಯಾರ್ ಆರೋಪಿಸಿದರು. “ಇಷ್ಟೆಲ್ಲಾ ಆದಮೇಲೆ ಕುಲಪತಿಯವರಿಂದ ನ್ಯಾಯ ಸಿಗಲಿದೆ ಎಂದು ಕಾಯುವುದರಲ್ಲಿ ಅರ್ಥವಿಲ್ಲ. ಕುಲಪತಿಯವರು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಬೇಕು” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

“ಬೆಂವಿವಿ ಜಾತಿಯತೆ ಬಿತ್ತುವ ಸಂಸ್ಥೆಯಾಗಿದೆ”: ಶಿವಶಂಕರ್

ರಾಜ್ಯ ಸರ್ಕಾರಿ ಎಸ್‌ಸಿ-ಎಸ್‌ಟಿ ನೌಕರರ ಸಮಿತಿಯ ಅಧ್ಯಕ್ಷ ಶಿವಶಂಕರ್ ಮಾತನಾಡಿ, ಹಿಂದೆ ಎಚ್. ನರಸಿಂಹಯ್ಯ, ಜಿ.ಎಸ್. ಶಿವರುದ್ರಪ್ಪ, ಸಿದ್ದಲಿಂಗಯ್ಯ, ಬರಗೂರು ರಾಮಚಂದ್ರಪ್ಪ ಅವರಂತಹ ಮಹನೀಯರು ಕೆಲಸ ಮಾಡಿದ ಬೆಂವಿವಿಯಲ್ಲಿ ವೈಜ್ಞಾನಿಕತೆ, ವೈಚಾರಿಕತೆ, ಸಮಾಜಮುಖಿ ಚಿಂತನೆಗಳು ಬಿತ್ತರವಾಗುತ್ತಿದ್ದವು. ಆದರೆ ಈಗ ವಿಶ್ವವಿದ್ಯಾಲಯವು ಜಾತಿಯತೆ ಮತ್ತು ಕೋಮುವಾದವನ್ನು ಬಿತ್ತುವ ಸಂಸ್ಥೆಯಾಗಿ ಮಾರ್ಪಾಡಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

“67 ಪ್ರಾಧ್ಯಾಪಕರು ಜಾತಿ ತಾರತಮ್ಯ ನಡೆಯುತ್ತಿದೆ ಎಂದು ಸಹಿ ಮಾಡಿದರೂ, ಕುಲಪತಿ ಅಸಡ್ಡೆ ತೋರುತ್ತಿರುವುದು ದುರಂತ. ವಿಶ್ವವಿದ್ಯಾಲಯದ ಅವ್ಯವಸ್ಥೆ ಮತ್ತು ಜಾತಿ ತಾರತಮ್ಯದ ಕುರಿತು ತಕ್ಷಣ ತನಿಖೆ ನಡೆಸಬೇಕು” ಎಂದು ಅವರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ನಟ ಚೇತನ್ ಅಹಿಂಸಾ, ದಲಿತ ಹಕ್ಕುಗಳ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜಣ್ಣ ಮತ್ತು ಜ್ಞಾನೇಶ್ವರ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ದೇವನಹಳ್ಳಿ ಹೋರಾಟ: “ನಾನು ದಲಿತರ ಹುಡುಗ, ನನ್ನ  ನಾಯಕತ್ವವನ್ನು ಎಲ್ಲ ಸಮುದಾಯಗಳೂ ಒಪ್ಪಿಕೊಂಡವು” – ಕಾರಳ್ಳಿ ಶ್ರೀನಿವಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...