Homeಕರ್ನಾಟಕಬೆಂಗಳೂರು ವಿಶ್ವವಿದ್ಯಾಲಯದಲ್ಲಿ ದಲಿತ ಪ್ರಾಧ್ಯಾಪಕರಿಗೆ ತಾರತಮ್ಯ ಆರೋಪ: ಕುಲಪತಿ ರಾಜೀನಾಮೆಗೆ ಆಗ್ರಹ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ದಲಿತ ಪ್ರಾಧ್ಯಾಪಕರಿಗೆ ತಾರತಮ್ಯ ಆರೋಪ: ಕುಲಪತಿ ರಾಜೀನಾಮೆಗೆ ಆಗ್ರಹ

- Advertisement -
- Advertisement -

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ (ಬೆಂವಿವಿ) ದಲಿತ ಸಮುದಾಯದ ಪ್ರಾಧ್ಯಾಪಕರಿಗೆ ಬಡ್ತಿ ಮತ್ತು ಅಧಿಕಾರ ಹಂಚಿಕೆಯಲ್ಲಿ ವ್ಯಾಪಕ ತಾರತಮ್ಯ ನಡೆಯುತ್ತಿದೆ ಎಂದು ಗಂಭೀರ ಆರೋಪ ಕೇಳಿಬಂದಿದೆ. ವಿಶ್ವವಿದ್ಯಾಲಯಗಳ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ದಲಿತ ಪ್ರಾಧ್ಯಾಪಕರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಸ್ನಾತಕೋತ್ತರ ಮತ್ತು ಸಂಶೋಧನ ವಿದ್ಯಾರ್ಥಿಗಳ ಒಕ್ಕೂಟದ ವಿದ್ಯಾರ್ಥಿ ನಾಯಕ ಚಂದ್ರು ಪೆರಿಯಾರ್ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕುಲಪತಿ ಡಾ. ಜಯಕರ ಎಸ್.ಎಂ. ಅವರನ್ನು ತಕ್ಷಣ ಹುದ್ದೆಯಿಂದ ಹಿಂತೆಗೆದುಕೊಳ್ಳುವಂತೆ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಂದ್ರು ಪೆರಿಯಾರ್, ರೋಸ್ಟರ್ ನಿಯಮಗಳನ್ನು ಮೀರಿ ದಲಿತ ಸಮುದಾಯದ ಪ್ರತಿಭಾವಂತ ಪ್ರಾಧ್ಯಾಪಕರನ್ನು ಕಡೆಗಣಿಸಿ, ಹೊರಗಿನಿಂದ ಐವರು ಬಲಾಢ್ಯ ಜಾತಿಗಳಿಗೆ ಸೇರಿದ ಪ್ರಾಧ್ಯಾಪಕರನ್ನು ವರ್ಗಾವಣೆ ಮಾಡಿಕೊಳ್ಳಲಾಗಿದೆ ಎಂದು ದೂರಿದರು. ಬೆಂವಿವಿ ಸ್ಥಾಪನೆಯಾದಾಗಿನಿಂದಲೂ ಒಬ್ಬರೂ ದಲಿತರು ಕುಲಪತಿಯಾಗಿಲ್ಲ. “ಇದು ದಲಿತರ ಮೇಲಿನ ಅಸಹನೆಗೆ ಹಿಡಿದ ಕನ್ನಡಿ” ಎಂದು ಅವರು ಬೇಸರ ವ್ಯಕ್ತಪಡಿಸಿದರು.

ನಿಯಮಬಾಹಿರ ಕಾರ್ಯನಿರ್ವಹಣೆ ಮತ್ತು ದಲಿತ ವಿರೋಧಿ ಧೋರಣೆ:

ಕುಲಪತಿ ರಜೆಯಲ್ಲಿರುವಾಗ ಅವರ ಜವಾಬ್ದಾರಿಯನ್ನು ಹಿರಿಯ ಡೀನ್‌ಗೆ ವಹಿಸುವುದು ನಿಯಮ. ಆದರೆ, ಬೆಂವಿವಿಯಲ್ಲಿರುವ ಎಲ್ಲಾ ಹಿರಿಯ ಡೀನ್‌ಗಳು ದಲಿತ ಸಮುದಾಯಕ್ಕೆ ಸೇರಿರುವ ಕಾರಣಕ್ಕಾಗಿ ಅವರಿಗೆ ಉಸ್ತುವಾರಿ ನೀಡದೆ, ಕುಲಸಚಿವರಿಗೆ ನೀಡಲಾಗಿದೆ ಎಂದು ಚಂದ್ರು ಪೆರಿಯಾರ್ ಹೇಳಿದರು. “ಇದು ಕಾನೂನು ಬಾಹಿರವಷ್ಟೇ ಅಲ್ಲದೆ, ಕುಲಪತಿಗೆ ದಲಿತರ ಮೇಲಿರುವ ಅಸಹನೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ಅಲ್ಲದೆ, ದಲಿತ ವಿತ್ತಾಧಿಕಾರಿಗಳ ಅಧಿಕಾರವನ್ನು ಕಟ್ಟಡ ನವೀಕರಣದ ನೆಪವೊಡ್ಡಿ ಸುಮಾರು ಒಂದು ವರ್ಷಗಳ ಕಾಲ ‘ಒಂದೇ ಸೂರಿನ ತತ್ವ’ದಡಿ ಕುಲಸಚಿವರಿಗೆ ವಹಿಸಲಾಗಿದೆ. ದಲಿತ ಅತಿಥಿ ಉಪನ್ಯಾಸಕರನ್ನು ವಿನಾ ಕಾರಣ ಕೆಲಸದಿಂದ ತೆಗೆದುಹಾಕಿ, ವರ್ಷಾನುಗಟ್ಟಲೆ ಸಂಬಳ ನೀಡದೆ ವಂಚಿಸಲಾಗಿದೆ. ಇದರಿಂದ ಕೆಲವರು ಜೀವನ ಭದ್ರತೆ ಇಲ್ಲದೆ ಮಾನಸಿಕವಾಗಿ ಕುಗ್ಗಿ ಆಸ್ಪತ್ರೆ ಸೇರಿದ್ದಾರೆ ಎಂದೂ ಚಂದ್ರು ಪೆರಿಯಾರ್ ಆರೋಪಿಸಿದರು. “ಇಷ್ಟೆಲ್ಲಾ ಆದಮೇಲೆ ಕುಲಪತಿಯವರಿಂದ ನ್ಯಾಯ ಸಿಗಲಿದೆ ಎಂದು ಕಾಯುವುದರಲ್ಲಿ ಅರ್ಥವಿಲ್ಲ. ಕುಲಪತಿಯವರು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಬೇಕು” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

“ಬೆಂವಿವಿ ಜಾತಿಯತೆ ಬಿತ್ತುವ ಸಂಸ್ಥೆಯಾಗಿದೆ”: ಶಿವಶಂಕರ್

ರಾಜ್ಯ ಸರ್ಕಾರಿ ಎಸ್‌ಸಿ-ಎಸ್‌ಟಿ ನೌಕರರ ಸಮಿತಿಯ ಅಧ್ಯಕ್ಷ ಶಿವಶಂಕರ್ ಮಾತನಾಡಿ, ಹಿಂದೆ ಎಚ್. ನರಸಿಂಹಯ್ಯ, ಜಿ.ಎಸ್. ಶಿವರುದ್ರಪ್ಪ, ಸಿದ್ದಲಿಂಗಯ್ಯ, ಬರಗೂರು ರಾಮಚಂದ್ರಪ್ಪ ಅವರಂತಹ ಮಹನೀಯರು ಕೆಲಸ ಮಾಡಿದ ಬೆಂವಿವಿಯಲ್ಲಿ ವೈಜ್ಞಾನಿಕತೆ, ವೈಚಾರಿಕತೆ, ಸಮಾಜಮುಖಿ ಚಿಂತನೆಗಳು ಬಿತ್ತರವಾಗುತ್ತಿದ್ದವು. ಆದರೆ ಈಗ ವಿಶ್ವವಿದ್ಯಾಲಯವು ಜಾತಿಯತೆ ಮತ್ತು ಕೋಮುವಾದವನ್ನು ಬಿತ್ತುವ ಸಂಸ್ಥೆಯಾಗಿ ಮಾರ್ಪಾಡಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

“67 ಪ್ರಾಧ್ಯಾಪಕರು ಜಾತಿ ತಾರತಮ್ಯ ನಡೆಯುತ್ತಿದೆ ಎಂದು ಸಹಿ ಮಾಡಿದರೂ, ಕುಲಪತಿ ಅಸಡ್ಡೆ ತೋರುತ್ತಿರುವುದು ದುರಂತ. ವಿಶ್ವವಿದ್ಯಾಲಯದ ಅವ್ಯವಸ್ಥೆ ಮತ್ತು ಜಾತಿ ತಾರತಮ್ಯದ ಕುರಿತು ತಕ್ಷಣ ತನಿಖೆ ನಡೆಸಬೇಕು” ಎಂದು ಅವರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ನಟ ಚೇತನ್ ಅಹಿಂಸಾ, ದಲಿತ ಹಕ್ಕುಗಳ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜಣ್ಣ ಮತ್ತು ಜ್ಞಾನೇಶ್ವರ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ದೇವನಹಳ್ಳಿ ಹೋರಾಟ: “ನಾನು ದಲಿತರ ಹುಡುಗ, ನನ್ನ  ನಾಯಕತ್ವವನ್ನು ಎಲ್ಲ ಸಮುದಾಯಗಳೂ ಒಪ್ಪಿಕೊಂಡವು” – ಕಾರಳ್ಳಿ ಶ್ರೀನಿವಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...