Homeಕರ್ನಾಟಕಬೆಂಗಳೂರು ವಿಶ್ವವಿದ್ಯಾಲಯದಲ್ಲಿ ದಲಿತ ಪ್ರಾಧ್ಯಾಪಕರಿಗೆ ತಾರತಮ್ಯ ಆರೋಪ: ಕುಲಪತಿ ರಾಜೀನಾಮೆಗೆ ಆಗ್ರಹ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ದಲಿತ ಪ್ರಾಧ್ಯಾಪಕರಿಗೆ ತಾರತಮ್ಯ ಆರೋಪ: ಕುಲಪತಿ ರಾಜೀನಾಮೆಗೆ ಆಗ್ರಹ

- Advertisement -
- Advertisement -

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ (ಬೆಂವಿವಿ) ದಲಿತ ಸಮುದಾಯದ ಪ್ರಾಧ್ಯಾಪಕರಿಗೆ ಬಡ್ತಿ ಮತ್ತು ಅಧಿಕಾರ ಹಂಚಿಕೆಯಲ್ಲಿ ವ್ಯಾಪಕ ತಾರತಮ್ಯ ನಡೆಯುತ್ತಿದೆ ಎಂದು ಗಂಭೀರ ಆರೋಪ ಕೇಳಿಬಂದಿದೆ. ವಿಶ್ವವಿದ್ಯಾಲಯಗಳ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ದಲಿತ ಪ್ರಾಧ್ಯಾಪಕರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಸ್ನಾತಕೋತ್ತರ ಮತ್ತು ಸಂಶೋಧನ ವಿದ್ಯಾರ್ಥಿಗಳ ಒಕ್ಕೂಟದ ವಿದ್ಯಾರ್ಥಿ ನಾಯಕ ಚಂದ್ರು ಪೆರಿಯಾರ್ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕುಲಪತಿ ಡಾ. ಜಯಕರ ಎಸ್.ಎಂ. ಅವರನ್ನು ತಕ್ಷಣ ಹುದ್ದೆಯಿಂದ ಹಿಂತೆಗೆದುಕೊಳ್ಳುವಂತೆ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಂದ್ರು ಪೆರಿಯಾರ್, ರೋಸ್ಟರ್ ನಿಯಮಗಳನ್ನು ಮೀರಿ ದಲಿತ ಸಮುದಾಯದ ಪ್ರತಿಭಾವಂತ ಪ್ರಾಧ್ಯಾಪಕರನ್ನು ಕಡೆಗಣಿಸಿ, ಹೊರಗಿನಿಂದ ಐವರು ಬಲಾಢ್ಯ ಜಾತಿಗಳಿಗೆ ಸೇರಿದ ಪ್ರಾಧ್ಯಾಪಕರನ್ನು ವರ್ಗಾವಣೆ ಮಾಡಿಕೊಳ್ಳಲಾಗಿದೆ ಎಂದು ದೂರಿದರು. ಬೆಂವಿವಿ ಸ್ಥಾಪನೆಯಾದಾಗಿನಿಂದಲೂ ಒಬ್ಬರೂ ದಲಿತರು ಕುಲಪತಿಯಾಗಿಲ್ಲ. “ಇದು ದಲಿತರ ಮೇಲಿನ ಅಸಹನೆಗೆ ಹಿಡಿದ ಕನ್ನಡಿ” ಎಂದು ಅವರು ಬೇಸರ ವ್ಯಕ್ತಪಡಿಸಿದರು.

ನಿಯಮಬಾಹಿರ ಕಾರ್ಯನಿರ್ವಹಣೆ ಮತ್ತು ದಲಿತ ವಿರೋಧಿ ಧೋರಣೆ:

ಕುಲಪತಿ ರಜೆಯಲ್ಲಿರುವಾಗ ಅವರ ಜವಾಬ್ದಾರಿಯನ್ನು ಹಿರಿಯ ಡೀನ್‌ಗೆ ವಹಿಸುವುದು ನಿಯಮ. ಆದರೆ, ಬೆಂವಿವಿಯಲ್ಲಿರುವ ಎಲ್ಲಾ ಹಿರಿಯ ಡೀನ್‌ಗಳು ದಲಿತ ಸಮುದಾಯಕ್ಕೆ ಸೇರಿರುವ ಕಾರಣಕ್ಕಾಗಿ ಅವರಿಗೆ ಉಸ್ತುವಾರಿ ನೀಡದೆ, ಕುಲಸಚಿವರಿಗೆ ನೀಡಲಾಗಿದೆ ಎಂದು ಚಂದ್ರು ಪೆರಿಯಾರ್ ಹೇಳಿದರು. “ಇದು ಕಾನೂನು ಬಾಹಿರವಷ್ಟೇ ಅಲ್ಲದೆ, ಕುಲಪತಿಗೆ ದಲಿತರ ಮೇಲಿರುವ ಅಸಹನೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ಅಲ್ಲದೆ, ದಲಿತ ವಿತ್ತಾಧಿಕಾರಿಗಳ ಅಧಿಕಾರವನ್ನು ಕಟ್ಟಡ ನವೀಕರಣದ ನೆಪವೊಡ್ಡಿ ಸುಮಾರು ಒಂದು ವರ್ಷಗಳ ಕಾಲ ‘ಒಂದೇ ಸೂರಿನ ತತ್ವ’ದಡಿ ಕುಲಸಚಿವರಿಗೆ ವಹಿಸಲಾಗಿದೆ. ದಲಿತ ಅತಿಥಿ ಉಪನ್ಯಾಸಕರನ್ನು ವಿನಾ ಕಾರಣ ಕೆಲಸದಿಂದ ತೆಗೆದುಹಾಕಿ, ವರ್ಷಾನುಗಟ್ಟಲೆ ಸಂಬಳ ನೀಡದೆ ವಂಚಿಸಲಾಗಿದೆ. ಇದರಿಂದ ಕೆಲವರು ಜೀವನ ಭದ್ರತೆ ಇಲ್ಲದೆ ಮಾನಸಿಕವಾಗಿ ಕುಗ್ಗಿ ಆಸ್ಪತ್ರೆ ಸೇರಿದ್ದಾರೆ ಎಂದೂ ಚಂದ್ರು ಪೆರಿಯಾರ್ ಆರೋಪಿಸಿದರು. “ಇಷ್ಟೆಲ್ಲಾ ಆದಮೇಲೆ ಕುಲಪತಿಯವರಿಂದ ನ್ಯಾಯ ಸಿಗಲಿದೆ ಎಂದು ಕಾಯುವುದರಲ್ಲಿ ಅರ್ಥವಿಲ್ಲ. ಕುಲಪತಿಯವರು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಬೇಕು” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

“ಬೆಂವಿವಿ ಜಾತಿಯತೆ ಬಿತ್ತುವ ಸಂಸ್ಥೆಯಾಗಿದೆ”: ಶಿವಶಂಕರ್

ರಾಜ್ಯ ಸರ್ಕಾರಿ ಎಸ್‌ಸಿ-ಎಸ್‌ಟಿ ನೌಕರರ ಸಮಿತಿಯ ಅಧ್ಯಕ್ಷ ಶಿವಶಂಕರ್ ಮಾತನಾಡಿ, ಹಿಂದೆ ಎಚ್. ನರಸಿಂಹಯ್ಯ, ಜಿ.ಎಸ್. ಶಿವರುದ್ರಪ್ಪ, ಸಿದ್ದಲಿಂಗಯ್ಯ, ಬರಗೂರು ರಾಮಚಂದ್ರಪ್ಪ ಅವರಂತಹ ಮಹನೀಯರು ಕೆಲಸ ಮಾಡಿದ ಬೆಂವಿವಿಯಲ್ಲಿ ವೈಜ್ಞಾನಿಕತೆ, ವೈಚಾರಿಕತೆ, ಸಮಾಜಮುಖಿ ಚಿಂತನೆಗಳು ಬಿತ್ತರವಾಗುತ್ತಿದ್ದವು. ಆದರೆ ಈಗ ವಿಶ್ವವಿದ್ಯಾಲಯವು ಜಾತಿಯತೆ ಮತ್ತು ಕೋಮುವಾದವನ್ನು ಬಿತ್ತುವ ಸಂಸ್ಥೆಯಾಗಿ ಮಾರ್ಪಾಡಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

“67 ಪ್ರಾಧ್ಯಾಪಕರು ಜಾತಿ ತಾರತಮ್ಯ ನಡೆಯುತ್ತಿದೆ ಎಂದು ಸಹಿ ಮಾಡಿದರೂ, ಕುಲಪತಿ ಅಸಡ್ಡೆ ತೋರುತ್ತಿರುವುದು ದುರಂತ. ವಿಶ್ವವಿದ್ಯಾಲಯದ ಅವ್ಯವಸ್ಥೆ ಮತ್ತು ಜಾತಿ ತಾರತಮ್ಯದ ಕುರಿತು ತಕ್ಷಣ ತನಿಖೆ ನಡೆಸಬೇಕು” ಎಂದು ಅವರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ನಟ ಚೇತನ್ ಅಹಿಂಸಾ, ದಲಿತ ಹಕ್ಕುಗಳ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜಣ್ಣ ಮತ್ತು ಜ್ಞಾನೇಶ್ವರ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ದೇವನಹಳ್ಳಿ ಹೋರಾಟ: “ನಾನು ದಲಿತರ ಹುಡುಗ, ನನ್ನ  ನಾಯಕತ್ವವನ್ನು ಎಲ್ಲ ಸಮುದಾಯಗಳೂ ಒಪ್ಪಿಕೊಂಡವು” – ಕಾರಳ್ಳಿ ಶ್ರೀನಿವಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...